ETV Bharat / state

ದ.ಕ, ಉಡುಪಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಸರ್ಕಾರಿ ಬಸ್ ಓಡಾಟಕ್ಕೆ ಡಿವೈಎಫ್ಐ ಒತ್ತಾಯ

author img

By

Published : May 31, 2023, 11:55 AM IST

ದ.ಕ ಮತ್ತು ಉಡುಪಿ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್ಆರ್​ಟಿಸಿ ಬಸ್​ ತನ್ನ ಸಂಚಾರ ಸೇವೆಯನ್ನು ಈ ಕೂಡಲೇ ಮುಂದುವರಿಸಲು ಕ್ರಮ ಕೈಗೊಳ್ಳಬೇಕು ಎಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

Dakshina Kannada
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಸರ್ಕಾರಿ ಬಸ್​ಗಳ ಓಡಾಟ ಪುನರಾರಂಭಿಸುವಂತೆ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆಗ್ರಹಿಸಿದೆ. ರಾಜ್ಯಾದ್ಯಂತ ಜೂನ್ 1 ರಿಂದ ಸರ್ಕಾರಿ ಕೆಎಸ್​​ಆರ್​ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಓಡಾಡುತ್ತಿದ್ದ ಸರ್ಕಾರಿ ಕೆಎಸ್ಆರ್​ಟಿಸಿ ಬಸ್​​ಗಳನ್ನು ಕೊರೊನಾ ಕಾಲದ ನಂತರ ತನ್ನ ಸಂಚಾರವನ್ನು ಸ್ಥಗಿತಗೊಳಿಸಿದ ಕಾರಣ ಸೇವೆಯಲ್ಲಿ ಬಹಳಷ್ಟು ವ್ಯತ್ಯಯ ಕಂಡು ಬಂದಿದೆ. ಇದರಿಂದ ಉಭಯ ಜಿಲ್ಲೆಗಳ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸರ್ಕಾರದಿಂದ ಮಂಜೂರಾಗಿ ಪರವಾನಿಗೆ ಪಡೆದ ಎಲ್ಲಾ ಕೆಎಸ್ಆರ್​ಟಿಸಿ ಬಸ್​​ ಸಂಚಾರ ಸೇವೆಯನ್ನು ಮುಂದುವರಿಸಲು ಈ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ರಾಜ್ಯ ಸರ್ಕಾರ ಹಾಗೂ ಸಾರಿಗೆ ಸಚಿವರನ್ನು ಒತ್ತಾಯಿಸಿದೆ.

ನರ್ಮ್ ಯೋಜನೆಯಡಿಯಲ್ಲಿ ಉಡುಪಿಯಲ್ಲಿ ಸುಮಾರು 55, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಕೆಎಸ್ಆರ್​ಟಿಸಿ ನಗರ ಸಾರಿಗೆ ಬಸ್​​ಗಳು ಸಂಚಾರ ಸೇವೆ ಒದಗಿಸಲು ಮಂಜೂರಾಗಿದ್ದವು. ಉಡುಪಿಯಲ್ಲಿ 55 ಬಸ್​​ಗಳು ಮಂಜೂರಾಗಿ ಸೇವೆ ಸಲ್ಲಿಸುವ ಹೊತ್ತಿಗೆ ಖಾಸಗಿ ಬಸ್​ಗಳ ಮಾಲಕರ ವಿರೋಧದ ನಡುವೆ ಆಶಾದಾಯಕ ಸೇವೆಯನ್ನು ಸಲ್ಲಿಸಿದೆ. ಅದೇ ರೀತಿ ಮಂಗಳೂರಿನಲ್ಲಿ ಮಂಜೂರಾದ 35 ಬಸ್​​ಗಳಲ್ಲಿ 18 ಬಸ್​​ಗಳು ನಗರದ ಸ್ಟೇಟ್ ಬ್ಯಾಂಕ್ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಬಾಕಿ ಉಳಿದ ಬಸ್​​ಗಳಿಗೆ ನಗರದ ಹೊರಭಾಗದಿಂದ ಸೇವೆ ಸಲ್ಲಿಸಲು ಆರ್​ಟಿಎ ಪ್ರಾಧಿಕಾರ ಸಭೆ ಒಪ್ಪಿಗೆ‌ ನೀಡಿದ್ದವು. ಆ ಸಂದರ್ಭ ಖಾಸಗಿ ಬಸ್ ಮಾಲಕರು ಹೈಕೋರ್ಟ್ ಮೆಟ್ಟಿಲೇರಿ ತಡೆ ಹೇರಿದರೂ ಮುಂದೆ ನರ್ಮ್ ಸಾರಿಗೆ ಸೇವೆಗೆ ಸಂಬಂಧಿಸಿದ ಹೈಕೋರ್ಟ್ ದೂರನ್ನು ಜಿಲ್ಲಾಧಿಕಾರಿ ಹಂತದಲ್ಲಿ ಇತ್ಯರ್ಥಪಡಿಸಲು ನಿರ್ದೇಶನ ನೀಡಿತ್ತು.

