ETV Bharat / state

ಸೈಕಲ್​ನಲ್ಲಿ ಕೇರಳದಿಂದ ಈಜಿಪ್ಟ್​ಗೆ ಮಂಗಳೂರು ಯುವಕನ ಪ್ರಯಾಣ - ಲೌಕಿಕ ಶಿಕ್ಷಣ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆಯ ಹಾಫಿಲ್ ಅಹ್ಮದ್ ಸಾಬಿತ್ (21) ಅವರು ಅಕ್ಟೋಬರ್ 20 ರಂದು ಕೇರಳದಿಂದ ಈಜಿಪ್ಟ್​ಗೆ ಸೈಕಲ್ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ.

mangalore youth journey from kerala to egypt
ಕೇರಳದಿಂದ ಈಜಿಪ್ಟ್​ಗೆ ಮಂಗಳೂರು ಯುವಕನ ಪ್ರಯಾಣ
author img

By

Published : Oct 17, 2022, 12:26 PM IST

Updated : Oct 17, 2022, 7:08 PM IST

ಮಂಗಳೂರು: ದೇಶ ವಿದೇಶ ಸುತ್ತುವುದೆಂದರೆ ಕೆಲವರಿಗೆ ಫ್ಯಾಶನ್. ವಿಮಾನ, ರೈಲು, ವಾಹನಗಳ ಮೂಲಕ ಟೂರ್ ಮಾಡಿ ಬರುವ ಸಾಕಷ್ಟು ಜನ ಇದ್ದಾರೆ. ಆದರೆ, ಇಲ್ಲೊಬ್ಬ ಯುವಕ ಸೈಕಲ್​ನಲ್ಲಿ ಕೇರಳದಿಂದ ಈಜಿಪ್ಟ್​ಗೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆಯ ಹಾಫಿಲ್ ಅಹ್ಮದ್ ಸಾಬಿತ್ ಈ ಸಾಧನೆ ಮಾಡಲು ಹೊರಟವರು. 21 ವರ್ಷದ ಇವರು ಅಕ್ಟೋಬರ್ 20 ರಂದು ಕೇರಳದಿಂದ ಈಜಿಪ್ಟ್​ಗೆ ಸೈಕಲ್ ಪ್ರಯಾಣ ಆರಂಭಿಸಲಿದ್ದಾರೆ. ಕೇರಳದಿಂದ ಆರಂಭವಾಗುವ ಇವರ ಸೈಕಲ್ ಯಾತ್ರೆ ಕರ್ನಾಟಕ, ಗೋವಾ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣ, ಪಂಜಾಬ್, ಜಮ್ಮು ಕಾಶ್ಮೀರ, ಲಡಾಖ್ ಹೋಗಿ ಅಲ್ಲಿಂದ ಪಾಕಿಸ್ತಾನ, ಇರಾನ್, ಇರಾಕ್, ಕುವೈತ್​, ಸೌದಿ ಅರೇಬಿಯಾ, ಯುಎಇ, ಒಮಾನ್, ಜೋರ್ಡನ್, ಇಸ್ರೆಲ್ ಆಗಿ ಈಜಿಪ್ಟ್ ದೇಶದಲ್ಲಿ ಕೊನೆಯಾಗಲಿದೆ. ಕೇರಳದ ತಿರುವನಂತಪುರಂನಿಂದ ಆರಂಭವಾಗುವ ಈ ಸೈಕಲ್ ಯಾತ್ರೆ ಎರಡು ಖಂಡಗಳು, ಹತ್ತು ದೇಶಗಳ ಮೂಲಕ ಸುಮಾರು 15 ಸಾವಿರ ಕಿಲೋಮೀಟರ್ ಸಾಗಲಿದೆ.

mangalore youth journey from kerala to egypt
ಮಂಗಳೂರು ಯುವಕನ ಪ್ರಯಾಣ (Graphics​)

