ETV Bharat / state

ಪಣಂಬೂರು ನಂದನೇಶ್ವರ ದೇವಳದ ಚಪ್ಪರಕ್ಕೆ ಬೆಂಕಿ

ಮಂಗಳೂರಿನ ಪಣಂಬೂರು ಶ್ರೀನಂದನೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಚಪ್ಪರಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಇಂದು ನಡೆದಿದೆ.

author img

By

Published : Feb 4, 2021, 3:44 PM IST

mangalore
ದೇವಳದ ಚಪ್ಪರಕ್ಕೆ ಬೆಂಕಿ

ಮಂಗಳೂರು: ನಗರದ ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನದ ಚಪ್ಪರಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಇಂದು ನಡೆದಿದೆ.

ನಂದನೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಚಪ್ಪರಕ್ಕೆ ಅಕಸ್ಮಾತ್ತಾಗಿ ಬೆಂಕಿ ತಗುಲಿದೆ. ವಾರ್ಷಿಕ ಜಾತ್ರಾ ಮಹೋತ್ಸವದ‌ ನಿಮಿತ್ತ ಬಲಿ ಪೂಜೆ ವೇಳೆ ಈ ಅವಘಡ‌ ಸಂಭವಿಸಿದೆ.

ತಕ್ಷಣ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಈ ಸಂದರ್ಭ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಂಗಳೂರು: ನಗರದ ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನದ ಚಪ್ಪರಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಇಂದು ನಡೆದಿದೆ.

ನಂದನೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಚಪ್ಪರಕ್ಕೆ ಅಕಸ್ಮಾತ್ತಾಗಿ ಬೆಂಕಿ ತಗುಲಿದೆ. ವಾರ್ಷಿಕ ಜಾತ್ರಾ ಮಹೋತ್ಸವದ‌ ನಿಮಿತ್ತ ಬಲಿ ಪೂಜೆ ವೇಳೆ ಈ ಅವಘಡ‌ ಸಂಭವಿಸಿದೆ.

ತಕ್ಷಣ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಈ ಸಂದರ್ಭ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.