ETV Bharat / state

ಡಾ.ಇಸ್ಮಾಯಿಲ್​​​ಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪುರಸ್ಕಾರ

author img

By

Published : Jan 2, 2021, 10:22 PM IST

ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮಕ್ಕೆ ಬರಲು ಅನಾನುಕೂಲವಾಗಿದ್ದರಿಂದ ಅವರನ್ನು ಮಂಗಳೂರಲ್ಲಿ ಸನ್ಮಾನಿಸಲಾಯಿತು.

dr-ismail-receives-honorary-award-from-barrie-sahitya-academy
ಡಾ.ಇಸ್ಮಾಯಿಲ್​​​ಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪುರಸ್ಕಾರ

ಮಂಗಳೂರು (ದ.ಕ): ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಡಾ.ಇಸ್ಮಾಯಿಲ್ ಹೆಜಮಾಡಿ ಅವರಿಗೆ 2020ನೇ ಸಾಲಿನ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪುರಸ್ಕಾರವನ್ನು ಇಂದು ಪ್ರದಾನ‌ ಮಾಡಲಾಯಿತು.

ಡಾ.ಇಸ್ಮಾಯಿಲ್​​​ಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪುರಸ್ಕಾರ

ಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಡಾ.ಇಸ್ಮಾಯಿಲ್, ಈ ಪ್ರತಿಷ್ಠಿತ ಪುರಸ್ಕಾರ ಪಡೆದಿರುವುದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಮುಂದೆಯೂ ಪ್ರಾಮಾಣಿಕವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತೇನೆ. ಗೌರವ ಪುರಸ್ಕಾರ ನೀಡಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್, ಕರ್ನಾಟಕ ‌ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ, ಡಾ.ನಜೀಬ್ ಬೆಝಾದ್, ರಮೇಶ್ ಭಟ್, ವಿಜಯ್, ಬಶೀರ್ ಉಪಸ್ಥಿತರಿದ್ದರು.

ಮಂಗಳೂರು (ದ.ಕ): ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಡಾ.ಇಸ್ಮಾಯಿಲ್ ಹೆಜಮಾಡಿ ಅವರಿಗೆ 2020ನೇ ಸಾಲಿನ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪುರಸ್ಕಾರವನ್ನು ಇಂದು ಪ್ರದಾನ‌ ಮಾಡಲಾಯಿತು.

ಡಾ.ಇಸ್ಮಾಯಿಲ್​​​ಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪುರಸ್ಕಾರ

ಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಡಾ.ಇಸ್ಮಾಯಿಲ್, ಈ ಪ್ರತಿಷ್ಠಿತ ಪುರಸ್ಕಾರ ಪಡೆದಿರುವುದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಮುಂದೆಯೂ ಪ್ರಾಮಾಣಿಕವಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತೇನೆ. ಗೌರವ ಪುರಸ್ಕಾರ ನೀಡಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್, ಕರ್ನಾಟಕ ‌ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ, ಡಾ.ನಜೀಬ್ ಬೆಝಾದ್, ರಮೇಶ್ ಭಟ್, ವಿಜಯ್, ಬಶೀರ್ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.