ETV Bharat / state

ಶಿವರಾತ್ರಿ ವಿಶೇಷ.. ಧರ್ಮಸ್ಥಳದತ್ತ ಹರಿದು ಬರುತ್ತಿರುವ ಪಾದಯಾತ್ರಿಗಳು

author img

By

Published : Feb 28, 2022, 8:43 PM IST

ರಾಜ್ಯದ ನಾನಾ ಮೂಲೆಗಳಿಂದ ಮಕ್ಕಳು, ಮಹಿಳೆಯರು ಸೇರಿದಂತೆ ಸಹಸ್ರ-ಸಹಸ್ರ ಸಂಖ್ಯೆಯ ಭಕ್ತರು ತಮ್ಮ ಈ ಬಾರಿಯ ಪಾದಯಾತ್ರೆಯನ್ನು ಪೂರ್ಣಗೊಳಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪುನೀತರಾಗಲು ಕಾತರರಾಗಿದ್ದಾರೆ.

devotees-conduct-padayathra-to-belthangadi
ಧರ್ಮಸ್ಥಳದತ್ತ ಹರಿದು ಬರುತ್ತಿರುವ ಪಾದಯಾತ್ರಿಗಳು

ಬೆಳ್ತಂಗಡಿ(ದಕ್ಷಿಣ ಕನ್ನಡ): ಮಹಾಶಿವರಾತ್ರಿಯನ್ನು ನಾಡಿನೆಲ್ಲೆಡೆ ವಿಶೇಷ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಶಿವನ ದೇವಾಲಯಗಳಲ್ಲಿ ಪಾರಾಯಣ ಜಾಗರಣೆ ವಿಶೇಷ ರೀತಿಯಲ್ಲಿ ಆಚರಿಸುತ್ತಾರೆ. ಅದೇ ರೀತಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಶಿವರಾತ್ರಿಗೆ ವಿಶೇಷ ಪೂಜೆಗಳು ಜರುಗುತ್ತವೆ. ಶಿವರಾತ್ರಿ ಸಂದರ್ಭ ರಾಜ್ಯದ ವಿವಿಧ ಕಡೆಗಳಿಂದ ಪಾದಯಾತ್ರೆಯ ಮೂಲಕ ಭಕ್ತರು ಧರ್ಮಸ್ಥಳ ಕ್ಷೇತ್ರಕ್ಕೆ ಹರಿದು ಬರುತ್ತಿದ್ದಾರೆ.

devotees-conduct-padayathra-to-belthangadi
ನದಿಯಲ್ಲಿ ಬಟ್ಟೆ ತೊಳೆಯುತ್ತಿರುವ ಪಾದಯಾತ್ರಿಗಳು

ರಾಜ್ಯದ ನಾನಾ ಮೂಲೆಗಳಿಂದ ಮಕ್ಕಳು, ಮಹಿಳೆಯರು ಸೇರಿದಂತೆ ಸಹಸ್ರ-ಸಹಸ್ರ ಸಂಖ್ಯೆಯ ಭಕ್ತರು ತಮ್ಮ ಈ ಬಾರಿಯ ಪಾದಯಾತ್ರೆಯನ್ನು ಪೂರ್ಣಗೊಳಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪುನೀತರಾಗಲು ಕಾತರರಾಗಿದ್ದಾರೆ.

ಭಾನುವಾರ, ಸೋಮವಾರದಂದು ಚಾರ್ಮಾಡಿ ಕಡೆಯಿಂದ ಹೆಚ್ಚಿನ ಪಾದಯಾತ್ರಿಗಳು ಆಗಮಿಸಿದರು. ಹಗಲಲ್ಲಿ ಒಂದಿಷ್ಟು ಬಿಸಿಲಿನ ತಾಪ ಅಧಿಕ ಇರುವ ಕಾರಣ ಸಂಜೆ, ರಾತ್ರಿ ಹಾಗೂ ಬೆಳಗಿನ ಜಾವದಲ್ಲಿ ಅತೀ ಹೆಚ್ಚಿನ ಪಾದಯಾತ್ರಿಗಳು ರಸ್ತೆಯುದ್ದಕ್ಕೂ ಕಂಡುಬಂದರು.

