ETV Bharat / state

ಮುಂಗಾರು ಆಗಮನ... ಕರಾವಳಿಯಲ್ಲಿ ಕಡಲ್ಕೊರೆತ: ಆತಂಕದಲ್ಲಿ ಸಮುದ್ರ ತೀರದ ಜನ - undefined

ದ.ಕ‌.ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆ ತೀವ್ರತೆ ಹೆಚ್ಚಾಗಿದ್ದು, ವಿವಿಧೆಡೆಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಉಳ್ಳಾಲ ಸಮುದ್ರ ತೀರದಲ್ಲಿರುವ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್​ ಸಭಾಂಗಣ ಕುಸಿದಿದೆ. ಕಲಾಯಿ ಎಂಬಲ್ಲಿ ಗುಡ್ಡವೊಂದು ಕುಸಿದಿರುವ ಪರಿಣಾಮ ರಸ್ತೆಗೆ ಮಣ್ಣು ಬಿದ್ದಿದ್ದು ಅನೇಕ ಅವಾಂತರ ಸೃಷ್ಟಿಸಿದೆ.

ಮಂಗಳೂರು
author img

By

Published : Jun 14, 2019, 10:10 AM IST

ಮಂಗಳೂರು : ಕರಾವಳಿಯಲ್ಲಿ ಮುಂಗಾರು ಪ್ರವೇಶವಾಗಿ ಎರಡು ದಿನಗಳಲ್ಲೇ ಮಳೆ ತೀವ್ರತೆ ಹೆಚ್ಚಾಗಿದ್ದು, ಉಳ್ಳಾಲದಲ್ಲಿ ಕಡಲ್ಕೊರೆತ ಪರಿಣಾಮ ಮತ್ತಷ್ಟು ಹೆಚ್ಚಾಗಿದೆ. ದ.ಕ‌.ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ.

ಮಳೆಯಿಂದಾಗಿ ಉಳ್ಳಾಲ ಸಮುದ್ರ ತೀರದಲ್ಲಿರುವ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್​ ಸಭಾಂಗಣ ಕುಸಿದಿದ್ದು, ಎರಡು ಮನೆಗಳು ಸಮುದ್ರ ಪಾಲಾಗಿದೆ. ಆ ಭಾಗದ ಅನೇಕ ಮನೆಗಳು ಅಪಾಯದಂಚಿನಲ್ಲಿವೆ. ಕಳೆದ ಕೆಲವು ದಿನಗಳಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಎಡೆಬಿಡದೆ ಸುರಿವ ಗಾಳಿ - ಮಳೆಯಿಂದಾಗಿ ಕಡಲ್ಕೊರೆತದ ಆರ್ಭಟ ತೀವ್ರಗೊಂಡಿದೆ.

ಮಳೆಯಿಂದ ಮಂಗಳೂರಲ್ಲಿ ಉಂಟಾಗಿರುವ ಅವಾಂತರಗಳು

ಬಂಟ್ವಾಳದಲ್ಲಿ ಗುಡ್ಡ ಕುಸಿತ :

ಮಳೆಯ ತೀವ್ರತೆಗೆ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದ್ದು, ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಬಳಿಯ ಕಲಾಯಿ ಎಂಬಲ್ಲಿ ಗುಡ್ಡವೊಂದು ಕುಸಿದಿರುವ ಪರಿಣಾಮ ರಸ್ತೆಗೆ ಮಣ್ಣು ಬಿದ್ದಿದೆ. ಇದರಿಂದ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆದಿದೆ.

ರೈಲ್ವೆ ಬ್ರಿಡ್ಜ್ ಕೆಳಗೆ ಮಣ್ಣು ಕುಸಿತ :

ನಗರದ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರೈಲ್ವೇ ಬ್ರಿಡ್ಜ್ ಕೆಳಗೆ ಮಣ್ಣು ಕುಸಿದಿರುವ ಪರಿಣಾಮ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿದೆ. ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆದಿದ್ದು, ಬಳಿಕ ಸಂಚಾರ ಸುಗಮವಾಯಿತು.

