ETV Bharat / state

ಇತಿಹಾಸ ಪ್ರಸಿದ್ದ ಸುಬ್ರಹ್ಮಣ್ಯ ಕುಲ್ಕುಂದ ಜಾತ್ರೆ.. ಇದೀಗ ಸಾಂಕೇತಿಕ ಮಾತ್ರ!

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನಡೆಯುವ ಐತಿಹಾಸಿಕ ಪ್ರಸಿದ್ದ ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನಡೆಯಿತು.

ಇತಿಹಾಸ ಪ್ರಸಿದ್ದ ಸುಬ್ರಹ್ಮಣ್ಯ ಕುಲ್ಕುಂದ ಜಾತ್ರೆ
author img

By

Published : Nov 15, 2019, 11:12 PM IST

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನಡೆಯುವ ಐತಿಹಾಸಿಕ ಪ್ರಸಿದ್ದ ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನಡೆಯಿತು.

ಪುರಾತನ ಕಾಲದಿಂದಲೂ ಕುಕ್ಕೆ ಸುಬ್ರಹ್ಮಣ್ಯ ಜಾತ್ರೆಯ ಮೊದಲು ನಡೆಯುತ್ತಿದ್ದ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಜಾನುವಾರು ಜಾತ್ರೆ ಬಹಳ ಜನಪ್ರಿಯತೆ ಪಡೆದಿತ್ತು. ಆದರೆ, ಈ ಜಾನುವಾರು ಜಾತ್ರೆ ಇದೀಗ ಹೆಸರಿಗೆ ಮಾತ್ರ ಸಾಂಕೇತಿಕವಾಗಿ ನಡೆಸುವಂತಹ ಹಂತಕ್ಕೆ ಬಂದಿದೆ. ಸಾಂಪ್ರದಾಯಿಕ ಹಿನ್ನೆಲೆ ಮತ್ತು ಹಿರಿಯರು ಹೇಳುವ ಪ್ರಕಾರ ಕಾರ್ತಿಕ ಹುಣ್ಣಿಮೆಯ ದಿನ ಕುಲ್ಕುಂದ ಜಾನುವಾರು ಜಾತ್ರೆ ಆರಂಭಗೊಳ್ಳುತ್ತದೆ.

ಇತಿಹಾಸ ಪ್ರಸಿದ್ದ ಸುಬ್ರಹ್ಮಣ್ಯ ಕುಲ್ಕುಂದ ಜಾತ್ರೆ..
ಅದ್ದೂರಿಯಾಗಿ ನಡೆಯುತ್ತಿದ್ದ ಜಾನುವಾರು ಜಾತ್ರೆಯನ್ನು ಕುಲ್ಕುಂದ ಜಾತ್ರೆ ಎಂದೇ ಕರೆಯಲಾಗುತ್ತಿತ್ತು. ಸಾವಿರಾರು ಜಾನುವಾರುಗಳು ಈ ಜಾತ್ರೆಗೆ ಆಗಮಿಸುತ್ತಿದ್ದವು. ಸಕಲೇಶಪುರ ಸೇರಿ ಘಟ್ಟ ಪ್ರದೇಶದಿಂದ ಜಾನುವಾರುಗಳನ್ನು ಇಲ್ಲಿಗೆ ಮಾರಾಟಕ್ಕೆ ತರಲಾಗುತ್ತಿತ್ತು ಎನ್ನಲಾಗಿದೆ. ಕೇರಳ ಹಾಗೂ ಕರಾವಳಿ ಪ್ರದೇಶಗಳ ಕೃಷಿಕರು ಜಾನುವಾರುಗಳನ್ನು ಖರೀದಿ ಮಾಡುತ್ತಿದ್ದರು. ಆದರೆ, ಈಚೆಗೆ ಕಳೆದ ಕೆಲವು ವರ್ಷಗಳಿಂದ ಜಾನುವಾರುಗಳ ಸಂಖ್ಯೆ ಕಡಿಮೆಯಾಗಿದೆ. ಇದರಿಂದಾಗಿ ಈ ಜಾತ್ರೆ ಸಾಂಕೇತಿಕವಾಗಿ ಮಾಡಲಾಗುತ್ತಿದೆ.

ಕಾರ್ತಿಕ ಹುಣ್ಣಿಮೆಯ ದಿನವಾದ ಶ್ರೀಬಸವೇಶ್ವರ ದೇವಸ್ಥಾನಕ್ಕೆ ಕುಲ್ಕುಂದ ಪರಿಸರದ ಸುಮಾರು 10ಕ್ಕೂ ಅಧಿಕ ಗೋವುಗಳನ್ನು ಅಲಂಕಾರ ಮಾಡಿ ಕರೆತರಲಾಗಿತ್ತು. ನಂತರ ಬಸವೇಶ್ವರ ದೇವಳದ ಅರ್ಚಕರು ಗೋವುಗಳಿಗೆ ಗೋಪೂಜೆ ನೆರವೇರಿಸಿ, ಗೋಗ್ರಾಸ ನೀಡಿದರು. ಬಳಿಕ ಬಸವೇಶ್ವರ ದೇವಸ್ಥಾನದ ಗದ್ದೆಯಲ್ಲಿ ಜಾನುವಾರುಗಳನ್ನು ಕಟ್ಟುವ ಮೂಲಕ ಸಂಪ್ರದಾಯದಂತೆ ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆಯನ್ನು ಆಚರಿಸಲಾಯಿತು.

