ETV Bharat / state

Honeytrap: ಮಂಗಳೂರಿನಲ್ಲಿ ಕೇರಳ ಉದ್ಯಮಿಯ ಹನಿಟ್ರ್ಯಾಪ್: ಯುವತಿ ಸಹಿತ 8 ಮಂದಿ ಬಂಧನ

author img

By

Published : Jun 28, 2023, 7:51 PM IST

ಕೇರಳ ಮೂಲದ ಉದ್ಯಮಿ ಹನಿಟ್ರ್ಯಾಪ್‌ನಲ್ಲಿ ಸಿಲುಕಿ 10 ಲಕ್ಷ ರೂ ಕಳೆದುಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

honeytrap-of-kerala-businessman-eight-people-arrested-in-mangalore
ಮಂಗಳೂರಿನಲ್ಲಿ ಕೇರಳ ಉದ್ಯಮಿಯ ಹನಿಟ್ರ್ಯಾಪ್ : ಯುವತಿ ಸಹಿತ ಎಂಟು ಮಂದಿ ಬಂಧನ
ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಮಾಹಿತಿ

ಮಂಗಳೂರು : ಕೇರಳ ಮೂಲದ ಉದ್ಯಮಿಯೊಬ್ಬರು ಮಂಗಳೂರಿನಲ್ಲಿ ಹನಿಟ್ರ್ಯಾಪ್​ಗೆ ಸಿಲುಕಿ 10 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕಾರ್ಯಾಚರಣೆ ಯುವತಿ ಸೇರಿ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಬೊಂದೇಲ್ ನಿವಾಸಿ ಪ್ರೀತಮ್, ಮೂಡುಶೆಡ್ಡೆ ನಿವಾಸಿಗಳಾದ ಮುರಳಿ, ಕಿಶೋರ್, ಸುಶಾಂತ್, ಅಭಿ, ಹಾಗೂ ಮೂಡಬಿದಿರೆ ಮೂಲದ ಯುವತಿಯನ್ನು ಬಂಧಿಸಲಾಗಿದೆ.

ಫೆಬ್ರವರಿ 16ರಂದು ವಾಮಂಜೂರು ಬಳಿಯ ಮೂಡುಶೆಡ್ಡೆಯಲ್ಲಿರುವ ರೆಸಾರ್ಟ್ ಒಂದರಲ್ಲಿ ಉದ್ಯಮಿ ಹನಿಟ್ರ್ಯಾಪ್‌ಗೊಳಗಾಗಿದ್ದಾರೆ. ಕೇರಳ ಮೂಲದ ಇಬ್ಬರು ಉದ್ಯಮಿಗಳು ತಮ್ಮ ಸಂಪರ್ಕಕ್ಕೆ ಬಂದಿದ್ದ ಮೂಡುಬಿದಿರೆ ಮೂಲದ ಯುವತಿಯೊಂದಿಗೆ ರೆಸಾರ್ಟ್​ಗೆ ತೆರಳಿದ್ದರು. ರಾತ್ರಿ ವೇಳೆ ಅವರು ರೆಸಾರ್ಟ್​ನಲ್ಲಿದ್ದಾಗಲೇ ತಂಡವೊಂದು ಕೊಠಡಿಗೆ ಏಕಾಏಕಿ ನುಗ್ಗಿತ್ತು. ತಂಡದಲ್ಲಿದ್ದ ಯುವಕರು ಅಲ್ಲಿನ ದೃಶ್ಯಗಳನ್ನು ವಿಡಿಯೋ ಮಾಡಿದ್ದರು. ಉದ್ಯಮಿಗೆ ಹಲ್ಲೆಗೈದು ಹಣಕ್ಕಾಗಿ ಪೀಡಿಸಿದ್ದಾರೆ. ಅಲ್ಲದೆ, ಇಂತಿಷ್ಟು ಹಣ ಕೊಟ್ಟಲ್ಲಿ ಮಾತ್ರ ಬಿಡ್ತೀವಿ, ಇಲ್ಲಾಂದ್ರೆ ವಿಡಿಯೋವನ್ನು ವೈರಲ್ ಮಾಡುತ್ತೇವೆಂದು ಧಮ್ಕಿ ಹಾಕಿದ್ದಾರೆ. ಇದರಿಂದ ಬೆದರಿದ ಉದ್ಯಮಿ ತಮ್ಮಲ್ಲಿದ್ದ ಹಣವನ್ನು ಕೊಟ್ಟು ಅಲ್ಲಿಂದ ಪಾರಾಗಿ ಬಂದಿದ್ದರು.

