ETV Bharat / state

ನಾನು 5 ಪೈಸೆ ಲಂಚ ತೆಗೆದುಕೊಂಡಿದ್ದೇನೆಂದು ಒಬ್ಬ ಕಂಟ್ರಾಕ್ಟರ್ ಹೇಳಿದ್ರೆ ಸನ್ಯಾಸತ್ವ ಸ್ವೀಕರಿಸುವೆ: ಸಿದ್ದರಾಮಯ್ಯ

author img

By

Published : Jan 23, 2023, 9:48 AM IST

ಮಂಗಳೂರಿನಲ್ಲಿ ಪ್ರಜಾ ಧ್ವನಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ವಿರುದ್ಧ ಟೀಕಾಸಮರ ನಡೆಸಿದರು. ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಕರಾವಳಿ ಅಭಿವೃದ್ಧಿಗೆ 10 ಅಂಶಗಳ ಕಾರ್ಯಕ್ರಮಗಳನ್ನು ಘೋಷಿಸಿದರು.

siddaramaiah
ಸಿದ್ದರಾಮಯ್ಯ
ಪ್ರಜಾ ಧ್ವನಿ ಯಾತ್ರೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ

ಮಂಗಳೂರು: "ರಾಜ್ಯದಲ್ಲಿ ಲಂಚ ತಾಂಡವವಾಡುತ್ತಿದೆ. ನಾನು ಹಣಕಾಸು ಸಚಿವನಾಗಿಯೂ ಕೆಲಸ ಮಾಡಿದ್ದೇನೆ. ಯಾವುದೇ ಒಬ್ಬ ಕಂಟ್ರಾಕ್ಟರ್ ನಾನು 5 ಪೈಸೆ ಲಂಚ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ರೆ ರಾಜಕೀಯ ನಿವೃತ್ತಿ ಘೋಷಿಸಿ ಸನ್ಯಾಸತ್ವ ಸ್ವೀಕರಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಪ್ರಜಾ ಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, "ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಇದು 40% ಸರ್ಕಾರ ಎಂದು ಕಂಟ್ರಾಕ್ಟರ್ ಅಸೋಸಿಯೇಶನ್ ಆಪಾದಿಸಿದೆ. ಭ್ರಷ್ಟಾಚಾರದಿಂದ ಕಂಟ್ರಾಕ್ಟ​ರ್​ದಾರರ ಆತ್ಮಹತ್ಯೆ ಪ್ರಕರಣಗಳು ನಡೆದಿದೆ" ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

"ಕಾಂಗ್ರೆಸ್ ಪಕ್ಷ ಮುಂದಿನ ಅಧಿಕಾರವಧಿಯಲ್ಲಿ ಮಾಡುವ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ. ಕೇವಲ ಘೋಷಣೆ ಮಾತ್ರ ಮಾಡುವುದಿಲ್ಲ, ಅದಕ್ಕೆ ಬೇಕಾದ ಹಣಕಾಸಿನ ಬಗ್ಗೆಯೂ ಚರ್ಚೆ ನಡೆಸಿ ಭರವಸೆ ನೀಡಲಾಗುತ್ತಿದೆ. ಬಿಜೆಪಿ 2018ರ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ಜನರ ಮುಂದೆ ಇಟ್ಟಿತ್ತು. ಆದರೆ ಅದರಲ್ಲಿ 50 ಘೊಷಣೆಗಳನ್ನು ಮಾತ್ರ ಈಡೇರಿಸಿದೆ. ಆ ಸರ್ಕಾರಕ್ಕೆ ತಾನು ಘೋಷಣೆ ಮಾಡಿದ ಶೇ 10 ರಷ್ಟು ಭರವಸೆಯನ್ನು ಈಡೇರಿಸಲೂ ಆಗಿಲ್ಲ. ಆದರೆ, ಕಾಂಗ್ರೆಸ್ ಪಕ್ಷ 2013 ರಲ್ಲಿ 165 ಭರವಸೆಗಳನ್ನು ನೀಡಿತ್ತು. ಅದರಲ್ಲಿ 158 ಅನ್ನು ಈಡೇರಿಸಿದ್ದೇವೆ. ಅಷ್ಟು ಮಾತ್ರವಲ್ಲದೇ ಇಂದಿರಾ ಕ್ಯಾಂಟೀನ್, ಸಾಲ ಮನ್ನಾ, ವಿದ್ಯಾಸಿರಿಯಂತಹ 30 ಹೆಚ್ಚುವರಿ ಯೋಜನೆಗಳನ್ನು ಕೊಟ್ಟಿದ್ದೇವೆ" ಎಂದರು.

