ETV Bharat / state

ಭೀಕರ ಪ್ರವಾಹ ಎಫೆಕ್ಟ್​:  ಪುಣ್ಯಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆ ತೀವ್ರ ಇಳಿಮುಖ

author img

By

Published : Aug 19, 2019, 1:48 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯ, ಹೊರ ರಾಜ್ಯಗಳಿಂದ ಅಪಾರ ಭಕ್ತರು ಬರುತ್ತಾರೆ. ಆದರೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಭೀಕರ ನೆರೆ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಈ ಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆಯು ಕಡಿಮೆಯಾಗಿದೆ.

ಧರ್ಮಸ್ಥಳ

ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಭೀಕರ ಪ್ರವಾಹವು ದಕ್ಷಿಣ ಕನ್ನಡದ ಪುಣ್ಯಕ್ಷೇತ್ರಗಳ ಮೇಲೆ ದುಷ್ಪರಿಣಾಮ ಬೀರಿದೆ. ಪುಣ್ಯಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ತೀವ್ರ ಇಳಿಮುಖವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯ, ಹೊರರಾಜ್ಯಗಳಿಂದ ಅಪಾರ ಭಕ್ತರು ಬರುತ್ತಾರೆ. ಆದರೆ, ಕೆಲವು ದಿನಗಳಿಂದ ಈ ಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆಯು ಕಡಿಮೆಯಾಗಿದೆ. ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ಉಂಟಾದ ತೀವ್ರ ಪ್ರವಾಹದಿಂದ ಅಲ್ಲಿನ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ದಕ್ಷಿಣ ಕನ್ನಡವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಮಾರ್ಗಗಳಾದ ಚಾರ್ಮಾಡಿ ಘಾಟ್ ಒಂದು ತಿಂಗಳು ಮತ್ತು ಶಿರಾಡಿ ಘಾಟ್ ಕೆಲವು ದಿನ ಬಂದ್ ಆಗಿತ್ತು. ಅಲ್ಲದೆ, ರೈಲ್ವೆ ಸಂಪರ್ಕ ಕೂಡ ಕಡಿತಗೊಂಡಿರುವುದು ಭಕ್ತರ ಸಂಖ್ಯೆ ಇಳಿಮುಖವಾಗಲು ಕಾರಣವಾಗಿದೆ.

ಪುಣ್ಯಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆ ತೀವ್ರ ಇಳಿಮುಖ

ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನಕ್ಕೆ ಈ ಹಿಂದಿನಿಂದಲೂ ನಿತ್ಯ ಸರಿ ಸುಮಾರು 30 ಸಾವಿರಕ್ಕೂ ಅಧಿಕ ಭಕ್ತರು ಬರುತ್ತಿದ್ದರು. ಆದರೆ, ಈ ಸ್ಥಿತಿ ಹಾಗಿಲ್ಲ. ಸರತಿ ಸಾಲಿನಲ್ಲಿ ಹೆಚ್ಚು ಸಮಯ ನಿಲ್ಲದೇ ದೇವರ ದರ್ಶನಕ್ಕೆ ಹೋಗುವಷ್ಟರ ಮಟ್ಟಕ್ಕೆ ಭಕ್ತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಕೂಡ ಹಿಂದೆ ಬರುತ್ತಿದ್ದಷ್ಟು ಭಕ್ತರು ಬರುತ್ತಿಲ್ಲ. ಸರ್ಪಸಂಸ್ಕಾರ ಸೇವೆಯನ್ನು ಮೊದಲೇ ನೋಂದಾಯಿಸಲಾಗುವುದರಿಂದ ಸುಮಾರು 2 ಸಾವಿರ ಭಕ್ತರು ಆ ಸೇವೆ ನೀಡಲು ಬರುತ್ತಿದ್ದಾರೆ. ಉತ್ತರ ಕರ್ನಾಟಕದ ಪ್ರವಾಹ ಸಂದರ್ಭದಲ್ಲಿ ತೀವ್ರ ಇಳಿಮುಖವಾಗಿದ್ದ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಾರ್ಮಾಡಿ ಘಾಟ್​ ಸಂಚಾರಕ್ಕೆ ಮುಕ್ತವಾದ ಬಳಿಕ ಮತ್ತು ಅಸ್ತವ್ಯಸ್ತವಾದ ಜನರ ಜೀವನ ಸುಧಾರಿಸದ ಬಳಿಕ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪುಣ್ಯಕ್ಷೇತ್ರಗಳತ್ತ ಆಗಮಿಸುವ ಸಾಧ್ಯತೆಯಿದೆ.

ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಭೀಕರ ಪ್ರವಾಹವು ದಕ್ಷಿಣ ಕನ್ನಡದ ಪುಣ್ಯಕ್ಷೇತ್ರಗಳ ಮೇಲೆ ದುಷ್ಪರಿಣಾಮ ಬೀರಿದೆ. ಪುಣ್ಯಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ತೀವ್ರ ಇಳಿಮುಖವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯ, ಹೊರರಾಜ್ಯಗಳಿಂದ ಅಪಾರ ಭಕ್ತರು ಬರುತ್ತಾರೆ. ಆದರೆ, ಕೆಲವು ದಿನಗಳಿಂದ ಈ ಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆಯು ಕಡಿಮೆಯಾಗಿದೆ. ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ಉಂಟಾದ ತೀವ್ರ ಪ್ರವಾಹದಿಂದ ಅಲ್ಲಿನ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ದಕ್ಷಿಣ ಕನ್ನಡವನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಮಾರ್ಗಗಳಾದ ಚಾರ್ಮಾಡಿ ಘಾಟ್ ಒಂದು ತಿಂಗಳು ಮತ್ತು ಶಿರಾಡಿ ಘಾಟ್ ಕೆಲವು ದಿನ ಬಂದ್ ಆಗಿತ್ತು. ಅಲ್ಲದೆ, ರೈಲ್ವೆ ಸಂಪರ್ಕ ಕೂಡ ಕಡಿತಗೊಂಡಿರುವುದು ಭಕ್ತರ ಸಂಖ್ಯೆ ಇಳಿಮುಖವಾಗಲು ಕಾರಣವಾಗಿದೆ.

ಪುಣ್ಯಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆ ತೀವ್ರ ಇಳಿಮುಖ

ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನಕ್ಕೆ ಈ ಹಿಂದಿನಿಂದಲೂ ನಿತ್ಯ ಸರಿ ಸುಮಾರು 30 ಸಾವಿರಕ್ಕೂ ಅಧಿಕ ಭಕ್ತರು ಬರುತ್ತಿದ್ದರು. ಆದರೆ, ಈ ಸ್ಥಿತಿ ಹಾಗಿಲ್ಲ. ಸರತಿ ಸಾಲಿನಲ್ಲಿ ಹೆಚ್ಚು ಸಮಯ ನಿಲ್ಲದೇ ದೇವರ ದರ್ಶನಕ್ಕೆ ಹೋಗುವಷ್ಟರ ಮಟ್ಟಕ್ಕೆ ಭಕ್ತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಕೂಡ ಹಿಂದೆ ಬರುತ್ತಿದ್ದಷ್ಟು ಭಕ್ತರು ಬರುತ್ತಿಲ್ಲ. ಸರ್ಪಸಂಸ್ಕಾರ ಸೇವೆಯನ್ನು ಮೊದಲೇ ನೋಂದಾಯಿಸಲಾಗುವುದರಿಂದ ಸುಮಾರು 2 ಸಾವಿರ ಭಕ್ತರು ಆ ಸೇವೆ ನೀಡಲು ಬರುತ್ತಿದ್ದಾರೆ. ಉತ್ತರ ಕರ್ನಾಟಕದ ಪ್ರವಾಹ ಸಂದರ್ಭದಲ್ಲಿ ತೀವ್ರ ಇಳಿಮುಖವಾಗಿದ್ದ ಭಕ್ತರ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಾರ್ಮಾಡಿ ಘಾಟ್​ ಸಂಚಾರಕ್ಕೆ ಮುಕ್ತವಾದ ಬಳಿಕ ಮತ್ತು ಅಸ್ತವ್ಯಸ್ತವಾದ ಜನರ ಜೀವನ ಸುಧಾರಿಸದ ಬಳಿಕ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪುಣ್ಯಕ್ಷೇತ್ರಗಳತ್ತ ಆಗಮಿಸುವ ಸಾಧ್ಯತೆಯಿದೆ.

Intro:ಮಂಗಳೂರು: ಉತ್ತರ ಕರ್ನಾಟಕದಲ್ಲಿ ಬಂದ ಭಾರಿ ಪ್ರವಾಹ ದಕ್ಷಿಣ ಕನ್ನಡದ ಪುಣ್ಯಕ್ಷೇತ್ರಗಳ ಮೇಲೆ ದುಷ್ಪರಿಣಾಮ ಬೀರಿದೆ. ಉತ್ತರ ಕರ್ನಾಟಕದಲ್ಲಿ ಕಾಣಿಸಿಕೊಂಡ ಪ್ರವಾಹದ ಬಳಿಕ ಪುಣ್ಯ ಕ್ಷೇತ್ರಗಳಾದ ಧರ್ಮಸ್ಥಳ , ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬರುವ ಭಕ್ತರ ಸಂಖ್ಯೆ ತೀವ್ರ ಇಳಿಮುಖವಾಗಿದೆ.


