ಸುಳ್ಯ: ತಾಲೂಕಿನ ವಿವಿಧೆಡೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಭಾನುವಾರ ನಡೆದ ಚುನಾವಣಾ ಮತ ಎಣಿಕೆಯಲ್ಲಿ ಐವರ್ನಾಡು, ಪಂಜ, ಅರಂತೋಡುಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಜಯ ಒಲಿದಿದೆ.
ಐವರ್ನಾಡು ಸಹಕಾರಿ ಸಂಘದಲ್ಲಿ ಎನ್ಎನ್ ಮನ್ಮಥ ಸಹಿತ ಬಿಜೆಪಿ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ 8 ಸ್ಥಾನಗಳನ್ನು ಗೆದ್ದುಕೊಂಡರೆ, ಈ ಹಿಂದೆ ಅವಿರೋಧವಾಗಿದ್ದ 4 ಸ್ಥಾನಗಳನ್ನು ಗೆಲ್ಲುವ ಮೂಲಕ ಒಟ್ಟು 12 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದೆ.
ಪಂಜದಲ್ಲಿ ಚಂದ್ರಶೇಖರ ಶಾಸ್ತ್ರಿ ಸಹಿತ ಬಿಜೆಪಿ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.