"ಬಿಜೆಪಿ ಅಂದ್ರೆ ಸುಳ್ಳು ಹೇಳಿ ಜನರನ್ನು ಮರಳು ಮಾಡುವ ಪಕ್ಷ, ಸುಳ್ಳಿನ ಫ್ಯಾಕ್ಟರಿ. ರೈತರ ಸಾಲ 1 ಲಕ್ಷ ದವರೆಗೆ ಮನ್ನಾ ಮಾಡುತ್ತೇವೆ ಎಂದು ಹೇಳಿ ಅದನ್ನು ಈಡೇರಿಸಿಲ್ಲ. ಅದೇ ರೀತಿ ನೀರಾವರಿಗೆ 1ಲಕ್ಷದ 50 ಸಾವಿರ ಕೋಟಿ ರೂ ಖರ್ಚು ಮಾಡುತ್ತೇವೆ ಎಂದು ಹೇಳಿದ್ದರು. ಆದರೆ, 4 ವರ್ಷದಲ್ಲಿ 45 ರಿಂದ 50 ಸಾವಿರದ ವರೆಗೆ ಮಾತ್ರ ಖರ್ಚು ಮಾಡಿದ್ದಾರೆ. ಇದು ಜನರಿಗೆ ಮಾಡಿದ ದ್ರೋಹ. ಬಿಜೆಪಿಯವರು ವಚನ ಭ್ರಷ್ಟರಾಗಿದ್ದಾರೆ. ಸಿಎಂ ಬೊಮ್ಮಾಯಿ ಅವರು ಮಾತೆತ್ತಿದರೆ ಧಮ್ಮು, ತಾಕತ್ತು ಬಗ್ಗೆ ಮಾತನಾಡುತ್ತಾರೆ. ಅವರಿಗೆ ಧಮ್ಮು ತಾಕತ್ತು ಇದ್ದರೆ ಅವರು ಈಡೇರಿಸಿದ ಭರವಸೆ ಮತ್ತು ನಾವು ಈಡೇರಿಸಿದ ಭರವಸೆ ಬಗ್ಗೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡೋಣ. ಅದಕ್ಕೆ ಅವರಿಗೆ ತಾಕತ್ತು ಇಲ್ಲ" ಎಂದು ವಾಗ್ದಾಳಿ ನಡೆಸಿದರು.

"ಕರಾವಳಿಯಲ್ಲಿ ಬೆಂಕಿ ಹಚ್ಚಿದ್ದಾರೆ. ದ್ವೇಷದ ಮಾತು ಆರಂಭಿಸಿದ್ದಾರೆ. ಹಿಂದುಳಿದ ವರ್ಗದ ಯುವಕರನ್ನು ದಾರಿ ತಪ್ಪಿಸಿದ್ದಾರೆ. ಜಾತಿ, ಧರ್ಮದ ಹೆಸರಿನಲ್ಲಿ ಯುವಕರಿಗೆ ಅಫೀಮು ತುಂಬಿಸಿ ಮತಾಂಧರನ್ನಾಗಿ ಮಾಡುತ್ತಿದ್ದಾರೆ. ಇದು ದೇಶಕ್ಕೆ ಮಾರಕ. ಆರ್​ಎಸ್​ಎಸ್​ನವರು ಮನು ವಾದಿಗಳು. ಅವರು ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎಂದು ಹೇಳುತ್ತಿದ್ದಾರೆ. ಇದು ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವುದು ನಿಜವಾದ ಜನಸೇವೆ" ಎಂದರು.

