ಮಂಗಳೂರು: ಕಡಬ ತಾಲೂಕಿನ ಸುಂಕದಕಟ್ಟೆ ಗ್ರಾಮದ ಕೆಎಫ್ಡಿಸಿ ರಬ್ಬರ್ ನಿಗಮದ ಅರಣ್ಯ ಪ್ರದೇಶಕ್ಕೆ ನಿನ್ನೆ ಬೆಂಕಿ ಹೊತ್ತಿದ್ರಿಂದ, ಅದನ್ನ ನಂದಿಸಲು ಅಧಿಕಾರಿಗಳು, ಸಾರ್ವಜನಿಕರು ಪರದಾಡುವಂತಾಗಿತ್ತು.
ರಬ್ಬರ್ ನಿಗಮದ ಅರಣ್ಯ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಅದು ಇಡೀ ಅರಣ್ಯ ಪ್ರದೇಶಕ್ಕೆ ವ್ಯಾಪಿಸಲಾರಂಭಿಸಿತ್ತು. ಈ ಮೊದಲು ಇದೇ ರೀತಿ ಬೆಂಕಿ ಹತ್ತಿಕೊಂಡಾಗ ಸಾರ್ವಜನಿಕರು ಬೆಂಕಿ ನಂದಿಸಲು ಕಷ್ಟ ಪಟ್ಟಿದ್ದರು. ಆದರೆ, ಆಗ ಬೇಲಿ ಕಿತ್ತು ಹೋಗಿದೆ ಎಂಬ ಕಾರಣ ಮುಂದಿಟ್ಟು ರಬ್ಬರ್ ನಿಗಮದ ಅಧಿಕಾರಿಗಳು ಸಾರ್ವಜನಿಕರನ್ನು ತರಾಟೆಗೆ ತೆಗೆದುಕೊಂಡಿದ್ದರು ಎನ್ನಲಾಗಿದೆ. ಅದೇ ಕಾರಣಕ್ಕೆ ಕೆಎಫ್ಡಿಸಿ ರಬ್ಬರ್ ನಿಗಮದ ಅಧಿಕಾರಿಗಳ ಮೇಲೆ ಬೇಸರಗೊಂಡು ನಿನ್ನೆ ಬೆಂಕಿ ನಂದಿಸಲು ಹೆಚ್ಚಿನ ಸಾರ್ವಜನಿಕರು ಮುಂದಾಗಲಿಲ್ಲ.