Body:ದಕ್ಷಿಣ ಕನ್ನಡ ಜಿಲ್ಲೆಯಯ ಇರುವ ಧರ್ಮಸ್ಥಳ ಮಂಜುನಾಥೇಶ್ವರ ಕ್ಷೇತ್ರ ಮತ್ತು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಹೊರರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಆದರೆ ಕೆಲವು ದಿನಗಳಿಂದ ಈ ಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆ ತೀವ್ರ‌ ಕ್ಷೀಣಿಸಿದೆ.
ಇದು ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದ ಬಳಿಕ ಆದ ಪರಿಣಾಮ. ಈ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉತ್ತರ ಕರ್ನಾಟಕ ಭಾಗದಿಂದ ಭಕ್ತರು ಬರುತ್ತಿದ್ದರು. ಆದರೆ ಉತ್ತರ ಕರ್ನಾಟಕದ ಪ್ರವಾಹದ ಬಳಿಕ ಅಲ್ಲಿನ ಜನರು ಸಂಕಷ್ಟಕ್ಕೆ ಒಳಗಾಗಿದ್ದು ದಕ್ಷಿಣ ಕನ್ನಡದ ಕಡೆ ಕ್ಷೇತ್ರ ದರ್ಶನಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಜೊತೆಗೆ ಉತ್ತರ ಕರ್ನಾಟಕದಿಂದ ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟ್ ಒಂದು ತಿಂಗಳು ಬಂದ್ ಆಗಿರುವುದು, ಶಿರಾಡಿ ಘಾಟ್ ಕೆಲವು ದಿನ ಬಂದ್ ಆಗಿದ್ದದ್ದು ಮತ್ತು ರೈಲ್ವೆ ಸಂಪರ್ಕ ಕಡಿತಗೊಂಡಿರುವುದು ಭಕ್ತರ ಸಂಖ್ಯೆ ಇಳಿಮುಖವಾಗಲು ಕಾರಣವಾಗಿದೆ.
ಧರ್ಮಸ್ಥಳದಲ್ಲಿ ಮಂಜುನಾಥೇಶ್ವರ ದರ್ಶನಕ್ಕೆ ಭಕ್ತರ ಸಂಖ್ಯೆ ತೀವ್ರ ಇಳಿಮುಖವಾಗಿದೆ. ಪ್ರತಿ ದಿನ ಸರಿ ಸುಮಾರು 30 ಸಾವಿರಕ್ ಅಧಿಕ ಭಕ್ತರು ಹಿಂದೆ ಬರುತ್ತಿದ್ದರೆ ಈಗ ಸಾವಿರ ಭಕ್ತರು ಬರುವುದು ಕಷ್ಟವಾಗಿದೆ. ಸರತಿ ಸಾಲು ನಿಲ್ಲದೆ ಭಕ್ತರು ದೇವಸ್ಥಾನ ಹೋಗುವಂತಷ್ಟು ಭಕ್ತರ ಸಂಖ್ಯೆ ಇಳಿಮುಖವಾಗಿದೆ.

ಇನ್ನೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೂಡ ಹಿಂದೆ ಬರುತ್ತಿದ್ದಷ್ಟು ಭಕ್ತರು ಬರುತ್ತಿಲ್ಲ. ಸರ್ಪಸಂಸ್ಕಾರ ಸೇವೆಯನ್ನು ಮೊದಲೇ ನೊಂದಾಯಿಸಲಾಗುವುದರಿಂದ ಸುಮಾರು 2 ಸಾವಿರ ಭಕ್ತರು ಆ ಸೇವೆ ನೀಡಲು ಬರುತ್ತಿದ್ದಾರೆ. ಉತ್ತರ ಕರ್ನಾಟಕ ಪ್ರವಾಹ ಸಂದರ್ಭದಲ್ಲಿ ತೀವ್ರ ಇಳಿಮುಖವಾಗಿದ್ದ ಭಕ್ತರ ಸಂಖ್ಯೆ ಸ್ವಲ್ಪ ಸ್ವಲ್ಪ ಹೆಚ್ಚುತ್ತಿದೆ.

ಚಾರ್ಮಾಡಿ ಘಾಟಿ ಸುಸ್ಥಿತಿಗೆ ಬರುವುದು ಮತ್ತು ಅಸ್ತವ್ಯಸ್ತವಾದ ಉತ್ತರ ಕರ್ನಾಟಕದ ಜನರ ಪರಿಸ್ಥಿತಿ ಸುಧಾರಿಸದ ಬಳಿಕ ಹಿಂದೆ ಬರುತ್ತಿದ್ದ ಭಕ್ತರ ಸಂಖ್ಯೆ ಈ ಪುಣ್ಯ ಕ್ಷೇತ್ರ ದಲ್ಲಿ ಕಾಣಿಸಬಹುದೆಂದು ಅಂದಾಜಿಸಲಾಗಿದೆ.

(ವಾಕ್ ಥ್ರೂ ಇದೆ)

reporter- vinodpudu


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.