ETV Bharat / state

ಪಡಿತರ ಕಾರ್ಡ್​ ಇಲ್ಲದವರಿಗೂ ಆಹಾರ ಸಾಮಾಗ್ರಿ ಕಿಟ್​ ವಿತರಣೆ - sulya news

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಪಡಿತರ ಕಾರ್ಡ್ ಇಲ್ಲದವರಿಗೂ ಪಡಿತರ ನೀಡಬೇಕೆನ್ನುವ ಬೇಡಿಕೆ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ದೇವಸ್ಥಾನದಿಂದ ಈ ಕಾರ್ಯ ಮಾಡಲಾಗುತ್ತಿದೆ.

Distribution of food kit for those who do not have ration card
ಪಡಿತರ ಕಾರ್ಡ್​ ಇಲ್ಲದವರಿಗೆ ಆಹಾರ ಸಾಮಾಗ್ರಿ ಕಿಟ್​ ವಿತರಣೆ
author img

By

Published : Apr 29, 2020, 9:51 AM IST

Updated : Apr 29, 2020, 12:09 PM IST

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸುಳ್ಯ ಶಾಸಕರ ನೇತೃತ್ವದಲ್ಲಿ 2,500 ಆಹಾರ ಸಾಮಾಗ್ರಿಗಳ ಕಿಟ್ ತಯಾರಿ ಮಾಡಲಾಗಿದೆ.

ಪಡಿತರ ಕಾರ್ಡ್​ ಇಲ್ಲದವರಿಗೂ ಆಹಾರ ಸಾಮಾಗ್ರಿ ಕಿಟ್​ ವಿತರಣೆ

ವಿಧಾನಸಭಾ ಕ್ಷೇತ್ರದಲ್ಲಿ ಪಡಿತರ ಕಾರ್ಡ್ ಇಲ್ಲದವರಿಗೆ ಪಡಿತರ ನೀಡಬೇಕೆನ್ನುವ ಬೇಡಿಕೆಯ ಕಾರಣ ದೇವಸ್ಥಾನದ ವತಿಯಿಂದ ಈ ಕೆಲಸ ನಡೆಯುತ್ತಿದೆ. ಕ್ಷೇತ್ರದ ಶಾಸಕ ಎಸ್.ಅಂಗಾರ ಅವರ ನೇತೃತ್ವದಲ್ಲಿ ಸುಬ್ರಹ್ಮಣ್ಯದಲ್ಲಿ ಫುಡ್ ಕಿಟ್ ರೆಡಿ ಮಾಡಲಾಗಿದೆ. ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಪಡಿತರ ಕಾರ್ಡ್​ ಇಲ್ಲದ ಕುಟುಂಬಗಳಿಗೆ ಮೊದಲ ಆದ್ಯತೆಯಲ್ಲಿ ಕಿಟ್ ವಿತರಿಸಲಾಗುತ್ತಿದ್ದು, ವಲಸೆ ಕಾರ್ಮಿಕರಿಗೂ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿದು ಬಂದಿದೆ.

ಪಡಿತರ ಕಾರ್ಡ್​ ಹೊಂದಿಲ್ಲದಿರುವ ಕುಟುಂಬಗಳ ಪಟ್ಟಿಯನ್ನು ಈಗಾಗಲೇ ಉಭಯ ತಾಲೂಕುಗಳ ಕಚೇರಿಯಿಂದ ಶಾಸಕರಿಗೆ ನೀಡಲಾಗಿದೆ. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಫುಡ್ ಕಿಟ್‌ಗಳನ್ನು ಶಾಸಕರಿಗೆ ಹಸ್ತಾಂತರಿಸಲಿದ್ದಾರೆ.

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸುಳ್ಯ ಶಾಸಕರ ನೇತೃತ್ವದಲ್ಲಿ 2,500 ಆಹಾರ ಸಾಮಾಗ್ರಿಗಳ ಕಿಟ್ ತಯಾರಿ ಮಾಡಲಾಗಿದೆ.

ಪಡಿತರ ಕಾರ್ಡ್​ ಇಲ್ಲದವರಿಗೂ ಆಹಾರ ಸಾಮಾಗ್ರಿ ಕಿಟ್​ ವಿತರಣೆ

ವಿಧಾನಸಭಾ ಕ್ಷೇತ್ರದಲ್ಲಿ ಪಡಿತರ ಕಾರ್ಡ್ ಇಲ್ಲದವರಿಗೆ ಪಡಿತರ ನೀಡಬೇಕೆನ್ನುವ ಬೇಡಿಕೆಯ ಕಾರಣ ದೇವಸ್ಥಾನದ ವತಿಯಿಂದ ಈ ಕೆಲಸ ನಡೆಯುತ್ತಿದೆ. ಕ್ಷೇತ್ರದ ಶಾಸಕ ಎಸ್.ಅಂಗಾರ ಅವರ ನೇತೃತ್ವದಲ್ಲಿ ಸುಬ್ರಹ್ಮಣ್ಯದಲ್ಲಿ ಫುಡ್ ಕಿಟ್ ರೆಡಿ ಮಾಡಲಾಗಿದೆ. ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಪಡಿತರ ಕಾರ್ಡ್​ ಇಲ್ಲದ ಕುಟುಂಬಗಳಿಗೆ ಮೊದಲ ಆದ್ಯತೆಯಲ್ಲಿ ಕಿಟ್ ವಿತರಿಸಲಾಗುತ್ತಿದ್ದು, ವಲಸೆ ಕಾರ್ಮಿಕರಿಗೂ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿದು ಬಂದಿದೆ.

ಪಡಿತರ ಕಾರ್ಡ್​ ಹೊಂದಿಲ್ಲದಿರುವ ಕುಟುಂಬಗಳ ಪಟ್ಟಿಯನ್ನು ಈಗಾಗಲೇ ಉಭಯ ತಾಲೂಕುಗಳ ಕಚೇರಿಯಿಂದ ಶಾಸಕರಿಗೆ ನೀಡಲಾಗಿದೆ. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಫುಡ್ ಕಿಟ್‌ಗಳನ್ನು ಶಾಸಕರಿಗೆ ಹಸ್ತಾಂತರಿಸಲಿದ್ದಾರೆ.

Last Updated : Apr 29, 2020, 12:09 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.