ಖಾಸಗಿ ಬಸ್​​ ಮಾಲಕರ ವಿರೋಧದ ನಡುವೆಯೂ ಆಗಿನ ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಅವರ ಜನಪರ ಆಡಳಿತ ನಡೆಯಿಂದ ಸರ್ಕಾರಿ ನರ್ಮ್ ನಗರ ಸಾರಿಗೆ‌ ಬಸ್ ತನ್ನ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಅದರ ಜತೆ ಸುಳ್ಯ, ಪುತ್ತೂರು, ಬೆಳ್ತಂಗಡಿಗಳಂತಹ ಗ್ರಾಮೀಣ ಭಾಗಗಳಿಗೂ ಸರ್ಕಾರಿ ಗ್ರಾಮಾಂತರ ಸಾರಿಗೆ ಬಸ್​ಗಳು ನಿರಂತರ ಸೇವೆಯನ್ನು ನೀಡಿದೆ. ಆದರೆ ಕೊರೊನಾ ಕಾಲದಲ್ಲಿ ಸ್ಥಗಿತಗೊಂಡಿರುವ ಸರ್ಕಾರಿ ಬಸ್ ಸಂಚಾರ ಸೇವೆ ಮತ್ತೆ ಹಿಂದಿನ ರೀತಿಯಲ್ಲಿ ನೀಡಲೇ ಇಲ್ಲ. ಉಭಯ ಜಿಲ್ಲೆಯಲ್ಲೂ ಸರ್ಕಾರಿ ನರ್ಮ್ ನಗರ ಸಾರಿಗೆ ಬಸ್ ಮತ್ತು ಗ್ರಾಮೀಣ ಭಾಗದ ಸರ್ಕಾರಿ ಬಸ್ ಸಂಚಾರ ಸೇವೆಯಲ್ಲಿ ಅರ್ಧಕ್ಕರ್ಧ ವ್ಯತ್ಯಯ ಉಂಟಾಗಿದೆ.

ಜನಸಾಮಾನ್ಯರಿಗೆ ಸಮಸ್ಯೆ: ಜಿಲ್ಲೆಯಲ್ಲಿ ಖಾಸಗಿ ಬಸ್​​ಗಳ ಭರಾಟೆಯ ನಡುವೆ ಸರ್ಕಾರಿ ಬಸ್​​ಗಳು ಮೂಲೆ ಗುಂಪಾಗ ತೊಡಗಿವೆ. ಇದರಿಂದಾಗಿ ಬಹುತೇಕ ಕಡಿಮೆ ಆದಾಯಕ್ಕೆ ದುಡಿಯುವ ಜನ ಸಾಮಾನ್ಯರು ಸಮಸ್ಯೆ ಅನುಭವಿಸುವಂತಾಗಿದೆ. ಜೂನ್ 1ರಿಂದ ಸರ್ಕಾರ ಘೋಷಿಸಿದ ಕೆಎಸ್ಆರ್​ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಹಿಳೆಯರಿಗೂ ಸಿಗುವಂತಾಗಬೇಕು. ಉಭಯ ಜಿಲ್ಲೆಯಲ್ಲಿ ಬೀಡಿ ಉದ್ದಿಮೆ ನೆಲಕ್ಕಚ್ಚಿದ ನಂತರ ಈಗ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಪುಟ್ಟ ಅಂಗಡಿ ಮುಗ್ಗಟ್ಟುಗಳಲ್ಲಿ, ಬಟ್ಟೆಯಂಗಡಿಗಳಲ್ಲಿ, ಆಸ್ಪತ್ರೆ, ಕಾಲೇಜುಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ಅಂತಹ ಮಹಿಳೆಯರಿಗೆ ಸರ್ಕಾರದ ಈ ಯೋಜನೆ ಅನುಕೂಲಕರವಾಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ: 4 ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಗತಿ ಹೇಗಿದೆ?

