ಮಂಗಳೂರು: ಪರಿಸರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಜಿಲ್ಲೆಯ ಪರಿಸರವಾದಿ ಶಶಿಧರ್ ಶೆಟ್ಟಿಯವರು ರಸ್ತೆ ಅಗಲೀಕರಣದ ನೆಪದಲ್ಲಿ ಮರಗಳ ಮಾರಣಹೋಮ ನಡೆಸಿದ ಮಂಗಳೂರು ಮಹಾನಗರ ಪಾಲಿಕೆ ವಿರುದ್ಧ ಫೇಸ್ಬುಕ್ ಲೈವ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಫೇಸ್ಬುಕ್ ಲೈವ್ ಎಲ್ಲೆಡೆ ಶೇರ್ ಆಗಿದ್ದು, ಶಶಿಧರ್ ಶೆಟ್ಟಿ ಕಾರ್ಯಕ್ಕೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ. ನಗರದ ಮಂಗಳಾದೇವಿ ಸಮೀಪದ ಮಾರ್ನಮಿಕಟ್ಟೆಯಲ್ಲಿ ಮಹಾನಗರ ಪಾಲಿಕೆ ರಸ್ತೆ ಅಗಲೀಕರಣದ ನೆಪದಲ್ಲಿ ಬೃಹದಾಕಾರದ ಮರಗಳನ್ನು ಕಡಿದುರುಳಿಸಿದೆ. ಇದನ್ನು ಗಮನಿಸಿದ ಪರಿಸರವಾದಿ ಶಶಿಧರ್ ಶೆಟ್ಟಿಯವರು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಅದೇ ಸ್ಥಳದಲ್ಲಿ ನಿಂತು ಫೇಸ್ಬುಕ್ ಲೈವ್ ನಡೆಸಿ ಅಧಿಕಾರಿಗಳು, ಇಂಜಿನಿಯರ್ಗಳು ಹಾಗೂ ಖಾಸಗಿ ಇಂಜಿನಿಯರ್ ಧರ್ಮರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ನೆಪದಲ್ಲಿ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಶಶಿಧರ್ ಆರೋಪಿಸಿದ್ದಾರೆ. ಈ ಫೇಸ್ಬುಕ್ ಲವ್ಗೆ ಈಗಾಗಲೇ 5 ಸಾವಿರಕ್ಕೂ ಅಧಿಕ ಲೈಕ್ ಬಂದಿದ್ದು, 806 ಕಮೆಂಟ್ಸ್, 1.90 ಲಕ್ಷ ಜನ ವಿಡಿಯೋವನ್ನು ನೋಡಿದ್ದಾರೆ.