ಮಂಗಳೂರು: ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಉಪರಾಜ್ಯಪಾಲರಾದ ಡಾ. ಕಿರಣ್ ಬೇಡಿ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.
ಸಾಯಂಕಾಲ 3:45ರ ಸುಮಾರಿಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, ಸಂಜೆ 6:45ಕ್ಕೆ ಕಲ್ಲಡ್ಕ ರಾಮ ವಿದ್ಯಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಇನ್ನು ಡಿ.16ರಂದು ಬೆಳಗ್ಗೆ 9:35ಕ್ಕೆ ವಿಮಾನದ ಮೂಲಕ ಚೆನ್ನೈಗೆ ತೆರಳಲಿದ್ದಾರೆ.