ಅಷ್ಟಕ್ಕೆ ಸುಮ್ಮನಿರದ ಯುವಕರ ತಂಡ ಪದೇಪದೇ ಉದ್ಯಮಿಗೆ ಕರೆ ಮಾಡಿ, ಹಣಕ್ಕಾಗಿ ಪೀಡಿಸಿದ್ದಾರೆ. ಗೂಗಲ್ ಪೇ, ಬ್ಯಾಂಕ್ ಅಕೌಂಟ್ ಮೂಲಕ ಹಣ ಹಾಕುವಂತೆ ಹೇಳಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಹತ್ತು ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡ ಬಳಿಕ ಉದ್ಯಮಿ ಇತ್ತೀಚೆಗೆ ಕಾವೂರು ಠಾಣೆಗೆ ತೆರಳಿ ದೂರು ನೀಡಿದ್ದರು. ಕಮಿಷನರ್ ಸೂಚನೆಯಂತೆ ಪ್ರಕರಣವನ್ನು ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಮಟ್ಟಹಾಕಿದ್ದಾರೆ. ಯುವತಿ ಹಾಗೂ ಹನಿಟ್ರ್ಯಾಪ್ ತಂಡದ ಯುವಕರಿಗೆ ಸಂಪರ್ಕ ಇದೆ ಎಂಬುದು ತಿಳಿದು ಬಂದಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, "ಕಾವೂರು ಪೊಲೀಸ್ ಠಾಣೆಯಲ್ಲಿ ಭಾನುವಾರ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇಬ್ಬರು ಸಂತ್ರಸ್ತರು ಯುವತಿಯನ್ನು ಪರಿಚಯ ಮಾಡಿಕೊಂಡು ರೆಸಾರ್ಟ್​ವೊಂದಕ್ಕೆ ಕರೆದುಕೊಂಡು ಹೋಗಿದ್ದರು. ಅವರು ಯುವತಿಯ ಜೊತೆಗೆ ಇರುವಾಗ ಆಕೆ ಉದ್ದೇಶಪೂರ್ವಕವಾಗಿ ಬೇರೆಯವರನ್ನು ರೆಸಾರ್ಟ್​ಗೆ ಕರೆಸಿಕೊಂಡಿದ್ದಾರೆ. ಬಳಿಕ ಜೊತೆಯಲ್ಲಿದ್ದವರ ಫೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಬ್ಲ್ಯಾಕ್‌ ಮೇಲ್ ಮಾಡಿ ಸಂತ್ರಸ್ತನಿಂದ 10 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ" ಎಂದರು.

"ಕಳೆದ ಫೆಬ್ರವರಿ ತಿಂಗಳಲ್ಲಿ ಘಟನೆ ನಡೆದಿದ್ದು, ಭಾನುವಾರ ನಮಗೆ ಗೊತ್ತಾಗಿ ಪ್ರಕರಣ ದಾಖಲಿಸಲಾಗಿದೆ. ಯುವತಿ ಸೇರಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಈ ಹಿಂದೆ ಈ ರೀತಿಯ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಬಂಧಿತರಲ್ಲಿ ಇಬ್ಬರು ಸಣ್ಣಪುಟ್ಟ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ಸಂತ್ರಸ್ತ ಆರಂಭದಲ್ಲಿ ತನ್ನ ಗುರುತು ಬಯಲಾಗುವ ಭಯದಿಂದ ಹೆದರಿ ದೂರು ಸಲ್ಲಿಸಿರಲಿಲ್ಲ. ಆರೋಪಿಗಳ ಬ್ಲ್ಯಾಕ್ ಮೇಲ್ ಹೆಚ್ಚಾದಂತೆ ನಮ್ಮನ್ನು ಸಂಪರ್ಕಿಸಿ ದೂರು ಸಲ್ಲಿಸಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ : ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಮಾಹಿತಿ

