ETV Bharat / state

ಮಂಗಳೂರು: ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಅದ್ಧೂರಿ ಚಾಲನೆ

author img

By

Published : Dec 22, 2022, 10:51 AM IST

ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಅಂತಾರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಆಯೋಜಿಸಲಾಗಿದ್ದು, ನಿನ್ನೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

ಸಾಂಸ್ಕೃತಿಕ ಜಾಂಬೂರಿ
international cultural jamboree
ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರಾಜ್ಯಪಾಲರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಲ್ಲಿ ದೈಹಿಕ, ಬೌದ್ಧಿಕ, ಸಾಮಾಜಿಕ, ಮಾನಸಿಕ ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ . ಈ ಜಾಗತಿಕ ಸಮ್ಮೇಳನದಲ್ಲಿ ದೇಶದ ಸಾವಿರಾರು ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್‌ಗಳು, ಘಟಕದ ನಾಯಕರು, ವಿದೇಶಗಳ ವಿದ್ಯಾರ್ಥಿಗಳು ಹಾಗೂ ನಾಗರಿಕರು ಭಾಗವಹಿಸಿದ್ದಾರೆ.

ಡಿಸೆಂಬರ್ 21 ರಿಂದ 7 ದಿನಗಳವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶ ಮತ್ತು ರಾಜ್ಯದ ಶ್ರೀಮಂತ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅನೇಕ ಕಲಾವಿದರು ಪ್ರದರ್ಶಿಸುತ್ತಿರುವುದು ಶ್ಲಾಘನೀಯ ಎಂದರು.

ಜವಾಬ್ದಾರಿಯುತ ಪ್ರಜೆಗಳಾಗಿ ದೇಶದ ಸೇವೆ ಮತ್ತು ಸಾರ್ವಜನಿಕ ಹಿತಾಸಕ್ತಿಯಲ್ಲಿ ಕೊಡುಗೆ ನೀಡಬಹುದು. ಕರ್ನಾಟಕ ರಾಜ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ವೇಗವಾಗಿ ಹೆಚ್ಚುತ್ತಿದೆ. ಕಳೆದ 100 ವರ್ಷಗಳಲ್ಲಿ 6.50 ಲಕ್ಷಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಸಿದ್ಧಪಡಿಸಲಾಗಿದೆ. ಸ್ವಯಂಸೇವಕರು ಸರ್ಕಾರದ ಪ್ರಮುಖ ಯೋಜನೆಗಳು ಮತ್ತು ಪ್ರಮುಖ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮತ್ತು ಸಮಾಜದ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖ ಕೊಡುಗೆ ನೀಡುತ್ತಿದ್ದಾರೆ ಎಂದು ಹೇಳಿದರು.

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಕೋವಿಡ್​ ವಾರಿಯರ್ ಆಗಿ ಸ್ಕೌಟ್ಸ್ ಮತ್ತು ಗೈಡ್ಸ್ ಅವರ ಸೇವೆ ಶ್ಲಾಘನೀಯ. ಪ್ರಧಾನ ಮಂತ್ರಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು "ಸಬ್ಕಾ ಸಾಥ್, ಸಬ್ಕಾ ವಿಕಾಸ್ ಔರ್ ಸಬ್ಕಾ ವಿಶ್ವಾಸ್" ಎಂಬ ಮಂತ್ರದ ಜೊತೆಗೆ "ಏಕ್ ಭಾರತ್, ಶ್ರೇಷ್ಠ ಭಾರತ್, ಆತ್ಮನಿರ್ಭರ್ ಭಾರತ್" ಮಿಷನ್​ನಲ್ಲಿ ಕೆಲಸ ಮಾಡುತ್ತಿದೆ ಎಂದರು.

ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಅಭಿವೃದ್ಧಿಪಡಿಸಲು 'ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ' ಅಭಿಯಾನ ಆರಂಭಿಸಲಾಗಿದೆ. ಸ್ವಚ್ಛ ಮತ್ತು ಹಸಿರು ಭಾರತ ನಿರ್ಮಿಸಲು, 'ಸ್ವಚ್ಛ ಭಾರತ್ ಮಿಷನ್' ಅನ್ನು ಆರಂಭಿಸಲಾಗಿದೆ. ಮುಂದಿನ 25 ವರ್ಷಗಳ ಪ್ರಯಾಣವು ನವ ಭಾರತ ನಿರ್ಮಾಣಕ್ಕೆ ಸ್ವರ್ಣ ಯುಗವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ , ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಉಮಾನಾಥ್ ಕೋಟ್ಯಾನ್, ವಿಶ್ವ ಸಂಸ್ಥೆಯ ಸ್ಕೌಟ್ಸ್‌ ಆಂದೋಲನದ ಪ್ರಧಾನ ಕಾರ್ಯದರ್ಶಿ ಅಹ್ಮದ್ ಅಲ್ಹೆಂದವಿ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್​ನ ಕರ್ನಾಟಕದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಆಳ್ವಾಸ್​ನ ಜಾಂಬೂರಿ ಉತ್ಸವ ; ಪ್ರದರ್ಶನಕ್ಕೆ ಸಿದ್ಧವಾದ 50 ಅಡಿ ಎತ್ತರದ ಗಾಳಿಪಟ

