ETV Bharat / state

ಗಾಂಜಾ ಮಾರಾಟ ಮಾಡುತ್ತಿದ್ದಆರೋಪಿ ಕಾವೂರು ಪೊಲೀಸರಿಂದ ಬಂಧನ... 1.1 ಕೆಜಿ ಗಾಂಜಾ ವಶ.

ಮಂಗಳೂರು ತಾಲೂಕಿನ ಪಡುಶೆಡ್ಡೆ ಗ್ರಾಮದ ಮಂಜಲಪಾದೆ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

author img

By

Published : Mar 2, 2020, 11:13 PM IST

Ganja trader arrest in mangalore by kavoor police
ಗಾಂಜಾ ಮಾರಾಟ ಮಾಡುತ್ತಿದ್ದಆರೋಪಿ ಕಾವೂರು ಪೊಲೀಸರಿಂದ ಬಂಧನ

ಮಂಗಳೂರು: ತಾಲೂಕಿನ ಪಡುಶೆಡ್ಡೆ ಗ್ರಾಮದ ಮಂಜಲಪಾದೆ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಮೂಡುಶೆಡ್ಡೆಯ ಪಿಲಿಕುಳ ನಿವಾಸಿ ಮುಹಮ್ಮದ್ ಮುಸ್ತಫಾ (22) ಬಂಧಿತ ವ್ಯಕ್ತಿ. ಬಂಧಿತನಿಂದ 26 ಸಾವಿರ ರೂ. ಮೌಲ್ಯದ 1.1 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೊಲೀಸ್ ಕಾರ್ಯಾಚರಣೆ ಸಂದರ್ಭ ಮತ್ತೋರ್ವ ಆರೋಪಿ ವಾಮಂಜೂರಿನ ಮಹಮ್ಮದ್ ರಾಯಿಫ್ ಎಂಬಾತ ಪರಾರಿಯಾಗಿದ್ದಾನೆ. ಬಂಧಿತ ಆರೋಪಿ ಮುಹಮ್ಮದ್ ಮುಸ್ತಫಾ ವಿರುದ್ಧ ಉಳ್ಳಾಲ ಮತ್ತು ಬರ್ಕೆ ಪೊಲೀಸ್ ಠಾಣೆಗಳಲ್ಲಿ ಗಾಂಜಾ ಮಾರಾಟ ಪ್ರಕರಣ, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಮತ್ತು ಕೊಲೆ ಯತ್ನ ಪ್ರಕರಣಗಳು ದಾಖಲಾಗಿವೆ. ಈ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ತಾಲೂಕಿನ ಪಡುಶೆಡ್ಡೆ ಗ್ರಾಮದ ಮಂಜಲಪಾದೆ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಮೂಡುಶೆಡ್ಡೆಯ ಪಿಲಿಕುಳ ನಿವಾಸಿ ಮುಹಮ್ಮದ್ ಮುಸ್ತಫಾ (22) ಬಂಧಿತ ವ್ಯಕ್ತಿ. ಬಂಧಿತನಿಂದ 26 ಸಾವಿರ ರೂ. ಮೌಲ್ಯದ 1.1 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೊಲೀಸ್ ಕಾರ್ಯಾಚರಣೆ ಸಂದರ್ಭ ಮತ್ತೋರ್ವ ಆರೋಪಿ ವಾಮಂಜೂರಿನ ಮಹಮ್ಮದ್ ರಾಯಿಫ್ ಎಂಬಾತ ಪರಾರಿಯಾಗಿದ್ದಾನೆ. ಬಂಧಿತ ಆರೋಪಿ ಮುಹಮ್ಮದ್ ಮುಸ್ತಫಾ ವಿರುದ್ಧ ಉಳ್ಳಾಲ ಮತ್ತು ಬರ್ಕೆ ಪೊಲೀಸ್ ಠಾಣೆಗಳಲ್ಲಿ ಗಾಂಜಾ ಮಾರಾಟ ಪ್ರಕರಣ, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಮತ್ತು ಕೊಲೆ ಯತ್ನ ಪ್ರಕರಣಗಳು ದಾಖಲಾಗಿವೆ. ಈ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.