ETV Bharat / state

ಚಾರ್ಮಾಡಿ ಘಾಟಿಯಲ್ಲಿ ಹಗಲಲ್ಲೇ ಮತ್ತೆ ಒಂಟಿ ಸಲಗ ಪ್ರತ್ಯಕ್ಷ: ಸಾಲುಗಟ್ಟಿ ನಿಂತ ವಾಹನಗಳು

author img

By

Published : May 17, 2023, 9:44 PM IST

ಚಾರ್ಮಡಿ ಘಾಟ್​​ನಲ್ಲಿ ಕೆಲವು ದಿನಗಳಿಂದ ಕಾಡಾನೆಗಳು ಪ್ರತ್ಯಕ್ಷವಾಗುತ್ತಿದ್ದು, ಈ ಬಗ್ಗೆ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

elephant-seen-in-charmadi-ghat
ಚಾರ್ಮಾಡಿ ಘಾಟಿಯಲ್ಲಿ ಹಗಲಲ್ಲೆ ಮತ್ತೆ ಒಂಟಿಸಲಗ ಪ್ರತ್ಯಕ್ಷ: ಸಾಲುಗಟ್ಟಿ ನಿಂತ ವಾಹನಗಳು

ಬೆಳ್ತಂಗಡಿ (ದಕ್ಷಿಣ ಕನ್ನಡ): ಮಂಗಳೂರು, ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4.30ರ ಸುಮಾರಿಗೆ ಒಂಟಿ ಸಲಗ ರಸ್ತೆಯಲ್ಲಿಯೇ ಪ್ರತ್ಯಕ್ಷವಾಗಿದ್ದು, ಪ್ರಯಾಣಿಕರಿಗೆ ಮತ್ತು ವಾಹನ ಸವಾರರಿಗೆ ಭಯ ಸೃಷ್ಟಿಸಿದೆ.

ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬಸ್ ಪಾರಾಗಿದೆ. ಬಸ್ ಸಮೀಪವೇ ಕಾಡಾನೆ ಕಂಡು ಚಾಲಕ ಬಸ್ ನಿಲ್ಲಿಸಿದ್ದರಿಂದ ಅಲ್ಲೆ ನಿಂತಿದ್ದ ಆನೆ ನಂತರ ಏಳನೇ ತಿರುವಿನ ಮತ್ತೊಂದು ಭಾಗದಲ್ಲಿ ಹೋಗಿ ನಿಂತಿತು. ಬಸ್​​ನ ಹಿಂದೆ ಹಲವು ವಾಹನಗಳು ಅರ್ಧ ಗಂಟೆಗೂ ಅಧಿಕ ಕಾಲ ಸಾಲುಗಟ್ಟಿ ನಿಂತಿದ್ದು ನಂತರ ವಾಹನಗಳು ನಿಧಾನವಾಗಿ ಚಲಿಸಿವೆ.

ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಕಾಡಾನೆಗಳು ಕಂಡು ಬರುತಿದ್ದು, ವಾಹನ ಸವಾರರು ಆತಂಕ ಪಡುವಂತಾಗಿದೆ. ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದೆ ದೊಡ್ಡ ಅನಾಹುತ ಸಂಭವಿಸಬಹುದು. ಆದ್ದರಿಂದ ಅಧಿಕಾರಿಗಳು ಚಾರ್ಮಾಡಿ ಘಾಟಿನಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿರ್ಬಂಧಿಸಿ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇಬ್ಬರನ್ನು ಬಲಿ ಪಡೆದ ಪಡೆದ ಕಾಡಾನೆಗಳ ಪ್ರತ್ಯಕ್ಷ: ಇಬ್ಬರನ್ನು ಬಲಿ ಪಡೆದ ಎರಡು ಕಾಡಾನೆಗಳು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರೆಂಜಿಲಾಡಿಯ ಸ್ವಲ್ಪ ದೂರದಲ್ಲೇ ಜನವಸತಿ ಪ್ರದೇಶದಲ್ಲಿನ ಅಂಚಿನಲ್ಲಿನ ಅರಣ್ಯ ಭಾಗದಲ್ಲಿ ಮಂಗಳವಾರ ಕಾಣಿಸಿಕೊಂಡಿದ್ದು, ಗ್ರಾಮದಲ್ಲಿ ವಾಸಿಸುವ ಜನರು ಆತಂಕಕ್ಕೆ ಒಳಗಾಗಿದ್ದಾರೆ. ರೆಂಜಿಲಾಡಿ ಗ್ರಾಮದ ತುಂಬೆ, ಕಾನದಬಾಗಿಲು ಪ್ರದೇಶದಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಭಾನುವಾರ ಸಂಜೆಯಿಂದಲೇ ಮರಿಯೊಂದಿಗೆ ದೊಡ್ಡ ಕಾಡಾನೆಯೊಂದು ಸಂಚರಿಸುತ್ತಿರುವುದನ್ನು ಸ್ಥಳೀಯರು ಕಂಡಿರುವುದಾಗಿ ತಿಳಿಸಿದ್ದಾರೆ.

