ETV Bharat / state

ವೈದ್ಯಾಧಿಕಾರಿಗೆ ಪ್ರಶ್ನೆಗಳ ಸುರಿಮಳೆ.. ಒತ್ತಡಕ್ಕೊಳಗಾಗಿ ಕುಸಿದು ಬಿದ್ದ ವೈದ್ಯೆ: ಗ್ರಾಮಸ್ಥರು ವಿರುದ್ಧ ವೈದ್ಯರ ಸಂಘದ ದೂರು

author img

By

Published : Aug 15, 2023, 9:54 AM IST

Updated : Aug 15, 2023, 12:15 PM IST

ಗ್ರಾಮಸಭೆಯಲ್ಲಿ ವಿದ್ಯಾರ್ಥಿನಿ ಮಮತಾ ಅವರ ಸಾವಿನ ಬಗ್ಗೆ ಗ್ರಾಮಸ್ಥರೊಬ್ಬರ ಪ್ರಶ್ನೆಗೆ ವೈದ್ಯಾಧಿಕಾರಿ ಕುಸಿದು ಬಿದ್ದು ಗರ್ಭಪಾತವಾಗಿದೆ ಎಂದು ಆರೋಪಿಸಲಾಗಿದೆ.

ಗ್ರಾಮಸ್ಥರ ವಿರುದ್ಧ ವೈದ್ಯರ ಸಂಘದ ದೂರು
ಗ್ರಾಮಸ್ಥರ ವಿರುದ್ಧ ವೈದ್ಯರ ಸಂಘ ದೂರು ನೀಡುತ್ತಿರುವುದು

ಕಡಬ(ದಕ್ಷಿಣ ಕನ್ನಡ): ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗಳಿಗೆ ಒತ್ತಡಕ್ಕೊಳಗಾಗಿ ಕುಸಿದುಬಿದ್ದ ವೈದ್ಯಾಧಿಕಾರಿಯೊಬ್ಬರಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಪೊಲೀಸರಿಗೆ ದೂರು ನೀಡಿದೆ. ಕಡಬ ತಾಲೂಕಿನ ಗೊಳಿತ್ತೊಟ್ಟು ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗಳಿಗೆ ಸಮರ್ಪಕ ಸ್ಪಷ್ಟನೆ ನೀಡಿದರೂ, ಮತ್ತೆ ಮತ್ತೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ವಿಚಲಿತರಾದ ಮಹಿಳಾ ವೈದ್ಯಾಧಿಕಾರಿಯೊಬ್ಬರು ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟು ಎಂಬಲ್ಲಿ ನಡೆದಿತ್ತು.

ಸಭೆಯಲ್ಲಿ ನಡೆದಿದ್ದೇನು?: ಗ್ರಾ.ಪಂ. ಅಧ್ಯಕ್ಷ ಜನಾರ್ದನ ಗೌಡ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾಮ ಸಭೆ ನಡೆದಿತ್ತು. ಈ ವೇಳೆ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿ ಡಾ. ಶಿಶಿರಾ ಅವರು ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಾಧಿಕಾರಿಗಳ ಬಳಿ ಏಪ್ರಿಲ್ ತಿಂಗಳಲ್ಲಿ ಸಾವಿಗೀಡಾದ ವಿದ್ಯಾರ್ಥಿನಿ ಮಮತಾ ಅವರ ಸಾವಿನ ಬಗ್ಗೆ ಗ್ರಾಮಸ್ಥರೊಬ್ಬರು ಪ್ರಶ್ನೆ ಮಾಡಿದ್ದರು. ಇದಕ್ಕೆ ವೈದ್ಯಾಧಿಕಾರಿಗಳು ಉತ್ತರ ಕೂಡಾ ನೀಡಿದ್ದರು. ಆದರೂ ಪಟ್ಟು ಬಿಡದ ಗ್ರಾಮಸ್ಥರು ಸ್ಪಷ್ಟ ಕಾರಣಕ್ಕಾಗಿ ಒತ್ತಾಯಿಸಿದ್ದರಿಂದ ಅವರು ಒತ್ತಡಕ್ಕೆ ಒಳಗಾದರು ಎನ್ನಲಾಗಿದೆ.