ಉದ್ಘಟನಾ ಸಮಾರಂಭದ ನಂತರ ಶ್ರೀಲಂಕಾ ದೇಶದ ಸಾಂಪ್ರದಾಯಿಕ ವೇಷ ಭೂಷಣಗಳೊಂದಿಗೆ ದೇಶ, ರಾಜ್ಯ ಹಾಗೂ ಸ್ಥಳೀಯ 100 ಕ್ಕೂ ಅಧಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಆಗಮಿಸಿ ಪ್ರದರ್ಶನ ನೀಡಿದವು. ಮಿಸ್ಟರ್ ಬೀನ್ , ಕರಡಿ, ಹುಲಿ ಆಕೃತಿಗಳ ಕೀಲು ಗೊಂಬೆಗಳು ಗಮನಸೆಳೆದವು.

7 ದಿನಗಳ ಕಾಲ ನಡೆಯುವ ಈ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ದೇಶ, ವಿದೇಶಗಳ 50 ಸಾವಿರ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರೋವರ್ಸ್, ರೇಂಜರ್ಸ್ ಹಾಗೂ ದಳಪತಿಗಳು ಭಾಗವಹಿಸಿದ್ದಾರೆ. 10 ಸಾವಿರ ತರಬೇತುದಾರರು, 3 ಸಾವಿರ ಕಲಾವಿದರು, 3 ಸಾವಿರ ಸ್ವಯಂ ಸೇವಕರು ಕೂಡ ಜಾಂಬೂರಿಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ: ಮೂಡಬಿದಿರೆಯಲ್ಲಿ ನಾಳೆಯಿಂದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ

ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರಾಜ್ಯಪಾಲರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ಸ್‌ ಮತ್ತು ಗೈಡ್ಸ್‌ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಲ್ಲಿ ದೈಹಿಕ, ಬೌದ್ಧಿಕ, ಸಾಮಾಜಿಕ, ಮಾನಸಿಕ ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ . ಈ ಜಾಗತಿಕ ಸಮ್ಮೇಳನದಲ್ಲಿ ದೇಶದ ಸಾವಿರಾರು ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್‌ಗಳು, ಘಟಕದ ನಾಯಕರು, ವಿದೇಶಗಳ ವಿದ್ಯಾರ್ಥಿಗಳು ಹಾಗೂ ನಾಗರಿಕರು ಭಾಗವಹಿಸಿದ್ದಾರೆ.

ಡಿಸೆಂಬರ್ 21 ರಿಂದ 7 ದಿನಗಳವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶ ಮತ್ತು ರಾಜ್ಯದ ಶ್ರೀಮಂತ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅನೇಕ ಕಲಾವಿದರು ಪ್ರದರ್ಶಿಸುತ್ತಿರುವುದು ಶ್ಲಾಘನೀಯ ಎಂದರು.

ಜವಾಬ್ದಾರಿಯುತ ಪ್ರಜೆಗಳಾಗಿ ದೇಶದ ಸೇವೆ ಮತ್ತು ಸಾರ್ವಜನಿಕ ಹಿತಾಸಕ್ತಿಯಲ್ಲಿ ಕೊಡುಗೆ ನೀಡಬಹುದು. ಕರ್ನಾಟಕ ರಾಜ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ವೇಗವಾಗಿ ಹೆಚ್ಚುತ್ತಿದೆ. ಕಳೆದ 100 ವರ್ಷಗಳಲ್ಲಿ 6.50 ಲಕ್ಷಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಸಿದ್ಧಪಡಿಸಲಾಗಿದೆ. ಸ್ವಯಂಸೇವಕರು ಸರ್ಕಾರದ ಪ್ರಮುಖ ಯೋಜನೆಗಳು ಮತ್ತು ಪ್ರಮುಖ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮತ್ತು ಸಮಾಜದ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖ ಕೊಡುಗೆ ನೀಡುತ್ತಿದ್ದಾರೆ ಎಂದು ಹೇಳಿದರು.