ಹಾಫಿಲ್ ಅಹ್ಮದ್ ಸಾಬಿತ್ ಅವರು ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣ ಪಡೆಯುುತ್ತಿದ್ದಾರೆ. ಮೂರನೇ ತರಗತಿಯವರೆಗೆ ಬೈರಿಕಟ್ಟೆಚ ಮವೂನತ್ ಇಸ್ಲಾಂ ಮದ್ರಸದಲ್ಲಿ ಕಲಿತ ಇವರು, ತಮ್ಮ 9 ನೇ ವಯಸ್ಸಿನಲ್ಲಿ ಮಂಜೇಶ್ವರದ ದಾರುಲ್ ಕುರ್ ಅನ್ ಹಿಪ್ಲ್ ಕಾಲೇಜಿನಲ್ಲಿ ಕುರ್ ಅನ್ ಕಂಠಪಾಠ ಆರಂಭಿಸಿದರು. ಅದನ್ನು ಪೂರ್ತಿಗೊಳಿಸಿ ಹಾಫಿಲ್ ಆಗಿ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ: ಪರಿಸರ ಜಾಗೃತಿಗಾಗಿ ಕೇರಳದಿಂದ ಸಿಂಗಪುರಕ್ಕೆ ಉಡುಪಿಯ ಹರ್ಷೇಂದ್ರ ಸೈಕಲ್ ಯಾತ್ರೆ

ಮೂರುವರೆ ವರ್ಷದ ಶಿಕ್ಷಣದ ಬಳಿಕ ಕಾಸರಗೋಡು ಕುಂಬಳೆ ಇಮಾಂ ಶಾಫಿ ಅಕಾಡೆಮಿಯಲ್ಲಿವ ಹಿಫ್ಲ್ ದಲ್ಲಿ, ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣ ಮುಂದುವರಿಸಿದ್ದಾರೆ. ಇವರು ಇಂಗ್ಲಿಷ್​ನಲ್ಲಿ ಬಿಎ ಪದವಿ ಶಿಕ್ಷಣ, ಉರ್ದು ಹಾಗೂ ಇಕ್ನೋ ವಿಶ್ವವಿದ್ಯಾಲಯದಿಂದ ಮನಶಾಸ್ತ್ರ ವಿಷಯದಲ್ಲಿ ಡಿಪ್ಲೋಮಾ ಕೋರ್ಸ್ ಅಧ್ಯಯನ ಮಾಡಿದ್ದಾರೆ. ಒಂದು ವರ್ಷಗಳ ಕಾಲ ಅಡ್ಯಾರ್ ಕಣ್ಣೂರಿನಲ್ಲಿ ದರ್ಸ್ ಶಿಕ್ಷಣ ಪಡೆದಿದ್ದಾರೆ‌. ಜೊತೆಗೆ sabi inspires ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ಮೂಲಕ ಸ್ಪೂರ್ತಿದಾಯಕ ಸಂದೇಶಗಳ ವಿಡಿಯೋ ಮಾಡಿ ಗಮನ ಸೆಳೆಯುತ್ತಿದ್ದಾರೆ.

ಸೈಕಲ್​ನಲ್ಲಿ ಕೇರಳದಿಂದ ಈಜಿಪ್ಟ್​ಗೆ ಮಂಗಳೂರು ಯುವಕನ ಪ್ರಯಾಣ

ಈಜಿಪ್ಟ್​ಗೆ ಸೈಕಲ್ ಯಾತ್ರೆ ಮಾಡುತ್ತಿರುವುದು ಉನ್ನತ ಧಾರ್ಮಿಕ ಶಿಕ್ಷಣ ಕಲಿಯುವ ಉದ್ದೇಶದಿಂದ. ಇವರಿಗೆ ಈಜಿಪ್ಟ್​ನ ಅಲ್ ಅಝ್ಹರ್ ಯುನಿವರ್ಸಿಟಿಯಲ್ಲಿ ಉನ್ನತ ಧಾರ್ಮಿಕ ಶಿಕ್ಷಣಕ್ಕಾಗಿ ಅವಕಾಶ ಸಿಕ್ಕಿದ್ದು, ಮುಂದಿನ ವರ್ಷ ಅಲ್ಲಿ ಹಾಜರಾಗಬೇಕಿದೆ. ಅದಕ್ಕಾಗಿ ಅವರು ಈಜಿಪ್ಟ್​ಗೆ ಸೈಕಲ್​ನಲ್ಲಿ ತೆರಳಲು ನಿರ್ಧರಿಸಿದ್ದಾರೆ. ಈ ಹಿಂದೆ ಸೈಕಲ್​ನಲ್ಲಿ ಕೇರಳ ರಾಜ್ಯ ಸುತ್ತಿದ ಅನುಭವ ಹೊಂದಿರುವ ಇವರು, ಈಜಿಪ್ಟ್​ಗೆ ಸೈಕಲ್​ನಲ್ಲಿ ತೆರಳಲು ನಿರ್ಧರಿಸಿದ್ದಾರೆ. ಈಜಿಪ್ಟ್ ತೆರಳುವ ಮುನ್ನ ಮಕ್ಕಾ, ಮದೀನ ತೆರಳಲಿದ್ದಾರೆ.