ವೈದ್ಯರ ಸಮಜಾಯಿಷಿಗೆ ಒಪ್ಪದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿ ಶಿಶಿರಾ ಅವರು ಟೇಬಲ್ ಮೇಲಿದ್ದ ಒಂದು ಲೋಟ ನೀರು ಕುಡಿದು ಸಭಾಂಗಣದಿಂದ ಹೊರ ನಡೆದರು. ಗ್ರಾ.ಪಂ. ಕೊಠಡಿಯೊಳಗೆ ನೆಲದ ಮೇಲೆ ಕುಸಿದು ಬಿದ್ದರು. ತಕ್ಷಣವೇ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪ್ರಥಮ ಚಿಕಿತ್ಸೆ ನೀಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದ್ದೇನು?: ಈಟಿವಿ ಭಾರತದ ಜೊತೆಗೆ ಮಾತನಾಡಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್​​, ಪ್ರಸ್ತುತ ಶಿಶಿರಾ ಅವರಿಗೆ ಸರ್ಜರಿ ಮಾಡಲಾಗಿದ್ದು, ಅವರ ಆರೋಗ್ಯ ಸುಧಾರಣೆ ಕಂಡು ಬರುತ್ತಿದ್ದು, ಅವರಿಗೆ ಎಕ್ಟೋಪಿಕ್ ಪ್ರೆಗ್ನೆನ್ಸಿ ಸಮಸ್ಯೆ ಇತ್ತು ಎಂದು ತಿಳಿಸಿದ್ದರು. ಅತೀ ಹೆಚ್ಚು ಮಾನಸಿಕ ಒತ್ತಡ ಆದಾಗ ರಕ್ತದೊತ್ತಡ ಹೆಚ್ಚಾಗಿ ಅಥವಾ ಕಡಿಮೆಯಾಗಿ ಆರೋಗ್ಯದಲ್ಲಿ ಸಮಸ್ಯೆ ಎದುರಾಗಿರಬಹುದು. ಅವರಿಗೆ ಎಮರ್ಜೆನ್ಸಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಹೇಳಿದ್ದರು.

ಇದೇ ವೇಳೆ ಅವರಿಗೆ ಗರ್ಭಪಾತವಾಗಿರುವುದು ಕೂಡಾ ಬೆಳಕಿಗೆ ಬಂದಿದೆ. ಹೀಗಾಗಿ ಶಸ್ತ್ರಚಿಕಿತ್ಸೆ ನಡೆಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಡಾ.ಶಿಶಿರಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಕೆಲ ಗ್ರಾಮಸ್ಥರ ವಿರುದ್ಧ ದೂರು: ಈ ನಡುವೆ ಗ್ರಾಮಸ್ಥರಾದ ಡೀಕಯ್ಯ ಪೂಜಾರಿ ಮತ್ತು ಗಣೇಶ್ ಎಂಬವರ ವಿರುದ್ಧ ಪೊಲೀಸರಿಗೆ ವೈದ್ಯರ ಸಂಘದಿಂದ ದೂರು ನೀಡಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ದ.ಕ ಜಿಲ್ಲಾ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಗ್ರಾಮಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ.

ಇದನ್ನೂ ಓದಿ: ಪ್ರಕರಣವೊಂದಕ್ಕೆ ಸಂಬಂಧಿಸಿದ ವ್ಯಕ್ತಿ ಬಂಧಿಸಿ ಎಂದು ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪಿ ಬಂಧನ

ಕಡಬ(ದಕ್ಷಿಣ ಕನ್ನಡ): ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗಳಿಗೆ ಒತ್ತಡಕ್ಕೊಳಗಾಗಿ ಕುಸಿದುಬಿದ್ದ ವೈದ್ಯಾಧಿಕಾರಿಯೊಬ್ಬರಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಪೊಲೀಸರಿಗೆ ದೂರು ನೀಡಿದೆ. ಕಡಬ ತಾಲೂಕಿನ ಗೊಳಿತ್ತೊಟ್ಟು ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗಳಿಗೆ ಸಮರ್ಪಕ ಸ್ಪಷ್ಟನೆ ನೀಡಿದರೂ, ಮತ್ತೆ ಮತ್ತೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ವಿಚಲಿತರಾದ ಮಹಿಳಾ ವೈದ್ಯಾಧಿಕಾರಿಯೊಬ್ಬರು ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟು ಎಂಬಲ್ಲಿ ನಡೆದಿತ್ತು.

