ETV Bharat / state

ಪುತ್ತೂರು ಬಸ್ ನಿಲ್ದಾಣಕ್ಕೆ 'ಕೋಟಿ ಚೆನ್ನಯ' ಹೆಸರಿಡುವ ಮೂಲಕ ಅವಳಿ ವೀರರ ನೆನಪಿಸುವ ಕಾರ್ಯ: ಶಾಸಕ ಮಠಂದೂರು

ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ ಚೆನ್ನಯ ಎಂದು ನಾಮಕರಣ ಮಾಡಿ ಅವಳಿ ವೀರರ ನೆನಪಿಸುವ ಕಾರ್ಯ ನಡೆದಿದೆ.

author img

By

Published : Mar 26, 2023, 9:37 PM IST

Puttur bus station
ಪುತ್ತೂರು ಬಸ್ಸು ನಿಲ್ದಾಣ

ಪುತ್ತೂರು (ದಕ್ಷಿನ ಕನ್ನಡ): ಜಿಲ್ಲೆಯ ಅವಳಿ ವೀರರಾದ ಕೋಟಿ-ಚೆನ್ನಯರ ಹೆಸರನ್ನು ಪುತ್ತೂರಿನ ಬಸ್ ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸ ಮಾಡಲಾಗಿದೆ. ಸರ್ಕಾರವು ಅವಳಿ ವೀರರ ನಾಮಕರಣ ಮಾಡಿ ಅವರಿಗೆ ಗೌರವವನ್ನು ನೀಡುವ ಕಾರ್ಯ ಮಾಡಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದದ ಪುತ್ತೂರು ಬಸ್ ನಿಲ್ದಾಣಕ್ಕೆ 'ಕೋಟಿ-ಚೆನ್ನಯ' ಬಸ್ ನಿಲ್ದಾಣ ನಾಮಕರಣ ಸಮಾರಂಭದಲ್ಲಿ ನಾಮಫಲಕವನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಸಂಜೀವ ಮಠಂದೂರು ಮಾತನಾಡಿದರು.

ಪುತ್ತೂರಲ್ಲಿ ಕಳೆದ 10 ವರ್ಷಗಳ ಹಿಂದೆ ನೂತನ ಬಸ್ ನಿಲ್ದಾಣವನ್ನು 33 ಕೋಟಿ ರೂ ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗಿತ್ತು. ನಂತರದ ದಿನಗಳಲ್ಲಿ ಆಧ್ಯಾತ್ಮಿಕ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ಬಸ್ ನಿಲ್ದಾಣಕ್ಕೆ ನಾಮಕರಣ ಮಾಡುವ ಬಗ್ಗೆ ನಗರಸಭೆಯಿಂದ ನಿರ್ಣಯ ಅಂಗೀಕರಿಸಲಾಗಿತ್ತು ಎಂದು ಸಂಜೀವ ಮಠಂದೂರು ಹೇಳಿದರು.

ಪುತ್ತೂರಿನ ಪಡುಮಲೆಯಲ್ಲಿ ಹುಟ್ಟಿದ ಕೋಟೆ ಚೆನ್ನಯ ಅವಳಿ ವೀರರು ಆಗಿನ ಅವಿಭಜಿತ ಪುತ್ತೂರಿನ ಎಣ್ಮೂರಿನಲ್ಲಿ ಮರಣ ಹೊಂದಿದ್ದರು. ಅವರ ಸಾಧನೆಯನ್ನು ಅರಿಯಲು ಹಾಗೂ ಅವರನ್ನು ನೆನಪಿಸಿಕೊಳ್ಳಲು ಈ ಬಸ್ ನಿಲ್ದಾಣದ ನಾಮಕರಣವು ಪೂರಕವಾಗಿದೆ. ಕೋಟ ಚೆನ್ನಯರು ಒಂದು ಜಾತಿಗೆ ಸೀಮಿತವಾಗಿರದೆ, ಹಿಂದೂ ಧರ್ಮದ ಎಲ್ಲರೂ ಇವರ ಆರಾಧಕರಾಗಿದ್ದಾರೆ. ಇವರ ಆದರ್ಶಗಳು ಸಮಾಜಕ್ಕೆ ಮಾದರಿ ಆಗಿವೆ. ಸರ್ಕಾರವು ಕೋಟಿ ಚೆನ್ನಯರ ಆರಾಧಕರ ಜೊತೆಗಿದೆ ಎಂಬುದಕ್ಕೆ ಕೋಟಿ ಚನ್ನಯ ನಾಮಕರಣ ಪೂರಕವಾಗಿದೆ ಎಂದು ತಿಳಿಸಿದರು.

