ETV Bharat / state

ಅಡ್ಯಾರ್​ ಪ್ರತಿಭಟನೆ ವೇಳೆ ಅವಹೇಳನಕಾರಿ ಘೋಷಣೆ ಕೂಗಿದವರ ವಿರುದ್ಧ ಎಫ್​ಐಆರ್​ - F IR against those who derogatory shouting at Mangaluru Protest

ಅಡ್ಯಾರ್​ ಕಣ್ಣೂರಿನಲ್ಲಿ ಜನವರಿ 15ರಂದು ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾ ಸಮಾವೇಶದಲ್ಲಿ ಅವಹೇಳನಕಾರಿ ಘೋಷಣೆ ಕೂಗಿರುವವರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

F IR against those who  derogatory shouting
ಅವಹೇಳನಕಾರಿ ಘೊಷಣೆ ಕೂಗುತ್ತಿರುವುದು
author img

By

Published : Jan 17, 2020, 1:04 PM IST

ಮಂಗಳೂರು: ನಗರದ ಅಡ್ಯಾರ್​ ಕಣ್ಣೂರಿನಲ್ಲಿ ಜನವರಿ 15ರಂದು ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾ ಸಮಾವೇಶದಲ್ಲಿ ಗೃಹ ಸಚಿವ ಅಮಿತ್ ಶಾ, ಸಿಎಂ ಯಡಿಯೂರಪ್ಪ ವಿರುದ್ಧ ಹಾಗೂ ಪೊಲೀಸರ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿರುವವರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅವಹೇಳನಕಾರಿ ಘೊಷಣೆ ಕೂಗುತ್ತಿರುವುದು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಕಣ್ಣೂರು ಶಹಾ ಗಾರ್ಡನ್ ನಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆದಿತ್ತು‌. ಈ ಸಂದರ್ಭ ಕೆಲವೊಂದು ಪ್ರತಿಭಟನಾಕಾರರು ಖಾಸಗಿ ಬಸ್ ಮೇಲೇರಿ ಗೃಹಮಂತ್ರಿ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದರು. ಅಲ್ಲದೆ ಪೊಲೀಸರ ಕೈಕಾಲು ಕಡಿಯುತ್ತೇವೆ, ಅಗತ್ಯ ಬಿದ್ದಲ್ಲಿ ತಲೆಯನ್ನೂ ಕಡಿಯುತ್ತೇವೆ ಎಂದು ಘೋಷಣೆ ಕೂಗಿದ್ದರು. ಪ್ರತಿಭಟನಾಕಾರರು ಈ ರೀತಿ ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಬಗ್ಗೆ ಚೇತನ್ ಎಂಬವರು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಘೋಷಣೆ ಕೂಗಿದವರ ಮೇಲೆ ಎಫ್ಐಆರ್ ದಾಖಲಾಗಿದೆ.

ಮಂಗಳೂರು: ನಗರದ ಅಡ್ಯಾರ್​ ಕಣ್ಣೂರಿನಲ್ಲಿ ಜನವರಿ 15ರಂದು ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾ ಸಮಾವೇಶದಲ್ಲಿ ಗೃಹ ಸಚಿವ ಅಮಿತ್ ಶಾ, ಸಿಎಂ ಯಡಿಯೂರಪ್ಪ ವಿರುದ್ಧ ಹಾಗೂ ಪೊಲೀಸರ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿರುವವರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅವಹೇಳನಕಾರಿ ಘೊಷಣೆ ಕೂಗುತ್ತಿರುವುದು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಕಣ್ಣೂರು ಶಹಾ ಗಾರ್ಡನ್ ನಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆದಿತ್ತು‌. ಈ ಸಂದರ್ಭ ಕೆಲವೊಂದು ಪ್ರತಿಭಟನಾಕಾರರು ಖಾಸಗಿ ಬಸ್ ಮೇಲೇರಿ ಗೃಹಮಂತ್ರಿ ಅಮಿತ್ ಶಾ, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದರು. ಅಲ್ಲದೆ ಪೊಲೀಸರ ಕೈಕಾಲು ಕಡಿಯುತ್ತೇವೆ, ಅಗತ್ಯ ಬಿದ್ದಲ್ಲಿ ತಲೆಯನ್ನೂ ಕಡಿಯುತ್ತೇವೆ ಎಂದು ಘೋಷಣೆ ಕೂಗಿದ್ದರು. ಪ್ರತಿಭಟನಾಕಾರರು ಈ ರೀತಿ ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಬಗ್ಗೆ ಚೇತನ್ ಎಂಬವರು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಘೋಷಣೆ ಕೂಗಿದವರ ಮೇಲೆ ಎಫ್ಐಆರ್ ದಾಖಲಾಗಿದೆ.

