ETV Bharat / state

ಫಾಸ್ಟ್ ಫುಡ್ ಮೇಕರ್ ಇಟ್ಟೇ ಬಿಟ್ಟ ಉಂಡೆನಾಮ.. ಲಕ್ಷಾಂತರ ರೂಪಾಯಿ, ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿ.. - Fast food maker cheating in Sulya news

ತಾನು ಕಡಬದಲ್ಲಿ ಫಾಸ್ಟ್ ಫುಡ್ ವ್ಯಾಪಾರ ಮಾಡುವ ಉದ್ದೇಶವನ್ನು ಇಟ್ಟುಕೊಂಡಿದ್ದೇನೆ ಎಂದು ಹಲವರನ್ನು ಈತ ನಂಬಿಸಿದ್ದ ಎನ್ನಲಾಗಿದೆ. ಈತನ ಪರಾರಿ ಬಗ್ಗೆ ಇದೀಗ ಸಾರ್ವಜನಿಕ ವಲಯದಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಈತನ ವಿರುದ್ಧ ಹಣ ಕಳೆದುಕೊಂಡವರು ಈವರೆಗೂ ಪೊಲೀಸ್ ಠಾಣೆಗೆ ದೂರು ನೀಡಿಲ್ಲ ಎಂದು ತಿಳಿದು ಬಂದಿದೆ..

ಫಾಸ್ಟ್ ಫುಡ್ ಮೇಕರ್ ಇಟ್ಟೇ ಬಿಟ್ಟ ಉಂಡೆನಾಮ
ಫಾಸ್ಟ್ ಫುಡ್ ಮೇಕರ್ ಇಟ್ಟೇ ಬಿಟ್ಟ ಉಂಡೆನಾಮ
author img

By

Published : Aug 25, 2021, 9:01 PM IST

ಸುಳ್ಯ : ಕಳೆದ ಎರಡು ತಿಂಗಳ ಹಿಂದೆ ಆರಂಭವಾದ ಹೋಟೆಲ್ ಒಂದರಲ್ಲಿ ಫಾಸ್ಟ್​ಫುಡ್ ಕೆಲಸಗಾರನಾಗಿ ಸೇರಿದ ವ್ಯಕ್ತಿಯೋರ್ವ ಲಕ್ಷಾಂತರ ರೂ. ಹಾಗೂ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಕಡಬದಲ್ಲಿ ಜರುಗಿದೆ.

ಆಧಾರ್ ಕಾರ್ಡ್ ವಿಳಾಸದ ಪ್ರಕಾರ ಮೈಸೂರಿನ ಪಿರಿಯಾಪಟ್ಟಣ ತಾಲೂಕು ನಿವಾಸಿಯಾಗಿರುವ ಈತ ಹಾರನಹಳ್ಳಿ ಹೋಬಳಿಯ ರಾಮಮಂದಿರ ಸಮೀಪದ ನಿವಾಸಿ ಎಂ ಟಿ ಕರೀಗೌಡ ಎಂಬುವರ ಪುತ್ರ ಶರತ್ ಬಾಬು ಸಿ ಕೆ ಎಂದು ಗುರುತಿಸಲಾಗಿದೆ.

ಈತ ಸ್ಥಳೀಯವಾಗಿ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದ. ಅಲ್ಲೇ ಪಕ್ಕದಲ್ಲಿ ಹೋಟೆಲ್ ಒಂದರಲ್ಲಿ ಎರಡು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದ. ಈತ ಹೋಟೆಲ್ ಸುತ್ತಮುತ್ತಲಿನ ಪರಿಸರದ ಹಲವರಲ್ಲಿ ಸ್ನೇಹ ಸಂಪಾದಿಸಿಕೊಂಡಿದ್ದ.

ಈ ನಡುವೆ ಸ್ಥಳೀಯವಾಗಿ ಉನ್ನತ ಸ್ಥಾನದಲ್ಲಿ ಇರುವ ಹಲವಾರು ಜನರನ್ನು ತನ್ನ ಮಾತಿನ ಮೋಡಿ ಮೂಲಕ ವಂಚಿಸಿ ನಗದು, ಚಿನ್ನಾಭರಣಗಳು, ವಾಹನ, ಎಲೆಕ್ಟ್ರಾನಿಕ್ ವಸ್ತುಗಳೊಂದಿಗೆ ಇದೀಗ ಪರಾರಿಯಾಗಿದ್ದಾನೆ.