"ನನ್ನನ್ನು ಹಿಂದೂ ವಿರೋಧಿ ಎಂದು ಆರ್​ಎಸ್​ಎಸ್ ಬ್ರಾಂಡ್ ಮಾಡಲಾಯಿತು. ಆರ್​ಎಸ್​ಎಸ್ ಪ್ರಕಾರ, ಹಿಂದೂ ಎಂದರೆ ಮಹಾತ್ಮ ಗಾಂಧೀಜಿಯನ್ನು ಕೊಂದ ಗೋಡ್ಸೆ. ದೇಶದಲ್ಲಿ ಅತೀ ಹೆಚ್ಚು ಸುಳ್ಳು ಹೇಳಿದ ಪ್ರಧಾನಮಂತ್ರಿ ಅಂದ್ರೆ ನರೇಂದ್ರ ಮೋದಿ. 15 ಲಕ್ಷ ರೂ. ಕೊಡುತ್ತೇನೆ ಎಂದವರು 1 ರೂ. ಕೂಡ ಕೊಡಲಿಲ್ಲ. ದೇಶದ ಸಂಪತ್ತು 5 ಟ್ರಿಲಿಯನ್ ಡಾಲರ್ ಮಾಡುತ್ತೇವೆ ಎಂದಿದ್ದಾರೆ. 3 ಟ್ರಿಲಿಯನ್ ಕೂಡ ಆಗಿಲ್ಲ" ಎಂದು ಕಿಡಿಕಾರಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, "ನಮಗೆ ಅಧಿಕಾರಕ್ಕೆ ಬರುವುದೇ ಮುಖ್ಯವಲ್ಲ. ಈ ರಾಜ್ಯದ ಜನರನ್ನು ಸಂತೋಷವಾಗಿಡಬೇಕು. ಕಾಂಗ್ರೆಸ್​ನ ಇತಿಹಾಸ ನುಡಿದಂತೆ ನಡೆಯುವುದು. ಈ ಬಾರಿ 135 ರಿಂದ 140 ಸ್ಥಾನ ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದೆ. ನಾನು ಇಂಧನ ಸಚಿವನಾಗಿದ್ದಾಗ 10 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಇತ್ತು. ಅದನ್ನು 20 ಸಾವಿರ ಮೆಗಾ ವ್ಯಾಟ್ ಉತ್ಪಾದನೆಗೆ ಹೆಚ್ಚಿಸಿದ್ದೇನೆ. 10 ಸಾವಿರ ಮೆಗಾ ವ್ಯಾಟ್​ ಸೋಲಾರ್ ಪಾರ್ಕ್ ನಿರ್ಮಾಣ ಮಾಡಿದ್ದೇನೆ. ಅದಕ್ಕೆ ಪ್ರಧಾನಮಂತ್ರಿಗಳೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಸಚಿವ ಸುನಿಲ್ ಕುಮಾರ್ ಹಿಂದಿನ ದಾಖಲೆ ನೋಡಿ ಮಾತಾಡಲಿ" ಎಂದರು.

ಕರಾವಳಿಗೆ 10 ಅಂಶಗಳ ಘೋಷಣೆ: ಈಗಾಗಲೇ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿರುವ ಉಚಿತ 200 ಯೂನಿಟ್ ವಿದ್ಯುತ್ ಮತ್ತು ಮಹಿಳೆಯರಿಗೆ 2 ಸಾವಿರ ಭತ್ಯೆ ಸೇರಿದಂತೆ ಹತ್ತು ಘೋಷಣೆಗಳನ್ನು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಘೋಷಿಸಿದರು. ಉಳಿದ ಎಂಟು ಘೊಷಣೆಗಳು ಈ ಕೆಳಗಿನಂತಿವೆ.

1. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಆದ್ಯತೆ ಕೊಡುವ ನಿಟ್ಟಿನಲ್ಲಿ ಕೋಸ್ಟಲ್ ಡೆವಲಪ್ ಮೆಂಟ್ ಅಥಾರಿಟಿ ಆರಂಭ. ಇದಕ್ಕೆ 2,500 ಕೋಟಿ ರೂ ಬಜೆಟ್.

