ETV Bharat / state

ಧರ್ಮಸ್ಥಳ ಸಾಮೂಹಿಕ ವಿವಾಹ: ತಮ್ಮೂರಲ್ಲೇ ವಿವಾಹವಾದ ಜೋಡಿಗಳು

author img

By

Published : Apr 30, 2021, 6:41 AM IST

ಕೊರೊನಾ ಕಾರಣದಿಂದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯಾ ಜೋಡಿಯ ಒಪ್ಪಿಗೆ ಮೇರೆಗೆ ತಮ್ಮ ತಮ್ಮ ಊರುಗಳಲ್ಲಿಯೇ ನಡೆಸಲಾಯಿತು. ಈ ಮೂಲಕ ರಾಜ್ಯದ 23 ಜಿಲ್ಲೆಗಳಲ್ಲಿ 121 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

Dharmasthala Mass Marriage programme
ಧರ್ಮಸ್ಥಳ ಸಾಮೂಹಿಕ ವಿವಾಹ

ಬೆಳ್ತಂಗಡಿ: ರಾಜ್ಯದ 23 ಜಿಲ್ಲೆಗಳಲ್ಲಿ 121 ಜೋಡಿಗಳು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆಯೋಜಿಸಿದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಪ್ತಪದಿ ತುಳಿದು ಕಂಕಣಬದ್ಧರಾಗಿದ್ದಾರೆ.

ಈ ಕುರಿತು ವಿವರಗಳನ್ನು ನೀಡಿದ ಹೆಗ್ಗಡೆಯವರು, ಕೊರೊನಾ ಕಾರಣದಿಂದಾಗಿ ಈ ಬಾರಿ ಧರ್ಮಸ್ಥಳದಲ್ಲಿ ಏಪ್ರಿಲ್ 29 ರಂದು ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ವಿಭಿನ್ನ ರೀತಿಯಲ್ಲಿ ಆಯಾ ಜೋಡಿಗಳ ಒಪ್ಪಿಗೆಯಂತೆ ಅವರವರ ಊರುಗಳಲ್ಲಿಯೇ ನೆರವೇರಿಸಲಾಯಿತು ಎಂದು ತಿಳಿಸಿದರು.

ಪ್ರತಿ ವರ್ಷ ಸಾಂಪ್ರದಾಯಕವಾಗಿ ಧರ್ಮಸ್ಥಳದಲ್ಲಿ ಆಚರಿಸಲಾಗುತ್ತಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೂರಾರು ಜೋಡಿಗಳು ಸಂಭ್ರಮದಿಂದ ಸ್ವಾಮಿ ಸನ್ನಿಧಿಯಲ್ಲಿ ವಿವಾಹವಾಗುತ್ತಿದ್ದರು. ಬದಲಾದ ಪರಿಸ್ಥಿತಿಯಲ್ಲಿ ಮುಂಜಾನೆ 8:55 ಕ್ಕೆ ಸರಿಯಾಗಿ ದೇವಳದ ಮುಂಭಾಗದಲ್ಲಿ ಒಂದು ಜೋಡಿ ಮಾತ್ರ ವಿವಾಹ ಮಾಡಿಕೊಂಡರು. ಉಳಿದ ಜೋಡಿಗಳು ಹೆಗ್ಗಡೆಯವರ ಮಾರ್ಗದರ್ಶನದಂತೆ ತಮ್ಮ ತಮ್ಮ ಊರ ದೇವಸ್ಥಾನಗಳಲ್ಲಿ ವಿವಾಹ ನೆರವೇರಿಸಿಕೊಂಡರು. ನೋಂದಾಯಿತ ಪ್ರತಿಯೊಂದು ಜೋಡಿಗೂ ತಾಳಿ ಸಹಿತ ಮಂಗಳ ಸೂತ್ರ, ಸೀರೆ, ದೋತಿ, ಶಲ್ಯ ಉಡುಗೊರೆಗಳನ್ನು ನೀಡಲಾಯಿತು. ಅಲ್ಲದೇ ನೂತನ ದಂಪತಿಗಳಿಗೆ ವಿವಾಹದ ಖರ್ಚನ್ನು ನಿಭಾಯಿಸಲು ತಲಾ ರೂ. 10,000/-ವನ್ನು ಧರ್ಮಸ್ಥಳದಿಂದ ಒದಗಿಸಲಾಗಿದೆ.