ಎರಡು ದಿನಗಳಿಂದ ಈ ಪ್ರದೇಶಗಳಲ್ಲಿ ಈ ಆನೆಗಳು ಹಲವರಿಗೆ ಕಾಣಸಿಕ್ಕಿವೆ ಎನ್ನಲಾಗಿದೆ. ಕಾಡಾನೆಗಳು ಸಾಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರು, ಕಾಡಾನೆಗಳ ಸಂಚಾರದ ಬಗೆಗಿನ ಮಾಹಿತಿ ಲಭ್ಯವಾದ ತಕ್ಷಣದಿಂದಲೇ ನಮ್ಮ ಸಿಬ್ಬಂದಿ ಈ ಪ್ರದೇಶಗಳಲ್ಲಿ ಸಂಚರಿಸಿ ಮಾಹಿತಿಗಳನ್ನು ಪಡೆದು ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದಾರೆ. ಸದ್ಯದಲ್ಲೇ ಎಲಿಫಂಟ್ ಮಿಷನ್ ಆರಂಭಿಸಲಾಗುತ್ತದೆ. ಯಾವುದೇ ಕಾರಣಕ್ಕೂ ಜನರು ಭಯಪಡುವ ಅಗತ್ಯವಿಲ್ಲ. ಆದರೆ, ಎಚ್ಚರಿಕೆ ವಹಿಸಬೇಕು. ಕಾಡಾನೆಗಳು ಪತ್ತೆಯಾದಲ್ಲಿ ಕೂಡಲೇ ಅರಣ್ಯಾಧಿಕಾರಿಗಳನ್ನು ಸಂಪರ್ಕಿಸಿ ಎಂದು ಸ್ಥಳೀಯರಲ್ಲಿ ಮನವಿ ಮಾಡಿಕೊಂಡರು.

ಮತದಾನ ಮಾಡಿ ವಾಪಸ್ಸಾಗುತ್ತಿದ್ದ ವೇಳೆ ಕಾಡಾನೆ ದಾಳಿ: ಕಳೆದ ಮೇ 10 ಮತದಾನನ ದಿಂದ ಚಾಮರಾಜನಗರದ ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಕೆರೆ ಗ್ರಾಮದಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಿ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಪುಟ್ಟಸ್ವಾಮಿ (42) ಎಂಬ ವ್ಯಕ್ತಿಯ ಮೇಲೆ ಕಾಡಾನೆ ತುಳಿದು ಸಾವನ್ನಪ್ಪಿದ್ದರು.

ಇದನ್ನೂ ಓದಿ: ಬಾಯಾರಿಕೆ.. ದೇವಸ್ಥಾನದಲ್ಲಿ ಕೈ ಪಂಪ್‌ ಒತ್ತಿ ನೀರು ಕುಡಿದ ಕಾಡಾನೆ: ವೈರಲ್ ವಿಡಿಯೋ

ಬೆಳ್ತಂಗಡಿ (ದಕ್ಷಿಣ ಕನ್ನಡ): ಮಂಗಳೂರು, ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4.30ರ ಸುಮಾರಿಗೆ ಒಂಟಿ ಸಲಗ ರಸ್ತೆಯಲ್ಲಿಯೇ ಪ್ರತ್ಯಕ್ಷವಾಗಿದ್ದು, ಪ್ರಯಾಣಿಕರಿಗೆ ಮತ್ತು ವಾಹನ ಸವಾರರಿಗೆ ಭಯ ಸೃಷ್ಟಿಸಿದೆ.

ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬಸ್ ಪಾರಾಗಿದೆ. ಬಸ್ ಸಮೀಪವೇ ಕಾಡಾನೆ ಕಂಡು ಚಾಲಕ ಬಸ್ ನಿಲ್ಲಿಸಿದ್ದರಿಂದ ಅಲ್ಲೆ ನಿಂತಿದ್ದ ಆನೆ ನಂತರ ಏಳನೇ ತಿರುವಿನ ಮತ್ತೊಂದು ಭಾಗದಲ್ಲಿ ಹೋಗಿ ನಿಂತಿತು. ಬಸ್​​ನ ಹಿಂದೆ ಹಲವು ವಾಹನಗಳು ಅರ್ಧ ಗಂಟೆಗೂ ಅಧಿಕ ಕಾಲ ಸಾಲುಗಟ್ಟಿ ನಿಂತಿದ್ದು ನಂತರ ವಾಹನಗಳು ನಿಧಾನವಾಗಿ ಚಲಿಸಿವೆ.

ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಕಾಡಾನೆಗಳು ಕಂಡು ಬರುತಿದ್ದು, ವಾಹನ ಸವಾರರು ಆತಂಕ ಪಡುವಂತಾಗಿದೆ. ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದೆ ದೊಡ್ಡ ಅನಾಹುತ ಸಂಭವಿಸಬಹುದು. ಆದ್ದರಿಂದ ಅಧಿಕಾರಿಗಳು ಚಾರ್ಮಾಡಿ ಘಾಟಿನಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿರ್ಬಂಧಿಸಿ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇಬ್ಬರನ್ನು ಬಲಿ ಪಡೆದ ಪಡೆದ ಕಾಡಾನೆಗಳ ಪ್ರತ್ಯಕ್ಷ: ಇಬ್ಬರನ್ನು ಬಲಿ ಪಡೆದ ಎರಡು ಕಾಡಾನೆಗಳು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರೆಂಜಿಲಾಡಿಯ ಸ್ವಲ್ಪ ದೂರದಲ್ಲೇ ಜನವಸತಿ ಪ್ರದೇಶದಲ್ಲಿನ ಅಂಚಿನಲ್ಲಿನ ಅರಣ್ಯ ಭಾಗದಲ್ಲಿ ಮಂಗಳವಾರ ಕಾಣಿಸಿಕೊಂಡಿದ್ದು, ಗ್ರಾಮದಲ್ಲಿ ವಾಸಿಸುವ ಜನರು ಆತಂಕಕ್ಕೆ ಒಳಗಾಗಿದ್ದಾರೆ. ರೆಂಜಿಲಾಡಿ ಗ್ರಾಮದ ತುಂಬೆ, ಕಾನದಬಾಗಿಲು ಪ್ರದೇಶದಲ್ಲಿ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಭಾನುವಾರ ಸಂಜೆಯಿಂದಲೇ ಮರಿಯೊಂದಿಗೆ ದೊಡ್ಡ ಕಾಡಾನೆಯೊಂದು ಸಂಚರಿಸುತ್ತಿರುವುದನ್ನು ಸ್ಥಳೀಯರು ಕಂಡಿರುವುದಾಗಿ ತಿಳಿಸಿದ್ದಾರೆ.

ಎರಡು ದಿನಗಳಿಂದ ಈ ಪ್ರದೇಶಗಳಲ್ಲಿ ಈ ಆನೆಗಳು ಹಲವರಿಗೆ ಕಾಣಸಿಕ್ಕಿವೆ ಎನ್ನಲಾಗಿದೆ. ಕಾಡಾನೆಗಳು ಸಾಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರು, ಕಾಡಾನೆಗಳ ಸಂಚಾರದ ಬಗೆಗಿನ ಮಾಹಿತಿ ಲಭ್ಯವಾದ ತಕ್ಷಣದಿಂದಲೇ ನಮ್ಮ ಸಿಬ್ಬಂದಿ ಈ ಪ್ರದೇಶಗಳಲ್ಲಿ ಸಂಚರಿಸಿ ಮಾಹಿತಿಗಳನ್ನು ಪಡೆದು ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದಾರೆ. ಸದ್ಯದಲ್ಲೇ ಎಲಿಫಂಟ್ ಮಿಷನ್ ಆರಂಭಿಸಲಾಗುತ್ತದೆ. ಯಾವುದೇ ಕಾರಣಕ್ಕೂ ಜನರು ಭಯಪಡುವ ಅಗತ್ಯವಿಲ್ಲ. ಆದರೆ, ಎಚ್ಚರಿಕೆ ವಹಿಸಬೇಕು. ಕಾಡಾನೆಗಳು ಪತ್ತೆಯಾದಲ್ಲಿ ಕೂಡಲೇ ಅರಣ್ಯಾಧಿಕಾರಿಗಳನ್ನು ಸಂಪರ್ಕಿಸಿ ಎಂದು ಸ್ಥಳೀಯರಲ್ಲಿ ಮನವಿ ಮಾಡಿಕೊಂಡರು.

ಮತದಾನ ಮಾಡಿ ವಾಪಸ್ಸಾಗುತ್ತಿದ್ದ ವೇಳೆ ಕಾಡಾನೆ ದಾಳಿ: ಕಳೆದ ಮೇ 10 ಮತದಾನನ ದಿಂದ ಚಾಮರಾಜನಗರದ ಹನೂರು ತಾಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಕೆರೆ ಗ್ರಾಮದಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಿ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಪುಟ್ಟಸ್ವಾಮಿ (42) ಎಂಬ ವ್ಯಕ್ತಿಯ ಮೇಲೆ ಕಾಡಾನೆ ತುಳಿದು ಸಾವನ್ನಪ್ಪಿದ್ದರು.

ಇದನ್ನೂ ಓದಿ: ಬಾಯಾರಿಕೆ.. ದೇವಸ್ಥಾನದಲ್ಲಿ ಕೈ ಪಂಪ್‌ ಒತ್ತಿ ನೀರು ಕುಡಿದ ಕಾಡಾನೆ: ವೈರಲ್ ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.