ಅಲ್ಲದೆ ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ಕೋಟಿ ಚೆನ್ನಯ ಥೀಮ್ ಪಾರ್ಕ್ ನಿರ್ಮಾಣದ ಬಗ್ಗೆಯೂ ಯೋಜನೆ ರೂಪಿಸಲಾಗುವುದು. ಕೋಟಿ ಚೆನ್ನಯರ 264 ಗರಡಿಗಳಿಗೂ ಜಾಗ ಮಂಜೂರು ಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು ಅವರನ್ನು ಬಿಲ್ಲವ ಸಮಾಜದ ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಇನ್ನೂ ಈ ಕಾರ್ಯಕ್ರಮದ ವೇದಿಕೆಯಲ್ಲಿ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್, ಯುವವಾಹಿನಿ ಅಧ್ಯಕ್ಷ ಜಯಂತ ನಡುಬೈಲು, ಪುತ್ತೂರು ಉಪವಿಭಾಗದ ಸಹಾಯಕ ಕಮಿಷನರ್ ಗಿರೀಶ್ ನಂದನ್, ತಹಶೀಲ್ದಾರ್ ಶಿವಶಂಕರ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ ಶೆಣೈ, ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಪೌರಾಯುಕ್ತ ಮಧು ಎಸ್ ಮನೋಹರ್, ಗೆಜ್ಜೆಗಿರಿ ಕ್ಷೇತ್ರಾಡಳಿತದ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೆಎಸ್​ಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ಜಯಕರ ಶೆಟ್ಟಿ, ವಿಭಾಗೀಯ ಸಂಚಾರಿ ನಿಯಂತ್ರಣಾಧಿಕಾರಿ ಮುರಳೀಧರ ಆಚಾರ್ಯ ಉಪಸ್ಥಿತರಿದ್ದರು.

ಇದನ್ನೂ ಓದಿ :ವಿಮಾನಕ್ಕೆ ಡಿಕ್ಕಿಯಾದ ಹಕ್ಕಿ.. ಬಹರೇನ್​​ನಿಂದ ಮಂಗಳೂರು ತಲುಪಲು ಬೇಕಾಯಿತು 2 ದಿನ, ಪ್ರಯಾಣಿಕರು ಹೈರಾಣ

ಪುತ್ತೂರು (ದಕ್ಷಿನ ಕನ್ನಡ): ಜಿಲ್ಲೆಯ ಅವಳಿ ವೀರರಾದ ಕೋಟಿ-ಚೆನ್ನಯರ ಹೆಸರನ್ನು ಪುತ್ತೂರಿನ ಬಸ್ ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸ ಮಾಡಲಾಗಿದೆ. ಸರ್ಕಾರವು ಅವಳಿ ವೀರರ ನಾಮಕರಣ ಮಾಡಿ ಅವರಿಗೆ ಗೌರವವನ್ನು ನೀಡುವ ಕಾರ್ಯ ಮಾಡಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದದ ಪುತ್ತೂರು ಬಸ್ ನಿಲ್ದಾಣಕ್ಕೆ 'ಕೋಟಿ-ಚೆನ್ನಯ' ಬಸ್ ನಿಲ್ದಾಣ ನಾಮಕರಣ ಸಮಾರಂಭದಲ್ಲಿ ನಾಮಫಲಕವನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಸಂಜೀವ ಮಠಂದೂರು ಮಾತನಾಡಿದರು.

ಪುತ್ತೂರಲ್ಲಿ ಕಳೆದ 10 ವರ್ಷಗಳ ಹಿಂದೆ ನೂತನ ಬಸ್ ನಿಲ್ದಾಣವನ್ನು 33 ಕೋಟಿ ರೂ ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗಿತ್ತು. ನಂತರದ ದಿನಗಳಲ್ಲಿ ಆಧ್ಯಾತ್ಮಿಕ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ಬಸ್ ನಿಲ್ದಾಣಕ್ಕೆ ನಾಮಕರಣ ಮಾಡುವ ಬಗ್ಗೆ ನಗರಸಭೆಯಿಂದ ನಿರ್ಣಯ ಅಂಗೀಕರಿಸಲಾಗಿತ್ತು ಎಂದು ಸಂಜೀವ ಮಠಂದೂರು ಹೇಳಿದರು.

