ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ದೇವರ ಪಲ್ಲಕ್ಕಿ ಹೊತ್ತು ಕುಣಿತಯುತ್ತಾ ಮೆರವಣಿಗೆಯಲ್ಲಿ ಸಾಗುವ ವಿಡಿಯೋವೊಂದು ವೈರಲ್ ಆಗುತ್ತಿದೆ.
ಈ ವಿಡಿಯೋಗೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವರ್ಷಂಪ್ರತಿ ನಡೆಯುವಂತೆ ಕದ್ರಿ ಶ್ರೀಕೃಷ್ಣಾಷ್ಟಮಿ, ಕದ್ರಿ ಮೊಸರು ಕುಡಿಕೆ ಉತ್ಸವ ನಿನ್ನೆ ನಡೆದಿದೆ. ಈ ಹಿನ್ನೆಲೆ ಅಲ್ಲಿಗೆ ಭೇಟಿ ನೀಡಿರುವ ಶಾಸಕ ವೇದವ್ಯಾಸ ಕಾಮತ್ ಅವರು, ಶ್ರೀಕೃಷ್ಣ ದೇವರ ಉತ್ಸವ ಸಾಗುವ ಸಂದರ್ಭದಲ್ಲಿ ಪಲ್ಲಕ್ಕಿಗೆ ಹೆಗಲು ಕೊಟ್ಟು, ಹೆಜ್ಜೆ ಹಾಕುತ್ತಾ ಮೆರವಣಿಗೆ ಮಾಡಿದ್ದಾರೆ.
ಈ ದೃಶ್ಯವನ್ನು ಯಾರೋ ಸೆರೆ ಹಿಡಿದಿದ್ದು, ಇದೀಗ ಈ ವಿಡಿಯೋ ಫೇಸ್ಬುಕ್, ವ್ಯಾಟ್ಸ್ಆ್ಯಪ್, ಇನ್ಸ್ಟಾಗ್ರಾಂನಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಇದಕ್ಕೆ ಉತ್ತಮ ಕಮೆಂಟ್ಗಳೂ ವ್ಯಕ್ತವಾಗುತ್ತಿವೆ.