ETV Bharat / state

ವಿಶೇಷ ಪ್ಯಾಕೇಜ್​​ಗೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಿಸಿಯೂಟ ನೌಕರರು - Belthangady Taluk Committee

ಬಿಸಿಯೂಟ ನೌಕರರ ಹಿತ ಕಾಪಾಡಲು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿ ಅಕ್ಷರ ದಾಸೋಹ ನೌಕರರ ಸಂಘವು ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

Employees appealing to the government for a special package
ವಿಶೇಷ ಪ್ಯಾಕೇಜ್ ಗೆ ಆಗ್ರಹಿಸಿ ಸರಕಾರಕ್ಕೆ ಮನವಿ ಸಲ್ಲಿಸಿದ ಬಿಸಿಯೂಟ ನೌಕರರು
author img

By

Published : May 27, 2020, 12:18 PM IST

ಬೆಳ್ತಂಗಡಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅಕ್ಷರ ದಾಸೋಹ ಯೋಜನೆಯಡಿ ದುಡಿಯುತ್ತಿರುವ ಬಿಸಿಯೂಟ ನೌಕರರ ಹಿತ ಕಾಪಾಡಲು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿ ಅಕ್ಷರ ದಾಸೋಹ ನೌಕರರ ಸಂಘವು(ಸಿಐಟಿಯು) ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

2001-02ರಲ್ಲಿ ಪ್ರಾರಂಭವಾದ ಅಕ್ಷರ ದಾಸೋಹ ಯೋಜನೆಯಡಿ ರಾಜ್ಯದಲ್ಲಿ ಲಕ್ಷಾಂತರ ಮಹಿಳೆಯರು ದುಡಿಯುತ್ತಿದ್ದಾರೆ. ಕೊರೊನಾ ಲಾಕ್​​ಡೌನ್ ಬಳಿಕ ಯಾವುದೇ ಪರಿಹಾರವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಬಿಸಿಯೂಟ ನೌಕರರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಅವರಿಗೆ ಏಪ್ರಿಲ್, ಮೇ ತಿಂಗಳ ವೇತನ ನೀಡಬೇಕು. ಪ್ರಧಾನಮಂತ್ರಿ ಶ್ರಮಯೋಗಿ ಮಾನ್​ಧನ್ ಪಿಂಚಣಿ ಬದಲಾಗಿ ಎಲ್ಐಸಿ ಆಧಾರಿತ ಪಿಂಚಣಿ ನೀಡಬೇಕು. ನೌಕರರಿಗೆ 18,000/- ಮಾಸಿಕ ವೇತನ ನೀಡಬೇಕು. ಅಲ್ಲಿಯವರೆಗೆ 5000 ರೂ. ನೀಡಬೇಕು. ಅಕ್ಷರ ದಾಸೋಹ ಯೋಜನೆಗೆ ಕಡಿತ ಮಾಡಿರುವ ಅನುದಾನವನ್ನು ಕೇಂದ್ರ ಸರ್ಕಾರ ವಾಪಸ್ ನೀಡಬೇಕು. ನೌಕರರನ್ನು ಡಿ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಹೀಗೆ 22 ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಬೆಳ್ತಂಗಡಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಅಕ್ಷರ ದಾಸೋಹ ಯೋಜನೆಯಡಿ ದುಡಿಯುತ್ತಿರುವ ಬಿಸಿಯೂಟ ನೌಕರರ ಹಿತ ಕಾಪಾಡಲು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿ ಅಕ್ಷರ ದಾಸೋಹ ನೌಕರರ ಸಂಘವು(ಸಿಐಟಿಯು) ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

2001-02ರಲ್ಲಿ ಪ್ರಾರಂಭವಾದ ಅಕ್ಷರ ದಾಸೋಹ ಯೋಜನೆಯಡಿ ರಾಜ್ಯದಲ್ಲಿ ಲಕ್ಷಾಂತರ ಮಹಿಳೆಯರು ದುಡಿಯುತ್ತಿದ್ದಾರೆ. ಕೊರೊನಾ ಲಾಕ್​​ಡೌನ್ ಬಳಿಕ ಯಾವುದೇ ಪರಿಹಾರವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಬಿಸಿಯೂಟ ನೌಕರರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಅವರಿಗೆ ಏಪ್ರಿಲ್, ಮೇ ತಿಂಗಳ ವೇತನ ನೀಡಬೇಕು. ಪ್ರಧಾನಮಂತ್ರಿ ಶ್ರಮಯೋಗಿ ಮಾನ್​ಧನ್ ಪಿಂಚಣಿ ಬದಲಾಗಿ ಎಲ್ಐಸಿ ಆಧಾರಿತ ಪಿಂಚಣಿ ನೀಡಬೇಕು. ನೌಕರರಿಗೆ 18,000/- ಮಾಸಿಕ ವೇತನ ನೀಡಬೇಕು. ಅಲ್ಲಿಯವರೆಗೆ 5000 ರೂ. ನೀಡಬೇಕು. ಅಕ್ಷರ ದಾಸೋಹ ಯೋಜನೆಗೆ ಕಡಿತ ಮಾಡಿರುವ ಅನುದಾನವನ್ನು ಕೇಂದ್ರ ಸರ್ಕಾರ ವಾಪಸ್ ನೀಡಬೇಕು. ನೌಕರರನ್ನು ಡಿ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಹೀಗೆ 22 ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.