ಬಂಟ್ವಾಳ/ದಕ್ಷಿಣ ಕನ್ನಡ: ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅನಾರೋಗ್ಯದಿಂದ ಸ್ಥಳೀಯ ನಿವಾಸಿ ಮೋಹನ ಭಂಡಾರಿ (40) ಎಂಬವರು ಗುರುವಾರ ಮೃತಪಟ್ಟಿದ್ದಾರೆ.
ಕೂಲಿ ಕಾರ್ಮಿಕರಾಗಿದ್ದ ಅವರು ಅವಿವಾಹಿತರು. ಹಿಂದೆಯೇ ಅನಾರೋಗ್ಯದಿಂದ ಬಳಲುತ್ತಿದ್ದು, ಮದ್ಯ ವ್ಯಸನಿಯಾಗಿದ್ದರು. ಲಾಕ್ಡೌನ್ ಹಿನ್ನೆಲೆ ಮದ್ಯವೂ ದೊರಕದೇ, ಇತ್ತ ಸರಿಯಾಗಿ ಔಷಧವನ್ನೂ ಸೇವಿಸದೇ ನಿತ್ರಾಣಗೊಂಡಿದ್ದ ಎಂದು ಮನೆಮಂದಿ ತಿಳಿಸಿದ್ದಾರೆ. ಗುರುವಾರ ನಿತ್ರಾಣಗೊಂಡಿದ್ದ ಅವರನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.