ಮಂಗಳೂರು : ಕೇರಳ ಮೂಲದ ಉದ್ಯಮಿಯೊಬ್ಬರು ಮಂಗಳೂರಿನಲ್ಲಿ ಹನಿಟ್ರ್ಯಾಪ್​ಗೆ ಸಿಲುಕಿ 10 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕಾರ್ಯಾಚರಣೆ ಯುವತಿ ಸೇರಿ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಬೊಂದೇಲ್ ನಿವಾಸಿ ಪ್ರೀತಮ್, ಮೂಡುಶೆಡ್ಡೆ ನಿವಾಸಿಗಳಾದ ಮುರಳಿ, ಕಿಶೋರ್, ಸುಶಾಂತ್, ಅಭಿ, ಹಾಗೂ ಮೂಡಬಿದಿರೆ ಮೂಲದ ಯುವತಿಯನ್ನು ಬಂಧಿಸಲಾಗಿದೆ.

ಫೆಬ್ರವರಿ 16ರಂದು ವಾಮಂಜೂರು ಬಳಿಯ ಮೂಡುಶೆಡ್ಡೆಯಲ್ಲಿರುವ ರೆಸಾರ್ಟ್ ಒಂದರಲ್ಲಿ ಉದ್ಯಮಿ ಹನಿಟ್ರ್ಯಾಪ್‌ಗೊಳಗಾಗಿದ್ದಾರೆ. ಕೇರಳ ಮೂಲದ ಇಬ್ಬರು ಉದ್ಯಮಿಗಳು ತಮ್ಮ ಸಂಪರ್ಕಕ್ಕೆ ಬಂದಿದ್ದ ಮೂಡುಬಿದಿರೆ ಮೂಲದ ಯುವತಿಯೊಂದಿಗೆ ರೆಸಾರ್ಟ್​ಗೆ ತೆರಳಿದ್ದರು. ರಾತ್ರಿ ವೇಳೆ ಅವರು ರೆಸಾರ್ಟ್​ನಲ್ಲಿದ್ದಾಗಲೇ ತಂಡವೊಂದು ಕೊಠಡಿಗೆ ಏಕಾಏಕಿ ನುಗ್ಗಿತ್ತು. ತಂಡದಲ್ಲಿದ್ದ ಯುವಕರು ಅಲ್ಲಿನ ದೃಶ್ಯಗಳನ್ನು ವಿಡಿಯೋ ಮಾಡಿದ್ದರು. ಉದ್ಯಮಿಗೆ ಹಲ್ಲೆಗೈದು ಹಣಕ್ಕಾಗಿ ಪೀಡಿಸಿದ್ದಾರೆ. ಅಲ್ಲದೆ, ಇಂತಿಷ್ಟು ಹಣ ಕೊಟ್ಟಲ್ಲಿ ಮಾತ್ರ ಬಿಡ್ತೀವಿ, ಇಲ್ಲಾಂದ್ರೆ ವಿಡಿಯೋವನ್ನು ವೈರಲ್ ಮಾಡುತ್ತೇವೆಂದು ಧಮ್ಕಿ ಹಾಕಿದ್ದಾರೆ. ಇದರಿಂದ ಬೆದರಿದ ಉದ್ಯಮಿ ತಮ್ಮಲ್ಲಿದ್ದ ಹಣವನ್ನು ಕೊಟ್ಟು ಅಲ್ಲಿಂದ ಪಾರಾಗಿ ಬಂದಿದ್ದರು.

