ETV Bharat / state

ಬೆಳ್ತಂಗಡಿಯಲ್ಲಿ 10 ದಿನದ ಹಿಂದೆ ವ್ಯಕ್ತಿಯ ಅಂತ್ಯಸಂಸ್ಕಾರ... ಉತ್ತರ ಕ್ರಿಯೆ ದಿನ ದಿಢೀರ್ ಪ್ರತ್ಯಕ್ಷ! - ಶ್ರೀನಿವಾಸ ಮೃತ ವ್ಯಕ್ತಿ

ಬೇರೆ ಯಾರದ್ದೋ ಶವ ತಮ್ಮ ಮನೆಯ ವ್ಯಕ್ತಿ ಶವ ಎಂದು ತಪ್ಪಾಗಿ ತಿಳಿದು ಕುಟುಂಬಸ್ಥರು ಅಂತ್ಯಸಂಸ್ಕಾರ ಮಾಡಿದ್ದರು. ಆದ್ರೆ ಉತ್ತರ ಕ್ರಿಯೆದಿನ ಆ ವ್ಯಕ್ತಿ ಮನೆಗೆ ಮರಳಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ.

dead man
ಮೃತ ವ್ಯಕ್ತಿ ಪ್ರತ್ಯಕ್ಷ
author img

By

Published : Feb 17, 2021, 1:41 AM IST

Updated : Feb 17, 2021, 6:20 AM IST

ಬೆಳ್ತಂಗಡಿ (ದಕ್ಷಿಣ ಕನ್ನಡ): ಮೃತಪಟ್ಟಿದ್ದಾನೆ ಎಂದು ತಿಳಿದು ಅಂತ್ಯಸಂಸ್ಕಾರ ನೆರವೇರಿಸಿ, ಉತ್ತರ ಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಕುಟುಂಬಸ್ಥರ ಮುಂದೆ ಆ ವ್ಯಕ್ತಿ ಪ್ರತ್ಯಕ್ಷನಾಗಿ ಅಚ್ಚರಿ ಮೂಡಿಸಿದ್ದಾನೆ.

ಇಲ್ಲಿನ ಗರ್ಡಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಶ್ರೀನಿವಾಸ ದೇವಾಡಿಗ (60) ಜ.26 ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅವರ ಮಕ್ಕಳು ನಾಪತ್ತೆ ದೂರು ಸಲ್ಲಿಸಿದ್ದರು. ಒಂದು ವಾರದ ಬಳಿಕ ಕಳೆದ ಫೆ.3 ರಂದು ಓಡಿಲ್ನಾಳ ಗ್ರಾಮದ ಕುಲ್ಲುಂಜ ಕೆರೆಯಲ್ಲಿ ಅಪರಿಚಿತ ಶವವೊಂದು ತೇಲುತ್ತಿರುವುದು ಪತ್ತೆಯಾಗಿತ್ತು. ಇದು ನಾಪತ್ತೆಯಾದ ಶ್ರೀನಿವಾಸರದ್ದಿರಬೇಕು ಎಂಬ ಸುದ್ದಿ ಹರಡಿತ್ತು. ಶವ ಕೊಳೆತ ಹಿನ್ನೆಲೆಯಲ್ಲಿ ಸರಿಯಾಗಿ ಗುರುತು ಪತ್ತೆ ಹಚ್ಚಲು ಆಗಿರಲಿಲ್ಲ. ಆದ್ದರಿಂದ ಇದು ಶ್ರೀನಿವಾಸ ಅವರದ್ದೇ ಶವ ಇರಬಹುದೆಂದು ಕುಟುಂಬಸ್ಥರು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಇದೀಗ ಉತ್ತರ ಕ್ರಿಯೆಗೆ ಕೂಡ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಆದರೆ 10 ದಿನಗಳ ಬಳಿಕ ಶ್ರೀನಿವಾಸ ಜೀವಂತವಾಗಿ ಊರಿಗೆ ಮರಳಿದ್ದು, ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ.

ಕುಡಿತದ ಚಟಕ್ಕೆ ದಾಸರಾಗಿರುವ ಶ್ರೀನಿವಾಸ ಅವರು ಸಹೋದರನ ಮನೆಯಲ್ಲಿ ನೆಲೆಸಿದ್ದರು. ಹಲವು ಬಾರಿ ಮನೆಯಿಂದ ಹೊರಹೋಗುತ್ತಿದ್ದ ಅವರು ವಾರಗಳ ಕಾಲ ಮನೆಗೆ ಬರದೇ ಎಲ್ಲೆಂದರಲ್ಲಿ ತಿರುಗಾಡುತ್ತಾ, ಸಿಕ್ಕ ಸಿಕ್ಕಲ್ಲಿ ‌ಮಲಗುತ್ತಿದ್ದರು. ಮತ್ತೆ ಯಾವಾಗೋ ಮನೆಗೆ ಮರಳುತ್ತಿದ್ದರು. ಹಿಂದೆ ಹಲವು ಬಾರಿ ಹೀಗೆ ಹೋದ ಬಳಿಕ ಮನೆಗೆ ಮರಳಿದ್ದರು. ಆದರೆ ಈ ಬಾರಿ ಕೆರೆಯಲ್ಲಿ ‌ದೇಹ ಸಿಕ್ಕಾಗ ಮನೆಯವರು ಮತ್ತು ಊರವರೆಲ್ಲರೂ, ಅದೇ ವ್ಯಕ್ತಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಪ್ರಾಣ ಬಿಟ್ಟಿರಬಹುದೆಂದು ಅಂದುಕೊಂಡಿದ್ದರು.

