ETV Bharat / state

ಧರ್ಮಸ್ಥಳದಲ್ಲಿ ನ. 22ರಿಂದ ಲಕ್ಷದೀಪೋತ್ಸವ ಸಂಭ್ರಮ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನ. 22ರಿಂದ 27ರವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

author img

By

Published : Nov 20, 2019, 11:20 PM IST

ಧರ್ಮಸ್ಥಳ ಲಕ್ಷದೀಪೋತ್ಸವ

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನ. 22ರಿಂದ 27ರವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ವಸ್ತು ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಜಯ್ಯ ಹೆಗ್ಗಡೆಯವರು 80 ವರ್ಷಗಳ ಹಿಂದೆ ನಡೆಸಿಕೊಂಡು ಬಂದಂತೆ ಲಕ್ಷದೀಪೋತ್ಸವದ ಸಂದರ್ಭ ಲಲಿತಕಲಾ ಸಮ್ಮೇಳನ, ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ವರ್ಷ ಸರ್ವಧರ್ಮ ಸಮ್ಮೇಳನವನ್ನು ಹಿಂದಿನ‌ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಉದ್ಘಾಟಿಸಲಿದ್ದಾರೆ. ಅಲ್ಲದೆ ಅಂತಾರಾಷ್ಟ್ರೀಯ ಖ್ಯಾತಿಯ ವಿದ್ವಾಂಸ ಗೋಪಾಲದಾಸ್ ಗೌರ್ ಭಾಷಣ ಮಾಡಲಿದ್ದಾರೆ. ಅಲ್ಲದೆ ಇತರ ಧರ್ಮದ ವಿದ್ವಾಂಸರೂ ತಮ್ಮ ಅಭಿಪ್ರಾಯ ಮಂಡಿಸಲಿದ್ದಾರೆ ಎಂದು ತಿಳಿಸಿದರು.

ಐದನೇ ದಿನ‌ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈ ದಿವಸವೂ ಸಾಹಿತಿಗಳು ಬಂದು ಮಾತನಾಡಲಿದ್ದಾರೆ. ಅದರ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಎಲ್ಲರೂ ಮುಕ್ತ ಅವಕಾಶದಿಂದ ಈ ಕಾರ್ಯಕ್ರಮ ಗಳಲ್ಲಿ ಭಾಗವಹಿಸಬಹುದು ಎಂದು ಹೆಗ್ಗಡೆಯವರು ಹೇಳಿದರು.

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನ. 22ರಿಂದ 27ರವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ವಸ್ತು ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಜಯ್ಯ ಹೆಗ್ಗಡೆಯವರು 80 ವರ್ಷಗಳ ಹಿಂದೆ ನಡೆಸಿಕೊಂಡು ಬಂದಂತೆ ಲಕ್ಷದೀಪೋತ್ಸವದ ಸಂದರ್ಭ ಲಲಿತಕಲಾ ಸಮ್ಮೇಳನ, ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ವರ್ಷ ಸರ್ವಧರ್ಮ ಸಮ್ಮೇಳನವನ್ನು ಹಿಂದಿನ‌ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಉದ್ಘಾಟಿಸಲಿದ್ದಾರೆ. ಅಲ್ಲದೆ ಅಂತಾರಾಷ್ಟ್ರೀಯ ಖ್ಯಾತಿಯ ವಿದ್ವಾಂಸ ಗೋಪಾಲದಾಸ್ ಗೌರ್ ಭಾಷಣ ಮಾಡಲಿದ್ದಾರೆ. ಅಲ್ಲದೆ ಇತರ ಧರ್ಮದ ವಿದ್ವಾಂಸರೂ ತಮ್ಮ ಅಭಿಪ್ರಾಯ ಮಂಡಿಸಲಿದ್ದಾರೆ ಎಂದು ತಿಳಿಸಿದರು.

ಐದನೇ ದಿನ‌ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈ ದಿವಸವೂ ಸಾಹಿತಿಗಳು ಬಂದು ಮಾತನಾಡಲಿದ್ದಾರೆ. ಅದರ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಎಲ್ಲರೂ ಮುಕ್ತ ಅವಕಾಶದಿಂದ ಈ ಕಾರ್ಯಕ್ರಮ ಗಳಲ್ಲಿ ಭಾಗವಹಿಸಬಹುದು ಎಂದು ಹೆಗ್ಗಡೆಯವರು ಹೇಳಿದರು.

Intro:ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕವಾಗಿ ವಿಶೇಷ ಪೂಜೆಗಳು, ಉತ್ಸವಗಳು ಶ್ರೀ ಮಂಜುನಾಥ ಸ್ವಾಮಿಗೆ ಸಲ್ಲುತ್ತಿದ್ದು, ಅದರಲ್ಲಿ ಲಕ್ಷದೀಪೋತ್ಸವದ ಮೇಲೆ ಶ್ರೀದೇವರಿಗೆ ವಿಶೇಷ ಪ್ರೀತಿ. ಈ ಸಂದರ್ಭ ಐದು ದಿನಗಳ ಕಾಲ ಮಂಜುನಾಥ ಸ್ವಾಮಿ ದೇವಳದಿಂದ ಹೊರ ಬಂದು ರಾಜಬೀದಿಯಲ್ಲಿ ಮೆರವಣಿಗೆ ಬಂದು ಕಟ್ಟೆ ಪೂಜೆಗಳು ನಡೆದು ಭಕ್ತರಿಗೆ ದರ್ಶನ ನೀಡುತ್ತಾನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಅ.22ರಿಂದ 27ರ ತನಕ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ವ್ಯಾಪಾರ ದಿಂದ ಹಿಡಿದು ವಸ್ತು ಪ್ರದರ್ಶನಗಳವರೆಗೆ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ.


Body:ಮಂಜಯ್ಯ ಹೆಗ್ಗಡೆಯವರು 80 ವರ್ಷಗಳ ಹಿಂದೆಯೇ ನಡೆಸಿಕೊಂಡು ಬಂದಂತೆ ಲಕ್ಷದೀಪೋತ್ಸವದ ಸಂದರ್ಭ ಲಲಿತಕಲಾ ಸಮ್ಮೇಳನ, ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸಲಾಗುತ್ತಿದೆ. ಈ ವರ್ಷ ಸರ್ವಧರ್ಮ ಸಮ್ಮೇಳನವನ್ನು ಹಿಂದಿನ‌ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಉದ್ಘಾಟಿಸಲಿದ್ದಾರೆ. ಅಲ್ಲದೆ ಅಂತಾರಾಷ್ಟ್ರೀಯ ಖ್ಯಾತಿಯ ವಿದ್ವಾಂಸ ಗೋಪಾಲದಾಸ್ ಗೌರ್ ಭಾಷಣ ಮಾಡಲಿದ್ದಾರೆ. ಅಲ್ಲದೆ ಇತರ ಧರ್ಮದ ವಿದ್ವಾಂಸರೂ ತಮ್ಮ ಅಭಿಪ್ರಾಯ ಮಂಡಿಸಲಿದ್ದಾರೆ ಎಂದು ಹೇಳಿದರು.

ಐದನೇ ದಿನ‌ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈ ದಿವಸವೂ ಸಾಹಿತಿಗಳು ಬಂದು ಮಾತನಾಡಲಿದ್ದಾರೆ. ಅದರ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಎಲ್ಲರೂ ಮುಕ್ತ ಅವಕಾಶದಿಂದ ಈ ಕಾರ್ಯಕ್ರಮ ಗಳಲ್ಲಿ ಭಾಗವಹಿಸಬಹುದು ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.

Reporter_Vishwanath Panjimogaru


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.