ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಡೆ ಭೇಟಿ ನೀಡಿದರು. ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಿದ ಅವರು, ಮೊದಲಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಶೇಖರ ನಾರಾವಿ, ಬಿ. ಐತ್ತಪ್ಪ ನಾಯ್ಕ್, ಬಿ.ಕೆ. ವೀಣಾ, ರಾಮ್ದಾಸ್ ಗೌಡ, ದೇವಾಲಯದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಕಚೇರಿ ಸಹಾಯಕ ಪದ್ಮನಾಭ,ಶ್ರೀಕ್ಷೇತ್ರ ಧರ್ಮಸ್ಥಳದ ಜಯರಾಮ ನೆಲ್ಲಿತ್ತಾಯ, ಪದ್ಮನಾಭ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಇದನ್ನೂ ಓದಿ: ನಾಡಗೀತೆಗೆ ಹೊಸರಾಗದ ಜತೆಗೆ ಹೊಸ ದೃಶ್ಯರೂಪ ನೀಡಿದ ಮಹೇಂದ್ರ ಮುಣೋತ್