ಹಾಗಿದ್ರೆ ಅಂದು ಪತ್ತೆಯಾದ ಮೃತದೇಹ ಯಾರದ್ದು ಎಂಬ ಬಗ್ಗೆ ಪೊಲೀಸರಿಗೆ ಹೊಸ ತಲೆನೋವು ಪ್ರಾರಂಭವಾಗಿದೆ.

ಬೆಳ್ತಂಗಡಿ (ದಕ್ಷಿಣ ಕನ್ನಡ): ಮೃತಪಟ್ಟಿದ್ದಾನೆ ಎಂದು ತಿಳಿದು ಅಂತ್ಯಸಂಸ್ಕಾರ ನೆರವೇರಿಸಿ, ಉತ್ತರ ಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಕುಟುಂಬಸ್ಥರ ಮುಂದೆ ಆ ವ್ಯಕ್ತಿ ಪ್ರತ್ಯಕ್ಷನಾಗಿ ಅಚ್ಚರಿ ಮೂಡಿಸಿದ್ದಾನೆ.

ಇಲ್ಲಿನ ಗರ್ಡಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಶ್ರೀನಿವಾಸ ದೇವಾಡಿಗ (60) ಜ.26 ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅವರ ಮಕ್ಕಳು ನಾಪತ್ತೆ ದೂರು ಸಲ್ಲಿಸಿದ್ದರು. ಒಂದು ವಾರದ ಬಳಿಕ ಕಳೆದ ಫೆ.3 ರಂದು ಓಡಿಲ್ನಾಳ ಗ್ರಾಮದ ಕುಲ್ಲುಂಜ ಕೆರೆಯಲ್ಲಿ ಅಪರಿಚಿತ ಶವವೊಂದು ತೇಲುತ್ತಿರುವುದು ಪತ್ತೆಯಾಗಿತ್ತು. ಇದು ನಾಪತ್ತೆಯಾದ ಶ್ರೀನಿವಾಸರದ್ದಿರಬೇಕು ಎಂಬ ಸುದ್ದಿ ಹರಡಿತ್ತು. ಶವ ಕೊಳೆತ ಹಿನ್ನೆಲೆಯಲ್ಲಿ ಸರಿಯಾಗಿ ಗುರುತು ಪತ್ತೆ ಹಚ್ಚಲು ಆಗಿರಲಿಲ್ಲ. ಆದ್ದರಿಂದ ಇದು ಶ್ರೀನಿವಾಸ ಅವರದ್ದೇ ಶವ ಇರಬಹುದೆಂದು ಕುಟುಂಬಸ್ಥರು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಇದೀಗ ಉತ್ತರ ಕ್ರಿಯೆಗೆ ಕೂಡ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು. ಆದರೆ 10 ದಿನಗಳ ಬಳಿಕ ಶ್ರೀನಿವಾಸ ಜೀವಂತವಾಗಿ ಊರಿಗೆ ಮರಳಿದ್ದು, ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ.

ಕುಡಿತದ ಚಟಕ್ಕೆ ದಾಸರಾಗಿರುವ ಶ್ರೀನಿವಾಸ ಅವರು ಸಹೋದರನ ಮನೆಯಲ್ಲಿ ನೆಲೆಸಿದ್ದರು. ಹಲವು ಬಾರಿ ಮನೆಯಿಂದ ಹೊರಹೋಗುತ್ತಿದ್ದ ಅವರು ವಾರಗಳ ಕಾಲ ಮನೆಗೆ ಬರದೇ ಎಲ್ಲೆಂದರಲ್ಲಿ ತಿರುಗಾಡುತ್ತಾ, ಸಿಕ್ಕ ಸಿಕ್ಕಲ್ಲಿ ‌ಮಲಗುತ್ತಿದ್ದರು. ಮತ್ತೆ ಯಾವಾಗೋ ಮನೆಗೆ ಮರಳುತ್ತಿದ್ದರು. ಹಿಂದೆ ಹಲವು ಬಾರಿ ಹೀಗೆ ಹೋದ ಬಳಿಕ ಮನೆಗೆ ಮರಳಿದ್ದರು. ಆದರೆ ಈ ಬಾರಿ ಕೆರೆಯಲ್ಲಿ ‌ದೇಹ ಸಿಕ್ಕಾಗ ಮನೆಯವರು ಮತ್ತು ಊರವರೆಲ್ಲರೂ, ಅದೇ ವ್ಯಕ್ತಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಪ್ರಾಣ ಬಿಟ್ಟಿರಬಹುದೆಂದು ಅಂದುಕೊಂಡಿದ್ದರು.

ಹಾಗಿದ್ರೆ ಅಂದು ಪತ್ತೆಯಾದ ಮೃತದೇಹ ಯಾರದ್ದು ಎಂಬ ಬಗ್ಗೆ ಪೊಲೀಸರಿಗೆ ಹೊಸ ತಲೆನೋವು ಪ್ರಾರಂಭವಾಗಿದೆ.

Last Updated : Feb 17, 2021, 6:20 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.