ETV Bharat / state

ಸುಳ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಮರ ಬಿದ್ದು ಕಾರು ಸ್ಕೂಟಿ ಜಖಂ - ದಕ್ಷಿಣ ಕನ್ನಡ ಮಳೆ ನ್ಯೂಸ್​

ಭಾರಿ ಗಾಳಿ ಮಳೆಗೆ ಸುಬ್ರಹ್ಮಣ್ಯ- ಪಂಜ ನಡುವಿನ ಬಳ್ಪ ಸಮೀಪದ ಎಣ್ಣೆಮಜಲು ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುಳ್ಯ: ಗಾಳಿ ಸಹಿತ ಭಾರಿ ಮಳೆ: ಮರ ಬಿದ್ದು ಕಾರು ಸ್ಕೂಟಿ ಜಖಂ
author img

By

Published : Nov 6, 2019, 11:36 PM IST

ಸುಳ್ಯ: ಬುಧವಾರ ಸಂಜೆ ಸುರಿದ ಗುಡುಗು ಸಹಿತ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ- ಪಂಜ ನಡುವಿನ ಬಳ್ಪ ಸಮೀಪದ ಎಣ್ಣೆಮಜಲು ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Heavy rain in sulya , ಸುಳ್ಯದಲ್ಲಿ ಭಾರಿ ಮಳೆ
ಜಖಂ ಆದ ಕಾರು

ಸುಳ್ಯ, ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಸಾಯಂಕಾಲ ಸುಮಾರು 6 ಗಂಟೆಯಿಂದ ಸಿಡಿಲು-ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಈ ವೇಳೆ ಬಳ್ಪದ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ದನ ಎಂಬವರ ಕಾರಿನ ಮೇಲೆ ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಮರವೊಂದು ಉರುಳಿ ಬಿದ್ದಿದೆ. ಇನ್ನೂ ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಗಣೇಶ್ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಸ್ಕೂಟರ್ ಸವಾರನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

Heavy rain in sulya , ಸುಳ್ಯದಲ್ಲಿ ಭಾರಿ ಮಳೆ
ಜಖಂ ಆದ ಸ್ಕೂಟರ್

ಸುಬ್ರಹ್ಮಣ್ಯ ಪೋಲೀಸರು, ಗೃಹರಕ್ಷಕ, ಅರಣ್ಯ ಇಲಾಖಾ ಸಿಬಂದಿಗಳು, ಮೆಸ್ಕಾಂ ಇಲಾಖಾ ಸಿಬ್ಬಂದಿ ಆಗಮಿಸಿ ಮರಗಳನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ದಾರಿ ಮಾಡುತ್ತಿದ್ದಾರೆ. ಮಳೆಯಿಂದಾಗಿ ಹೆಚ್ಚಿನ ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ಸುಳ್ಯ: ಬುಧವಾರ ಸಂಜೆ ಸುರಿದ ಗುಡುಗು ಸಹಿತ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ- ಪಂಜ ನಡುವಿನ ಬಳ್ಪ ಸಮೀಪದ ಎಣ್ಣೆಮಜಲು ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Heavy rain in sulya , ಸುಳ್ಯದಲ್ಲಿ ಭಾರಿ ಮಳೆ
ಜಖಂ ಆದ ಕಾರು

ಸುಳ್ಯ, ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಸಾಯಂಕಾಲ ಸುಮಾರು 6 ಗಂಟೆಯಿಂದ ಸಿಡಿಲು-ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಈ ವೇಳೆ ಬಳ್ಪದ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ದನ ಎಂಬವರ ಕಾರಿನ ಮೇಲೆ ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಮರವೊಂದು ಉರುಳಿ ಬಿದ್ದಿದೆ. ಇನ್ನೂ ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಗಣೇಶ್ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಸ್ಕೂಟರ್ ಸವಾರನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

