ETV Bharat / state

ಕರಾವಳಿಯಲ್ಲಿ ಭಾರೀ ಮಳೆ: ಮೀನುಗಾರಿಕೆ ಸ್ಥಗಿತ

author img

By

Published : Jul 16, 2020, 1:49 PM IST

ಮಂಗಳೂರು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಚುರುಕುಗೊಂಡಿದ್ದು, ನಿನ್ನೆಯಿಂದ ಉತ್ತಮ ಮಳೆಯಾಗಿದೆ.

Heavy rain on coastal regional of karnataka
ಕರಾವಳಿಯಲ್ಲಿ ಭಾರೀ ಮಳೆ: ಮೀನುಗಾರಿಕೆ ಸ್ಥಗಿತ

ಮಂಗಳೂರು: ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಕರಾವಳಿಯಲ್ಲಿ ಮತ್ತೆ ಚುರುಕುಗೊಂಡಿದ್ದು, ನಿನ್ನೆಯಿಂದ ಮಂಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿದೆ.

ಜಿಲ್ಲೆಯಲ್ಲಿ ನಿನ್ನೆಯಿಂದ ಇಡೀ ದಿನ, ರಾತ್ರಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ಸಣ್ಣದಾಗಿ ನೆರೆ ಕೂಡ ಸೃಷ್ಟಿಯಾಗಿದೆ. ಮಂಗಳೂರಿನಲ್ಲಿ ನಿನ್ನೆ 1 ಸೆಂ.ಮೀ. ಮಳೆಯಾಗಿದೆ. ರಾತ್ರಿ ವೇಳೆಯೂ ನಿರಂತರವಾಗಿ ಮಳೆಯಾಗಿದ್ದು, ಭಾರತೀಯ ಹವಾಮಾನ ಇಲಾಖೆ ಕರಾವಳಿಯಲ್ಲಿ ಜು. 16ರಿಂದ‌ 20ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಇಂದು ಬೆಳಗ್ಗೆಯಿಂದಲೇ ಮಳೆ ಮತ್ತೆ ಚುರುಕಾಗಿದ್ದು, ಮೀನುಗಾರಿಕಾ ಇಲಾಖೆ, ಕಡಲು ಪ್ರಕ್ಷುಬ್ಧವಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಮಂಗಳೂರು: ಕೆಲವು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಕರಾವಳಿಯಲ್ಲಿ ಮತ್ತೆ ಚುರುಕುಗೊಂಡಿದ್ದು, ನಿನ್ನೆಯಿಂದ ಮಂಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿದೆ.

ಜಿಲ್ಲೆಯಲ್ಲಿ ನಿನ್ನೆಯಿಂದ ಇಡೀ ದಿನ, ರಾತ್ರಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ಸಣ್ಣದಾಗಿ ನೆರೆ ಕೂಡ ಸೃಷ್ಟಿಯಾಗಿದೆ. ಮಂಗಳೂರಿನಲ್ಲಿ ನಿನ್ನೆ 1 ಸೆಂ.ಮೀ. ಮಳೆಯಾಗಿದೆ. ರಾತ್ರಿ ವೇಳೆಯೂ ನಿರಂತರವಾಗಿ ಮಳೆಯಾಗಿದ್ದು, ಭಾರತೀಯ ಹವಾಮಾನ ಇಲಾಖೆ ಕರಾವಳಿಯಲ್ಲಿ ಜು. 16ರಿಂದ‌ 20ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಇಂದು ಬೆಳಗ್ಗೆಯಿಂದಲೇ ಮಳೆ ಮತ್ತೆ ಚುರುಕಾಗಿದ್ದು, ಮೀನುಗಾರಿಕಾ ಇಲಾಖೆ, ಕಡಲು ಪ್ರಕ್ಷುಬ್ಧವಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.