ಇದನ್ನೂ ಓದಿ: ಶಾಂತಿ, ಸೌಹಾರ್ದತೆ ಸಂದೇಶ ಸಾರಲು ಸೈಕಲ್ ಯಾತ್ರೆ: 35 ದೇಶ ಸುತ್ತಲು ಹೊರಟ ಕೇರಳದ ಟೆಕ್ಕಿ

ಈ ಬಗ್ಗೆ ಮಾತನಾಡಿರುವ ಹಾಫಿಲ್ ಅಹ್ಮದ್ ಸಾಬೀತ್, ಕಳೆದ ವರ್ಷ ಕೇರಳ ರಾಜ್ಯವನ್ನು ಸೈಕಲ್​ನಲ್ಲಿ ಪ್ರಯಾಣ ಮಾಡಿದ ಬಳಿಕ ಈ ಸಾಧನೆ ಮಾಡುವ ವಿಶ್ವಾಸ ಬಂದಿದೆ. ಇಸ್ಲಾಮಿಕ್ ಉನ್ನತ ಅಧ್ಯಯನಕ್ಕಾಗಿ ಈಜಿಪ್ಟ್ ಹೋಗುತ್ತಿದ್ದೇನೆ ಎಂದರು.

ಹಾಫಿಲ್ ಅಹ್ಮದ್ ಸಾಬೀತ್ ಅವರ ಸ್ನೇಹಿತ ರಶೀದ್ ವಿಟ್ಲ ಮಾತನಾಡಿ, ನಮ್ಮ ಕರಾವಳಿಯಿಂದ ಈ ರೀತಿಯ ಸಾಧನೆ ಮಾಡಿದವರು ಯಾರು ಇಲ್ಲ. ಪರಿಸರ ಸ್ನೇಹಿಯಾಗಿ ಅವರು ಮಾಡುತ್ತಿರುವ ಯಾತ್ರೆಗೆ ಶುಭವಾಗಲಿ ಎಂದು ಹೇಳಿದರು.

mangalore youth journey from kerala to egypt
ಮಂಗಳೂರು ಯುವಕನ ಪ್ರಯಾಣ (Graphics​)

ಇದನ್ನೂ ಓದಿ: ಹೆಡ್​ ಬುಷ್ ಪ್ರಚಾರ: ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿ ಸೈಕಲ್ ರ‍್ಯಾಲಿ ಮಾಡಿದ ಡಾಲಿ & ಟೀಮ್

ಕೇರಳದಿಂದ ಈಜಿಪ್ಟ್​ಗೆ ತೆರಳಲು marin ಕಂಪನಿಯ ಸೈಕಲ್​ಅನ್ನು ಬಳಸುತ್ತಿದ್ದಾರೆ. ಇವರ ನಿತ್ಯ ಬಳಕೆಯ ವಸ್ತುಗಳು ಸೇರಿದಂತೆ ಸುಮಾರು 1.5 ಲಕ್ಷದಲ್ಲಿ ಈ ಸೈಕಲ್ ಸವಾರಿ ಆರಂಭವಾಗಲಿದೆ. ಪ್ರತಿದಿನ ನೂರು ಕಿಲೋಮೀಟರ್ ಪ್ರಯಾಣ ಬೆಳೆಸುವ ಇವರು 200 ದಿನದಲ್ಲಿ ಈಜಿಪ್ಟ್‌ ತಲುಪುವ ಗುರಿಯನ್ನಿಟ್ಟುಕೊಂಡಿದ್ದಾರೆ. ಗೆಳೆಯರು ರಾತ್ರಿ ಅಲ್ಲಲ್ಲಿ ತಂಗುವ ವ್ಯವಸ್ಥೆ ಮಾಡಿದ್ದಾರೆ.