ಪಾದಯಾತ್ರಿಗಳ ಸಂಖ್ಯೆ ಹೆಚ್ಚುತ್ತಿದ್ದಂತೆ ಅವರಿಗೆ ಸೇವೆ ನೀಡಲು ರಸ್ತೆಯ ಬದಿಗಳಲ್ಲಿ ಅಲ್ಲಲ್ಲಿ ಸ್ಥಳೀಯರು, ಸಂಘ -ಸಂಸ್ಥೆಗಳು ಸೇರಿ ಪಾನೀಯ, ಫಲಹಾರ ಮೊದಲಾದ ವ್ಯವಸ್ಥೆಗಳನ್ನು ಕಲ್ಪಿಸುತ್ತಿದ್ದಾರೆ. ಶರಬತ್ತು, ಮೊಸರನ್ನ, ರಾಗಿ ಗಂಜಿ, ನೀರು, ಮಜ್ಜಿಗೆ, ಪಾನಕ, ಬೆಲ್ಲ ಇತ್ಯಾದಿಗಳನ್ನು ಪಾದಯಾತ್ರಿಗಳಿಗೆ ನೀಡುವಲ್ಲಿ ಮುತುವರ್ಜಿ ವಹಿಸಲಾಗಿದೆ.

ಚಾರ್ಮಾಡಿ ಮೂಲಕ ಬರುವ ಭಕ್ತರು ಚಾರ್ಮಾಡಿ, ಮುಂಡಾಜೆ, ಕಲ್ಮಂಜ ಪ್ರದೇಶದಲ್ಲಿ ಹರಿಯುವ ನೇತ್ರಾವತಿ, ಮೃತ್ಯುಂಜಯ ನದಿಗಳಲ್ಲಿ ಮಿಂದು ಮುಂದುವರೆಯುತ್ತಿದ್ದಾರೆ.

5 ವರ್ಷದಿಂದ ಅನ್ನದಾನ.. ಚಾರ್ಮಾಡಿ ಶ್ರೀ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಘಟಕ, ಭಕ್ತಾದಿಗಳು ಸೇರಿ ಪಾದಯಾತ್ರಿಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಈ ಸೇವೆಯು ನಿರಂತರ ಐದು ವರ್ಷಗಳಿಂದ ನಡೆದು ಬರುತ್ತಿದ್ದು, ಸ್ಥಳೀಯ ಸ್ವಯಂ ಸೇವಕರು ಇದರ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

ಅರಣ್ಯ ಇಲಾಖೆಯಿಂದ ಜಾಗೃತಿ.. ಮಂಗಳೂರು ಅರಣ್ಯ ಇಲಾಖೆ ವತಿಯಿಂದ ಬೆಳ್ತಂಗಡಿ, ಸುಬ್ರಹ್ಮಣ್ಯ, ಉಪ್ಪಿನಂಗಡಿ ವಲಯದಿಂದ ಒಟ್ಟು 27 ವಿಶೇಷ ಸ್ಟಾಲ್​​ಗಳನ್ನು ತೆರೆಯಲಾಗಿದೆ. ಪಾದಯಾತ್ರಿಗಳ ಅನುಕೂಲಕ್ಕಾಗಿ ನೀರಿನ ವ್ಯವಸ್ಥೆ, ಅಗತ್ಯ ಮಾಹಿತಿ, ತುರ್ತು ಸಹಾಯವನ್ನು ನೀಡಲು ಈ ಸ್ಟಾಲ್​ಗಳು ದಿನದ 24 ಗಂಟೆ ಸನ್ನದ್ಧವಾಗಿರುತ್ತವೆ.

ಪ್ಲಾಸ್ಟಿಕ್ ಬಳಕೆ, ಕಾಡ್ಗಿಚ್ಚು, ಪರಿಸರ ಸಂರಕ್ಷಣೆ ಮೃಗಗಳ ಚಲನವಲನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಸೇರಿದಂತೆ ಇಲಾಖೆಯ ನೂರಕ್ಕಿಂತ ಅಧಿಕ ಸಿಬ್ಬಂದಿ ಹಾಗೂ 150ರಷ್ಟು ಸ್ವಯಂಸೇವಕರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ರಸ್ತೆಯ ಬದಿಗಳಲ್ಲಿ 500ಕ್ಕಿಂತ ಅಧಿಕ ಸಂಖ್ಯೆಯ ಕಸದ ಬುಟ್ಟಿಗಳನ್ನು ಇರಿಸಲಾಗಿದೆ.

