ETV Bharat / state

ಅರಬ್ಬೀ ಸಮುದ್ರದಲ್ಲಿ ಸೈಕ್ಲೋನ್ ಎಫೆಕ್ಟ್ : ಸಮುದ್ರದಿಂದ ಹಿಂತಿರುಗಲು ಮೀನುಗಾರರಿಗೆ ಎಚ್ಚರಿಕೆ - ಅರಬ್ಬಿ ಸಮುದ್ರದಲ್ಲಿ ಸೈಕ್ಲೋನ್ ಎಫ್ಫೆಕ್ಟ್​ ಸಮುದ್ರದಿಂದ ಹಿಂತಿರುಗಲು ಮೀನುಗಾರರಿಗೆ ಎಚ್ಚರಿಕೆ

ಈ ವಾರದ ಕೊನೆಯಲ್ಲಿ ಆಗ್ನೇಯ ಅರಬ್ಬೀ ಸಮುದ್ರದ ಮೇಲೆ ವಾಯುಭಾರ ಕುಸಿತ ಉಂಟಾಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ 16 ರ ಆಸು ಪಾಸು ಪೂರ್ವ ಅರೇಬಿಯನ್ ಸಮುದ್ರದ ಮೇಲೆ ಸೈಕ್ಲೋನಿಕ್ ಸುಳಿಗಾಳಿ ತೀವ್ರವಾಗಬಹುದು ಎಂದು ಅಂದಾಜಿಸಿದೆ.

ಸಮುದ್ರದಿಂದ ಹಿಂತಿರುಗಲು ಮೀನುಗಾರರಿಗೆ ಎಚ್ಚರಿಕೆ
ಸಮುದ್ರದಿಂದ ಹಿಂತಿರುಗಲು ಮೀನುಗಾರರಿಗೆ ಎಚ್ಚರಿಕೆ
author img

By

Published : May 12, 2021, 5:07 PM IST

Updated : May 12, 2021, 5:30 PM IST

ಬೆಂಗಳೂರು/ಮಂಗಳೂರು: ಚಂಡಮಾರುತ ಅಪ್ಪಳಿಸುವ ಭೀತಿ ಇರುವುದರಿಂದ ಅರಬ್ಬೀ ಸಮುದ್ರಕ್ಕೆ ತೆರಳಿರುವ ಮೀನುಗಾರರು ತಕ್ಷಣ ದಡಕ್ಕೆ ಬರುವಂತೆ ಭಾರತೀಯ ಕರಾವಳಿ ತಟರಕ್ಷಣಾ ಪಡೆ ಎಚ್ಚರಿಕೆ ನೀಡಿದೆ.

ಸಮುದ್ರದಿಂದ ಹಿಂತಿರುಗಲು ಮೀನುಗಾರರಿಗೆ ಎಚ್ಚರಿಕೆ

ಅರಬ್ಬೀ ಸಮುದ್ರದಲ್ಲಿ ಭಾರಿ ಪ್ರಮಾಣದ ಚಂಡಮಾರುತ‌ ಕಾಣಿಸಿಕೊಳ್ಳುವ ಭೀತಿ ಇರುವ ಮುನ್ಸೂಚನೆ ಇದ್ದು, ಭಾರತೀಯ ಕರಾವಳಿ ತಟರಕ್ಷಣಾ ಪಡೆಯು ಹಡಗಿನ ಮೂಲಕ ಕರಾವಳಿ ಉದ್ದಕ್ಕೂ ತೆರಳಿ ಮೀನುಗಾರರಿಗೆ ದಡ ಸೇರುವಂತೆ ಸೂಚನೆ ನೀಡುತ್ತಿದೆ. ಮೈಕ್ ಮೂಲಕ ಕನ್ನಡ, ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಮೀನುಗಾರರು ತಕ್ಷಣ ದಡ ಸೇರುವಂತೆ ಸೂಚನೆ ನೀಡಲಾಗುತ್ತಿದೆ.

ಅರಬ್ಬೀ ಸಮುದ್ರದಲ್ಲಿ ಏಳುವ ತೌಕ್ತೆ ಎಂಬ ಹೆಸರಿನ‌ ಚಂಡಮಾರುತವು ಮೇ 16ರಂದು ಕರ್ನಾಟಕ, ಕೇರಳದ ಕರಾವಳಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ಚಂಡಮಾರುತದ ಪರಿಣಾಮಗಳು ಕಂಡು ಬರಲಿವೆ. ಆದ್ದರಿಂದ ಭಾರತೀಯ ಕರಾವಳಿ ತಟರಕ್ಷಣಾ ಪಡೆಯು ಮೀನುಗಾರಿಕೆಗೆ ತೆರಳಿರುವ ಮೀನುಗಾರರು ತಕ್ಷಣ ದಡ ಸೇರುವಂತೆ ಸೂಚಿಸಲಾಗ್ತಿದೆ.