2. ಮಂಗಳೂರನ್ನು ಮಾಹಿತಿ ತಂತ್ರಜ್ಞಾನದ ಮತ್ತೊಂದು ರಾಜಧಾನಿ ಮಾಡುವುದು. ಬೀಡಿ ಸುತ್ತಿ ಜೀವನ ಮಾಡುವ ಮಹಿಳೆಯರಿಗೆ ಪರ್ಯಾಯವಾಗಿ ಗಾರ್ಮೆಂಟ್ ಇಂಡಸ್ಟ್ರಿ ಹಬ್ ನಿರ್ಮಿಸುವುದು.

3. ಮೊಗವೀರರಿಗೆ 10 ಲಕ್ಷ ರೂ. ಗಳ ಇನ್ಸೂರೆನ್ಸ್ , 1 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಬೋಟ್ ಖರೀದಿಗೆ 25 ಲಕ್ಷ ರೂ.ವರೆಗೆ ಶೇ 25 ಸಬ್ಸಿಡಿ.

4. ಬಿಲ್ಲವ, ನಾಮಧಾರಿ, ಈಡಿಗ ಸಮುದಾಯದ ಅಭಿವೃದ್ಧಿಗೆ ನಾರಾಯಣಗುರು ಡೆವಲಪ್​ಮೆಂಟ್ ಬೋರ್ಡ್ ಸ್ಥಾಪನೆ. ಇದಕ್ಕೆ 5 ವರ್ಷದಲ್ಲಿ 1,250 ಕೋಟಿ ರೂ ಬಜೆಟ್.

5. ಬಂಟರ ಅಭಿವೃದ್ಧಿಗೆ 1,250 ಕೋಟಿ ರೂ ಬಜೆಟ್.

6. ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ನೀಡುತ್ತಿದ್ದ 3,150 ಕೋಟಿ ಅನುದಾನ ಬಿಜೆಪಿ ಸರ್ಕಾರ ನಿಲ್ಲಿಸಿದ್ದು, ಅದನ್ನು ಮತ್ತೆ ಆರಂಭಿಸುವುದು.

7. ಅಡಿಕೆ ಬೆಳೆಗೆ ನಷ್ಟ ಆಗದಂತೆ ಹಳದಿ ರೋಗ ತಡೆಗೆ 50 ಕೋಟಿ ರೂ ಮೀಸಲು ಇಡುವುದು.

8. ಕರಾವಳಿ ಪ್ರದೇಶದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಪ್ರತಿ ಗ್ರಾಮ ಪಂಚಾಯತ್​ನಲ್ಲಿ ಶ್ರೀ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಕೋಮು ಸೌಹಾರ್ದತಾ ಸಮಿತಿ ರಚಿಸಿ ಅನುದಾನ ನೀಡುವುದು.

ಇದನ್ನೂ ಓದಿ: ಚುನಾವಣೆಯಲ್ಲಿ ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಸದಾನಂದ ಗೌಡ ಆಪ್ತ ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆ: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಆಪ್ತ ಉದ್ಯಮಿ ಅಶೋಕ್ ಶೆಟ್ಟಿ ಕೋಡಿಂಬಾಳ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದರು. ಇದೇ ವೇಳೆ ಮಾಜಿ ತಾ.ಪಂ.ಸದಸ್ಯೆ ಫಕೀರ ಅವರ ಪತ್ನಿ ಧರಣಿ ಪಕೀರ ಮತ್ತು ಸಾಮಾಜಿಕ ಕಾರ್ಯಕರ್ತ ಎಂ.ಜಿ.ಹೆಗ್ಡೆ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯಗೆ ರಾಜಕೀಯ ನಿವೃತ್ತಿ ಪಡೆಯುವ ಸ್ಥಿತಿ ಬರಲಿ: ಸಿಎಂ ಬೊಮ್ಮಾಯಿ ವ್ಯಂಗ್ಯ

ಕಾರ್ಯಕ್ರಮದಲ್ಲಿ ಜನಾರ್ಧನ ಪೂಜಾರಿ: ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಭಾಗಿಯಾಗಿದ್ದು ಮೆರುಗು ನೀಡಿತು. ಪೂಜಾರಿ ಅವರು ವೇದಿಕೆಗೆ ಬರುವ ಸಂದರ್ಭದಲ್ಲಿ ಅವರಿಗೆ ನಾಯಕರು, ಕಾರ್ಯಕರ್ತರು ಗೌರವ ಸೂಚಿಸಿದರು. ಕಾರ್ಯಕ್ರಮಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಜಿ.ಪರಮೆಶ್ವರ್, ಪ್ರತಿಪಕ್ಷ ನಾಯಕ ಯು.ಟಿ.ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಆರ್.ಲೋಬೋ, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರಜಾ ಧ್ವನಿ ಯಾತ್ರೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ

ಮಂಗಳೂರು: "ರಾಜ್ಯದಲ್ಲಿ ಲಂಚ ತಾಂಡವವಾಡುತ್ತಿದೆ. ನಾನು ಹಣಕಾಸು ಸಚಿವನಾಗಿಯೂ ಕೆಲಸ ಮಾಡಿದ್ದೇನೆ. ಯಾವುದೇ ಒಬ್ಬ ಕಂಟ್ರಾಕ್ಟರ್ ನಾನು 5 ಪೈಸೆ ಲಂಚ ತೆಗೆದುಕೊಂಡಿದ್ದೇನೆ ಎಂದು ಹೇಳಿದ್ರೆ ರಾಜಕೀಯ ನಿವೃತ್ತಿ ಘೋಷಿಸಿ ಸನ್ಯಾಸತ್ವ ಸ್ವೀಕರಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಪ್ರಜಾ ಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, "ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಇದು 40% ಸರ್ಕಾರ ಎಂದು ಕಂಟ್ರಾಕ್ಟರ್ ಅಸೋಸಿಯೇಶನ್ ಆಪಾದಿಸಿದೆ. ಭ್ರಷ್ಟಾಚಾರದಿಂದ ಕಂಟ್ರಾಕ್ಟ​ರ್​ದಾರರ ಆತ್ಮಹತ್ಯೆ ಪ್ರಕರಣಗಳು ನಡೆದಿದೆ" ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

"ಕಾಂಗ್ರೆಸ್ ಪಕ್ಷ ಮುಂದಿನ ಅಧಿಕಾರವಧಿಯಲ್ಲಿ ಮಾಡುವ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ. ಕೇವಲ ಘೋಷಣೆ ಮಾತ್ರ ಮಾಡುವುದಿಲ್ಲ, ಅದಕ್ಕೆ ಬೇಕಾದ ಹಣಕಾಸಿನ ಬಗ್ಗೆಯೂ ಚರ್ಚೆ ನಡೆಸಿ ಭರವಸೆ ನೀಡಲಾಗುತ್ತಿದೆ. ಬಿಜೆಪಿ 2018ರ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ಜನರ ಮುಂದೆ ಇಟ್ಟಿತ್ತು. ಆದರೆ ಅದರಲ್ಲಿ 50 ಘೊಷಣೆಗಳನ್ನು ಮಾತ್ರ ಈಡೇರಿಸಿದೆ. ಆ ಸರ್ಕಾರಕ್ಕೆ ತಾನು ಘೋಷಣೆ ಮಾಡಿದ ಶೇ 10 ರಷ್ಟು ಭರವಸೆಯನ್ನು ಈಡೇರಿಸಲೂ ಆಗಿಲ್ಲ. ಆದರೆ, ಕಾಂಗ್ರೆಸ್ ಪಕ್ಷ 2013 ರಲ್ಲಿ 165 ಭರವಸೆಗಳನ್ನು ನೀಡಿತ್ತು. ಅದರಲ್ಲಿ 158 ಅನ್ನು ಈಡೇರಿಸಿದ್ದೇವೆ. ಅಷ್ಟು ಮಾತ್ರವಲ್ಲದೇ ಇಂದಿರಾ ಕ್ಯಾಂಟೀನ್, ಸಾಲ ಮನ್ನಾ, ವಿದ್ಯಾಸಿರಿಯಂತಹ 30 ಹೆಚ್ಚುವರಿ ಯೋಜನೆಗಳನ್ನು ಕೊಟ್ಟಿದ್ದೇವೆ" ಎಂದರು.