ಶಿವಪಂಚಾಕ್ಷರಿ ಪಠಣ.. ಮಾರ್ಚ್​ 1 ಮಂಗಳವಾರ ಸಂಜೆ 6 ಗಂಟೆಗೆ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಶಿವಪಂಚಾಕ್ಷರಿ ಪಠಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅಹೋರಾತ್ರಿ ಪಾದಯಾತ್ರಿಗಳು ಹಾಗೂ ಭಕ್ತರಿಂದ ಶಿವಪಂಚಾಕ್ಷರಿ ಪಠಣ, ಭಜನೆ ಮೊದಲಾದ ಕಾರ್ಯಕ್ರಮಗಳು ಜರುಗಲಿವೆ.

ದೇವಸ್ಥಾನದಲ್ಲಿ ಭಕ್ತರು ವಿಶೇಷ ಶತರುದ್ರಾಭಿಷೇಕ ಸೇವೆ ಸಲ್ಲಿಸಲಿದ್ದಾರೆ. ಶಂಖ, ಕೊಂಬು, ಕಹಳೆ ಮೊದಲಾದ ಜಾನಪದ ಕಲಾವಿದರಿಂದ ಕಲಾಸೇವೆಯು ನಡೆಯಲಿದೆ. ಧರ್ಮಸ್ಥಳದ ಪ್ರವೇಶದ್ವಾರದ ಬಳಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಚೇರಿಯನ್ನು ತೆರೆಯಲಾಗಿದೆ.

ಅಲ್ಲಿ ಸ್ವಯಂಸೇವಕರು, ವೈದ್ಯರು ಪಾದಯಾತ್ರಿಗಳಿಗೆ ಸ್ವಾಗತ ಹಾಗೂ ಸೇವೆಯನ್ನು ನೀಡುತ್ತಾರೆ. ಬೆಂಗಳೂರಿನ ಖ್ಯಾತ ವೈದ್ಯ ಡಾ. ಕೆ. ಎಲ್ ಪಂಚಾಕ್ಷರಿ ನೇತೃತ್ವದಲ್ಲಿ ಡಾ. ನಾಗರಾಜು, ಡಾ. ಮಂಜುನಾಥ, ಡಾ. ರೇಣುಕಾ ಉಚಿತ ವೈದ್ಯಕೀಯ ಸೇವೆ ಒದಗಿಸುತ್ತಾರೆ.

ಓದಿ: ಪೌರ ಕಾರ್ಮಿಕರ ವಿಶೇಷ ನೇಮಕಾತಿ ಪ್ರಕ್ರಿಯೆಗೆ ಚಾಲನೆ : ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ

ಬೆಳ್ತಂಗಡಿ(ದಕ್ಷಿಣ ಕನ್ನಡ): ಮಹಾಶಿವರಾತ್ರಿಯನ್ನು ನಾಡಿನೆಲ್ಲೆಡೆ ವಿಶೇಷ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಶಿವನ ದೇವಾಲಯಗಳಲ್ಲಿ ಪಾರಾಯಣ ಜಾಗರಣೆ ವಿಶೇಷ ರೀತಿಯಲ್ಲಿ ಆಚರಿಸುತ್ತಾರೆ. ಅದೇ ರೀತಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಶಿವರಾತ್ರಿಗೆ ವಿಶೇಷ ಪೂಜೆಗಳು ಜರುಗುತ್ತವೆ. ಶಿವರಾತ್ರಿ ಸಂದರ್ಭ ರಾಜ್ಯದ ವಿವಿಧ ಕಡೆಗಳಿಂದ ಪಾದಯಾತ್ರೆಯ ಮೂಲಕ ಭಕ್ತರು ಧರ್ಮಸ್ಥಳ ಕ್ಷೇತ್ರಕ್ಕೆ ಹರಿದು ಬರುತ್ತಿದ್ದಾರೆ.

devotees-conduct-padayathra-to-belthangadi
ನದಿಯಲ್ಲಿ ಬಟ್ಟೆ ತೊಳೆಯುತ್ತಿರುವ ಪಾದಯಾತ್ರಿಗಳು

ರಾಜ್ಯದ ನಾನಾ ಮೂಲೆಗಳಿಂದ ಮಕ್ಕಳು, ಮಹಿಳೆಯರು ಸೇರಿದಂತೆ ಸಹಸ್ರ-ಸಹಸ್ರ ಸಂಖ್ಯೆಯ ಭಕ್ತರು ತಮ್ಮ ಈ ಬಾರಿಯ ಪಾದಯಾತ್ರೆಯನ್ನು ಪೂರ್ಣಗೊಳಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪುನೀತರಾಗಲು ಕಾತರರಾಗಿದ್ದಾರೆ.