ಹವಾಮಾನ ಇಲಾಖೆಯು ರೆಡ್ ಅಲರ್ಟ್ ನೀಡಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರಿಕಾ ದೋಣಿಗಳು ಮೀನುಗಾರಿಕೆಗೆ ಇಳಿಯದಂತೆ ಕರ್ನಾಟಕ ಕೋಸ್ಟ್ ಗಾರ್ಡ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಗಸ್ತು ತಿರುಗುತ್ತಿರುವ ಐಸಿಜಿ ಹಡಗುಗಳು ಮತ್ತು ಸಿಜಿ ಡಾರ್ನಿಯರ್ ವಿಮಾನಗಳು ಸಂಜ್ಞೆಯ ಮೂಲಕ ಸಮುದ್ರದಲ್ಲಿರುವ ಮೀನುಗಾರರಿಗೆ ಎಚ್ಚರಿಕೆ ನೀಡುತ್ತಿದ್ದು, ಹತ್ತಿರದ ತೀರಕ್ಕೆ ಮರಳಲು ತಿಳಿಸಿದ್ದಾರೆ.

ಬೆಂಗಳೂರು/ಮಂಗಳೂರು: ಚಂಡಮಾರುತ ಅಪ್ಪಳಿಸುವ ಭೀತಿ ಇರುವುದರಿಂದ ಅರಬ್ಬೀ ಸಮುದ್ರಕ್ಕೆ ತೆರಳಿರುವ ಮೀನುಗಾರರು ತಕ್ಷಣ ದಡಕ್ಕೆ ಬರುವಂತೆ ಭಾರತೀಯ ಕರಾವಳಿ ತಟರಕ್ಷಣಾ ಪಡೆ ಎಚ್ಚರಿಕೆ ನೀಡಿದೆ.

ಸಮುದ್ರದಿಂದ ಹಿಂತಿರುಗಲು ಮೀನುಗಾರರಿಗೆ ಎಚ್ಚರಿಕೆ

ಅರಬ್ಬೀ ಸಮುದ್ರದಲ್ಲಿ ಭಾರಿ ಪ್ರಮಾಣದ ಚಂಡಮಾರುತ‌ ಕಾಣಿಸಿಕೊಳ್ಳುವ ಭೀತಿ ಇರುವ ಮುನ್ಸೂಚನೆ ಇದ್ದು, ಭಾರತೀಯ ಕರಾವಳಿ ತಟರಕ್ಷಣಾ ಪಡೆಯು ಹಡಗಿನ ಮೂಲಕ ಕರಾವಳಿ ಉದ್ದಕ್ಕೂ ತೆರಳಿ ಮೀನುಗಾರರಿಗೆ ದಡ ಸೇರುವಂತೆ ಸೂಚನೆ ನೀಡುತ್ತಿದೆ. ಮೈಕ್ ಮೂಲಕ ಕನ್ನಡ, ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಮೀನುಗಾರರು ತಕ್ಷಣ ದಡ ಸೇರುವಂತೆ ಸೂಚನೆ ನೀಡಲಾಗುತ್ತಿದೆ.

ಅರಬ್ಬೀ ಸಮುದ್ರದಲ್ಲಿ ಏಳುವ ತೌಕ್ತೆ ಎಂಬ ಹೆಸರಿನ‌ ಚಂಡಮಾರುತವು ಮೇ 16ರಂದು ಕರ್ನಾಟಕ, ಕೇರಳದ ಕರಾವಳಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ಚಂಡಮಾರುತದ ಪರಿಣಾಮಗಳು ಕಂಡು ಬರಲಿವೆ. ಆದ್ದರಿಂದ ಭಾರತೀಯ ಕರಾವಳಿ ತಟರಕ್ಷಣಾ ಪಡೆಯು ಮೀನುಗಾರಿಕೆಗೆ ತೆರಳಿರುವ ಮೀನುಗಾರರು ತಕ್ಷಣ ದಡ ಸೇರುವಂತೆ ಸೂಚಿಸಲಾಗ್ತಿದೆ.

ಹವಾಮಾನ ಇಲಾಖೆಯು ರೆಡ್ ಅಲರ್ಟ್ ನೀಡಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಮೀನುಗಾರಿಕಾ ದೋಣಿಗಳು ಮೀನುಗಾರಿಕೆಗೆ ಇಳಿಯದಂತೆ ಕರ್ನಾಟಕ ಕೋಸ್ಟ್ ಗಾರ್ಡ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಗಸ್ತು ತಿರುಗುತ್ತಿರುವ ಐಸಿಜಿ ಹಡಗುಗಳು ಮತ್ತು ಸಿಜಿ ಡಾರ್ನಿಯರ್ ವಿಮಾನಗಳು ಸಂಜ್ಞೆಯ ಮೂಲಕ ಸಮುದ್ರದಲ್ಲಿರುವ ಮೀನುಗಾರರಿಗೆ ಎಚ್ಚರಿಕೆ ನೀಡುತ್ತಿದ್ದು, ಹತ್ತಿರದ ತೀರಕ್ಕೆ ಮರಳಲು ತಿಳಿಸಿದ್ದಾರೆ.

Last Updated : May 12, 2021, 5:30 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.