ETV Bharat / state

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ: ಮೂವರು ಮರಗಳ್ಳರ ಬಂಧನ

author img

By

Published : Oct 21, 2019, 9:27 AM IST

ಮರಗಳ್ಳರ ತಂಡವೊಂದರ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು 3 ಲಕ್ಷ ರೂ. ಬೆಲೆ ಬಾಳುವ ಮರ ಹಾಗೂ ವಾಹನವನ್ನು ವಶಪಡಿಸಿಕೊಂಡಿರುವ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ನಡೆದಿದೆ.

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ: ಸಾಮಗ್ರಿ ಸಹಿತ ಮೂವರು ಮರಗಳ್ಳರ ಬಂಧನ

ಬೆಳ್ತಂಗಡಿ: ಮರಗಳ್ಳರ ತಂಡವೊಂದರ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು 3 ಲಕ್ಷ ರೂ. ಬೆಲೆ ಬಾಳುವ ಮರ ಹಾಗೂ ವಾಹನವನ್ನು ವಶಪಡಿಸಿಕೊಂಡಿರುವ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಕೋಟೆಕಾರು ನಿವಾಸಿ ಅಬ್ಬಾಸ್ (46), ಕಕ್ಕಿಂಜೆ ಗಾಂಧೀನಗರ ನಿವಾಸಿ ಮಹಮ್ಮದ್ ಸೂಫಿ (34) ಹಾಗೂ ಗುಂಡ್ಯ ನಿವಾಸಿ ಸುರೇಶ (36) ಎಂದು ಗುರುತಿಸಲಾಗಿದೆ. ಇವರೊಂದಿಗಿದ್ದ ಕೌಕ್ರಾಡಿ ಹೊಸಮಜಲು ನಿವಾಸಿ ಮಹಮ್ಮದ್ ಎಂಬಾತ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ಅರಣ್ಯದಿಂದ ಬೀಟೆ ಹಾಗೂ ಸಾಗುವಾನಿ ಮರಗಳನ್ನು ಕಡಿದು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅರಣ್ಯ ಇಲಾಖೆಯವರು ಧರ್ಮಸ್ಥಳ ಸಮೀಪ ಪುದುವೆಟ್ಟು ಕ್ರಾಸ್​​ನಲ್ಲಿ ಕಾದು ಕುಳಿತು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಟಾಟಾ ಸಿಯಾರಾ ಕಾರಿನಲ್ಲಿ ಮರ ಸಾಗಾಟ ಮಾಡುತ್ತಿದ್ದರು. ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಇವರಿಂದ 5 ಸಾಗುವಾನಿ ಮರದ ತುಂಡುಗಳು, ಐದು ಬೀಟೆ ಮರದ ತುಂಡು, ಎರಡು ಗರಗಸಗಳು, ಕತ್ತಿ ಹಾಗೂ ಹಗ್ಗವನ್ನು ಹಾಗೂ ಇವರು ಉಪಯೋಗಿಸಿದ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಮರಗಳ್ಳರ ತಂಡವೊಂದರ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು 3 ಲಕ್ಷ ರೂ. ಬೆಲೆ ಬಾಳುವ ಮರ ಹಾಗೂ ವಾಹನವನ್ನು ವಶಪಡಿಸಿಕೊಂಡಿರುವ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು ಕೋಟೆಕಾರು ನಿವಾಸಿ ಅಬ್ಬಾಸ್ (46), ಕಕ್ಕಿಂಜೆ ಗಾಂಧೀನಗರ ನಿವಾಸಿ ಮಹಮ್ಮದ್ ಸೂಫಿ (34) ಹಾಗೂ ಗುಂಡ್ಯ ನಿವಾಸಿ ಸುರೇಶ (36) ಎಂದು ಗುರುತಿಸಲಾಗಿದೆ. ಇವರೊಂದಿಗಿದ್ದ ಕೌಕ್ರಾಡಿ ಹೊಸಮಜಲು ನಿವಾಸಿ ಮಹಮ್ಮದ್ ಎಂಬಾತ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ಅರಣ್ಯದಿಂದ ಬೀಟೆ ಹಾಗೂ ಸಾಗುವಾನಿ ಮರಗಳನ್ನು ಕಡಿದು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅರಣ್ಯ ಇಲಾಖೆಯವರು ಧರ್ಮಸ್ಥಳ ಸಮೀಪ ಪುದುವೆಟ್ಟು ಕ್ರಾಸ್​​ನಲ್ಲಿ ಕಾದು ಕುಳಿತು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ಟಾಟಾ ಸಿಯಾರಾ ಕಾರಿನಲ್ಲಿ ಮರ ಸಾಗಾಟ ಮಾಡುತ್ತಿದ್ದರು. ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಇವರಿಂದ 5 ಸಾಗುವಾನಿ ಮರದ ತುಂಡುಗಳು, ಐದು ಬೀಟೆ ಮರದ ತುಂಡು, ಎರಡು ಗರಗಸಗಳು, ಕತ್ತಿ ಹಾಗೂ ಹಗ್ಗವನ್ನು ಹಾಗೂ ಇವರು ಉಪಯೋಗಿಸಿದ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Intro:ಬೆಳ್ತಂಗಡಿ

