ETV Bharat / state

ಕರ್ನಾಟಕ ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ; ದೂರುಗಳ ಸುರಿಮಳೆ

author img

By

Published : Oct 25, 2019, 8:38 PM IST

ಮಂಗಳೂರಿನ ಕಡಬ ತಾಲೂಕು ಪಂಚಾಯತ್ ಕಚೇರಿಯಲ್ಲಿ ಮಂಗಳೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ ನಡೆಯಿತು. ಈ ವೇಳೆ ಸುಮಾರು 15 ದೂರುಗಳು ಸಲ್ಲಿಕೆ ಆಗಿದೆ.

ಕಡಬದಲ್ಲಿ ಅಹವಾಲು ಸ್ವೀಕಾರ

ಮಂಗಳೂರು: ಕಡಬ ತಾಲೂಕು ಪಂಚಾಯತ್ ಕಛೇರಿಯಲ್ಲಿ ಶುಕ್ರವಾರ ನಡೆದ ಮಂಗಳೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ ನಡೆಯಿತು. ಈ ವೇಳೆ ಸುಮಾರು 15 ದೂರುಗಳು ಸಲ್ಲಿಕೆ ಆಗಿದೆ.

ಕಂದಾಯ, ತಾಲೂಕು, ಸರ್ವೆ, ಮೆಸ್ಕಾಂ, ಅರಣ್ಯ ಇಲಾಖೆ, ಪಂಚಾಯಿತಿ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ವಿರುದ್ದ ಹಲವಾರು ದೂರುಗಳನ್ನು ಸಾರ್ವಜನಿಕರು ಲೋಕಾಯುಕ್ತರಿಗೆ ನೀಡಿದ್ದಾರೆ. ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್ ಮತ್ತು ಲೋಕಾಯುಕ್ತ ಸಿಬ್ಬಂದಿಗಳು ದೂರುಗಳನ್ನು ಸ್ವೀಕರಿಸಿದರು.

ಕಡಬದಲ್ಲಿ ಅಹವಾಲು ಸ್ವೀಕಾರ

ಇನ್ನು ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮಂಗಳೂರು ವಿಭಾಗದ ಲೋಕಾಯುಕ್ತ ಡಿವೈಎಸ್ಪಿ ವಿಜಯ್ ಪ್ರಸಾದ್, ಕಡಬ ತಾಲೂಕಿಗೆ ಸಂಬಂಧಪಟ್ಟಂತೆ ಹಲವಾರು ದೂರುಗಳು ಸಲ್ಲಿಕೆಯಾಗುತ್ತಿದ್ದು ಪ್ರತಿ ತಿಂಗಳೂ ಸಾರ್ವಜನಿಕರು ದೂರು ನೀಡಲು ಅವಕಾಶ ಕಲ್ಪಿಸಲಾಗುವುದು. ಸ್ಥಳದಲ್ಲೇ ಇತ್ಯರ್ಥಪಡಿಸುವ ದೂರುಗಳನ್ನು ಇತ್ಯರ್ಥಪಡಿಸುವಂತೆಯೂ, ಕೆಲವು ದೂರುಗಳ ಬಗ್ಗೆ ಅಧಿಕಾರಿಗಳಿಗೆ ವರದಿ ನೀಡುವಂತೆಯೂ ತಿಳಿಸಲಾಗಿದೆ. ಮತ್ತೆ ಕೆಲವು ದೂರುಗಳನ್ನು ‌ನಮ್ಮ ಲೋಕಾಯುಕ್ತ ಇಲಾಖಾ ನಿಯಮಗಳ ಪ್ರಕಾರ ಸ್ವೀಕಾರ ಮಾಡಲಾಗಿದ್ದು, ತನಿಖೆ ನಡೆಸಿ ಪರಿಹಾರವನ್ನು ಕಲ್ಪಿಸಲಾಗುವುದು ಎಂದಿದ್ದಾರೆ.

ಮಂಗಳೂರು: ಕಡಬ ತಾಲೂಕು ಪಂಚಾಯತ್ ಕಛೇರಿಯಲ್ಲಿ ಶುಕ್ರವಾರ ನಡೆದ ಮಂಗಳೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ ನಡೆಯಿತು. ಈ ವೇಳೆ ಸುಮಾರು 15 ದೂರುಗಳು ಸಲ್ಲಿಕೆ ಆಗಿದೆ.

ಕಂದಾಯ, ತಾಲೂಕು, ಸರ್ವೆ, ಮೆಸ್ಕಾಂ, ಅರಣ್ಯ ಇಲಾಖೆ, ಪಂಚಾಯಿತಿ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ವಿರುದ್ದ ಹಲವಾರು ದೂರುಗಳನ್ನು ಸಾರ್ವಜನಿಕರು ಲೋಕಾಯುಕ್ತರಿಗೆ ನೀಡಿದ್ದಾರೆ. ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್ ಮತ್ತು ಲೋಕಾಯುಕ್ತ ಸಿಬ್ಬಂದಿಗಳು ದೂರುಗಳನ್ನು ಸ್ವೀಕರಿಸಿದರು.