ಕೆ.ಎಸ್.ರಾವ್ ರಸ್ತೆಯಲ್ಲಿ ಹರಿದ ನೀರು :

ನಗರದ ಕೆ.ಎಸ್.ರಾವ್ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ನೀರು ರಸ್ತೆಯಲ್ಲಿ ತುಂಬಿ ವಾಹನ ಸಂಚಾರಕ್ಕೆ ಅಡ್ಡಿ ಉಂಟು ಮಾಡಿತು. ಚರಂಡಿ ಕಾಮಗಾರಿಯನ್ನು ಸಮರ್ಪಕವಾಗಿ ನಡೆಸದ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕಡಲ್ಕೊರೆತದ ತೀವ್ರತೆ ತೀವ್ರವಾಗಿದ್ದು, ಇದು ಮುಂಗಾರು ಸಮಸ್ಯೆಯಲ್ಲ. ಚಂಡಮಾರುತದ ಸಮಸ್ಯೆ. 2014ನಲ್ಲಿ ಜೂ.08 ರಂದು ಕಡಲ್ಕೊರೆತದ ಪರಿಣಾಮ ಶೇ.75 ರಷ್ಟು ಭೂಮಿ‌ ಸಮುದ್ರ ಪಾಲಾಯಿತ್ತು. ನಿನ್ನೆ ಸಮುದ್ರ ಪಾಲಾದ ಸಭಾಂಗಣದ ಅರ್ಧ ಭಾಗ ಚಂಡಮಾರುತದಿಂದ ಕುಸಿದಿತ್ತು. ಆ ಮೇಲೆ ಅದನ್ನು ದುರಸ್ತಿ ಮಾಡಿದ್ದೆವು. ಮಳೆಯ ಪರಿಣಾಮದಿಂದ ಸಭಾಂಗಣ ಸಂಪೂರ್ಣ ಕುಸಿದಿದೆ. ನಮ್ಮ ಬಹಳಷ್ಟು ಜಮೀನು ಸಮುದ್ರ ಪಾಲಾಗಿದೆ ಎಂದು ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್​ನ ಮ್ಯಾನೇಜಿಂಗ್ ಡೈರೆಕ್ಟರ್ ಅಲೋಶಿಯಸ್ ಅಲ್ಬುಕರ್ಕ್ ಪೈ ಎಂದು ತಿಳಿಸಿದರು.

ಮಂಗಳೂರು : ಕರಾವಳಿಯಲ್ಲಿ ಮುಂಗಾರು ಪ್ರವೇಶವಾಗಿ ಎರಡು ದಿನಗಳಲ್ಲೇ ಮಳೆ ತೀವ್ರತೆ ಹೆಚ್ಚಾಗಿದ್ದು, ಉಳ್ಳಾಲದಲ್ಲಿ ಕಡಲ್ಕೊರೆತ ಪರಿಣಾಮ ಮತ್ತಷ್ಟು ಹೆಚ್ಚಾಗಿದೆ. ದ.ಕ‌.ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ.

ಮಳೆಯಿಂದಾಗಿ ಉಳ್ಳಾಲ ಸಮುದ್ರ ತೀರದಲ್ಲಿರುವ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್​ ಸಭಾಂಗಣ ಕುಸಿದಿದ್ದು, ಎರಡು ಮನೆಗಳು ಸಮುದ್ರ ಪಾಲಾಗಿದೆ. ಆ ಭಾಗದ ಅನೇಕ ಮನೆಗಳು ಅಪಾಯದಂಚಿನಲ್ಲಿವೆ. ಕಳೆದ ಕೆಲವು ದಿನಗಳಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಎಡೆಬಿಡದೆ ಸುರಿವ ಗಾಳಿ - ಮಳೆಯಿಂದಾಗಿ ಕಡಲ್ಕೊರೆತದ ಆರ್ಭಟ ತೀವ್ರಗೊಂಡಿದೆ.