ಮರ ಕಳ್ಳರ ತಂಡವೊಂದರ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು 3 ಲಕ್ಷ ರೂ. ಬೆಲೆಬಾಳುವ ಮರ ಹಾಗೂ ವಾಹನವನ್ನು ವಶಪಡಿಸಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಬೆಳ್ತಂಗಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಗಳು ಕೋಟೆಕಾರು ನಿವಾಸಿ ಅಬ್ಬಾಸ್ (46), ಕಕ್ಕಿಂಜೆ ಗಾಂಧೀನಗರ ನಿವಾಸಿ ಮಹಮ್ಮದ್ ಸೂಫಿ (34) ಹಾಗೂ ಗುಂಡ್ಯ ನಿವಾಸಿ ಸುರೇಶ (36) ಎಂದು ಗುರುತಿಸಲಾಗಿದೆ. ಇವರೊಂದಿಗಿದ್ದ ಕೌಕ್ರಾಡಿ ಹೊಸಮಜಲು ನಿವಾಸಿ ಮಹಮ್ಮದ್ ಬಾವ ಎಂಬಾತ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿಗಳು ಅರಣ್ಯದಿಂದ ಬೀಟೆ ಹಾಗೂ ಸಾಗುವಾನಿ ಮರಗಳನ್ನು ಕಡಿದು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅರಣ್ಯ ಇಲಾಖೆಯವರು ಶನಿವಾರ ಬೆಳಗ್ಗಿನ ಜಾವ ಧರ್ಮಸ್ಥಳ ಸಮೀಪ ಪುದುವೆಟ್ಟು ಕ್ರಾಸ್ ನಲ್ಲಿ ಕಾದು ಕುಳಿತು ಆರೋಪಿಗಳನ್ನು ಬಂದಿಸಿದ್ದಾರೆ. ಆರೋಪಿಗಳು ಟಾಟಾ ಸಿಯಾರಾ ಕಾರಿನಲ್ಲಿ ಮರವನ್ನು ಸಾಗಾಟ ಮಾಡುತ್ತಿದ್ದರು. ವಾಹನವನ್ನು ವಶಕ್ಕೆ ಪಡೆಯಲಾಗಿದ್ದು ಇವರಿಂದ 5 ಸಾಗುವಾನಿ ಮರದ ತುಂಡುಗಳನ್ನು, ಐದು ಬೀಟೆ ಮರದ ತುಂಡುಗಳ ಎರಡು ಗರಗಸಗಳು, ಕತ್ತಿ ಹಾಗೂ ಹಗ್ಗವನ್ನು ಹಾಗೂ ಇವರು ಉಪಯೋಗಿಸಿದ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.Body:ಅರಣ್ಯ ಅಧಿಕಾರಿಗಳ ಕಾರ್ಯಾಚರಣೆConclusion:ಪ್ರಕಾಶ್ ಕಡಬ,ಸುಳ್ಯ(ಮಂಗಳೂರು)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.