ETV Bharat / state

ಬಡ ಕುಟುಂಬದ ಮನೆ ಛಾವಣಿ ರಿಪೇರಿ: ಗ್ರಾ.ಪಂ ಅಧ್ಯಕ್ಷನ ಮಾನವೀಯ ಕೆಲಸ

author img

By

Published : May 11, 2020, 11:31 AM IST

ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷರಾದ ಅಚ್ಯುತ ಗುತ್ತಿಗಾರು ನೇತೃತ್ವದ ಕೋವಿಡ್ ಕಾರ್ಯಪಡೆ ಬಡ ವ್ಯಕ್ತಿಯ ಮನೆ ಛಾವಣಿಯ ರಿಪೇರಿ ಮಾಡಿ, ಮನೆಗೆ ವಿದ್ಯುತ್,​ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದೆ.

dhakshina kannada
ಮನೆ ಛಾವಣಿ ರಿಪೇರಿ ಕೆಲಸ

ಸುಳ್ಯ (ದಕ್ಷಿಣ ಕನ್ನಡ): ಕೊರೊನಾ ಸಮಯದಲ್ಲಿ ಗ್ರಾಮ ಪಂಚಾಯತ್ ಕಚೇರಿಯಿಂದ ಹೊರಬಂದು ಬಡ ವ್ಯಕ್ತಿಯ ಮನೆ ಛಾವಣಿ ಏರಿ, ಮನೆ ರಿಪೇರಿ ಮಾಡಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ನೇತೃತ್ವದ ಕೋವಿಡ್ ಕಾರ್ಯಪಡೆ ಮಾನವೀಯತೆ ತೋರಿದೆ.

ಕೋವಿಡ್ ಕಾರ್ಯಪಡೆಯಿಂದ ಬಡ ಕುಟುಂಬದ ಮನೆ ಛಾವಣಿ ರಿಪೇರಿ

ಈ ಕುಟುಂಬಕ್ಕೆ ವಾಸಯೋಗ್ಯ ಮನೆ ಇಲ್ಲ. ವಿದ್ಯುತ್, ಕುಡಿಯುವ ನೀರಿನ ಸಮಸ್ಯೆಯೂ ಇತ್ತು. ಅಧ್ಯಕ್ಷರ ನೇತೃತ್ವದ ತಂಡ ತಡ ಮಾಡದೇ ಈ ಕುಟುಂಬದ ಮನೆ ದುರಸ್ತಿಗೆ ಮುಂದಾಗಿದೆ. ಸ್ವತಃ ಗ್ರಾಮ ಪಂಚಾಯತಿ ಅಧ್ಯಕ್ಷರೇ ಮನೆಯ ಛಾವಣಿ ಏರಿ ಮನೆ ಕೆಲಸ ಆರಂಭಿಸಿದರು. ಇವರ ಜೊತೆಗೆ ಕಾರ್ಯಪಡೆ ಸದಸ್ಯರು, ಸ್ಥಳೀಯರು ಸೇರಿದಂತೆ ಒಟ್ಟು 25 ಜನರ ತಂಡವು ಬೆಂಬಲಕ್ಕೆ ಬಂದಿದ್ದು, ಮೂರು ದಿನದ ಶ್ರಮದ ಫಲವಾಗಿ ಮನೆ ಕೆಲಸ ಪೂರ್ಣಗೊಳಿಸಲಾಯಿತು.

ಇನ್ನು ಮೆಸ್ಕಾಂ ಸಹಕಾರದೊಂದಿಗೆ ವಿದ್ಯುತ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇಷ್ಟು, ಮಾತ್ರವಲ್ಲದೇ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವಂತಹ ಸವಲತ್ತುಗಳನ್ನು ಒದಗಿಸುವ ಭರವಸೆಯನ್ನು ನೀಡಿದರು.

ಸುಳ್ಯ (ದಕ್ಷಿಣ ಕನ್ನಡ): ಕೊರೊನಾ ಸಮಯದಲ್ಲಿ ಗ್ರಾಮ ಪಂಚಾಯತ್ ಕಚೇರಿಯಿಂದ ಹೊರಬಂದು ಬಡ ವ್ಯಕ್ತಿಯ ಮನೆ ಛಾವಣಿ ಏರಿ, ಮನೆ ರಿಪೇರಿ ಮಾಡಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷ ಅಚ್ಯುತ ಗುತ್ತಿಗಾರು ನೇತೃತ್ವದ ಕೋವಿಡ್ ಕಾರ್ಯಪಡೆ ಮಾನವೀಯತೆ ತೋರಿದೆ.

ಕೋವಿಡ್ ಕಾರ್ಯಪಡೆಯಿಂದ ಬಡ ಕುಟುಂಬದ ಮನೆ ಛಾವಣಿ ರಿಪೇರಿ

ಈ ಕುಟುಂಬಕ್ಕೆ ವಾಸಯೋಗ್ಯ ಮನೆ ಇಲ್ಲ. ವಿದ್ಯುತ್, ಕುಡಿಯುವ ನೀರಿನ ಸಮಸ್ಯೆಯೂ ಇತ್ತು. ಅಧ್ಯಕ್ಷರ ನೇತೃತ್ವದ ತಂಡ ತಡ ಮಾಡದೇ ಈ ಕುಟುಂಬದ ಮನೆ ದುರಸ್ತಿಗೆ ಮುಂದಾಗಿದೆ. ಸ್ವತಃ ಗ್ರಾಮ ಪಂಚಾಯತಿ ಅಧ್ಯಕ್ಷರೇ ಮನೆಯ ಛಾವಣಿ ಏರಿ ಮನೆ ಕೆಲಸ ಆರಂಭಿಸಿದರು. ಇವರ ಜೊತೆಗೆ ಕಾರ್ಯಪಡೆ ಸದಸ್ಯರು, ಸ್ಥಳೀಯರು ಸೇರಿದಂತೆ ಒಟ್ಟು 25 ಜನರ ತಂಡವು ಬೆಂಬಲಕ್ಕೆ ಬಂದಿದ್ದು, ಮೂರು ದಿನದ ಶ್ರಮದ ಫಲವಾಗಿ ಮನೆ ಕೆಲಸ ಪೂರ್ಣಗೊಳಿಸಲಾಯಿತು.

ಇನ್ನು ಮೆಸ್ಕಾಂ ಸಹಕಾರದೊಂದಿಗೆ ವಿದ್ಯುತ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇಷ್ಟು, ಮಾತ್ರವಲ್ಲದೇ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವಂತಹ ಸವಲತ್ತುಗಳನ್ನು ಒದಗಿಸುವ ಭರವಸೆಯನ್ನು ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.