ETV Bharat / state

ಮಂಗಳೂರು ಪೊಲೀಸರಿಂದ ಕುಖ್ಯಾತ ಕಳ್ಳನ ಬಂಧನ

author img

By

Published : May 3, 2019, 5:22 AM IST

ಮಂಗಳೂರು ಪೊಲೀಸರಿಂದ ಅಂತರ ಜಿಲ್ಲಾ ಕುಖ್ಯಾತ ಕಳ್ಳನ ಅರೆಸ್ಟ್. ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪ್ರಸಾದ್ ಪೂಜಾರಿ ಪೊಲೀಸ್ ಬಲೆಗೆ

ಅಂತರ ಜಿಲ್ಲಾ ಕುಖ್ಯಾತ ಕಳ್ಳನ ಬಂಧನ

ಮಂಗಳೂರು: ವಿವಿಧೆಡೆ ರಾತ್ರಿ ವೇಳೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಹಲವು ಪ್ರಕರಣಗಳ ಆರೋಪಿವೋರ್ವನನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಜಂಕ್ಷನ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮೂಡುಬಿದಿರೆ ತಾಲೂಕಿನ ಹೊಸಬೆಟ್ಟು ಗ್ರಾಮದ ಬೊಗ್ರಗುಡ್ಡೆಯ ಪ್ರಸಾದ್ ಪೂಜಾರಿ (23) ಬಂಧಿತ ಆರೋಪಿ. ಆರೋಪಿ ವಿರುದ್ಧ ಈಗಾಗಲೇ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಹಾಗೂ ರಾತ್ರಿ ಕನ್ನ ಕಳವು ನಂತಹ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದವು. 2014ನೇ ಸಾಲಿನಲ್ಲಿ ಆರೋಪಿಗೆ ಕಳ್ಳತನ ಪ್ರಕರಣದಲ್ಲಿ ಶಿಕ್ಷೆಯಾಗಿತ್ತು.

ವೇಣೂರು ಪೊಲೀಸ್ ಠಾಣೆ ಮತ್ತು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದರೋಡೆ ಯತ್ನ ಪ್ರಕರಣ ಪ್ರಸಾದ್ ವಿರುದ್ಧ ದಾಖಲಾಗಿ ತನಿಖೆಯಲ್ಲಿರುತ್ತದೆ.

ಪ್ರಸ್ತುತ ಆರೋಪಿ ಪ್ರಸಾದ್ ಪೂಜಾರಿಯನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ರೈಲ್ವೆ ಜಂಕ್ಷನ್ ಬಳಿಯಿರುವ ರೈಲ್ವೆ ವಸತಿ ಗೃಹದಲ್ಲಿ ಕಳವು ಪ್ರಕರಣ, ಪಡೀಲ್ ಎಂಬಲ್ಲಿರುವ ಅದ್ವೈತ್ ಜೆ.ಸಿ.ಬಿ. ಶೋರೂಂ ಹಾಗೂ ಯುನೈಟೆಡ್ ಟೊಯೋಟಾ ಶೋರೂಂ ಕಳವು ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಅಂಗಡಿಗಳಿಗೆ ಕನ್ನ ಹಾಕಿದ ಪ್ರಕರಣ, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಎಡಪದವು ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಎಂಬಲ್ಲಿರುವ ಚೌಟಾಸ್ ಗ್ಯಾಸ್ ಏಜೆನ್ಸಿಯಲ್ಲಿನ ಕಳ್ಳತನ ಸೇರಿದಂತೆ ಒಟ್ಟು 7 ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಬಂಧಿಸಲಾಗಿದೆ.