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಕೋವಿಡ್​ ವಾರಿಯರ್ ಆಗಿ ಸ್ಕೌಟ್ಸ್ ಮತ್ತು ಗೈಡ್ಸ್ ಅವರ ಸೇವೆ ಶ್ಲಾಘನೀಯ. ಪ್ರಧಾನ ಮಂತ್ರಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು "ಸಬ್ಕಾ ಸಾಥ್, ಸಬ್ಕಾ ವಿಕಾಸ್ ಔರ್ ಸಬ್ಕಾ ವಿಶ್ವಾಸ್" ಎಂಬ ಮಂತ್ರದ ಜೊತೆಗೆ "ಏಕ್ ಭಾರತ್, ಶ್ರೇಷ್ಠ ಭಾರತ್, ಆತ್ಮನಿರ್ಭರ್ ಭಾರತ್" ಮಿಷನ್​ನಲ್ಲಿ ಕೆಲಸ ಮಾಡುತ್ತಿದೆ ಎಂದರು.

ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಅಭಿವೃದ್ಧಿಪಡಿಸಲು 'ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ' ಅಭಿಯಾನ ಆರಂಭಿಸಲಾಗಿದೆ. ಸ್ವಚ್ಛ ಮತ್ತು ಹಸಿರು ಭಾರತ ನಿರ್ಮಿಸಲು, 'ಸ್ವಚ್ಛ ಭಾರತ್ ಮಿಷನ್' ಅನ್ನು ಆರಂಭಿಸಲಾಗಿದೆ. ಮುಂದಿನ 25 ವರ್ಷಗಳ ಪ್ರಯಾಣವು ನವ ಭಾರತ ನಿರ್ಮಾಣಕ್ಕೆ ಸ್ವರ್ಣ ಯುಗವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ , ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಉಮಾನಾಥ್ ಕೋಟ್ಯಾನ್, ವಿಶ್ವ ಸಂಸ್ಥೆಯ ಸ್ಕೌಟ್ಸ್‌ ಆಂದೋಲನದ ಪ್ರಧಾನ ಕಾರ್ಯದರ್ಶಿ ಅಹ್ಮದ್ ಅಲ್ಹೆಂದವಿ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್​ನ ಕರ್ನಾಟಕದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಆಳ್ವಾಸ್​ನ ಜಾಂಬೂರಿ ಉತ್ಸವ ; ಪ್ರದರ್ಶನಕ್ಕೆ ಸಿದ್ಧವಾದ 50 ಅಡಿ ಎತ್ತರದ ಗಾಳಿಪಟ

ಉದ್ಘಟನಾ ಸಮಾರಂಭದ ನಂತರ ಶ್ರೀಲಂಕಾ ದೇಶದ ಸಾಂಪ್ರದಾಯಿಕ ವೇಷ ಭೂಷಣಗಳೊಂದಿಗೆ ದೇಶ, ರಾಜ್ಯ ಹಾಗೂ ಸ್ಥಳೀಯ 100 ಕ್ಕೂ ಅಧಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಆಗಮಿಸಿ ಪ್ರದರ್ಶನ ನೀಡಿದವು. ಮಿಸ್ಟರ್ ಬೀನ್ , ಕರಡಿ, ಹುಲಿ ಆಕೃತಿಗಳ ಕೀಲು ಗೊಂಬೆಗಳು ಗಮನಸೆಳೆದವು.

7 ದಿನಗಳ ಕಾಲ ನಡೆಯುವ ಈ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ದೇಶ, ವಿದೇಶಗಳ 50 ಸಾವಿರ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರೋವರ್ಸ್, ರೇಂಜರ್ಸ್ ಹಾಗೂ ದಳಪತಿಗಳು ಭಾಗವಹಿಸಿದ್ದಾರೆ. 10 ಸಾವಿರ ತರಬೇತುದಾರರು, 3 ಸಾವಿರ ಕಲಾವಿದರು, 3 ಸಾವಿರ ಸ್ವಯಂ ಸೇವಕರು ಕೂಡ ಜಾಂಬೂರಿಯಲ್ಲಿ ಭಾಗವಹಿಸಿದ್ದಾರೆ.

ಇದನ್ನೂ ಓದಿ: ಮೂಡಬಿದಿರೆಯಲ್ಲಿ ನಾಳೆಯಿಂದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.