ETV Bharat / state

ಬ್ರಹ್ಮಶ್ರೀ ನಾರಾಯಣ ಗುರುಗಳಿಗಾದ ಅಪಮಾನ ಸಹಿಸಲು ಆಗಲ್ಲ: ರಮಾನಾಥ ರೈ ಆಕ್ರೋಶ

author img

By

Published : Jan 17, 2022, 8:44 AM IST

ಬ್ರಹ್ಮಶ್ರೀ‌ ನಾರಾಯಣ ಗುರುಗಳು ಸನಾತನ ಹಿಂದೂ ಧರ್ಮದೊಳಗಿದ್ದುಕೊಂಡೇ ಅದರ ಲೋಪದೋಷಗಳನ್ನು ಸರಿಪಡಿಸಲು ಶ್ರಮಿಸಿದ ದಾರ್ಶನಿಕ. ಅವರಿಗೆ ಆಗಿರುವ ಅಪಮಾನದ ವಿರುದ್ಧ ಸೆಟೆದು ನಿಲ್ಲಬೇಕಾದ ಅವಶ್ಯಕತೆಯಿದೆ. ಎಲ್ಲರೂ ಇದರ ವಿರುದ್ಧ ಧ್ವನಿಯೆತ್ತಬೇಕಾಗಿದೆ ಎಂದು ರಮಾನಾಥ್‌ ರೈ ಕರೆ ನೀಡಿದ್ದಾರೆ.

Former Minister Ramanath Rai
ರಮಾನಾಥ್‌

ಮಂಗಳೂರು: ಕೇರಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವ ಪರೇಡ್​​​ಗೆ ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಸಚಿವ ರಮಾನಾಥ ರೈ, ಇದು ಸಹಿಸುವುದು ಅಸಾಧ್ಯ. ಇದರ ವಿರುದ್ಧ ಸೆಟೆದು ನಿಲ್ಲಬೇಕಾದ ಅವಶ್ಯಕತೆಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳಿಗಾದ ಅಪಮಾನ ಸಹಿಸಲು ಅಸಾಧ್ಯ: ಕೇಂದ್ರದ ವಿರುದ್ಧ ರಮಾನಾಥ ರೈ ಆಕ್ರೋಶ

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು,‌ ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದುಳಿದ ವರ್ಗಗಳ ಜನರ ಧಾರ್ಮಿಕ ಹಸಿವು ನೀಗಿಸಿ, ಒಂದು ಕಾಲದಲ್ಲಿ ಅಸ್ಪೃಶ್ಯತೆಗೆ ಒಳಗಾಗಿರುವ ಜನಸಮುದಾಯಕ್ಕೆ ಸ್ವಾಭಿಮಾನದ ಬದುಕು ಕೊಟ್ಟಿರುವ ಓರ್ವ ದಾರ್ಶನಿಕ. ಈ ಮೂಲಕ ಕೇಂದ್ರ ಸರ್ಕಾರ ನಾರಾಯಣ ಗುರುಗಳ ಸಿದ್ಧಾಂತಕ್ಕೆ ಅಪಚಾರ ಎಸಗಿದೆ. ಅಲ್ಲದೇ ಹಿಂದುಳಿದ ವರ್ಗಗಳ ಸಮಾಜಕ್ಕೂ ನೋವುಂಟು ಮಾಡಿದೆ ಎಂದರು.

ಇದಕ್ಕೆ ಬೇರೆ ಬೇರೆ ರೀತಿಯ ಸಬೂಬು ಹೇಳಬಹುದು. ಆದರೆ, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನೇರವಾಗಿ ಅಪಮಾನ ಮಾಡಿರುವ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಿದೆ. ಕಾಂಗ್ರೆಸ್ ಈ ಕೃತ್ಯವನ್ನು ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ಇದಕ್ಕೆ ನಿರ್ದಿಷ್ಟವಾದ ಕಾರ್ಯಕ್ರಮ ಹಮ್ಮಿಕೊಳ್ಳಲು‌ ಸಿದ್ಧತೆ ನಡೆಸಲಿದ್ದೇವೆ. ಕಾಂಗ್ರೆಸ್ ಪಕ್ಷ ಇದಕ್ಕೊಂದು ಹೋರಾಟದ ರೂಪುರೇಷೆಗಳನ್ನು ಮಾಡುವಂತಹ ಕೆಲಸ ಮಾಡುತ್ತದೆ ಎಂದು ರಮಾನಾಥ ರೈ ಹೇಳಿದರು.