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನಡೆಯುವ ಐತಿಹಾಸಿಕ ಪ್ರಸಿದ್ದ ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನಡೆಯಿತು.

ಪುರಾತನ ಕಾಲದಿಂದಲೂ ಕುಕ್ಕೆ ಸುಬ್ರಹ್ಮಣ್ಯ ಜಾತ್ರೆಯ ಮೊದಲು ನಡೆಯುತ್ತಿದ್ದ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಜಾನುವಾರು ಜಾತ್ರೆ ಬಹಳ ಜನಪ್ರಿಯತೆ ಪಡೆದಿತ್ತು. ಆದರೆ, ಈ ಜಾನುವಾರು ಜಾತ್ರೆ ಇದೀಗ ಹೆಸರಿಗೆ ಮಾತ್ರ ಸಾಂಕೇತಿಕವಾಗಿ ನಡೆಸುವಂತಹ ಹಂತಕ್ಕೆ ಬಂದಿದೆ. ಸಾಂಪ್ರದಾಯಿಕ ಹಿನ್ನೆಲೆ ಮತ್ತು ಹಿರಿಯರು ಹೇಳುವ ಪ್ರಕಾರ ಕಾರ್ತಿಕ ಹುಣ್ಣಿಮೆಯ ದಿನ ಕುಲ್ಕುಂದ ಜಾನುವಾರು ಜಾತ್ರೆ ಆರಂಭಗೊಳ್ಳುತ್ತದೆ.

ಇತಿಹಾಸ ಪ್ರಸಿದ್ದ ಸುಬ್ರಹ್ಮಣ್ಯ ಕುಲ್ಕುಂದ ಜಾತ್ರೆ..
ಅದ್ದೂರಿಯಾಗಿ ನಡೆಯುತ್ತಿದ್ದ ಜಾನುವಾರು ಜಾತ್ರೆಯನ್ನು ಕುಲ್ಕುಂದ ಜಾತ್ರೆ ಎಂದೇ ಕರೆಯಲಾಗುತ್ತಿತ್ತು. ಸಾವಿರಾರು ಜಾನುವಾರುಗಳು ಈ ಜಾತ್ರೆಗೆ ಆಗಮಿಸುತ್ತಿದ್ದವು. ಸಕಲೇಶಪುರ ಸೇರಿ ಘಟ್ಟ ಪ್ರದೇಶದಿಂದ ಜಾನುವಾರುಗಳನ್ನು ಇಲ್ಲಿಗೆ ಮಾರಾಟಕ್ಕೆ ತರಲಾಗುತ್ತಿತ್ತು ಎನ್ನಲಾಗಿದೆ. ಕೇರಳ ಹಾಗೂ ಕರಾವಳಿ ಪ್ರದೇಶಗಳ ಕೃಷಿಕರು ಜಾನುವಾರುಗಳನ್ನು ಖರೀದಿ ಮಾಡುತ್ತಿದ್ದರು. ಆದರೆ, ಈಚೆಗೆ ಕಳೆದ ಕೆಲವು ವರ್ಷಗಳಿಂದ ಜಾನುವಾರುಗಳ ಸಂಖ್ಯೆ ಕಡಿಮೆಯಾಗಿದೆ. ಇದರಿಂದಾಗಿ ಈ ಜಾತ್ರೆ ಸಾಂಕೇತಿಕವಾಗಿ ಮಾಡಲಾಗುತ್ತಿದೆ.

ಕಾರ್ತಿಕ ಹುಣ್ಣಿಮೆಯ ದಿನವಾದ ಶ್ರೀಬಸವೇಶ್ವರ ದೇವಸ್ಥಾನಕ್ಕೆ ಕುಲ್ಕುಂದ ಪರಿಸರದ ಸುಮಾರು 10ಕ್ಕೂ ಅಧಿಕ ಗೋವುಗಳನ್ನು ಅಲಂಕಾರ ಮಾಡಿ ಕರೆತರಲಾಗಿತ್ತು. ನಂತರ ಬಸವೇಶ್ವರ ದೇವಳದ ಅರ್ಚಕರು ಗೋವುಗಳಿಗೆ ಗೋಪೂಜೆ ನೆರವೇರಿಸಿ, ಗೋಗ್ರಾಸ ನೀಡಿದರು. ಬಳಿಕ ಬಸವೇಶ್ವರ ದೇವಸ್ಥಾನದ ಗದ್ದೆಯಲ್ಲಿ ಜಾನುವಾರುಗಳನ್ನು ಕಟ್ಟುವ ಮೂಲಕ ಸಂಪ್ರದಾಯದಂತೆ ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆಯನ್ನು ಆಚರಿಸಲಾಯಿತು.