ಆರೋಪಿಯಿಂದ 3 ಲ್ಯಾಪ್ ಟಾಪ್​ಗಳು, 4 ಟ್ಯಾಬ್​, 3 ಮೊಬೈಲ್, 2 ಚಿನ್ನದ ಬಳೆ, ಕ್ಯಾಶ್ ಲಾಕರ್, 1 ಕ್ಯಾಮರಾ ಹಾಗೂ ಕೃತ್ಯ ನಡೆಸಲು ಉಪಯೋಗಿಸಿದ ಲಿವರ್, ಟಾರ್ಚ್, ಮಾಸ್ಕ್ ಹಾಗೂ ಕಬ್ಬಿಣದ ರಾಡ್​ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಪ್ರಸಾದ್ ಪೂಜಾರಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಒಪ್ಪಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ-ಪೊಲೀಸ್ ಆಯುಕ್ತರಾದ ಹನುಮಂತರಾಯ, ಲಕ್ಷ್ಮೀ ಗಣೇಶ್ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಗದೀಶ್ ಆರ್, ಕಾನೂನು ಸುವ್ಯವಸ್ಥೆಯ ಪೊಲೀಸ್ ಉಪ ನಿರೀಕ್ಷಕ ಪ್ರದೀಪ್ ಟಿ. ಆರ್, ಸುದೀಪ್ ಹಾಗೂ ಸಿಬ್ಬಂದಿಯಾದ ಸಂತೋಷ್, ಮದನ್, ವಿನೋದ್, ರಾಜೇಶ್, ನೂತನ್, ಸಂದೀಪ್, ಕಾರ್ತಿಕ್ ಮತ್ತು ಮೇಘರಾಜ್ ಭಾಗವಹಿಸಿದ್ದರು.

ಮಂಗಳೂರು: ವಿವಿಧೆಡೆ ರಾತ್ರಿ ವೇಳೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಹಲವು ಪ್ರಕರಣಗಳ ಆರೋಪಿವೋರ್ವನನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಜಂಕ್ಷನ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮೂಡುಬಿದಿರೆ ತಾಲೂಕಿನ ಹೊಸಬೆಟ್ಟು ಗ್ರಾಮದ ಬೊಗ್ರಗುಡ್ಡೆಯ ಪ್ರಸಾದ್ ಪೂಜಾರಿ (23) ಬಂಧಿತ ಆರೋಪಿ. ಆರೋಪಿ ವಿರುದ್ಧ ಈಗಾಗಲೇ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಹಾಗೂ ರಾತ್ರಿ ಕನ್ನ ಕಳವು ನಂತಹ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದವು. 2014ನೇ ಸಾಲಿನಲ್ಲಿ ಆರೋಪಿಗೆ ಕಳ್ಳತನ ಪ್ರಕರಣದಲ್ಲಿ ಶಿಕ್ಷೆಯಾಗಿತ್ತು.

ವೇಣೂರು ಪೊಲೀಸ್ ಠಾಣೆ ಮತ್ತು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದರೋಡೆ ಯತ್ನ ಪ್ರಕರಣ ಪ್ರಸಾದ್ ವಿರುದ್ಧ ದಾಖಲಾಗಿ ತನಿಖೆಯಲ್ಲಿರುತ್ತದೆ.

ಪ್ರಸ್ತುತ ಆರೋಪಿ ಪ್ರಸಾದ್ ಪೂಜಾರಿಯನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ರೈಲ್ವೆ ಜಂಕ್ಷನ್ ಬಳಿಯಿರುವ ರೈಲ್ವೆ ವಸತಿ ಗೃಹದಲ್ಲಿ ಕಳವು ಪ್ರಕರಣ, ಪಡೀಲ್ ಎಂಬಲ್ಲಿರುವ ಅದ್ವೈತ್ ಜೆ.ಸಿ.ಬಿ. ಶೋರೂಂ ಹಾಗೂ ಯುನೈಟೆಡ್ ಟೊಯೋಟಾ ಶೋರೂಂ ಕಳವು ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಅಂಗಡಿಗಳಿಗೆ ಕನ್ನ ಹಾಕಿದ ಪ್ರಕರಣ, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಎಡಪದವು ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಎಂಬಲ್ಲಿರುವ ಚೌಟಾಸ್ ಗ್ಯಾಸ್ ಏಜೆನ್ಸಿಯಲ್ಲಿನ ಕಳ್ಳತನ ಸೇರಿದಂತೆ ಒಟ್ಟು 7 ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಬಂಧಿಸಲಾಗಿದೆ.

