ಮಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಗಾ ವಹಿಸಿದ್ದು, ಇಂದು ಆರು ಮಂದಿಯ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಈ ಹಿಂದೆ ಕಳುಹಿಸಲಾಗಿದ್ದ ನಾಲ್ಕು ಮಂದಿಯ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಇದರಲ್ಲಿ ಯಾರಿಗೂ ಕೊರೊನಾ ಸೋಂಕು ಇಲ್ಲವೆಂದು ದೃಢಪಟ್ಟಿದೆ.
![Corona panic in Mangalore](https://etvbharatimages.akamaized.net/etvbharat/prod-images/kn-mng-03-corona-photo-7202146_13032020201549_1303f_1584110749_579.jpg)
ವಿದೇಶದಿಂದ ಬಂದಿರುವ 54 ಮಂದಿ ವೈದ್ಯಕೀಯ ನಿಗಾದಲ್ಲಿದ್ದಾರೆ. ಚೀನಾ, ಇಟಲಿ, ಸ್ಪೇನ್, ಫ್ರಾನ್ಸ್, ಜರ್ಮನಿ, ಇರಾನ್ ಮತ್ತು ದಕ್ಷಿಣ ಕೊರಿಯಾ ರಾಷ್ಟ್ರಗಳಿಂದ ಫೆ. 15 ರಿಂದ ಆಗಮಿಸಿರುವ ಪ್ರಯಾಣಿಕರು ಕಡ್ಡಾಯವಾಗಿ ವೈದ್ಯಕೀಯ ನಿಗಾದಲ್ಲಿ ಇರತಕ್ಕದ್ದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.