ಭಾನುವಾರ, ಸೋಮವಾರದಂದು ಚಾರ್ಮಾಡಿ ಕಡೆಯಿಂದ ಹೆಚ್ಚಿನ ಪಾದಯಾತ್ರಿಗಳು ಆಗಮಿಸಿದರು. ಹಗಲಲ್ಲಿ ಒಂದಿಷ್ಟು ಬಿಸಿಲಿನ ತಾಪ ಅಧಿಕ ಇರುವ ಕಾರಣ ಸಂಜೆ, ರಾತ್ರಿ ಹಾಗೂ ಬೆಳಗಿನ ಜಾವದಲ್ಲಿ ಅತೀ ಹೆಚ್ಚಿನ ಪಾದಯಾತ್ರಿಗಳು ರಸ್ತೆಯುದ್ದಕ್ಕೂ ಕಂಡುಬಂದರು.

ಪಾದಯಾತ್ರಿಗಳ ಸಂಖ್ಯೆ ಹೆಚ್ಚುತ್ತಿದ್ದಂತೆ ಅವರಿಗೆ ಸೇವೆ ನೀಡಲು ರಸ್ತೆಯ ಬದಿಗಳಲ್ಲಿ ಅಲ್ಲಲ್ಲಿ ಸ್ಥಳೀಯರು, ಸಂಘ -ಸಂಸ್ಥೆಗಳು ಸೇರಿ ಪಾನೀಯ, ಫಲಹಾರ ಮೊದಲಾದ ವ್ಯವಸ್ಥೆಗಳನ್ನು ಕಲ್ಪಿಸುತ್ತಿದ್ದಾರೆ. ಶರಬತ್ತು, ಮೊಸರನ್ನ, ರಾಗಿ ಗಂಜಿ, ನೀರು, ಮಜ್ಜಿಗೆ, ಪಾನಕ, ಬೆಲ್ಲ ಇತ್ಯಾದಿಗಳನ್ನು ಪಾದಯಾತ್ರಿಗಳಿಗೆ ನೀಡುವಲ್ಲಿ ಮುತುವರ್ಜಿ ವಹಿಸಲಾಗಿದೆ.

ಚಾರ್ಮಾಡಿ ಮೂಲಕ ಬರುವ ಭಕ್ತರು ಚಾರ್ಮಾಡಿ, ಮುಂಡಾಜೆ, ಕಲ್ಮಂಜ ಪ್ರದೇಶದಲ್ಲಿ ಹರಿಯುವ ನೇತ್ರಾವತಿ, ಮೃತ್ಯುಂಜಯ ನದಿಗಳಲ್ಲಿ ಮಿಂದು ಮುಂದುವರೆಯುತ್ತಿದ್ದಾರೆ.

5 ವರ್ಷದಿಂದ ಅನ್ನದಾನ.. ಚಾರ್ಮಾಡಿ ಶ್ರೀ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಘಟಕ, ಭಕ್ತಾದಿಗಳು ಸೇರಿ ಪಾದಯಾತ್ರಿಗಳಿಗೆ ಅನ್ನದಾನದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಈ ಸೇವೆಯು ನಿರಂತರ ಐದು ವರ್ಷಗಳಿಂದ ನಡೆದು ಬರುತ್ತಿದ್ದು, ಸ್ಥಳೀಯ ಸ್ವಯಂ ಸೇವಕರು ಇದರ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