ಆರೋಪಿಯಿಂದ 3 ಲ್ಯಾಪ್ ಟಾಪ್​ಗಳು, 4 ಟ್ಯಾಬ್​, 3 ಮೊಬೈಲ್, 2 ಚಿನ್ನದ ಬಳೆ, ಕ್ಯಾಶ್ ಲಾಕರ್, 1 ಕ್ಯಾಮರಾ ಹಾಗೂ ಕೃತ್ಯ ನಡೆಸಲು ಉಪಯೋಗಿಸಿದ ಲಿವರ್, ಟಾರ್ಚ್, ಮಾಸ್ಕ್ ಹಾಗೂ ಕಬ್ಬಿಣದ ರಾಡ್​ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಪ್ರಸಾದ್ ಪೂಜಾರಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಒಪ್ಪಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ-ಪೊಲೀಸ್ ಆಯುಕ್ತರಾದ ಹನುಮಂತರಾಯ, ಲಕ್ಷ್ಮೀ ಗಣೇಶ್ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಗದೀಶ್ ಆರ್, ಕಾನೂನು ಸುವ್ಯವಸ್ಥೆಯ ಪೊಲೀಸ್ ಉಪ ನಿರೀಕ್ಷಕ ಪ್ರದೀಪ್ ಟಿ. ಆರ್, ಸುದೀಪ್ ಹಾಗೂ ಸಿಬ್ಬಂದಿಯಾದ ಸಂತೋಷ್, ಮದನ್, ವಿನೋದ್, ರಾಜೇಶ್, ನೂತನ್, ಸಂದೀಪ್, ಕಾರ್ತಿಕ್ ಮತ್ತು ಮೇಘರಾಜ್ ಭಾಗವಹಿಸಿದ್ದರು.

Intro:ಮಂಗಳೂರು: ವಿವಿಧೆಡೆ ರಾತ್ರಿ ವೇಳೆ ನುಗ್ಗಿ ಕಳವುಗೈಯುತ್ತಿದ್ದ ಹಲವು ಪ್ರಕರಣಗಳ ಆರೋಪಿಯೋರ್ವನನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಜಂಕ್ಷನ್ ನಲ್ಲಿ ಇಂದು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಮೂಡುಬಿದಿರೆ ತಾಲೂಕಿನ ಹೊಸಬೆಟ್ಟು ಗ್ರಾಮದ ಬೊಗ್ರಗುಡ್ಡೆ 5 ಸೆಂಟ್ಸ್ ನ ಪ್ರಸಾದ್ ಪೂಜಾರಿ (23) ಬಂಧಿತ ಆರೋಪಿ.

ಆರೋಪಿ ಪ್ರಸಾದ್ ಪೂಜಾರಿ ಎಂಬಾತನ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಕೊಲೆ ಯತ್ನ ಹಾಗೂ ರಾತ್ರಿ ಕನ್ನ ಕಳವು ನಂತಹ ಒಟ್ಟು ಮೂರು ಪ್ರಕರಣಗಳು ದಾಖಲಾಗಿತ್ತು. 2014 ನೇ ಸಾಲಿನಲ್ಲಿ ಆರೋಪಿಗೆ ರಾತ್ರಿ ಕನ್ನ ಮಾಡಿ ಕಳವುಗೈದ ಪ್ರಕರಣ ಸಾಬೀತಾಗಿ ಶಿಕ್ಷೆಯಾಗಿರುತ್ತದೆ. ವೇಣೂರು ಪೊಲೀಸ್ ಠಾಣೆಯಲ್ಲಿ ರಾತ್ರಿ ಕನ್ನ ಕಳವು ಪ್ರಕರಣವು ದಾಖಲಾಗಿರುತ್ತದೆ ಮತ್ತು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದರೋಡೆಯತ್ನದಂತಹ ಪ್ರಕರಣವು ಪ್ರಸಾದ್ ವಿರುದ್ಧ ದಾಖಲಾಗಿ ತನಿಖೆಯಲ್ಲಿರುತ್ತದೆ.

