ETV Bharat / state

ಮಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಯುವ ವೈದ್ಯೆ ಸಾವು

author img

By

Published : Apr 28, 2021, 12:40 PM IST

Updated : Apr 28, 2021, 9:44 PM IST

ಕೇರಳ ಮೂಲದ ಯುವ ವೈದ್ಯೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ದೇರಳಕಟ್ಟೆಯಲ್ಲಿರುವ ಕಣಚೂರು ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು.

doctor-died-by-corona-in-mangaluru
ಕೊರೊನಾ ಸೋಂಕಿನಿಂದ ಯುವ ವೈದ್ಯೆ ಸಾವು

ಮಂಗಳೂರು: ನಗರದಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇರಳ ಮೂಲದ ಯುವ ವೈದ್ಯೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ನಗರದ ದೇರಳಕಟ್ಟೆಯಲ್ಲಿರುವ ಕಣಚೂರು ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಗೆ ಇತ್ತೀಚೆಗೆ ಕೊರೊನಾ ಸೋಂಕು ತಗುಲಿತ್ತು‌. ಈ ಹಿನ್ನೆಲೆಯಲ್ಲಿ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದಾರೆ.

ವೈದ್ಯೆಗೆ ವಿವಾಹವಾಗಿ ಕೇವಲ 8 ತಿಂಗಳಾಗಿದ್ದು, ಪತಿ-ಪತ್ನಿ ಇಬ್ಬರೂ ಇಂಡಿಯಾನ ಆಸ್ಪತ್ರೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದರು‌. ಇದೀಗ ಆರು ತಿಂಗಳ ಗರ್ಭಿಣಿಯಾಗಿರುವ ಅವರು ಸೋಂಕಿನಿಂದ ಪಾರಾಗದೆ ಮೃತಪಟ್ಟಿದ್ದಾರೆ.

ಮೃತದೇಹವನ್ನು ಅವರ ಸ್ವಂತ ಊರಾದ ತಲಶ್ಶೇರಿಗೆ ರವಾನೆ ಮಾಡಲಾಗಿದ್ದು, ಅಲ್ಲಿಯೇ ದಫನ್​ ಕಾರ್ಯ ನಡೆಯಲಿದೆ.

ಇದನ್ನೂ ಓದಿ: ಕೋವಿಡ್ ಸಂಕಷ್ಟದಲ್ಲಿರುವವರಿಗೆ ನೆರವಾದ ನಟ ಅಜಯ್ ದೇವಗನ್

ಮಂಗಳೂರು: ನಗರದಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇರಳ ಮೂಲದ ಯುವ ವೈದ್ಯೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ನಗರದ ದೇರಳಕಟ್ಟೆಯಲ್ಲಿರುವ ಕಣಚೂರು ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಗೆ ಇತ್ತೀಚೆಗೆ ಕೊರೊನಾ ಸೋಂಕು ತಗುಲಿತ್ತು‌. ಈ ಹಿನ್ನೆಲೆಯಲ್ಲಿ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದಾರೆ.

ವೈದ್ಯೆಗೆ ವಿವಾಹವಾಗಿ ಕೇವಲ 8 ತಿಂಗಳಾಗಿದ್ದು, ಪತಿ-ಪತ್ನಿ ಇಬ್ಬರೂ ಇಂಡಿಯಾನ ಆಸ್ಪತ್ರೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದರು‌. ಇದೀಗ ಆರು ತಿಂಗಳ ಗರ್ಭಿಣಿಯಾಗಿರುವ ಅವರು ಸೋಂಕಿನಿಂದ ಪಾರಾಗದೆ ಮೃತಪಟ್ಟಿದ್ದಾರೆ.

ಮೃತದೇಹವನ್ನು ಅವರ ಸ್ವಂತ ಊರಾದ ತಲಶ್ಶೇರಿಗೆ ರವಾನೆ ಮಾಡಲಾಗಿದ್ದು, ಅಲ್ಲಿಯೇ ದಫನ್​ ಕಾರ್ಯ ನಡೆಯಲಿದೆ.

ಇದನ್ನೂ ಓದಿ: ಕೋವಿಡ್ ಸಂಕಷ್ಟದಲ್ಲಿರುವವರಿಗೆ ನೆರವಾದ ನಟ ಅಜಯ್ ದೇವಗನ್

Last Updated : Apr 28, 2021, 9:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.