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಸರ್ಕಾರಿ ಬಸ್​ಗಳ ಓಡಾಟ ಪುನರಾರಂಭಿಸುವಂತೆ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆಗ್ರಹಿಸಿದೆ. ರಾಜ್ಯಾದ್ಯಂತ ಜೂನ್ 1 ರಿಂದ ಸರ್ಕಾರಿ ಕೆಎಸ್​​ಆರ್​ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಓಡಾಡುತ್ತಿದ್ದ ಸರ್ಕಾರಿ ಕೆಎಸ್ಆರ್​ಟಿಸಿ ಬಸ್​​ಗಳನ್ನು ಕೊರೊನಾ ಕಾಲದ ನಂತರ ತನ್ನ ಸಂಚಾರವನ್ನು ಸ್ಥಗಿತಗೊಳಿಸಿದ ಕಾರಣ ಸೇವೆಯಲ್ಲಿ ಬಹಳಷ್ಟು ವ್ಯತ್ಯಯ ಕಂಡು ಬಂದಿದೆ. ಇದರಿಂದ ಉಭಯ ಜಿಲ್ಲೆಗಳ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸರ್ಕಾರದಿಂದ ಮಂಜೂರಾಗಿ ಪರವಾನಿಗೆ ಪಡೆದ ಎಲ್ಲಾ ಕೆಎಸ್ಆರ್​ಟಿಸಿ ಬಸ್​​ ಸಂಚಾರ ಸೇವೆಯನ್ನು ಮುಂದುವರಿಸಲು ಈ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ರಾಜ್ಯ ಸರ್ಕಾರ ಹಾಗೂ ಸಾರಿಗೆ ಸಚಿವರನ್ನು ಒತ್ತಾಯಿಸಿದೆ.

ನರ್ಮ್ ಯೋಜನೆಯಡಿಯಲ್ಲಿ ಉಡುಪಿಯಲ್ಲಿ ಸುಮಾರು 55, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಕೆಎಸ್ಆರ್​ಟಿಸಿ ನಗರ ಸಾರಿಗೆ ಬಸ್​​ಗಳು ಸಂಚಾರ ಸೇವೆ ಒದಗಿಸಲು ಮಂಜೂರಾಗಿದ್ದವು. ಉಡುಪಿಯಲ್ಲಿ 55 ಬಸ್​​ಗಳು ಮಂಜೂರಾಗಿ ಸೇವೆ ಸಲ್ಲಿಸುವ ಹೊತ್ತಿಗೆ ಖಾಸಗಿ ಬಸ್​ಗಳ ಮಾಲಕರ ವಿರೋಧದ ನಡುವೆ ಆಶಾದಾಯಕ ಸೇವೆಯನ್ನು ಸಲ್ಲಿಸಿದೆ. ಅದೇ ರೀತಿ ಮಂಗಳೂರಿನಲ್ಲಿ ಮಂಜೂರಾದ 35 ಬಸ್​​ಗಳಲ್ಲಿ 18 ಬಸ್​​ಗಳು ನಗರದ ಸ್ಟೇಟ್ ಬ್ಯಾಂಕ್ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಬಾಕಿ ಉಳಿದ ಬಸ್​​ಗಳಿಗೆ ನಗರದ ಹೊರಭಾಗದಿಂದ ಸೇವೆ ಸಲ್ಲಿಸಲು ಆರ್​ಟಿಎ ಪ್ರಾಧಿಕಾರ ಸಭೆ ಒಪ್ಪಿಗೆ‌ ನೀಡಿದ್ದವು. ಆ ಸಂದರ್ಭ ಖಾಸಗಿ ಬಸ್ ಮಾಲಕರು ಹೈಕೋರ್ಟ್ ಮೆಟ್ಟಿಲೇರಿ ತಡೆ ಹೇರಿದರೂ ಮುಂದೆ ನರ್ಮ್ ಸಾರಿಗೆ ಸೇವೆಗೆ ಸಂಬಂಧಿಸಿದ ಹೈಕೋರ್ಟ್ ದೂರನ್ನು ಜಿಲ್ಲಾಧಿಕಾರಿ ಹಂತದಲ್ಲಿ ಇತ್ಯರ್ಥಪಡಿಸಲು ನಿರ್ದೇಶನ ನೀಡಿತ್ತು.

