ಮಂಗಳೂರು: ಸಿಸಿಬಿ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ರಾಜೇಂದ್ರ ನಾಯಕ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಶಿವಪ್ರಕಾಶ್ ರಾಜೇಂದ್ರ ನಾಯಕ್ ಅವರಿಂದ ತೆರವಾದ ಸ್ಥಾನಕ್ಕೆ ಉಡುಪಿ ಜಿಲ್ಲೆಯ ಕಾಪು ವೃತ್ತದ ಇನ್ಸ್ಪೆಕ್ಟರ್ ಆಗಿದ್ದ ಮಹೇಶ್ ಪ್ರಸಾದ್ ಅವರನ್ನು ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಆಗಿ ವರ್ಗಾಯಿಸಲಾಗಿದೆ.
ಮಹೇಶ್ ಪ್ರಸಾದ್ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿರುವ ಈ ಸಂದರ್ಭದಲ್ಲಿ ವರ್ಗಾವಣೆ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.