Body:ಪ್ರಸ್ತುತ ಆರೋಪಿ ಪ್ರಸಾದ್ ಪೂಜಾರಿಯನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ರೈಲ್ವೆ ಜಂಕ್ಷನ್ ಬಳಿಯಿರುವ ರೈಲ್ವೆ ವಸತಿ ಗೃಹಕ್ಕೆ ನುಗ್ಗಿ ನಡೆಸಿದ ರಾತ್ರಿ ಕನ್ನ ಕಳವು ಪ್ರಕರಣ, ಪಡೀಲ್ ಎಂಬಲ್ಲಿರುವ ಅದ್ವೈತ್ ಜೆ.ಸಿ.ಬಿ. ಶೋರೂಮ್ ಗೆ ನುಗ್ಗಿ ನಡೆಸಿದ ರಾತ್ರಿ ಕನ್ನ ಕಳವು ಪ್ರಕರಣ, ಪಡೀಲ್ ಎಂಬಲ್ಲಿರುವ ಯುನೈಟೆಡ್ ಟೊಯೋಟಾ ಶೋರೂಮ್ ಗೆ ನುಗ್ಗಿ ನಡೆಸಿದ ರಾತ್ರಿ ಕನ್ನ ಕಳವು ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಅಂಗಡಿಗಳಿಗೆ ನುಗ್ಗಿ ನಡೆಸಿದ ರಾತ್ರಿ ಕನ್ನ ಕಳವು ಪ್ರಕರಣ, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಎಡಪದವು ಪಂಚಾಯತ್ ಕಚೇರಿಗೆ ನುಗ್ಗಿ ನಡೆಸಿದ ರಾತ್ರಿ ಕನ್ನ ಕಳವು ಪ್ರಕರಣ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಎಂಬಲ್ಲಿರುವ ಚೌಟಾಸ್ ಗ್ಯಾಸ್ ಏಜೆನ್ಸಿಗೆ ನುಗ್ಗಿ ನಡೆಸಿದ ರಾತ್ರಿ ಕನ್ನ ಕಳವು ಪ್ರಕರಣಗಳು ಸೇರಿದಂತೆ ಒಟ್ಟು 7 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧಿಸಲಾಗಿದೆ.

ಆರೋಪಿ ಪ್ರಸಾದ್ ಪೂಜಾರಿ ಕಳ್ಳತನ ಮಾಡಿದ್ದ ಸೊತ್ತುಗಳಲ್ಲಿ 3 ಲ್ಯಾಪ್ ಟಾಪ್ ಗಳು, 4 ಟ್ಯಾಬ್ ಗಳು, 3 ಮೊಬೈಲ್ ಫೋನ್‌ಗಳು , 2 ಚಿನ್ನದ ಬಳೆಗಳು, ಕ್ಯಾಶ್ ಲಾಕರ್, 1 ಕ್ಯಾಮೆರಾ ಹಾಗೂ ಕೃತ್ಯ ನಡೆಸಲು ಉಪಯೋಗಿಸಿದ ಲಿವರ್, ಟಾರ್ಚ್, ಮಾಸ್ಕ್ ಹಾಗೂ ಕಬ್ಬಿಣದ ರಾಡ್ ನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,87,000 ರೂ. ಆಗಿರುತ್ತದೆ.

Conclusion:ಆರೋಪಿ ಪ್ರಸಾದ್ ಪೂಜಾರಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿರುತ್ತಾನೆ.

ಈ ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ-ಪೊಲೀಸ್ ಆಯುಕ್ತರಾದ ಹನುಮಂತರಾಯ, ಲಕ್ಷ್ಮೀ ಗಣೇಶ್ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಗದೀಶ್ ಆರ್., ಕಾನೂನು ಸುವ್ಯವಸ್ಥೆಯ ಪೊಲೀಸ್ ಉಪ ನಿರೀಕ್ಷಕ ಪ್ರದೀಪ್ ಟಿ. ಆರ್., ಸುದೀಪ್ ಹಾಗೂ ಸಿಬ್ಬಂದಿಯಾದ ಸಂತೋಷ್, ಮದನ್, ವಿನೋದ್, ರಾಜೇಶ್, ನೂತನ್, ಸಂದೀಪ್, ಕಾರ್ತಿಕ್ ಮತ್ತು ಮೇಘರಾಜ್ ಭಾಗವಹಿಸಿದ್ದಾರೆ.

Reporter_Vishwanath Panjimogaru

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.