Intro:ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನಡೆಯುವ ಐತಿಹಾಸಿಕ ಪ್ರಸಿದ್ದ ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನಡೆಯಿತು.Body:ಪುರಾತನ ಕಾಲದಿಂದಲೂ ಕುಕ್ಕೆ ಸುಬ್ರಹ್ಮಣ್ಯ ಜಾತ್ರೆಯ ಮೊದಲು ನಡೆಯುತ್ತಿದ್ದ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಜಾನುವಾರು ಜಾತ್ರೆ ಬಹಳ ಜನಪ್ರಿಯತೆಯನ್ನು ಪಡೆದಿತ್ತು. ಆದರೆ ಈ ಜಾನುವಾರು ಜಾತ್ರೆ ಇದೀಗ ಹೆಸರಿಗೆ ಮಾತ್ರ ಸಾಂಕೇತಿಕವಾಗಿ ನಡೆಸುವಂತಹ ಹಂತಕ್ಕೆ ಬಂದಿದೆ. ಸಂಪ್ರದಾಯಿಕ ಹಿನ್ನೆಲೆಯ ಪ್ರಕಾರ ಮತ್ತು ಹಿರಿಯರು ಹೇಳುವ ಪ್ರಕಾರ ಕಾರ್ತಿಕ ಹುಣ್ಣಿಮೆಯ ದಿನ ಕುಲ್ಕುಂದ ಜಾನುವಾರು ಜಾತ್ರೆ ಆರಂಭಗೊಳ್ಳುತ್ತದೆ.

ಅದ್ದೂರಿಯಾಗಿ ನಡೆಯುತ್ತಿದ್ದ ಜಾನುವಾರು ಜಾತ್ರೆಯನ್ನು ಕುಲ್ಕುಂದ ಜಾತ್ರೆ ಎಂದೇ ಕರೆಯಲಾಗುತ್ತಿತ್ತು. ಸಾವಿರಾರು ಜಾನುವಾರುಗಳು ಈ ಜಾತ್ರೆಗೆ ಆಗಮಿಸುತ್ತಿತ್ತು. ಸಕಲೇಶಪುರ ಸೇರಿದಂತೆ ಘಟ್ಟ ಪ್ರದೇಶದಿಂದ ಜಾನುವಾರುಗಳನ್ನು ಇಲ್ಲಿಗೆ ಮಾರಾಟಕ್ಕೆ ತರಲಾಗುತ್ತಿತ್ತು. ಕೇರಳ ಹಾಗೂ ಕರಾವಳಿ ಪ್ರದೇಶಗಳ ಕೃಷಿಕರು ಜಾನುವಾರುಗಳನ್ನು ಖರೀದಿ ಮಾಡುತ್ತಿದ್ದರು. ಆದರೆ ಈಚೆಗೆ ಕಳೆದ ಕೆಲವು ವರ್ಷಗಳಿಂದ ಜಾನುವಾರುಗಳು ಸಂಖ್ಯೆ ಕಡಿಮೆಯಾಗಿದೆ. ಇದರಿಂದಾಗಿ ಈ ಜಾತ್ರೆ ಸಾಂಕೇತಿಕವಾಗಿ ಮಾಡಲಾಗುತ್ತಿದೆ.Conclusion:ಜಾತ್ರೆ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಐತಿಹಾಸಿಕ ಕುಲ್ಕುಂದದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನಡೆಯಿತು. ಕಾರ್ತಿಕ ಹುಣ್ಣಿಮೆಯ ದಿನವಾದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಕುಲ್ಕುಂದ ಪರಿಸರದ ಸುಮಾರು 10 ಕ್ಕೂ ಅಧಿಕ ಗೋವುಗಳನ್ನು ಅಲಂಕಾರ ಮಾಡಿ ಕರೆತರಲಾಗಿತ್ತು. ನಂತರ ಬಸವೇಶ್ವರ ದೇವಳದ ಅರ್ಚಕರು ಗೋವುಗಳಿಗೆ ಗೋಪೂಜೆ ನೆರವೇರಿಸಿ, ಗೋಗ್ರಾಸ ನೀಡಿದರು. ಬಳಿಕ ಬಸವೇಶ್ವರ ದೇವಸ್ಥಾನದ ಗದ್ದೆಯಲ್ಲಿ ಜಾನುವಾರುಗಳನ್ನು ಕಟ್ಟುವ ಮೂಲಕ ಸಂಪ್ರದಾಯದಂತೆ ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆಯನ್ನು ಆಚರಿಸಲಾಯಿತು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.