ಅರಣ್ಯ ಇಲಾಖೆಯಿಂದ ಜಾಗೃತಿ.. ಮಂಗಳೂರು ಅರಣ್ಯ ಇಲಾಖೆ ವತಿಯಿಂದ ಬೆಳ್ತಂಗಡಿ, ಸುಬ್ರಹ್ಮಣ್ಯ, ಉಪ್ಪಿನಂಗಡಿ ವಲಯದಿಂದ ಒಟ್ಟು 27 ವಿಶೇಷ ಸ್ಟಾಲ್​​ಗಳನ್ನು ತೆರೆಯಲಾಗಿದೆ. ಪಾದಯಾತ್ರಿಗಳ ಅನುಕೂಲಕ್ಕಾಗಿ ನೀರಿನ ವ್ಯವಸ್ಥೆ, ಅಗತ್ಯ ಮಾಹಿತಿ, ತುರ್ತು ಸಹಾಯವನ್ನು ನೀಡಲು ಈ ಸ್ಟಾಲ್​ಗಳು ದಿನದ 24 ಗಂಟೆ ಸನ್ನದ್ಧವಾಗಿರುತ್ತವೆ.

ಪ್ಲಾಸ್ಟಿಕ್ ಬಳಕೆ, ಕಾಡ್ಗಿಚ್ಚು, ಪರಿಸರ ಸಂರಕ್ಷಣೆ ಮೃಗಗಳ ಚಲನವಲನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಸೇರಿದಂತೆ ಇಲಾಖೆಯ ನೂರಕ್ಕಿಂತ ಅಧಿಕ ಸಿಬ್ಬಂದಿ ಹಾಗೂ 150ರಷ್ಟು ಸ್ವಯಂಸೇವಕರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ರಸ್ತೆಯ ಬದಿಗಳಲ್ಲಿ 500ಕ್ಕಿಂತ ಅಧಿಕ ಸಂಖ್ಯೆಯ ಕಸದ ಬುಟ್ಟಿಗಳನ್ನು ಇರಿಸಲಾಗಿದೆ.

ಶಿವಪಂಚಾಕ್ಷರಿ ಪಠಣ.. ಮಾರ್ಚ್​ 1 ಮಂಗಳವಾರ ಸಂಜೆ 6 ಗಂಟೆಗೆ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಶಿವಪಂಚಾಕ್ಷರಿ ಪಠಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅಹೋರಾತ್ರಿ ಪಾದಯಾತ್ರಿಗಳು ಹಾಗೂ ಭಕ್ತರಿಂದ ಶಿವಪಂಚಾಕ್ಷರಿ ಪಠಣ, ಭಜನೆ ಮೊದಲಾದ ಕಾರ್ಯಕ್ರಮಗಳು ಜರುಗಲಿವೆ.

ದೇವಸ್ಥಾನದಲ್ಲಿ ಭಕ್ತರು ವಿಶೇಷ ಶತರುದ್ರಾಭಿಷೇಕ ಸೇವೆ ಸಲ್ಲಿಸಲಿದ್ದಾರೆ. ಶಂಖ, ಕೊಂಬು, ಕಹಳೆ ಮೊದಲಾದ ಜಾನಪದ ಕಲಾವಿದರಿಂದ ಕಲಾಸೇವೆಯು ನಡೆಯಲಿದೆ. ಧರ್ಮಸ್ಥಳದ ಪ್ರವೇಶದ್ವಾರದ ಬಳಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಚೇರಿಯನ್ನು ತೆರೆಯಲಾಗಿದೆ.

ಅಲ್ಲಿ ಸ್ವಯಂಸೇವಕರು, ವೈದ್ಯರು ಪಾದಯಾತ್ರಿಗಳಿಗೆ ಸ್ವಾಗತ ಹಾಗೂ ಸೇವೆಯನ್ನು ನೀಡುತ್ತಾರೆ. ಬೆಂಗಳೂರಿನ ಖ್ಯಾತ ವೈದ್ಯ ಡಾ. ಕೆ. ಎಲ್ ಪಂಚಾಕ್ಷರಿ ನೇತೃತ್ವದಲ್ಲಿ ಡಾ. ನಾಗರಾಜು, ಡಾ. ಮಂಜುನಾಥ, ಡಾ. ರೇಣುಕಾ ಉಚಿತ ವೈದ್ಯಕೀಯ ಸೇವೆ ಒದಗಿಸುತ್ತಾರೆ.

ಓದಿ: ಪೌರ ಕಾರ್ಮಿಕರ ವಿಶೇಷ ನೇಮಕಾತಿ ಪ್ರಕ್ರಿಯೆಗೆ ಚಾಲನೆ : ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.