"ಬಿಜೆಪಿ ಅಂದ್ರೆ ಸುಳ್ಳು ಹೇಳಿ ಜನರನ್ನು ಮರಳು ಮಾಡುವ ಪಕ್ಷ, ಸುಳ್ಳಿನ ಫ್ಯಾಕ್ಟರಿ. ರೈತರ ಸಾಲ 1 ಲಕ್ಷ ದವರೆಗೆ ಮನ್ನಾ ಮಾಡುತ್ತೇವೆ ಎಂದು ಹೇಳಿ ಅದನ್ನು ಈಡೇರಿಸಿಲ್ಲ. ಅದೇ ರೀತಿ ನೀರಾವರಿಗೆ 1ಲಕ್ಷದ 50 ಸಾವಿರ ಕೋಟಿ ರೂ ಖರ್ಚು ಮಾಡುತ್ತೇವೆ ಎಂದು ಹೇಳಿದ್ದರು. ಆದರೆ, 4 ವರ್ಷದಲ್ಲಿ 45 ರಿಂದ 50 ಸಾವಿರದ ವರೆಗೆ ಮಾತ್ರ ಖರ್ಚು ಮಾಡಿದ್ದಾರೆ. ಇದು ಜನರಿಗೆ ಮಾಡಿದ ದ್ರೋಹ. ಬಿಜೆಪಿಯವರು ವಚನ ಭ್ರಷ್ಟರಾಗಿದ್ದಾರೆ. ಸಿಎಂ ಬೊಮ್ಮಾಯಿ ಅವರು ಮಾತೆತ್ತಿದರೆ ಧಮ್ಮು, ತಾಕತ್ತು ಬಗ್ಗೆ ಮಾತನಾಡುತ್ತಾರೆ. ಅವರಿಗೆ ಧಮ್ಮು ತಾಕತ್ತು ಇದ್ದರೆ ಅವರು ಈಡೇರಿಸಿದ ಭರವಸೆ ಮತ್ತು ನಾವು ಈಡೇರಿಸಿದ ಭರವಸೆ ಬಗ್ಗೆ ಒಂದೇ ವೇದಿಕೆಯಲ್ಲಿ ಚರ್ಚೆ ಮಾಡೋಣ. ಅದಕ್ಕೆ ಅವರಿಗೆ ತಾಕತ್ತು ಇಲ್ಲ" ಎಂದು ವಾಗ್ದಾಳಿ ನಡೆಸಿದರು.

"ಕರಾವಳಿಯಲ್ಲಿ ಬೆಂಕಿ ಹಚ್ಚಿದ್ದಾರೆ. ದ್ವೇಷದ ಮಾತು ಆರಂಭಿಸಿದ್ದಾರೆ. ಹಿಂದುಳಿದ ವರ್ಗದ ಯುವಕರನ್ನು ದಾರಿ ತಪ್ಪಿಸಿದ್ದಾರೆ. ಜಾತಿ, ಧರ್ಮದ ಹೆಸರಿನಲ್ಲಿ ಯುವಕರಿಗೆ ಅಫೀಮು ತುಂಬಿಸಿ ಮತಾಂಧರನ್ನಾಗಿ ಮಾಡುತ್ತಿದ್ದಾರೆ. ಇದು ದೇಶಕ್ಕೆ ಮಾರಕ. ಆರ್​ಎಸ್​ಎಸ್​ನವರು ಮನು ವಾದಿಗಳು. ಅವರು ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎಂದು ಹೇಳುತ್ತಿದ್ದಾರೆ. ಇದು ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವುದು ನಿಜವಾದ ಜನಸೇವೆ" ಎಂದರು.