ಎಲ್ಲ ಜೋಡಿಗಳಿಗೂ ಹೆಗ್ಗಡೆಯವರು ವಿಡಿಯೋ ಸಂದೇಶದ ಮೂಲಕ ಆಶೀರ್ವಾದ ಮಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಕ್ಷೇತ್ರದಿಂದ ಕೊಡಮಾಡಿದ ವಸ್ತುಗಳನ್ನು ಕ್ಲಪ್ತ ಸಮಯಕ್ಕೆ ವಧು-ವರರಿಗೆ ಮುಟ್ಟಿಸಿದ್ದಲ್ಲದೇ ಸರ್ಕಾರದ ನಿಯಮದಂತೆ ವಿವಾಹ ನಡೆಸಲು ಸೂಕ್ತ ತಿಳುವಳಿಕೆಯನ್ನು ನೀಡಿ ವಿವಾಹ ಸಮಯದಲ್ಲಿ ಸ್ಥಳದಲ್ಲಿ ಹಾಜರಿದ್ದು ಶುಭ ಹಾರೈಸಿದರು.

ಸರ್ಕಾರದ ನಿಯಮಾವಳಿಗಳನ್ನು ಪಾಲಿಸುತ್ತಲೇ 121 ಜೋಡಿಗಳಿಗೆ ಕಂಕಣ ಭಾಗ್ಯವನ್ನು ವ್ಯವಸ್ಥೆಗೊಳಿಸಿ ಹೆಗ್ಗಡೆಯವರ ದೂರದರ್ಶಿತ್ವದ ಬಗ್ಗೆ ವಧು ವರರ ಕುಟುಂಬವರ್ಗದವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ತಮಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿಯೇ ವಿವಾಹವಾದಷ್ಟು ತೃಪ್ತಿ ತಂದಿದೆ ಎಂಬ ಭಾವನೆಯನ್ನು ವಧು ವರರು ವ್ಯಕ್ತಪಡಿಸಿದ್ದಾರೆಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಎಚ್.ಮಂಜುನಾಥ್ ತಿಳಿಸಿದ್ದಾರೆ.

ಬೆಳ್ತಂಗಡಿ: ರಾಜ್ಯದ 23 ಜಿಲ್ಲೆಗಳಲ್ಲಿ 121 ಜೋಡಿಗಳು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆಯೋಜಿಸಿದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಪ್ತಪದಿ ತುಳಿದು ಕಂಕಣಬದ್ಧರಾಗಿದ್ದಾರೆ.

ಈ ಕುರಿತು ವಿವರಗಳನ್ನು ನೀಡಿದ ಹೆಗ್ಗಡೆಯವರು, ಕೊರೊನಾ ಕಾರಣದಿಂದಾಗಿ ಈ ಬಾರಿ ಧರ್ಮಸ್ಥಳದಲ್ಲಿ ಏಪ್ರಿಲ್ 29 ರಂದು ಆಯೋಜಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ವಿಭಿನ್ನ ರೀತಿಯಲ್ಲಿ ಆಯಾ ಜೋಡಿಗಳ ಒಪ್ಪಿಗೆಯಂತೆ ಅವರವರ ಊರುಗಳಲ್ಲಿಯೇ ನೆರವೇರಿಸಲಾಯಿತು ಎಂದು ತಿಳಿಸಿದರು.