ಸಭೆಯಲ್ಲಿ ನಡೆದಿದ್ದೇನು?: ಗ್ರಾ.ಪಂ. ಅಧ್ಯಕ್ಷ ಜನಾರ್ದನ ಗೌಡ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಗ್ರಾಮ ಸಭೆ ನಡೆದಿತ್ತು. ಈ ವೇಳೆ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿ ಡಾ. ಶಿಶಿರಾ ಅವರು ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯಾಧಿಕಾರಿಗಳ ಬಳಿ ಏಪ್ರಿಲ್ ತಿಂಗಳಲ್ಲಿ ಸಾವಿಗೀಡಾದ ವಿದ್ಯಾರ್ಥಿನಿ ಮಮತಾ ಅವರ ಸಾವಿನ ಬಗ್ಗೆ ಗ್ರಾಮಸ್ಥರೊಬ್ಬರು ಪ್ರಶ್ನೆ ಮಾಡಿದ್ದರು. ಇದಕ್ಕೆ ವೈದ್ಯಾಧಿಕಾರಿಗಳು ಉತ್ತರ ಕೂಡಾ ನೀಡಿದ್ದರು. ಆದರೂ ಪಟ್ಟು ಬಿಡದ ಗ್ರಾಮಸ್ಥರು ಸ್ಪಷ್ಟ ಕಾರಣಕ್ಕಾಗಿ ಒತ್ತಾಯಿಸಿದ್ದರಿಂದ ಅವರು ಒತ್ತಡಕ್ಕೆ ಒಳಗಾದರು ಎನ್ನಲಾಗಿದೆ.

ವೈದ್ಯರ ಸಮಜಾಯಿಷಿಗೆ ಒಪ್ಪದ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿ ಶಿಶಿರಾ ಅವರು ಟೇಬಲ್ ಮೇಲಿದ್ದ ಒಂದು ಲೋಟ ನೀರು ಕುಡಿದು ಸಭಾಂಗಣದಿಂದ ಹೊರ ನಡೆದರು. ಗ್ರಾ.ಪಂ. ಕೊಠಡಿಯೊಳಗೆ ನೆಲದ ಮೇಲೆ ಕುಸಿದು ಬಿದ್ದರು. ತಕ್ಷಣವೇ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪ್ರಥಮ ಚಿಕಿತ್ಸೆ ನೀಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದ್ದೇನು?: ಈಟಿವಿ ಭಾರತದ ಜೊತೆಗೆ ಮಾತನಾಡಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್​​, ಪ್ರಸ್ತುತ ಶಿಶಿರಾ ಅವರಿಗೆ ಸರ್ಜರಿ ಮಾಡಲಾಗಿದ್ದು, ಅವರ ಆರೋಗ್ಯ ಸುಧಾರಣೆ ಕಂಡು ಬರುತ್ತಿದ್ದು, ಅವರಿಗೆ ಎಕ್ಟೋಪಿಕ್ ಪ್ರೆಗ್ನೆನ್ಸಿ ಸಮಸ್ಯೆ ಇತ್ತು ಎಂದು ತಿಳಿಸಿದ್ದರು. ಅತೀ ಹೆಚ್ಚು ಮಾನಸಿಕ ಒತ್ತಡ ಆದಾಗ ರಕ್ತದೊತ್ತಡ ಹೆಚ್ಚಾಗಿ ಅಥವಾ ಕಡಿಮೆಯಾಗಿ ಆರೋಗ್ಯದಲ್ಲಿ ಸಮಸ್ಯೆ ಎದುರಾಗಿರಬಹುದು. ಅವರಿಗೆ ಎಮರ್ಜೆನ್ಸಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಹೇಳಿದ್ದರು.

ಇದೇ ವೇಳೆ ಅವರಿಗೆ ಗರ್ಭಪಾತವಾಗಿರುವುದು ಕೂಡಾ ಬೆಳಕಿಗೆ ಬಂದಿದೆ. ಹೀಗಾಗಿ ಶಸ್ತ್ರಚಿಕಿತ್ಸೆ ನಡೆಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಡಾ.ಶಿಶಿರಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಕೆಲ ಗ್ರಾಮಸ್ಥರ ವಿರುದ್ಧ ದೂರು: ಈ ನಡುವೆ ಗ್ರಾಮಸ್ಥರಾದ ಡೀಕಯ್ಯ ಪೂಜಾರಿ ಮತ್ತು ಗಣೇಶ್ ಎಂಬವರ ವಿರುದ್ಧ ಪೊಲೀಸರಿಗೆ ವೈದ್ಯರ ಸಂಘದಿಂದ ದೂರು ನೀಡಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ದ.ಕ ಜಿಲ್ಲಾ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಗ್ರಾಮಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ.

ಇದನ್ನೂ ಓದಿ: ಪ್ರಕರಣವೊಂದಕ್ಕೆ ಸಂಬಂಧಿಸಿದ ವ್ಯಕ್ತಿ ಬಂಧಿಸಿ ಎಂದು ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪಿ ಬಂಧನ

Last Updated : Aug 15, 2023, 12:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.