ಮಳೆಯಿಂದ ಮಂಗಳೂರಲ್ಲಿ ಉಂಟಾಗಿರುವ ಅವಾಂತರಗಳು

ಬಂಟ್ವಾಳದಲ್ಲಿ ಗುಡ್ಡ ಕುಸಿತ :

ಮಳೆಯ ತೀವ್ರತೆಗೆ ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದ್ದು, ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಬಳಿಯ ಕಲಾಯಿ ಎಂಬಲ್ಲಿ ಗುಡ್ಡವೊಂದು ಕುಸಿದಿರುವ ಪರಿಣಾಮ ರಸ್ತೆಗೆ ಮಣ್ಣು ಬಿದ್ದಿದೆ. ಇದರಿಂದ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆದಿದೆ.

ರೈಲ್ವೆ ಬ್ರಿಡ್ಜ್ ಕೆಳಗೆ ಮಣ್ಣು ಕುಸಿತ :

ನಗರದ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರೈಲ್ವೇ ಬ್ರಿಡ್ಜ್ ಕೆಳಗೆ ಮಣ್ಣು ಕುಸಿದಿರುವ ಪರಿಣಾಮ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿದೆ. ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆದಿದ್ದು, ಬಳಿಕ ಸಂಚಾರ ಸುಗಮವಾಯಿತು.

ಕೆ.ಎಸ್.ರಾವ್ ರಸ್ತೆಯಲ್ಲಿ ಹರಿದ ನೀರು :

ನಗರದ ಕೆ.ಎಸ್.ರಾವ್ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ನೀರು ರಸ್ತೆಯಲ್ಲಿ ತುಂಬಿ ವಾಹನ ಸಂಚಾರಕ್ಕೆ ಅಡ್ಡಿ ಉಂಟು ಮಾಡಿತು. ಚರಂಡಿ ಕಾಮಗಾರಿಯನ್ನು ಸಮರ್ಪಕವಾಗಿ ನಡೆಸದ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕಡಲ್ಕೊರೆತದ ತೀವ್ರತೆ ತೀವ್ರವಾಗಿದ್ದು, ಇದು ಮುಂಗಾರು ಸಮಸ್ಯೆಯಲ್ಲ. ಚಂಡಮಾರುತದ ಸಮಸ್ಯೆ. 2014ನಲ್ಲಿ ಜೂ.08 ರಂದು ಕಡಲ್ಕೊರೆತದ ಪರಿಣಾಮ ಶೇ.75 ರಷ್ಟು ಭೂಮಿ‌ ಸಮುದ್ರ ಪಾಲಾಯಿತ್ತು. ನಿನ್ನೆ ಸಮುದ್ರ ಪಾಲಾದ ಸಭಾಂಗಣದ ಅರ್ಧ ಭಾಗ ಚಂಡಮಾರುತದಿಂದ ಕುಸಿದಿತ್ತು. ಆ ಮೇಲೆ ಅದನ್ನು ದುರಸ್ತಿ ಮಾಡಿದ್ದೆವು. ಮಳೆಯ ಪರಿಣಾಮದಿಂದ ಸಭಾಂಗಣ ಸಂಪೂರ್ಣ ಕುಸಿದಿದೆ. ನಮ್ಮ ಬಹಳಷ್ಟು ಜಮೀನು ಸಮುದ್ರ ಪಾಲಾಗಿದೆ ಎಂದು ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್​ನ ಮ್ಯಾನೇಜಿಂಗ್ ಡೈರೆಕ್ಟರ್ ಅಲೋಶಿಯಸ್ ಅಲ್ಬುಕರ್ಕ್ ಪೈ ಎಂದು ತಿಳಿಸಿದರು.

Intro:ಮಂಗಳೂರು: ಕರಾವಳಿಯಲ್ಲಿ ಮುಂಗಾರು ಪ್ರವೇಶವಾದ ಎರಡು ದಿನಗಳಲ್ಲೇ ಮಳೆ ತೀವ್ರವಾಗಿ ಬಿರುಸು ಪಡೆದಿದ್ದು, ಉಳ್ಳಾಲದಲ್ಲಿ ಕಡಲ್ಕೊರೆತ ಪರಿಣಾಮ ಮತ್ತಷ್ಟು ಹೆಚ್ಚಾಗಿದೆ. ಅಲ್ಲದೆ ದ.ಕ‌.ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ.