ಒಟ್ಟಿನಲ್ಲಿ ಕೇರಳದಿಂದ ಈಜಿಪ್ಟ್​ಗೆ ಸೈಕಲ್ ಯಾತ್ರೆ ಮಾಡಿ ಅಲ್ಲಿ ಉನ್ನತ ಶಿಕ್ಷಣ ಮಾಡಿ ಬರುವ ಕನಸು ಹೊತ್ತು ಸಾಗುತ್ತಿರುವ ಹಾಫಿಲ್ ಅಹ್ಮದ್ ಸಾಬಿತ್​ರ ಯಾತ್ರೆ ಯಶಸ್ಸಾಗಲಿ ಎಂದು ಬಂಧು ಮಿತ್ರರು ಹಾರೈಸುತ್ತಿದ್ದಾರೆ.

ಮಂಗಳೂರು: ದೇಶ ವಿದೇಶ ಸುತ್ತುವುದೆಂದರೆ ಕೆಲವರಿಗೆ ಫ್ಯಾಶನ್. ವಿಮಾನ, ರೈಲು, ವಾಹನಗಳ ಮೂಲಕ ಟೂರ್ ಮಾಡಿ ಬರುವ ಸಾಕಷ್ಟು ಜನ ಇದ್ದಾರೆ. ಆದರೆ, ಇಲ್ಲೊಬ್ಬ ಯುವಕ ಸೈಕಲ್​ನಲ್ಲಿ ಕೇರಳದಿಂದ ಈಜಿಪ್ಟ್​ಗೆ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾನೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಗ್ರಾಮದ ಬೈರಿಕಟ್ಟೆಯ ಹಾಫಿಲ್ ಅಹ್ಮದ್ ಸಾಬಿತ್ ಈ ಸಾಧನೆ ಮಾಡಲು ಹೊರಟವರು. 21 ವರ್ಷದ ಇವರು ಅಕ್ಟೋಬರ್ 20 ರಂದು ಕೇರಳದಿಂದ ಈಜಿಪ್ಟ್​ಗೆ ಸೈಕಲ್ ಪ್ರಯಾಣ ಆರಂಭಿಸಲಿದ್ದಾರೆ. ಕೇರಳದಿಂದ ಆರಂಭವಾಗುವ ಇವರ ಸೈಕಲ್ ಯಾತ್ರೆ ಕರ್ನಾಟಕ, ಗೋವಾ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣ, ಪಂಜಾಬ್, ಜಮ್ಮು ಕಾಶ್ಮೀರ, ಲಡಾಖ್ ಹೋಗಿ ಅಲ್ಲಿಂದ ಪಾಕಿಸ್ತಾನ, ಇರಾನ್, ಇರಾಕ್, ಕುವೈತ್​, ಸೌದಿ ಅರೇಬಿಯಾ, ಯುಎಇ, ಒಮಾನ್, ಜೋರ್ಡನ್, ಇಸ್ರೆಲ್ ಆಗಿ ಈಜಿಪ್ಟ್ ದೇಶದಲ್ಲಿ ಕೊನೆಯಾಗಲಿದೆ. ಕೇರಳದ ತಿರುವನಂತಪುರಂನಿಂದ ಆರಂಭವಾಗುವ ಈ ಸೈಕಲ್ ಯಾತ್ರೆ ಎರಡು ಖಂಡಗಳು, ಹತ್ತು ದೇಶಗಳ ಮೂಲಕ ಸುಮಾರು 15 ಸಾವಿರ ಕಿಲೋಮೀಟರ್ ಸಾಗಲಿದೆ.

mangalore youth journey from kerala to egypt
ಮಂಗಳೂರು ಯುವಕನ ಪ್ರಯಾಣ (Graphics​)

ಹಾಫಿಲ್ ಅಹ್ಮದ್ ಸಾಬಿತ್ ಅವರು ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣ ಪಡೆಯುುತ್ತಿದ್ದಾರೆ. ಮೂರನೇ ತರಗತಿಯವರೆಗೆ ಬೈರಿಕಟ್ಟೆಚ ಮವೂನತ್ ಇಸ್ಲಾಂ ಮದ್ರಸದಲ್ಲಿ ಕಲಿತ ಇವರು, ತಮ್ಮ 9 ನೇ ವಯಸ್ಸಿನಲ್ಲಿ ಮಂಜೇಶ್ವರದ ದಾರುಲ್ ಕುರ್ ಅನ್ ಹಿಪ್ಲ್ ಕಾಲೇಜಿನಲ್ಲಿ ಕುರ್ ಅನ್ ಕಂಠಪಾಠ ಆರಂಭಿಸಿದರು. ಅದನ್ನು ಪೂರ್ತಿಗೊಳಿಸಿ ಹಾಫಿಲ್ ಆಗಿ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ: ಪರಿಸರ ಜಾಗೃತಿಗಾಗಿ ಕೇರಳದಿಂದ ಸಿಂಗಪುರಕ್ಕೆ ಉಡುಪಿಯ ಹರ್ಷೇಂದ್ರ ಸೈಕಲ್ ಯಾತ್ರೆ