ತಾನು ಕಡಬದಲ್ಲಿ ಫಾಸ್ಟ್ ಫುಡ್ ವ್ಯಾಪಾರ ಮಾಡುವ ಉದ್ದೇಶವನ್ನು ಇಟ್ಟುಕೊಂಡಿದ್ದೇನೆ ಎಂದು ಹಲವರನ್ನು ಈತ ನಂಬಿಸಿದ್ದ ಎನ್ನಲಾಗಿದೆ. ಈತನ ಪರಾರಿ ಬಗ್ಗೆ ಇದೀಗ ಸಾರ್ವಜನಿಕ ವಲಯದಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಈತನ ವಿರುದ್ಧ ಹಣ ಕಳೆದುಕೊಂಡವರು ಈವರೆಗೂ ಪೊಲೀಸ್ ಠಾಣೆಗೆ ದೂರು ನೀಡಿಲ್ಲ ಎಂದು ತಿಳಿದು ಬಂದಿದೆ.

ಸುಳ್ಯ : ಕಳೆದ ಎರಡು ತಿಂಗಳ ಹಿಂದೆ ಆರಂಭವಾದ ಹೋಟೆಲ್ ಒಂದರಲ್ಲಿ ಫಾಸ್ಟ್​ಫುಡ್ ಕೆಲಸಗಾರನಾಗಿ ಸೇರಿದ ವ್ಯಕ್ತಿಯೋರ್ವ ಲಕ್ಷಾಂತರ ರೂ. ಹಾಗೂ ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿಯಾಗಿರುವ ಘಟನೆ ಕಡಬದಲ್ಲಿ ಜರುಗಿದೆ.

ಆಧಾರ್ ಕಾರ್ಡ್ ವಿಳಾಸದ ಪ್ರಕಾರ ಮೈಸೂರಿನ ಪಿರಿಯಾಪಟ್ಟಣ ತಾಲೂಕು ನಿವಾಸಿಯಾಗಿರುವ ಈತ ಹಾರನಹಳ್ಳಿ ಹೋಬಳಿಯ ರಾಮಮಂದಿರ ಸಮೀಪದ ನಿವಾಸಿ ಎಂ ಟಿ ಕರೀಗೌಡ ಎಂಬುವರ ಪುತ್ರ ಶರತ್ ಬಾಬು ಸಿ ಕೆ ಎಂದು ಗುರುತಿಸಲಾಗಿದೆ.

ಈತ ಸ್ಥಳೀಯವಾಗಿ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದ. ಅಲ್ಲೇ ಪಕ್ಕದಲ್ಲಿ ಹೋಟೆಲ್ ಒಂದರಲ್ಲಿ ಎರಡು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ್ದ. ಈತ ಹೋಟೆಲ್ ಸುತ್ತಮುತ್ತಲಿನ ಪರಿಸರದ ಹಲವರಲ್ಲಿ ಸ್ನೇಹ ಸಂಪಾದಿಸಿಕೊಂಡಿದ್ದ.

ಈ ನಡುವೆ ಸ್ಥಳೀಯವಾಗಿ ಉನ್ನತ ಸ್ಥಾನದಲ್ಲಿ ಇರುವ ಹಲವಾರು ಜನರನ್ನು ತನ್ನ ಮಾತಿನ ಮೋಡಿ ಮೂಲಕ ವಂಚಿಸಿ ನಗದು, ಚಿನ್ನಾಭರಣಗಳು, ವಾಹನ, ಎಲೆಕ್ಟ್ರಾನಿಕ್ ವಸ್ತುಗಳೊಂದಿಗೆ ಇದೀಗ ಪರಾರಿಯಾಗಿದ್ದಾನೆ.

ತಾನು ಕಡಬದಲ್ಲಿ ಫಾಸ್ಟ್ ಫುಡ್ ವ್ಯಾಪಾರ ಮಾಡುವ ಉದ್ದೇಶವನ್ನು ಇಟ್ಟುಕೊಂಡಿದ್ದೇನೆ ಎಂದು ಹಲವರನ್ನು ಈತ ನಂಬಿಸಿದ್ದ ಎನ್ನಲಾಗಿದೆ. ಈತನ ಪರಾರಿ ಬಗ್ಗೆ ಇದೀಗ ಸಾರ್ವಜನಿಕ ವಲಯದಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಈತನ ವಿರುದ್ಧ ಹಣ ಕಳೆದುಕೊಂಡವರು ಈವರೆಗೂ ಪೊಲೀಸ್ ಠಾಣೆಗೆ ದೂರು ನೀಡಿಲ್ಲ ಎಂದು ತಿಳಿದು ಬಂದಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.