ETV Bharat / state

'ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪ್ರಶಸ್ತಿಗೆ ದ.ಕ ಜಿಪಂ ಆಯ್ಕೆ

ಎರಡು ವಿನೂತನ ಯೋಜನೆಗಳ ಮೂಲಕ ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಗಮನ ಸೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಈ ಸಾಲಿನ 'ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪ್ರಶಸ್ತಿಗೆ ಆಯ್ಕೆಯಾಗಿದೆ. ಏ. 24ರಂದು ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ ಈ ಪ್ರಶಸ್ತಿ ನೀಡಲಿದ್ದಾರೆ..

author img

By

Published : Apr 20, 2022, 3:33 PM IST

DK Zilla Panchayat elected for 'Deen Dayal Upadhyaya Panchayat Empowerment Award'
ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾದ ಜಿಲ್ಲಾ ಪಂಚಾಯತ್

ಮಂಗಳೂರು : ಭಾರತ ಸರ್ಕಾರ ನೀಡುವ ಪ್ರತಿಷ್ಠಿತ ಪಂಚಾಯತ್ ಪುರಸ್ಕಾರದಡಿ ಸಾಮಾನ್ಯ ವಿಭಾಗದಡಿ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರವು 'ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪ್ರಶಸ್ತಿ -2022'ಗೆ ಆಯ್ಕೆಯಾಗಿದೆ. ಏಪ್ರಿಲ್​ 24ರಂದು ರಾಷ್ಟ್ರೀಯ ಪಂಚಾಯತ್ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ.

DK Zilla Panchayat elected for 'Deen Dayal Upadhyaya Panchayat Empowerment Award'
ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾದ ಜಿಲ್ಲಾ ಪಂಚಾಯತ್

ಈ ಸಂದರ್ಭದಲ್ಲಿ ದೇಶಾದ್ಯಂತ ಪ್ರತಿ ರಾಜ್ಯದಿಂದ ಒಂದು ಜಿಲ್ಲಾ ಪಂಚಾಯತ್ ಅನ್ನು 'ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪ್ರಶಸ್ತಿ'ಗೆ ಆಯ್ಕೆ ಮಾಡಲಾಗುತ್ತದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

DK Zilla Panchayat elected for 'Deen Dayal Upadhyaya Panchayat Empowerment Award'
ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾದ ಜಿಲ್ಲಾ ಪಂಚಾಯತ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿ ಸಾಮಾನ್ಯ ವಿಭಾಗದಲ್ಲಿ ನಿಗದಿಪಡಿಸಿರುವ ಎಲ್ಲಾ ಅಂಶಗಳಲ್ಲಿ ಉತ್ತಮ ಸಾಧನೆ ಮಾಡಿರುವುದನ್ನು ಪರಿಗಣಿಸಿ ಹಾಗೂ 2021-22ರ ಎಲ್ಲಾ ಕಾರ್ಯಕ್ಷಮತೆಯನ್ನು ಪರಿಗಣಿ ಜೊತೆಗೆ ಪ್ರಗತಿಯನ್ನು ಆಧರಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

DK Zilla Panchayat elected for 'Deen Dayal Upadhyaya Panchayat Empowerment Award'
ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾದ ಜಿಲ್ಲಾ ಪಂಚಾಯತ್

ಈ ಜಿಲ್ಲಾ ಪಂಚಾಯತ್​ ಎರಡು ವಿನೂತನ ಯೋಜನೆಗಳ ಮೂಲಕ ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಗಮನವನ್ನು ಸೆಳೆದಿದೆ. ಹಾಗಾಗಿ, ಕೇಂದ್ರ ಸರ್ಕಾರವು ಈ ಪ್ರಶಸ್ತಿಗೆ ರಾಜ್ಯದಿಂದ ಈ ಜಿಲ್ಲಾ ಪಂಚಾಯತ್ ಅನ್ನು ಆಯ್ಕೆ ಮಾಡಸಾಗಿದೆ. ಏ.24ರಂದು ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ ಈ ಪ್ರಶಸ್ತಿಯನ್ನು ನೀಡಲಿದ್ದಾರೆ.

ಮಂಗಳೂರು : ಭಾರತ ಸರ್ಕಾರ ನೀಡುವ ಪ್ರತಿಷ್ಠಿತ ಪಂಚಾಯತ್ ಪುರಸ್ಕಾರದಡಿ ಸಾಮಾನ್ಯ ವಿಭಾಗದಡಿ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರವು 'ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪ್ರಶಸ್ತಿ -2022'ಗೆ ಆಯ್ಕೆಯಾಗಿದೆ. ಏಪ್ರಿಲ್​ 24ರಂದು ರಾಷ್ಟ್ರೀಯ ಪಂಚಾಯತ್ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ.

DK Zilla Panchayat elected for 'Deen Dayal Upadhyaya Panchayat Empowerment Award'
ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾದ ಜಿಲ್ಲಾ ಪಂಚಾಯತ್

ಈ ಸಂದರ್ಭದಲ್ಲಿ ದೇಶಾದ್ಯಂತ ಪ್ರತಿ ರಾಜ್ಯದಿಂದ ಒಂದು ಜಿಲ್ಲಾ ಪಂಚಾಯತ್ ಅನ್ನು 'ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪ್ರಶಸ್ತಿ'ಗೆ ಆಯ್ಕೆ ಮಾಡಲಾಗುತ್ತದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

DK Zilla Panchayat elected for 'Deen Dayal Upadhyaya Panchayat Empowerment Award'
ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾದ ಜಿಲ್ಲಾ ಪಂಚಾಯತ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿ ಸಾಮಾನ್ಯ ವಿಭಾಗದಲ್ಲಿ ನಿಗದಿಪಡಿಸಿರುವ ಎಲ್ಲಾ ಅಂಶಗಳಲ್ಲಿ ಉತ್ತಮ ಸಾಧನೆ ಮಾಡಿರುವುದನ್ನು ಪರಿಗಣಿಸಿ ಹಾಗೂ 2021-22ರ ಎಲ್ಲಾ ಕಾರ್ಯಕ್ಷಮತೆಯನ್ನು ಪರಿಗಣಿ ಜೊತೆಗೆ ಪ್ರಗತಿಯನ್ನು ಆಧರಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

DK Zilla Panchayat elected for 'Deen Dayal Upadhyaya Panchayat Empowerment Award'
ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾದ ಜಿಲ್ಲಾ ಪಂಚಾಯತ್

ಈ ಜಿಲ್ಲಾ ಪಂಚಾಯತ್​ ಎರಡು ವಿನೂತನ ಯೋಜನೆಗಳ ಮೂಲಕ ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಗಮನವನ್ನು ಸೆಳೆದಿದೆ. ಹಾಗಾಗಿ, ಕೇಂದ್ರ ಸರ್ಕಾರವು ಈ ಪ್ರಶಸ್ತಿಗೆ ರಾಜ್ಯದಿಂದ ಈ ಜಿಲ್ಲಾ ಪಂಚಾಯತ್ ಅನ್ನು ಆಯ್ಕೆ ಮಾಡಸಾಗಿದೆ. ಏ.24ರಂದು ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ ಈ ಪ್ರಶಸ್ತಿಯನ್ನು ನೀಡಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.