ETV Bharat / state

ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ: 6 ಮಂದಿ ಕುಖ್ಯಾತ ದಂತಚೋರರ ಬಂಧನ - ಪುತ್ತೂರಲ್ಲಿ ಆನೆ ದಂತ ವಶಕ್ಕೆ

ಪುತ್ತೂರು ವಲಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಿನಿಮೀಯ ರೀತಿಯಲ್ಲಿ ದಂತಚೋರರನ್ನು ಅಡ್ಡಗಟ್ಟಿ ಬಂಧಿಸಿ, ಆನೆ ದಂತ ಮತ್ತು ವಾಹನ ವಶಕ್ಕೆ ಪಡೆದಿದ್ದಾರೆ.

elephants-ivory-thieves-arrested-in-putturu
ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ: 6 ಮಂದಿ ಕುಖ್ಯಾತ ದಂತಚೋರರ ಬಂಧನ
author img

By

Published : Jun 19, 2022, 10:49 PM IST

ಪುತ್ತೂರು(ದಕ್ಷಿಣ ಕನ್ನಡ): ಮಿಂಚಿನ ಕಾರ್ಯಾಚರಣೆ ನಡೆಸಿದ ಪುತ್ತೂರು ವಲಯ ಅರಣ್ಯ ಇಲಾಖೆ ಸಿಬ್ಬಂದಿ 6 ಮಂದಿ ಕುಖ್ಯಾತ ಅಂತಾರಾಜ್ಯ ದಂತಚೋರರನ್ನು ಬಂಧಿಸಿದ್ದಾರೆ. ಇಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚೋರರ ವಾಹನ ಅಡ್ಡಗಟ್ಟಿ ಆನೆ ದಂತ ಮತ್ತು ವಾಹನ ವಶಪಡಿಸಿಕೊಳ್ಳಲಾಗಿದೆ.

ಶಶಿಕುಮಾರ್, ಸತೀಶ್, ವಿಜ್ಞೇಶ್, ವಿನಿತ್, ಸಂಪತ್‌ ಕುಮಾರ ಮತ್ತು ರತೀಶ್​​ ಎಂಬವರು ಬಂಧಿತ ಆರೋಪಿಗಳು. ಇವರೆಲ್ಲ ತಮಿಳುನಾಡು ಮತ್ತು ಕೇರಳ ಮೂಲದವರಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.‌ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.‌

ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ.ಕೆ. ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವೈ.ಪಿ. ಕಾರ್ಯಪ್ಪರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ ಕಿರಣ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಅಪ್ಪಂದಿರ ದಿನವೇ ದುರಂತ.. ಮರಕ್ಕೆ ಕಾರು ಡಿಕ್ಕಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವು

ಪುತ್ತೂರು(ದಕ್ಷಿಣ ಕನ್ನಡ): ಮಿಂಚಿನ ಕಾರ್ಯಾಚರಣೆ ನಡೆಸಿದ ಪುತ್ತೂರು ವಲಯ ಅರಣ್ಯ ಇಲಾಖೆ ಸಿಬ್ಬಂದಿ 6 ಮಂದಿ ಕುಖ್ಯಾತ ಅಂತಾರಾಜ್ಯ ದಂತಚೋರರನ್ನು ಬಂಧಿಸಿದ್ದಾರೆ. ಇಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚೋರರ ವಾಹನ ಅಡ್ಡಗಟ್ಟಿ ಆನೆ ದಂತ ಮತ್ತು ವಾಹನ ವಶಪಡಿಸಿಕೊಳ್ಳಲಾಗಿದೆ.

ಶಶಿಕುಮಾರ್, ಸತೀಶ್, ವಿಜ್ಞೇಶ್, ವಿನಿತ್, ಸಂಪತ್‌ ಕುಮಾರ ಮತ್ತು ರತೀಶ್​​ ಎಂಬವರು ಬಂಧಿತ ಆರೋಪಿಗಳು. ಇವರೆಲ್ಲ ತಮಿಳುನಾಡು ಮತ್ತು ಕೇರಳ ಮೂಲದವರಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.‌ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.‌

ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ.ಕೆ. ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವೈ.ಪಿ. ಕಾರ್ಯಪ್ಪರವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿ ಕಿರಣ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ: ಅಪ್ಪಂದಿರ ದಿನವೇ ದುರಂತ.. ಮರಕ್ಕೆ ಕಾರು ಡಿಕ್ಕಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.