ಕಡಬದಲ್ಲಿ ಅಹವಾಲು ಸ್ವೀಕಾರ

ಇನ್ನು ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮಂಗಳೂರು ವಿಭಾಗದ ಲೋಕಾಯುಕ್ತ ಡಿವೈಎಸ್ಪಿ ವಿಜಯ್ ಪ್ರಸಾದ್, ಕಡಬ ತಾಲೂಕಿಗೆ ಸಂಬಂಧಪಟ್ಟಂತೆ ಹಲವಾರು ದೂರುಗಳು ಸಲ್ಲಿಕೆಯಾಗುತ್ತಿದ್ದು ಪ್ರತಿ ತಿಂಗಳೂ ಸಾರ್ವಜನಿಕರು ದೂರು ನೀಡಲು ಅವಕಾಶ ಕಲ್ಪಿಸಲಾಗುವುದು. ಸ್ಥಳದಲ್ಲೇ ಇತ್ಯರ್ಥಪಡಿಸುವ ದೂರುಗಳನ್ನು ಇತ್ಯರ್ಥಪಡಿಸುವಂತೆಯೂ, ಕೆಲವು ದೂರುಗಳ ಬಗ್ಗೆ ಅಧಿಕಾರಿಗಳಿಗೆ ವರದಿ ನೀಡುವಂತೆಯೂ ತಿಳಿಸಲಾಗಿದೆ. ಮತ್ತೆ ಕೆಲವು ದೂರುಗಳನ್ನು ‌ನಮ್ಮ ಲೋಕಾಯುಕ್ತ ಇಲಾಖಾ ನಿಯಮಗಳ ಪ್ರಕಾರ ಸ್ವೀಕಾರ ಮಾಡಲಾಗಿದ್ದು, ತನಿಖೆ ನಡೆಸಿ ಪರಿಹಾರವನ್ನು ಕಲ್ಪಿಸಲಾಗುವುದು ಎಂದಿದ್ದಾರೆ.

Intro:ಕಡಬ

ಕಡಬ ತಾಲೂಕಿನ ಪಂಚಾಯತ್ ಕಛೇರಿಯಲ್ಲಿ ಶುಕ್ರವಾರ ನಡೆದ ಮಂಗಳೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 15 ದೂರುಗಳ ಸಲ್ಲಿಕೆ ಆಗಿದೆ.

ಕಂದಾಯ, ತಾಲೂಕು,ಸರ್ವೆ, ಮೆಸ್ಕಾಂ,ಅರಣ್ಯ ಇಲಾಖೆ, ಪಂಚಾಯಿತಿ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ವಿರುದ್ದ ಹಲವಾರು ದೂರುಗಳು ಸಾರ್ವಜನಿಕರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.
ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್ಪಿ ವಿಜಯ ಪ್ರಸಾದ್ ಮತ್ತು ಲೋಕಾಯುಕ್ತ ಸಿಬ್ಬಂದಿಗಳು ದೂರುಗಳನ್ನು ಸ್ವೀಕರಿಸಿದರು.

ಕೆಲವು ದೂರುಗಳನ್ನು ಕಾನೂನುಕ್ರಮಕ್ಕೆ ನೀಡಲಾಗಿದ್ದು, ಕೆಲವು ದೂರುಗಳ ಬಗ್ಗೆ ಲೋಕಾಯುಕ್ತಕ್ಕೆ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಾಧ್ಯಮದೊಂದಿಗೆ ಮಾತನಾಡಿದ ಮಂಗಳೂರು ವಿಭಾಗದ ಲೋಕಾಯುಕ್ತ ಡಿವೈಎಸ್ಪಿ ವಿಜಯ್ ಪ್ರಸಾದ್ ರವರು ಕಡಬ ತಾಲೂಕಿಗೆ ಸಂಬಂಧಪಟ್ಟಂತೆ ಹಲವಾರು ದೂರುಗಳು ಸಲ್ಲಿಕೆಯಾಗುತ್ತಿದ್ದು ಪ್ರತೀ ತಿಂಗಳೂ ಸಾರ್ವಜನಿಕರು ದೂರು ನೀಡಲು ಅವಕಾಶ ಕಲ್ಪಿಸಲಾಗುವುದು ಎಂದರಲ್ಲದೇ, ಸ್ಥಳದಲ್ಲೇ ಇತ್ಯರ್ಥಪಡಿಸುವ ದೂರುಗಳನ್ನು ಇತ್ಯರ್ಥಪಡಿಸುವಂತೆಯೂ, ಕೆಲವು ದೂರುಗಳ ಬಗ್ಗೆ ಅಧಿಕಾರಿಗಳಿಗೆ ವರದಿ ನೀಡುವಂತೆಯೂ ತಿಳಿಸಲಾಗಿದೆ. ಮತ್ತೆ ಕೆಲವು ದೂರುಗಳನ್ನು ‌ನಮ್ಮ ಲೋಕಾಯುಕ್ತ ಇಲಾಖಾ ನಿಯಮಗಳ ಪ್ರಕಾರ ಸ್ವೀಕಾರ ಮಾಡಲಾಗಿದ್ದು, ತನಿಖೆ ನಡೆಸಿ ಪರಿಹಾರವನ್ನು ಕಲ್ಪಿಸಲಾಗುವುದು ಎಂದಿದ್ದಾರೆ.
ಈ ಸಮಯದಲ್ಲಿ ಕಡಬ ತಾಲೂಕಿಗೆ ಸಂಬಂಧಿಸಿದ ವಿವಿಧ ಇಲಾಖಾಧಿಕಾರಿಗಳು,ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.Body:ಬೈಟ್:- ವಿಜಯಪ್ರಸಾದ್, ಲೋಕಾಯುಕ್ತ ಡಿವೈಎಸ್ಪಿ ಲೋಕಾಯುಕ್ತ ಮಂಗಳೂರು.Conclusion:ಪ್ರಕಾಶ್ ಕಡಬ, ಸುಳ್ಯ/ಮಂಗಳೂರು
ETV Bharat Logo

Copyright © 2024 Ushodaya Enterprises Pvt. Ltd., All Rights Reserved.