ಖಾಸಗಿ ಬಸ್​​ ಮಾಲಕರ ವಿರೋಧದ ನಡುವೆಯೂ ಆಗಿನ ಜಿಲ್ಲಾಧಿಕಾರಿ ಎ.ಬಿ ಇಬ್ರಾಹಿಂ ಅವರ ಜನಪರ ಆಡಳಿತ ನಡೆಯಿಂದ ಸರ್ಕಾರಿ ನರ್ಮ್ ನಗರ ಸಾರಿಗೆ‌ ಬಸ್ ತನ್ನ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ. ಅದರ ಜತೆ ಸುಳ್ಯ, ಪುತ್ತೂರು, ಬೆಳ್ತಂಗಡಿಗಳಂತಹ ಗ್ರಾಮೀಣ ಭಾಗಗಳಿಗೂ ಸರ್ಕಾರಿ ಗ್ರಾಮಾಂತರ ಸಾರಿಗೆ ಬಸ್​ಗಳು ನಿರಂತರ ಸೇವೆಯನ್ನು ನೀಡಿದೆ. ಆದರೆ ಕೊರೊನಾ ಕಾಲದಲ್ಲಿ ಸ್ಥಗಿತಗೊಂಡಿರುವ ಸರ್ಕಾರಿ ಬಸ್ ಸಂಚಾರ ಸೇವೆ ಮತ್ತೆ ಹಿಂದಿನ ರೀತಿಯಲ್ಲಿ ನೀಡಲೇ ಇಲ್ಲ. ಉಭಯ ಜಿಲ್ಲೆಯಲ್ಲೂ ಸರ್ಕಾರಿ ನರ್ಮ್ ನಗರ ಸಾರಿಗೆ ಬಸ್ ಮತ್ತು ಗ್ರಾಮೀಣ ಭಾಗದ ಸರ್ಕಾರಿ ಬಸ್ ಸಂಚಾರ ಸೇವೆಯಲ್ಲಿ ಅರ್ಧಕ್ಕರ್ಧ ವ್ಯತ್ಯಯ ಉಂಟಾಗಿದೆ.

ಜನಸಾಮಾನ್ಯರಿಗೆ ಸಮಸ್ಯೆ: ಜಿಲ್ಲೆಯಲ್ಲಿ ಖಾಸಗಿ ಬಸ್​​ಗಳ ಭರಾಟೆಯ ನಡುವೆ ಸರ್ಕಾರಿ ಬಸ್​​ಗಳು ಮೂಲೆ ಗುಂಪಾಗ ತೊಡಗಿವೆ. ಇದರಿಂದಾಗಿ ಬಹುತೇಕ ಕಡಿಮೆ ಆದಾಯಕ್ಕೆ ದುಡಿಯುವ ಜನ ಸಾಮಾನ್ಯರು ಸಮಸ್ಯೆ ಅನುಭವಿಸುವಂತಾಗಿದೆ. ಜೂನ್ 1ರಿಂದ ಸರ್ಕಾರ ಘೋಷಿಸಿದ ಕೆಎಸ್ಆರ್​ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಹಿಳೆಯರಿಗೂ ಸಿಗುವಂತಾಗಬೇಕು. ಉಭಯ ಜಿಲ್ಲೆಯಲ್ಲಿ ಬೀಡಿ ಉದ್ದಿಮೆ ನೆಲಕ್ಕಚ್ಚಿದ ನಂತರ ಈಗ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಪುಟ್ಟ ಅಂಗಡಿ ಮುಗ್ಗಟ್ಟುಗಳಲ್ಲಿ, ಬಟ್ಟೆಯಂಗಡಿಗಳಲ್ಲಿ, ಆಸ್ಪತ್ರೆ, ಕಾಲೇಜುಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ಅಂತಹ ಮಹಿಳೆಯರಿಗೆ ಸರ್ಕಾರದ ಈ ಯೋಜನೆ ಅನುಕೂಲಕರವಾಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ: 4 ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಗತಿ ಹೇಗಿದೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.