ನಿನ್ನೆ ಸಂಜೆ 7.30 ಸುಮಾರಿಗೆ ಉಳ್ಳಾಲ ಸಮುದ್ರ ತೀರದಲ್ಲಿರುವ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ನ ಸಭಾಂಗಣವೊಂದು ಕುಸಿದಿರುವ ಹಾಗೂ ಉಳ್ಳಾಲ ಬಳಿಯ ಕಿಲಿರಿಯ ನಗರದಲ್ಲಿರುವ ಎರಡು ಮನೆಗಳು ಸಮುದ್ರಪಾಲಾಗಿದೆ. ಅಲ್ಲದೆ ಸಮುದ್ರತೀರದಲ್ಲಿ ಹಲವಾರು ಮನೆಗಳು ಅಪಾಯದಂಚಿನಲ್ಲಿವೆ. ಕಳೆದ ಕೆಲವು ದಿನಗಳಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಎಡೆಬಿಡದೆ ಸುರಿವ ಗಾಳಿ-ಮಳೆಯಿಂದಾಗಿ ಕಡಲ್ಕೊರೆತದ ಆರ್ಭಟ ತೀವ್ರಗೊಂಡಿದೆ.




Body:ಬಂಟ್ವಾಳದಲ್ಲಿ ಗುಡ್ಡ ಕುಸಿತ:

ಕರಾವಳಿಯಲ್ಲಿ ಮಳೆಯ ತೀವ್ರತೆಗೆ ಹಲವಾರು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದ್ದು, ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆ ಬಳಿಯ ಕಲಾಯಿ ಎಂಬಲ್ಲಿ ಗುಡ್ಡವೊಂದು ಕುಸಿದಿರುವ ಪರಿಣಾಮ ರಸ್ತೆಗೆ ಮಣ್ಣು ಬಿದ್ದಿದೆ. ಪರಿಣಾಮ ಕೆಲವು ಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆದಿದೆ.

ರೈಲ್ವೆ ಬ್ರಿಡ್ಜ್ ಕೆಳಗೆ ಮಣ್ಣು ಕುಸಿತ:

ನಗರದ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರೈಲ್ವೇ ಬ್ರಿಡ್ಜ್ ಕೆಳಗೆ ಮಣ್ಣು ಕುಸಿದಿರುವ ಪರಿಣಾಮ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿದೆ. ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆದಿದ್ದು, ಬಳಿಕ ಸಂಚಾರ ಸುಗಮವಾಯಿತು.

ಕೆ.ಎಸ್.ರಾವ್ ರಸ್ತೆಯಲ್ಲಿ ಹರಿದ ನೀರು:

ನಗರದ ಕೆ.ಎಸ್.ರಾವ್ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಇಂದು ಬೆಳಗ್ಗೆ ಸುರಿದ ಮಳೆಯಿಂದಾಗಿ ನೀರು ರಸ್ತೆಯಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳ ಓಡಾಡಕ್ಕೆ ತೊಂದರೆಯಾದ ಘಟನೆ ನಡೆದಿದೆ. ಅಲ್ಲದೆ ಮಳೆ ಮತ್ತೂ ಸುರಿಯುತ್ತಿದ್ದಲ್ಲಿ ಅಂಗಡಿಗಳ ಒಳಗಡೆ ನೀರು ಹೋಗುವ ಸಂಭವವಿತ್ತು. ಚರಂಡಿ ಕಾಮಗಾರಿ ಸಮರ್ಪಕವಾಗಿ ನಡೆಸದ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.