"ನನ್ನನ್ನು ಹಿಂದೂ ವಿರೋಧಿ ಎಂದು ಆರ್​ಎಸ್​ಎಸ್ ಬ್ರಾಂಡ್ ಮಾಡಲಾಯಿತು. ಆರ್​ಎಸ್​ಎಸ್ ಪ್ರಕಾರ, ಹಿಂದೂ ಎಂದರೆ ಮಹಾತ್ಮ ಗಾಂಧೀಜಿಯನ್ನು ಕೊಂದ ಗೋಡ್ಸೆ. ದೇಶದಲ್ಲಿ ಅತೀ ಹೆಚ್ಚು ಸುಳ್ಳು ಹೇಳಿದ ಪ್ರಧಾನಮಂತ್ರಿ ಅಂದ್ರೆ ನರೇಂದ್ರ ಮೋದಿ. 15 ಲಕ್ಷ ರೂ. ಕೊಡುತ್ತೇನೆ ಎಂದವರು 1 ರೂ. ಕೂಡ ಕೊಡಲಿಲ್ಲ. ದೇಶದ ಸಂಪತ್ತು 5 ಟ್ರಿಲಿಯನ್ ಡಾಲರ್ ಮಾಡುತ್ತೇವೆ ಎಂದಿದ್ದಾರೆ. 3 ಟ್ರಿಲಿಯನ್ ಕೂಡ ಆಗಿಲ್ಲ" ಎಂದು ಕಿಡಿಕಾರಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, "ನಮಗೆ ಅಧಿಕಾರಕ್ಕೆ ಬರುವುದೇ ಮುಖ್ಯವಲ್ಲ. ಈ ರಾಜ್ಯದ ಜನರನ್ನು ಸಂತೋಷವಾಗಿಡಬೇಕು. ಕಾಂಗ್ರೆಸ್​ನ ಇತಿಹಾಸ ನುಡಿದಂತೆ ನಡೆಯುವುದು. ಈ ಬಾರಿ 135 ರಿಂದ 140 ಸ್ಥಾನ ಕಾಂಗ್ರೆಸ್ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದೆ. ನಾನು ಇಂಧನ ಸಚಿವನಾಗಿದ್ದಾಗ 10 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಇತ್ತು. ಅದನ್ನು 20 ಸಾವಿರ ಮೆಗಾ ವ್ಯಾಟ್ ಉತ್ಪಾದನೆಗೆ ಹೆಚ್ಚಿಸಿದ್ದೇನೆ. 10 ಸಾವಿರ ಮೆಗಾ ವ್ಯಾಟ್​ ಸೋಲಾರ್ ಪಾರ್ಕ್ ನಿರ್ಮಾಣ ಮಾಡಿದ್ದೇನೆ. ಅದಕ್ಕೆ ಪ್ರಧಾನಮಂತ್ರಿಗಳೇ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಸಚಿವ ಸುನಿಲ್ ಕುಮಾರ್ ಹಿಂದಿನ ದಾಖಲೆ ನೋಡಿ ಮಾತಾಡಲಿ" ಎಂದರು.

ಕರಾವಳಿಗೆ 10 ಅಂಶಗಳ ಘೋಷಣೆ: ಈಗಾಗಲೇ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿರುವ ಉಚಿತ 200 ಯೂನಿಟ್ ವಿದ್ಯುತ್ ಮತ್ತು ಮಹಿಳೆಯರಿಗೆ 2 ಸಾವಿರ ಭತ್ಯೆ ಸೇರಿದಂತೆ ಹತ್ತು ಘೋಷಣೆಗಳನ್ನು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಘೋಷಿಸಿದರು. ಉಳಿದ ಎಂಟು ಘೊಷಣೆಗಳು ಈ ಕೆಳಗಿನಂತಿವೆ.

1. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಆದ್ಯತೆ ಕೊಡುವ ನಿಟ್ಟಿನಲ್ಲಿ ಕೋಸ್ಟಲ್ ಡೆವಲಪ್ ಮೆಂಟ್ ಅಥಾರಿಟಿ ಆರಂಭ. ಇದಕ್ಕೆ 2,500 ಕೋಟಿ ರೂ ಬಜೆಟ್.

2. ಮಂಗಳೂರನ್ನು ಮಾಹಿತಿ ತಂತ್ರಜ್ಞಾನದ ಮತ್ತೊಂದು ರಾಜಧಾನಿ ಮಾಡುವುದು. ಬೀಡಿ ಸುತ್ತಿ ಜೀವನ ಮಾಡುವ ಮಹಿಳೆಯರಿಗೆ ಪರ್ಯಾಯವಾಗಿ ಗಾರ್ಮೆಂಟ್ ಇಂಡಸ್ಟ್ರಿ ಹಬ್ ನಿರ್ಮಿಸುವುದು.