Heavy rain in sulya , ಸುಳ್ಯದಲ್ಲಿ ಭಾರಿ ಮಳೆ
ಜಖಂ ಆದ ಸ್ಕೂಟರ್

ಸುಬ್ರಹ್ಮಣ್ಯ ಪೋಲೀಸರು, ಗೃಹರಕ್ಷಕ, ಅರಣ್ಯ ಇಲಾಖಾ ಸಿಬಂದಿಗಳು, ಮೆಸ್ಕಾಂ ಇಲಾಖಾ ಸಿಬ್ಬಂದಿ ಆಗಮಿಸಿ ಮರಗಳನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ದಾರಿ ಮಾಡುತ್ತಿದ್ದಾರೆ. ಮಳೆಯಿಂದಾಗಿ ಹೆಚ್ಚಿನ ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

Intro:ಸುಳ್ಯ

ಬುಧವಾರ ಸಂಜೆ ಸುರಿದ ಸಿಡಿಲು ಸಹಿತ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯದಿಂದ ಪಂಜ ನಡುವಿನ ಬಳ್ಪ ಸಮೀಪದ ಎಣ್ಣೆಮಜಲು ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಹಲವು ಕಡೆಗಳಲ್ಲಿ ಮರಗಳು ಮುರಿದು ಬಿದ್ದಿದೆ.Body:ಬುಧವಾರ ಸಂಜೆ ಸುಳ್ಯ,ಕಡಬ, ನೆಲ್ಯಾಡಿ,ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಭಾರೀ ಗುಡುಗು ಸಹಿತ ಗಾಳಿ ಮತ್ತು ಮಳೆ ಆಗಿದೆ. ಸಾಯಂಕಾಲ ಸುಮಾರು 6 ಗಂಟೆಯಿಂದ ಆರಂಭವಾದ ಭಾರಿ ಸಿಡಿಲು,ಗುಡುಗು,ಗಾಳಿ ಸಹಿತವಾದ ಮಳೆ ಮೊದಲು ಸುಳ್ಯ ತಾಲೂಕಿನ ಬಳ್ಪ, ಗುತ್ತಿಗಾರು, ಏನೇಕಲ್ಲು ಆಸುಪಾಸಿನಲ್ಲಿ ಆರಂಭವಾಗಿತ್ತು. ನಂತರದಲ್ಲಿ ಕಡಬ, ಸುಬ್ರಹ್ಮಣ್ಯ,ನೆಲ್ಯಾಡಿ ಪ್ರದೇಶಗಳಲ್ಲೂ ಭಾರೀ ಗಾಳಿ ಮಳೆ ಸುರಿದಿದೆ.
ಈ ಸಮಯದಲ್ಲಿ ಬಳ್ಪದ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ಧನ ಎಂಬವರ ಕಾರಿನ ಮೇಲೆ ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಮರವೊಂದು ಉರುಳಿ ಬಿದ್ದಿದೆ. ಈ ಸಂದರ್ಭ ಕಾರು ಚಲಾಯಿಸುತ್ತಿದ್ದ ಗಣೇಶ್ ಎಂಬವರು ಗಂಭೀರ ಗಾಯಗೊಂಡರು. ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ. ಸ್ಕೂಟರ್ ಸವಾರನ ಮಾಹಿತಿ ಲಭ್ಯವಾಗಿಲ್ಲ.Conclusion:ಸುಬ್ರಹ್ಮಣ್ಯ ಪೋಲೀಸರು, ಗೃಹರಕ್ಷಕ, ಅರಣ್ಯ ಇಲಾಖಾ ಸಿಬಂದಿಗಳು ,ಮೆಸ್ಕಾಂ ಇಲಾಖಾ ಸಿಬ್ಬಂದಿಗಳು ಆಗಮಿಸಿ ಮರಗಳನ್ನು ತೆರವುಗೊಳಿಸಿ ವಿವಿಧ ಕಡೆಗಳಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡುತ್ತಿದ್ದಾರೆ. ಹೆಚ್ಚಿನ ಸ್ಥಳಗಳಲ್ಲಿ ವಿದ್ಯುತ್ ಕಡಿತಗೊಂಡಿದೆ. ಯಾವೆಲ್ಲಾ ಕಡೆಗಳಲ್ಲಿ ಎಷ್ಟು ಪ್ರಮಾಣದ ನಾಶ ನಷ್ಟಗಳು ಸಂಭವಿಸಿದೆ ಎಂಬುದು ಇನಷ್ಟೇ ತಿಳಿದುಬರಬೇಕಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.