ಅಷ್ಟಕ್ಕೆ ಸುಮ್ಮನಿರದ ಯುವಕರ ತಂಡ ಪದೇಪದೇ ಉದ್ಯಮಿಗೆ ಕರೆ ಮಾಡಿ, ಹಣಕ್ಕಾಗಿ ಪೀಡಿಸಿದ್ದಾರೆ. ಗೂಗಲ್ ಪೇ, ಬ್ಯಾಂಕ್ ಅಕೌಂಟ್ ಮೂಲಕ ಹಣ ಹಾಕುವಂತೆ ಹೇಳಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಹತ್ತು ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡ ಬಳಿಕ ಉದ್ಯಮಿ ಇತ್ತೀಚೆಗೆ ಕಾವೂರು ಠಾಣೆಗೆ ತೆರಳಿ ದೂರು ನೀಡಿದ್ದರು. ಕಮಿಷನರ್ ಸೂಚನೆಯಂತೆ ಪ್ರಕರಣವನ್ನು ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಮಟ್ಟಹಾಕಿದ್ದಾರೆ. ಯುವತಿ ಹಾಗೂ ಹನಿಟ್ರ್ಯಾಪ್ ತಂಡದ ಯುವಕರಿಗೆ ಸಂಪರ್ಕ ಇದೆ ಎಂಬುದು ತಿಳಿದು ಬಂದಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, "ಕಾವೂರು ಪೊಲೀಸ್ ಠಾಣೆಯಲ್ಲಿ ಭಾನುವಾರ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇಬ್ಬರು ಸಂತ್ರಸ್ತರು ಯುವತಿಯನ್ನು ಪರಿಚಯ ಮಾಡಿಕೊಂಡು ರೆಸಾರ್ಟ್​ವೊಂದಕ್ಕೆ ಕರೆದುಕೊಂಡು ಹೋಗಿದ್ದರು. ಅವರು ಯುವತಿಯ ಜೊತೆಗೆ ಇರುವಾಗ ಆಕೆ ಉದ್ದೇಶಪೂರ್ವಕವಾಗಿ ಬೇರೆಯವರನ್ನು ರೆಸಾರ್ಟ್​ಗೆ ಕರೆಸಿಕೊಂಡಿದ್ದಾರೆ. ಬಳಿಕ ಜೊತೆಯಲ್ಲಿದ್ದವರ ಫೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಬ್ಲ್ಯಾಕ್‌ ಮೇಲ್ ಮಾಡಿ ಸಂತ್ರಸ್ತನಿಂದ 10 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ" ಎಂದರು.

"ಕಳೆದ ಫೆಬ್ರವರಿ ತಿಂಗಳಲ್ಲಿ ಘಟನೆ ನಡೆದಿದ್ದು, ಭಾನುವಾರ ನಮಗೆ ಗೊತ್ತಾಗಿ ಪ್ರಕರಣ ದಾಖಲಿಸಲಾಗಿದೆ. ಯುವತಿ ಸೇರಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಈ ಹಿಂದೆ ಈ ರೀತಿಯ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಬಂಧಿತರಲ್ಲಿ ಇಬ್ಬರು ಸಣ್ಣಪುಟ್ಟ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ಸಂತ್ರಸ್ತ ಆರಂಭದಲ್ಲಿ ತನ್ನ ಗುರುತು ಬಯಲಾಗುವ ಭಯದಿಂದ ಹೆದರಿ ದೂರು ಸಲ್ಲಿಸಿರಲಿಲ್ಲ. ಆರೋಪಿಗಳ ಬ್ಲ್ಯಾಕ್ ಮೇಲ್ ಹೆಚ್ಚಾದಂತೆ ನಮ್ಮನ್ನು ಸಂಪರ್ಕಿಸಿ ದೂರು ಸಲ್ಲಿಸಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ : ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.