ETV Bharat / state

ಮೂಡುಬಿದಿರೆ ತಾಪಂ ಸದಸ್ಯನ ಅಪಹರಣ: ಪೊಲೀಸ್ ಠಾಣೆಯಲ್ಲಿ ದೂರು

ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ತಾಪಂ ಸದಸ್ಯ ಸುಕುಮಾರ್ ಸನಿಲ್ ನನ್ನನ್ನು ಯಾರೋ ಅಪಹರಣ ಮಾಡಿದ್ದಾರೆ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

author img

By

Published : Aug 3, 2020, 11:45 PM IST

ಮೂಡುಬಿದಿರೆ ತಾಪಂ ಸದಸ್ಯನ ಅಪಹರಣ
ಮೂಡುಬಿದಿರೆ ತಾಪಂ ಸದಸ್ಯನ ಅಪಹರಣ

ಮಂಗಳೂರು: ದ. ಕನ್ನಡ ಜಿಲ್ಲೆಯ ಮೂಡುಬಿದಿರೆಯ ತಾಪಂ ಸದಸ್ಯರೋರ್ವರು ತಮ್ಮನ್ನು ಅಪಹರಣ ಮಾಡಲಾಗಿದೆ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ತಾಪಂ ಸದಸ್ಯ ಸುಕುಮಾರ್ ಸನಿಲ್ ಅಪಹರಣಕ್ಕೊಳಗಾದವರು. ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸುಕುಮಾರ್ ಸನಿಲ್ ಸೋಮವಾರ ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ನಡೆಯಬೇಕಿದ್ದ ತಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅದನ್ನು ತಡೆಯಲು ನನ್ನನ್ನು ಅಪಹರಣಗೈದು ಉಡುಪಿಗೆ ತಂದು ಬಿಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು

ದೂರು ನೀಡುವ ಕೆಲವು ಗಂಟೆಗಳ ಮೊದಲು ಸುಕುಮಾರ್ ಸನಿಲ್ ಅವರು ಕಾಂಗ್ರೆಸ್ ಮುಖಂಡರೊಬ್ಬರಿಗೆ ಕರೆ ಮಾಡಿ ನನ್ನನ್ನು ಯಾರೋ ಅಪಹರಣ ಮಾಡಿ ಉಡುಪಿಗೆ ತಂದು ಬಿಟ್ಟಿದ್ದಾರೆ ಎಂದು ತುಳುವಿನಲ್ಲಿ ಸಂಭಾಷಣೆ ಮಾಡಿರುವ ಆಡಿಯೋ ವೈರಲ್ ಆಗಿದೆ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು: ದ. ಕನ್ನಡ ಜಿಲ್ಲೆಯ ಮೂಡುಬಿದಿರೆಯ ತಾಪಂ ಸದಸ್ಯರೋರ್ವರು ತಮ್ಮನ್ನು ಅಪಹರಣ ಮಾಡಲಾಗಿದೆ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ತಾಪಂ ಸದಸ್ಯ ಸುಕುಮಾರ್ ಸನಿಲ್ ಅಪಹರಣಕ್ಕೊಳಗಾದವರು. ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸುಕುಮಾರ್ ಸನಿಲ್ ಸೋಮವಾರ ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ನಡೆಯಬೇಕಿದ್ದ ತಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅದನ್ನು ತಡೆಯಲು ನನ್ನನ್ನು ಅಪಹರಣಗೈದು ಉಡುಪಿಗೆ ತಂದು ಬಿಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು

ದೂರು ನೀಡುವ ಕೆಲವು ಗಂಟೆಗಳ ಮೊದಲು ಸುಕುಮಾರ್ ಸನಿಲ್ ಅವರು ಕಾಂಗ್ರೆಸ್ ಮುಖಂಡರೊಬ್ಬರಿಗೆ ಕರೆ ಮಾಡಿ ನನ್ನನ್ನು ಯಾರೋ ಅಪಹರಣ ಮಾಡಿ ಉಡುಪಿಗೆ ತಂದು ಬಿಟ್ಟಿದ್ದಾರೆ ಎಂದು ತುಳುವಿನಲ್ಲಿ ಸಂಭಾಷಣೆ ಮಾಡಿರುವ ಆಡಿಯೋ ವೈರಲ್ ಆಗಿದೆ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.