ETV Bharat / state

ಸೌತಡ್ಕ ದೇವಸ್ಥಾನಕ್ಕೆ ಹಿಂದೂಯೇತರ ಅಟೋ-ಟ್ಯಾಕ್ಸಿ ಸಂಚಾರಕ್ಕೆ ನಿರ್ಬಂಧ.. ವಿವಾದಾತ್ಮಕ ಫಲಕ ಅಳವಡಿಕೆ!

author img

By

Published : Jun 3, 2022, 1:32 PM IST

ಸೌತಡ್ಕದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣಾ ವೇದಿಕೆ ದೊಡ್ಡ ಫಲಕವೊಂದನ್ನು ಅಳವಡಿಸಿ ವಿವಾದಕ್ಕೆ ಎಡೆಮಾಡಿಕೊಟ್ಟಿದೆ..

Controversial board in southadka
ಸೌತಡ್ಕದಲ್ಲಿ ವಿವಾದಾತ್ಮಕ ಫಲಕ ಅಳವಡಿಕೆ

ಬೆಳ್ತಂಗಡಿ (ದಕ್ಷಿಣಕನ್ನಡ) : ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಮುಜರಾಯಿ ಇಲಾಖೆಯ ಆಡಳಿತಕ್ಕೊಳಪಟ್ಟ ಶ್ರೀ ಮಹಾಗಣಪತಿ ದೇವಸ್ಥಾನ ಸೌತಡ್ಕದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣಾ ವೇದಿಕೆ ದೊಡ್ಡ ಫಲಕವೊಂದನ್ನು ಅಳವಡಿಸಿ ವಿವಾದಕ್ಕೆ ಎಡೆಮಾಡಿಕೊಟ್ಟಿವೆ.

Controversial board in southadka
ಸೌತಡ್ಕದಲ್ಲಿ ವಿವಾದಾತ್ಮಕ ಫಲಕ ಅಳವಡಿಕೆ

ಹಿಂದೂಗಳ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯಕ್ಷೇತ್ರ ಸೌತಡ್ಕದಲ್ಲಿ ಅನ್ಯ ಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕ್ರತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರ ಜನರ ಆಟೋ ಮತ್ತು ಟ್ಯಾಕ್ಸಿ ಇನ್ನಿತರೆ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಬರೆದು ಫಲಕ ಹಾಕಲಾಗಿದೆ.

ಈ ಬೋರ್ಡ್​ ಫೋಟೋವೀಗ ಎಲ್ಲ ಕಡೆಗಳಲ್ಲಿ ವೈರಲ್ ಆಗುತ್ತಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ದೇವಾಲಯದಲ್ಲಿ ಈ ರೀತಿ ಬೋರ್ಡ್ ಅಳವಡಿಸಿರುವುದು ತಪ್ಪು. ಹಾಗಾಗಿ, ತಕ್ಷಣ ಅದನ್ನು ತೆರವುಗೊಳಿಸಬೇಕು ಎಂದು ಹಲವರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಕಾಪಾಡಿ... ಕಾಪಾಡಿ ಎಂಬ ಚೀರಾಟ: ಕಲಬುರಗಿ ಬಸ್​​ ಅಪಘಾತದ ಬಗ್ಗೆ ಪ್ರತ್ಯಕ್ಷದರ್ಶಿಗಳ ಮಾತು

ಬೆಳ್ತಂಗಡಿ (ದಕ್ಷಿಣಕನ್ನಡ) : ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಮುಜರಾಯಿ ಇಲಾಖೆಯ ಆಡಳಿತಕ್ಕೊಳಪಟ್ಟ ಶ್ರೀ ಮಹಾಗಣಪತಿ ದೇವಸ್ಥಾನ ಸೌತಡ್ಕದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣಾ ವೇದಿಕೆ ದೊಡ್ಡ ಫಲಕವೊಂದನ್ನು ಅಳವಡಿಸಿ ವಿವಾದಕ್ಕೆ ಎಡೆಮಾಡಿಕೊಟ್ಟಿವೆ.

Controversial board in southadka
ಸೌತಡ್ಕದಲ್ಲಿ ವಿವಾದಾತ್ಮಕ ಫಲಕ ಅಳವಡಿಕೆ

ಹಿಂದೂಗಳ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯಕ್ಷೇತ್ರ ಸೌತಡ್ಕದಲ್ಲಿ ಅನ್ಯ ಕೋಮಿನವರು ಪ್ರವೇಶ ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕ್ರತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರ ಜನರ ಆಟೋ ಮತ್ತು ಟ್ಯಾಕ್ಸಿ ಇನ್ನಿತರೆ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಬರೆದು ಫಲಕ ಹಾಕಲಾಗಿದೆ.

ಈ ಬೋರ್ಡ್​ ಫೋಟೋವೀಗ ಎಲ್ಲ ಕಡೆಗಳಲ್ಲಿ ವೈರಲ್ ಆಗುತ್ತಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ದೇವಾಲಯದಲ್ಲಿ ಈ ರೀತಿ ಬೋರ್ಡ್ ಅಳವಡಿಸಿರುವುದು ತಪ್ಪು. ಹಾಗಾಗಿ, ತಕ್ಷಣ ಅದನ್ನು ತೆರವುಗೊಳಿಸಬೇಕು ಎಂದು ಹಲವರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಕಾಪಾಡಿ... ಕಾಪಾಡಿ ಎಂಬ ಚೀರಾಟ: ಕಲಬುರಗಿ ಬಸ್​​ ಅಪಘಾತದ ಬಗ್ಗೆ ಪ್ರತ್ಯಕ್ಷದರ್ಶಿಗಳ ಮಾತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.