Intro:ಮಂಗಳೂರು: ನಗರದಲ್ಲಿ ನಡೆದ ಸಿಎಎ ಕಾಯ್ದೆಯನ್ನು ವಿರೋಧಿ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಪ್ರತಿಭಟನಾಕಾರರಿಂದ ಅಮಿತ್ ಶಾ,ಯಡಿಯೂರಪ್ಪ ವಿರುದ್ಧ ಅವಹೇಳನಕಾರಿ ಹಾಗೂ ಪೊಲೀಸರ ಕೈ-ಕಾಲು, ತಲೆ ಕಡಿಯುವ ಘೋಷಣೆ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಜನವರಿ 15ರಂದು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್-ಕಣ್ಣೂರು ಬಳಿಯ ಶಹಾ ಗಾರ್ಡನ್ ನಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆದಿತ್ತು‌. ಈ ಸಂದರ್ಭ ಕೆಲವೊಂದು ಪ್ರತಿಭಟನಾಕಾರರು ಮಹೇಶ್ ಎಂಬ ಖಾಸಗಿ ಬಸ್ ಮೇಲೇರಿ ದೇಶದ ಗೃಹಮಂತ್ರಿ ಅಮಿತ್ ಶಾ ಅವರನ್ನು ಹೋಗು 'ಏ ಹುಲ್ಲು ಅಮಿತ್ ಶಾ', ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ನವರನ್ನು 'ಹೋಗು ಚಕ್ಕ ಯಡಿಯೂರಪ್ಪ' ಎಂದು ಅವಾಚ್ಯವಾಗಿ ಘೋಷಣೆ ಕೂಗಿ ನಿಂದನೆ ಮಾಡಿದ್ದಾರೆ. ಅಲ್ಲದೆ ಪೊಲೀಸರ ವಿರುದ್ಧ ಘೋಷಣೆ ಕೂಗಿ ನಿಮ್ಮ ಕೈಕಾಲು ಕಡಿಯುತ್ತೇವೆ, ಅಗತ್ಯ ಬಿದ್ದಲ್ಲಿ ನಿಮ್ಮ ತಲೆಯನ್ನೂ ಕಡಿಯುತ್ತೇವೆ ಎಂದು ಸಮಾಜ ಘಾತುಕವಾಗಿ ವರ್ತಿಸಿದ್ದಾರೆ. ಇದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಹಿಂದೂ-ಮುಸ್ಲಿಂ ಕೋಮು ಸಾಮಾರಸ್ಯ ಕದಡುವ ಕೆಲಸವನ್ನೂ ಮಾಡಿದ್ದಾರೆ.

Body:ಈ ಹಿನ್ನೆಲೆಯಲ್ಲಿ ಚೇತನ್ ಎಂಬವರು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ‌. ಆದ್ದರಿಂದ ಕೃತ್ಯದಲ್ಲಿ ತೊಡಗಿರುವವರ ಮೇಲೆ ಎಫ್ಐಆರ್ ದಾಖಲಾಗಿದೆ.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.