ಮೂರುವರೆ ವರ್ಷದ ಶಿಕ್ಷಣದ ಬಳಿಕ ಕಾಸರಗೋಡು ಕುಂಬಳೆ ಇಮಾಂ ಶಾಫಿ ಅಕಾಡೆಮಿಯಲ್ಲಿವ ಹಿಫ್ಲ್ ದಲ್ಲಿ, ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣ ಮುಂದುವರಿಸಿದ್ದಾರೆ. ಇವರು ಇಂಗ್ಲಿಷ್​ನಲ್ಲಿ ಬಿಎ ಪದವಿ ಶಿಕ್ಷಣ, ಉರ್ದು ಹಾಗೂ ಇಕ್ನೋ ವಿಶ್ವವಿದ್ಯಾಲಯದಿಂದ ಮನಶಾಸ್ತ್ರ ವಿಷಯದಲ್ಲಿ ಡಿಪ್ಲೋಮಾ ಕೋರ್ಸ್ ಅಧ್ಯಯನ ಮಾಡಿದ್ದಾರೆ. ಒಂದು ವರ್ಷಗಳ ಕಾಲ ಅಡ್ಯಾರ್ ಕಣ್ಣೂರಿನಲ್ಲಿ ದರ್ಸ್ ಶಿಕ್ಷಣ ಪಡೆದಿದ್ದಾರೆ‌. ಜೊತೆಗೆ sabi inspires ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ಮೂಲಕ ಸ್ಪೂರ್ತಿದಾಯಕ ಸಂದೇಶಗಳ ವಿಡಿಯೋ ಮಾಡಿ ಗಮನ ಸೆಳೆಯುತ್ತಿದ್ದಾರೆ.

ಸೈಕಲ್​ನಲ್ಲಿ ಕೇರಳದಿಂದ ಈಜಿಪ್ಟ್​ಗೆ ಮಂಗಳೂರು ಯುವಕನ ಪ್ರಯಾಣ

ಈಜಿಪ್ಟ್​ಗೆ ಸೈಕಲ್ ಯಾತ್ರೆ ಮಾಡುತ್ತಿರುವುದು ಉನ್ನತ ಧಾರ್ಮಿಕ ಶಿಕ್ಷಣ ಕಲಿಯುವ ಉದ್ದೇಶದಿಂದ. ಇವರಿಗೆ ಈಜಿಪ್ಟ್​ನ ಅಲ್ ಅಝ್ಹರ್ ಯುನಿವರ್ಸಿಟಿಯಲ್ಲಿ ಉನ್ನತ ಧಾರ್ಮಿಕ ಶಿಕ್ಷಣಕ್ಕಾಗಿ ಅವಕಾಶ ಸಿಕ್ಕಿದ್ದು, ಮುಂದಿನ ವರ್ಷ ಅಲ್ಲಿ ಹಾಜರಾಗಬೇಕಿದೆ. ಅದಕ್ಕಾಗಿ ಅವರು ಈಜಿಪ್ಟ್​ಗೆ ಸೈಕಲ್​ನಲ್ಲಿ ತೆರಳಲು ನಿರ್ಧರಿಸಿದ್ದಾರೆ. ಈ ಹಿಂದೆ ಸೈಕಲ್​ನಲ್ಲಿ ಕೇರಳ ರಾಜ್ಯ ಸುತ್ತಿದ ಅನುಭವ ಹೊಂದಿರುವ ಇವರು, ಈಜಿಪ್ಟ್​ಗೆ ಸೈಕಲ್​ನಲ್ಲಿ ತೆರಳಲು ನಿರ್ಧರಿಸಿದ್ದಾರೆ. ಈಜಿಪ್ಟ್ ತೆರಳುವ ಮುನ್ನ ಮಕ್ಕಾ, ಮದೀನ ತೆರಳಲಿದ್ದಾರೆ.