ಪುತ್ತೂರಿನ ಪಡುಮಲೆಯಲ್ಲಿ ಹುಟ್ಟಿದ ಕೋಟೆ ಚೆನ್ನಯ ಅವಳಿ ವೀರರು ಆಗಿನ ಅವಿಭಜಿತ ಪುತ್ತೂರಿನ ಎಣ್ಮೂರಿನಲ್ಲಿ ಮರಣ ಹೊಂದಿದ್ದರು. ಅವರ ಸಾಧನೆಯನ್ನು ಅರಿಯಲು ಹಾಗೂ ಅವರನ್ನು ನೆನಪಿಸಿಕೊಳ್ಳಲು ಈ ಬಸ್ ನಿಲ್ದಾಣದ ನಾಮಕರಣವು ಪೂರಕವಾಗಿದೆ. ಕೋಟ ಚೆನ್ನಯರು ಒಂದು ಜಾತಿಗೆ ಸೀಮಿತವಾಗಿರದೆ, ಹಿಂದೂ ಧರ್ಮದ ಎಲ್ಲರೂ ಇವರ ಆರಾಧಕರಾಗಿದ್ದಾರೆ. ಇವರ ಆದರ್ಶಗಳು ಸಮಾಜಕ್ಕೆ ಮಾದರಿ ಆಗಿವೆ. ಸರ್ಕಾರವು ಕೋಟಿ ಚೆನ್ನಯರ ಆರಾಧಕರ ಜೊತೆಗಿದೆ ಎಂಬುದಕ್ಕೆ ಕೋಟಿ ಚನ್ನಯ ನಾಮಕರಣ ಪೂರಕವಾಗಿದೆ ಎಂದು ತಿಳಿಸಿದರು.

ಅಲ್ಲದೆ ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ಕೋಟಿ ಚೆನ್ನಯ ಥೀಮ್ ಪಾರ್ಕ್ ನಿರ್ಮಾಣದ ಬಗ್ಗೆಯೂ ಯೋಜನೆ ರೂಪಿಸಲಾಗುವುದು. ಕೋಟಿ ಚೆನ್ನಯರ 264 ಗರಡಿಗಳಿಗೂ ಜಾಗ ಮಂಜೂರು ಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕ ಸಂಜೀವ ಮಠಂದೂರು ಅವರನ್ನು ಬಿಲ್ಲವ ಸಮಾಜದ ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಇನ್ನೂ ಈ ಕಾರ್ಯಕ್ರಮದ ವೇದಿಕೆಯಲ್ಲಿ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್, ಯುವವಾಹಿನಿ ಅಧ್ಯಕ್ಷ ಜಯಂತ ನಡುಬೈಲು, ಪುತ್ತೂರು ಉಪವಿಭಾಗದ ಸಹಾಯಕ ಕಮಿಷನರ್ ಗಿರೀಶ್ ನಂದನ್, ತಹಶೀಲ್ದಾರ್ ಶಿವಶಂಕರ, ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ ಶೆಣೈ, ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಪೌರಾಯುಕ್ತ ಮಧು ಎಸ್ ಮನೋಹರ್, ಗೆಜ್ಜೆಗಿರಿ ಕ್ಷೇತ್ರಾಡಳಿತದ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೆಎಸ್​ಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ಜಯಕರ ಶೆಟ್ಟಿ, ವಿಭಾಗೀಯ ಸಂಚಾರಿ ನಿಯಂತ್ರಣಾಧಿಕಾರಿ ಮುರಳೀಧರ ಆಚಾರ್ಯ ಉಪಸ್ಥಿತರಿದ್ದರು.

ಇದನ್ನೂ ಓದಿ :ವಿಮಾನಕ್ಕೆ ಡಿಕ್ಕಿಯಾದ ಹಕ್ಕಿ.. ಬಹರೇನ್​​ನಿಂದ ಮಂಗಳೂರು ತಲುಪಲು ಬೇಕಾಯಿತು 2 ದಿನ, ಪ್ರಯಾಣಿಕರು ಹೈರಾಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.