ಪ್ರತಿ ವರ್ಷ ಸಾಂಪ್ರದಾಯಕವಾಗಿ ಧರ್ಮಸ್ಥಳದಲ್ಲಿ ಆಚರಿಸಲಾಗುತ್ತಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೂರಾರು ಜೋಡಿಗಳು ಸಂಭ್ರಮದಿಂದ ಸ್ವಾಮಿ ಸನ್ನಿಧಿಯಲ್ಲಿ ವಿವಾಹವಾಗುತ್ತಿದ್ದರು. ಬದಲಾದ ಪರಿಸ್ಥಿತಿಯಲ್ಲಿ ಮುಂಜಾನೆ 8:55 ಕ್ಕೆ ಸರಿಯಾಗಿ ದೇವಳದ ಮುಂಭಾಗದಲ್ಲಿ ಒಂದು ಜೋಡಿ ಮಾತ್ರ ವಿವಾಹ ಮಾಡಿಕೊಂಡರು. ಉಳಿದ ಜೋಡಿಗಳು ಹೆಗ್ಗಡೆಯವರ ಮಾರ್ಗದರ್ಶನದಂತೆ ತಮ್ಮ ತಮ್ಮ ಊರ ದೇವಸ್ಥಾನಗಳಲ್ಲಿ ವಿವಾಹ ನೆರವೇರಿಸಿಕೊಂಡರು. ನೋಂದಾಯಿತ ಪ್ರತಿಯೊಂದು ಜೋಡಿಗೂ ತಾಳಿ ಸಹಿತ ಮಂಗಳ ಸೂತ್ರ, ಸೀರೆ, ದೋತಿ, ಶಲ್ಯ ಉಡುಗೊರೆಗಳನ್ನು ನೀಡಲಾಯಿತು. ಅಲ್ಲದೇ ನೂತನ ದಂಪತಿಗಳಿಗೆ ವಿವಾಹದ ಖರ್ಚನ್ನು ನಿಭಾಯಿಸಲು ತಲಾ ರೂ. 10,000/-ವನ್ನು ಧರ್ಮಸ್ಥಳದಿಂದ ಒದಗಿಸಲಾಗಿದೆ.

ಎಲ್ಲ ಜೋಡಿಗಳಿಗೂ ಹೆಗ್ಗಡೆಯವರು ವಿಡಿಯೋ ಸಂದೇಶದ ಮೂಲಕ ಆಶೀರ್ವಾದ ಮಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಕ್ಷೇತ್ರದಿಂದ ಕೊಡಮಾಡಿದ ವಸ್ತುಗಳನ್ನು ಕ್ಲಪ್ತ ಸಮಯಕ್ಕೆ ವಧು-ವರರಿಗೆ ಮುಟ್ಟಿಸಿದ್ದಲ್ಲದೇ ಸರ್ಕಾರದ ನಿಯಮದಂತೆ ವಿವಾಹ ನಡೆಸಲು ಸೂಕ್ತ ತಿಳುವಳಿಕೆಯನ್ನು ನೀಡಿ ವಿವಾಹ ಸಮಯದಲ್ಲಿ ಸ್ಥಳದಲ್ಲಿ ಹಾಜರಿದ್ದು ಶುಭ ಹಾರೈಸಿದರು.

ಸರ್ಕಾರದ ನಿಯಮಾವಳಿಗಳನ್ನು ಪಾಲಿಸುತ್ತಲೇ 121 ಜೋಡಿಗಳಿಗೆ ಕಂಕಣ ಭಾಗ್ಯವನ್ನು ವ್ಯವಸ್ಥೆಗೊಳಿಸಿ ಹೆಗ್ಗಡೆಯವರ ದೂರದರ್ಶಿತ್ವದ ಬಗ್ಗೆ ವಧು ವರರ ಕುಟುಂಬವರ್ಗದವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ತಮಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿಯೇ ವಿವಾಹವಾದಷ್ಟು ತೃಪ್ತಿ ತಂದಿದೆ ಎಂಬ ಭಾವನೆಯನ್ನು ವಧು ವರರು ವ್ಯಕ್ತಪಡಿಸಿದ್ದಾರೆಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಎಚ್.ಮಂಜುನಾಥ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.