3. ಮೊಗವೀರರಿಗೆ 10 ಲಕ್ಷ ರೂ. ಗಳ ಇನ್ಸೂರೆನ್ಸ್ , 1 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಬೋಟ್ ಖರೀದಿಗೆ 25 ಲಕ್ಷ ರೂ.ವರೆಗೆ ಶೇ 25 ಸಬ್ಸಿಡಿ.

4. ಬಿಲ್ಲವ, ನಾಮಧಾರಿ, ಈಡಿಗ ಸಮುದಾಯದ ಅಭಿವೃದ್ಧಿಗೆ ನಾರಾಯಣಗುರು ಡೆವಲಪ್​ಮೆಂಟ್ ಬೋರ್ಡ್ ಸ್ಥಾಪನೆ. ಇದಕ್ಕೆ 5 ವರ್ಷದಲ್ಲಿ 1,250 ಕೋಟಿ ರೂ ಬಜೆಟ್.

5. ಬಂಟರ ಅಭಿವೃದ್ಧಿಗೆ 1,250 ಕೋಟಿ ರೂ ಬಜೆಟ್.

6. ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ನೀಡುತ್ತಿದ್ದ 3,150 ಕೋಟಿ ಅನುದಾನ ಬಿಜೆಪಿ ಸರ್ಕಾರ ನಿಲ್ಲಿಸಿದ್ದು, ಅದನ್ನು ಮತ್ತೆ ಆರಂಭಿಸುವುದು.

7. ಅಡಿಕೆ ಬೆಳೆಗೆ ನಷ್ಟ ಆಗದಂತೆ ಹಳದಿ ರೋಗ ತಡೆಗೆ 50 ಕೋಟಿ ರೂ ಮೀಸಲು ಇಡುವುದು.

8. ಕರಾವಳಿ ಪ್ರದೇಶದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಪ್ರತಿ ಗ್ರಾಮ ಪಂಚಾಯತ್​ನಲ್ಲಿ ಶ್ರೀ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಕೋಮು ಸೌಹಾರ್ದತಾ ಸಮಿತಿ ರಚಿಸಿ ಅನುದಾನ ನೀಡುವುದು.

ಇದನ್ನೂ ಓದಿ: ಚುನಾವಣೆಯಲ್ಲಿ ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಸದಾನಂದ ಗೌಡ ಆಪ್ತ ಸೇರಿ ಹಲವರು ಕಾಂಗ್ರೆಸ್ ಸೇರ್ಪಡೆ: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಆಪ್ತ ಉದ್ಯಮಿ ಅಶೋಕ್ ಶೆಟ್ಟಿ ಕೋಡಿಂಬಾಳ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದರು. ಇದೇ ವೇಳೆ ಮಾಜಿ ತಾ.ಪಂ.ಸದಸ್ಯೆ ಫಕೀರ ಅವರ ಪತ್ನಿ ಧರಣಿ ಪಕೀರ ಮತ್ತು ಸಾಮಾಜಿಕ ಕಾರ್ಯಕರ್ತ ಎಂ.ಜಿ.ಹೆಗ್ಡೆ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯಗೆ ರಾಜಕೀಯ ನಿವೃತ್ತಿ ಪಡೆಯುವ ಸ್ಥಿತಿ ಬರಲಿ: ಸಿಎಂ ಬೊಮ್ಮಾಯಿ ವ್ಯಂಗ್ಯ

ಕಾರ್ಯಕ್ರಮದಲ್ಲಿ ಜನಾರ್ಧನ ಪೂಜಾರಿ: ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಭಾಗಿಯಾಗಿದ್ದು ಮೆರುಗು ನೀಡಿತು. ಪೂಜಾರಿ ಅವರು ವೇದಿಕೆಗೆ ಬರುವ ಸಂದರ್ಭದಲ್ಲಿ ಅವರಿಗೆ ನಾಯಕರು, ಕಾರ್ಯಕರ್ತರು ಗೌರವ ಸೂಚಿಸಿದರು. ಕಾರ್ಯಕ್ರಮಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಜಿ.ಪರಮೆಶ್ವರ್, ಪ್ರತಿಪಕ್ಷ ನಾಯಕ ಯು.ಟಿ.ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಆರ್.ಲೋಬೋ, ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.