Conclusion:ಕಡಲ್ಕೊರೆತ ತೀವ್ರತೆಯ ಬಗ್ಗೆ ಸಮ್ಮರ್ ಸ್ಯಾಂಡ್ ಬೀಚ್ ರೆಸಾರ್ಟ್ ನ ಮ್ಯಾನೇಜಿಂಗ್ ಡೈರೆಕ್ಟರ್ ಅಲೋಶಿಯಸ್ ಅಲ್ಬುಕರ್ಕ್ ಪೈ ಮಾತನಾಡಿ, ಕಡಲ್ಕೊರೆತದ ತೀವ್ರತೆ ತೀವ್ರವಾಗಿದ್ದು, ಇದು ಮುಂಗಾರು ಸಮಸ್ಯೆಯಲ್ಲ. ಚಂಡಮಾರುತದ ಸಮಸ್ಯೆ. 2014ನಲ್ಲಿ ಜೂನ್ 8 ರಂದು ಕಡಲ್ಕೊರೆತದ ಪರಿಣಾಮ ಶೇ.75 ರಷ್ಟು ಭೂಮಿ‌ ಸಮುದ್ರ ಪಾಲಾಯಿತು. ನಿನ್ನೆ ಸಮುದ್ರ ಪಾಲಾದ ಸಭಾಂಗಣದ ಅರ್ಧ ಭಾಗವೂ ಆ ಸಂದರ್ಭ ಕುಸಿದಿತ್ತು. ಆಮೇಲೆ ಅದನ್ನು ದುರಸ್ತಿ ಮಾಡಿದ್ದೆವು. ಸರೀ ಐದು ವರ್ಷಗಳ ಬಳಿಕ ನಿನ್ನೆ ಜೂನ್ 9ಕ್ಕೆ ಮತ್ತೆ ಚಂಡಮಾರುತದ ಪರಿಣಾಮದಿಂದ ಸಭಾಂಗಣ ಸಂಪೂರ್ಣ ಕುಸಿದಿದೆ. ನಮ್ಮ ಸುಮಾರಷ್ಟು ಜಮೀನು ಸಮುದ್ರ ಪಾಲಾಗಿದೆ ಎಂದು ಅಳಲು ತೋಡಿಕೊಂಡರು.

ಸುಮಾರು 20 ವರ್ಷಗಳ ಹಿಂದೆ ಇಲ್ಲಿ ಬ್ರೇಕ್ ವಾಟರ್ ಹಾಕುವಾಗಲೇ ಉಳ್ಳಾಲದಲ್ಲಿ ಇನ್ನು ಮುಂದೆ ಕಡಲ್ಕೊರೆತ ಆಗಲಿದೆ ಎಂದು ತಜ್ಞರು ತಿಳಿಸಿದ್ದರು. ಈ 20 ವರ್ಷಗಳಲ್ಲಿ ಸುಮಾರು 300-400 ಮೀಟರ್ ಗಳಷ್ಟು ಭೂಮಿ ಕಡಲ್ಕೊರೆತದಿಂದ ಸಮುದ್ರ ಪಾಲಾಗಿದೆ. ಎಷ್ಟೋ ಮಂದಿ ತಮ್ಮ ಮನೆಗಳನ್ನು ಕಳೆದುಕೊಂಡರು. ಆದ್ದರಿಂದ ಜಿಲ್ಲಾಡಳಿತ, ಸರಕಾರ ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳಬೇಕು. ಈಗಾಗಲೇ ಪಿಡಬ್ಲ್ಯುಡಿ ಅಧಿಕಾರಿಗಳು ಬಂದು ವೀಕ್ಷಣೆ ಮಾಡಿದ್ದು, ಕಡಲ್ಕೊರೆತದ ತೀವ್ರತೆ ಕಡಿಮೆಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ನಾವೂ ಈ ಕಾಮಗಾರಿಯು ಆದಷ್ಟು ಬೇಗ ನಡೆಯಲಿ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದು ಅಲೋಶಿಯಸ್ ಅಲ್ಬುಕರ್ಕ್ ಪೈ ಎಂದು ಹೇಳಿದರು.

Reporter_Vishwanath Panjimogaru

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.