ETV Bharat / state

ಸಹಕಾರಿ ಬ್ಯಾಂಕ್​ನ ನಕಲಿ ಒಡವೆ ವಂಚನೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ: ಮಂಗಳೂರು ನಗರ ಪೊಲೀಸ್​ ಆಯುಕ್ತ - ನಕಲಿ ಒಡವೆ

ಮಂಗಳೂರಿನ ಹಲವು ಸಹಕಾರಿ ಬ್ಯಾಂಕುಗಳಲ್ಲಿ ನಕಲಿ ಒಡವೆಗಳನ್ನು ಅಡವಿಟ್ಟು ಸಾಲ ಪಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಮಂಗಳೂರು ಪೊಲೀಸ್​ ಕಮೀಷನರ್​​ ಶಶಿಕುಮಾರ್​​ ಹೇಳಿದ್ದಾರೆ.

N. Shashikumar
ಎನ್‌.ಶಶಿಕುಮಾರ್ ಹೇಳಿಕೆ
author img

By

Published : Jan 29, 2021, 3:49 PM IST

ಮಂಗಳೂರು: ನಗರದ ಸುತ್ತಮುತ್ತಲಿನ ಕೆಲವೊಂದು ಸಹಕಾರಿ ಬ್ಯಾಂಕ್​​ಗಳಲ್ಲಿ ನಕಲಿ ಒಡವೆಗಳನ್ನು ಅಡವಿಟ್ಟು ವಂಚನೆಗೈಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಡವೆಗಳನ್ನು ತೆಗೆದುಕೊಳ್ಳುವ ವೇಳೆ ಬ್ಯಾಂಕ್​​ಗಳದ್ದೇ ಪರಿಶೀಲನಾ ವಿಧಾನಗಳಿದ್ದರೂ ಸಹ ಈ ರೀತಿಯಲ್ಲಿ ಕೃತ್ಯ ನಡೆಯುತ್ತಿದೆ. ಆದ್ದರಿಂದ ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಎನ್‌.ಶಶಿಕುಮಾರ್, ಮಂಗಳೂರು ನಗರ ಪೊಲೀಸ್​ ಆಯುಕ್ತ

ತಮ್ಮ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮೂರು ಪೊಲೀಸ್ ಠಾಣೆಗಳಲ್ಲಿ ಒಟ್ಟು ಆರು ಪ್ರಕರಣಗಳು ದಾಖಲಾಗಿವೆ. ಇದನ್ನು ಹೊರತುಪಡಿಸಿ ಬೇರೆಡೆಗಳಲ್ಲಿ ಇದೇ ತರಹದ ಕೃತ್ಯಗಳು ನಡೆದಿವೆ. ಪ್ರಕರಣಗಳಿಗೆ ಸಂಬಂಧಿಸಿದ ಸಹಕಾರಿ ಬ್ಯಾಂಕ್​​ಗಳ ಅಧಿಕಾರಿಗಳು ನಿನ್ನೆ ನನ್ನನ್ನು ಭೇಟಿ ಮಾಡಿದ್ದಾರೆ. ಅವರಲ್ಲಿ‌ ಬ್ಯಾಂಕುಗಳ ಎಲ್ಲಾ ಶಾಖೆಗಳಲ್ಲಿಯೂ ಚಿನ್ನಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಲು ಸೂಚನೆ ನೀಡಿದ್ದೇನೆ ಎಂದರು.

ಇನ್ನು ಈಗಾಗಲೇ ಕೆಲ ಬ್ಯಾಂಕುಗಳು ವರದಿ ನೀಡಿದ್ದು, ಈ ಬಗ್ಗೆ ಎಕಾನಮಿಕ್ ನಾರ್ಕೊಟಿಕ್ ಆ್ಯಂಡ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಎನ್‌.ಶಶಿಕುಮಾರ್ ತಿಳಿಸಿದರು.

ಮಂಗಳೂರು: ನಗರದ ಸುತ್ತಮುತ್ತಲಿನ ಕೆಲವೊಂದು ಸಹಕಾರಿ ಬ್ಯಾಂಕ್​​ಗಳಲ್ಲಿ ನಕಲಿ ಒಡವೆಗಳನ್ನು ಅಡವಿಟ್ಟು ವಂಚನೆಗೈಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಡವೆಗಳನ್ನು ತೆಗೆದುಕೊಳ್ಳುವ ವೇಳೆ ಬ್ಯಾಂಕ್​​ಗಳದ್ದೇ ಪರಿಶೀಲನಾ ವಿಧಾನಗಳಿದ್ದರೂ ಸಹ ಈ ರೀತಿಯಲ್ಲಿ ಕೃತ್ಯ ನಡೆಯುತ್ತಿದೆ. ಆದ್ದರಿಂದ ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.

ಎನ್‌.ಶಶಿಕುಮಾರ್, ಮಂಗಳೂರು ನಗರ ಪೊಲೀಸ್​ ಆಯುಕ್ತ

ತಮ್ಮ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮೂರು ಪೊಲೀಸ್ ಠಾಣೆಗಳಲ್ಲಿ ಒಟ್ಟು ಆರು ಪ್ರಕರಣಗಳು ದಾಖಲಾಗಿವೆ. ಇದನ್ನು ಹೊರತುಪಡಿಸಿ ಬೇರೆಡೆಗಳಲ್ಲಿ ಇದೇ ತರಹದ ಕೃತ್ಯಗಳು ನಡೆದಿವೆ. ಪ್ರಕರಣಗಳಿಗೆ ಸಂಬಂಧಿಸಿದ ಸಹಕಾರಿ ಬ್ಯಾಂಕ್​​ಗಳ ಅಧಿಕಾರಿಗಳು ನಿನ್ನೆ ನನ್ನನ್ನು ಭೇಟಿ ಮಾಡಿದ್ದಾರೆ. ಅವರಲ್ಲಿ‌ ಬ್ಯಾಂಕುಗಳ ಎಲ್ಲಾ ಶಾಖೆಗಳಲ್ಲಿಯೂ ಚಿನ್ನಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಲು ಸೂಚನೆ ನೀಡಿದ್ದೇನೆ ಎಂದರು.

ಇನ್ನು ಈಗಾಗಲೇ ಕೆಲ ಬ್ಯಾಂಕುಗಳು ವರದಿ ನೀಡಿದ್ದು, ಈ ಬಗ್ಗೆ ಎಕಾನಮಿಕ್ ನಾರ್ಕೊಟಿಕ್ ಆ್ಯಂಡ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಎನ್‌.ಶಶಿಕುಮಾರ್ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.