ಇದನ್ನೂ ಓದಿ: ಶಾಂತಿ, ಸೌಹಾರ್ದತೆ ಸಂದೇಶ ಸಾರಲು ಸೈಕಲ್ ಯಾತ್ರೆ: 35 ದೇಶ ಸುತ್ತಲು ಹೊರಟ ಕೇರಳದ ಟೆಕ್ಕಿ

ಈ ಬಗ್ಗೆ ಮಾತನಾಡಿರುವ ಹಾಫಿಲ್ ಅಹ್ಮದ್ ಸಾಬೀತ್, ಕಳೆದ ವರ್ಷ ಕೇರಳ ರಾಜ್ಯವನ್ನು ಸೈಕಲ್​ನಲ್ಲಿ ಪ್ರಯಾಣ ಮಾಡಿದ ಬಳಿಕ ಈ ಸಾಧನೆ ಮಾಡುವ ವಿಶ್ವಾಸ ಬಂದಿದೆ. ಇಸ್ಲಾಮಿಕ್ ಉನ್ನತ ಅಧ್ಯಯನಕ್ಕಾಗಿ ಈಜಿಪ್ಟ್ ಹೋಗುತ್ತಿದ್ದೇನೆ ಎಂದರು.

ಹಾಫಿಲ್ ಅಹ್ಮದ್ ಸಾಬೀತ್ ಅವರ ಸ್ನೇಹಿತ ರಶೀದ್ ವಿಟ್ಲ ಮಾತನಾಡಿ, ನಮ್ಮ ಕರಾವಳಿಯಿಂದ ಈ ರೀತಿಯ ಸಾಧನೆ ಮಾಡಿದವರು ಯಾರು ಇಲ್ಲ. ಪರಿಸರ ಸ್ನೇಹಿಯಾಗಿ ಅವರು ಮಾಡುತ್ತಿರುವ ಯಾತ್ರೆಗೆ ಶುಭವಾಗಲಿ ಎಂದು ಹೇಳಿದರು.

mangalore youth journey from kerala to egypt
ಮಂಗಳೂರು ಯುವಕನ ಪ್ರಯಾಣ (Graphics​)

ಇದನ್ನೂ ಓದಿ: ಹೆಡ್​ ಬುಷ್ ಪ್ರಚಾರ: ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿ ಸೈಕಲ್ ರ‍್ಯಾಲಿ ಮಾಡಿದ ಡಾಲಿ & ಟೀಮ್

ಕೇರಳದಿಂದ ಈಜಿಪ್ಟ್​ಗೆ ತೆರಳಲು marin ಕಂಪನಿಯ ಸೈಕಲ್​ಅನ್ನು ಬಳಸುತ್ತಿದ್ದಾರೆ. ಇವರ ನಿತ್ಯ ಬಳಕೆಯ ವಸ್ತುಗಳು ಸೇರಿದಂತೆ ಸುಮಾರು 1.5 ಲಕ್ಷದಲ್ಲಿ ಈ ಸೈಕಲ್ ಸವಾರಿ ಆರಂಭವಾಗಲಿದೆ. ಪ್ರತಿದಿನ ನೂರು ಕಿಲೋಮೀಟರ್ ಪ್ರಯಾಣ ಬೆಳೆಸುವ ಇವರು 200 ದಿನದಲ್ಲಿ ಈಜಿಪ್ಟ್‌ ತಲುಪುವ ಗುರಿಯನ್ನಿಟ್ಟುಕೊಂಡಿದ್ದಾರೆ. ಗೆಳೆಯರು ರಾತ್ರಿ ಅಲ್ಲಲ್ಲಿ ತಂಗುವ ವ್ಯವಸ್ಥೆ ಮಾಡಿದ್ದಾರೆ.

ಒಟ್ಟಿನಲ್ಲಿ ಕೇರಳದಿಂದ ಈಜಿಪ್ಟ್​ಗೆ ಸೈಕಲ್ ಯಾತ್ರೆ ಮಾಡಿ ಅಲ್ಲಿ ಉನ್ನತ ಶಿಕ್ಷಣ ಮಾಡಿ ಬರುವ ಕನಸು ಹೊತ್ತು ಸಾಗುತ್ತಿರುವ ಹಾಫಿಲ್ ಅಹ್ಮದ್ ಸಾಬಿತ್​ರ ಯಾತ್ರೆ ಯಶಸ್ಸಾಗಲಿ ಎಂದು ಬಂಧು ಮಿತ್ರರು ಹಾರೈಸುತ್ತಿದ್ದಾರೆ.

Last Updated : Oct 17, 2022, 7:08 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.