ಇದನ್ನೂ ಓದಿ: ಗ್ಯಾಸ್ ಗೀಸರ್​​ ತಂದ ಆಪತ್ತು.. ಅನಿಲ ಸೋರಿಕೆಯಿಂದ ಬೆಂಗಳೂರಲ್ಲಿ ತಾಯಿ-ಮಗಳು ಉಸಿರುಗಟ್ಟಿ ಸಾವು

ಮಂಗಳೂರು: ಕೇರಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವ ಪರೇಡ್​​​ಗೆ ಕೇಂದ್ರದ ಗಣರಾಜ್ಯೋತ್ಸವ ಸಮಿತಿ ತಿರಸ್ಕರಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಸಚಿವ ರಮಾನಾಥ ರೈ, ಇದು ಸಹಿಸುವುದು ಅಸಾಧ್ಯ. ಇದರ ವಿರುದ್ಧ ಸೆಟೆದು ನಿಲ್ಲಬೇಕಾದ ಅವಶ್ಯಕತೆಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳಿಗಾದ ಅಪಮಾನ ಸಹಿಸಲು ಅಸಾಧ್ಯ: ಕೇಂದ್ರದ ವಿರುದ್ಧ ರಮಾನಾಥ ರೈ ಆಕ್ರೋಶ

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು,‌ ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದುಳಿದ ವರ್ಗಗಳ ಜನರ ಧಾರ್ಮಿಕ ಹಸಿವು ನೀಗಿಸಿ, ಒಂದು ಕಾಲದಲ್ಲಿ ಅಸ್ಪೃಶ್ಯತೆಗೆ ಒಳಗಾಗಿರುವ ಜನಸಮುದಾಯಕ್ಕೆ ಸ್ವಾಭಿಮಾನದ ಬದುಕು ಕೊಟ್ಟಿರುವ ಓರ್ವ ದಾರ್ಶನಿಕ. ಈ ಮೂಲಕ ಕೇಂದ್ರ ಸರ್ಕಾರ ನಾರಾಯಣ ಗುರುಗಳ ಸಿದ್ಧಾಂತಕ್ಕೆ ಅಪಚಾರ ಎಸಗಿದೆ. ಅಲ್ಲದೇ ಹಿಂದುಳಿದ ವರ್ಗಗಳ ಸಮಾಜಕ್ಕೂ ನೋವುಂಟು ಮಾಡಿದೆ ಎಂದರು.

ಇದಕ್ಕೆ ಬೇರೆ ಬೇರೆ ರೀತಿಯ ಸಬೂಬು ಹೇಳಬಹುದು. ಆದರೆ, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ನೇರವಾಗಿ ಅಪಮಾನ ಮಾಡಿರುವ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡಿದೆ. ಕಾಂಗ್ರೆಸ್ ಈ ಕೃತ್ಯವನ್ನು ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ಇದಕ್ಕೆ ನಿರ್ದಿಷ್ಟವಾದ ಕಾರ್ಯಕ್ರಮ ಹಮ್ಮಿಕೊಳ್ಳಲು‌ ಸಿದ್ಧತೆ ನಡೆಸಲಿದ್ದೇವೆ. ಕಾಂಗ್ರೆಸ್ ಪಕ್ಷ ಇದಕ್ಕೊಂದು ಹೋರಾಟದ ರೂಪುರೇಷೆಗಳನ್ನು ಮಾಡುವಂತಹ ಕೆಲಸ ಮಾಡುತ್ತದೆ ಎಂದು ರಮಾನಾಥ ರೈ ಹೇಳಿದರು.

ಇದನ್ನೂ ಓದಿ: ಗ್ಯಾಸ್ ಗೀಸರ್​​ ತಂದ ಆಪತ್ತು.. ಅನಿಲ ಸೋರಿಕೆಯಿಂದ ಬೆಂಗಳೂರಲ್ಲಿ ತಾಯಿ-ಮಗಳು ಉಸಿರುಗಟ್ಟಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.