ETV Bharat / state

ಮಂಗಳೂರು ನೂತನ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಆಗಿ ಸುಮಂಗಳಾ ಆಯ್ಕೆ

author img

By

Published : Mar 2, 2021, 3:47 PM IST

ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್​ ಮತ್ತು ಉಪಮೇಯರ್ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದು, ಮನಪಾ ಆಡಳಿತ ಕೇಸರಿ ಪಾಳೆಯದ ವಶವಾಗಿದೆ.

Mangaluru city Corporation mayor election
ಮಂಗಳೂರು ನೂತನ ಮೇಯರ್ ಆಯ್ಕೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 22 ನೇ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಮತ್ತು ಉಪಮೇಯರ್ ಆಗಿ ಸುಮಂಗಳಾ ಆಯ್ಕೆಯಾಗಿದ್ದಾರೆ.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಮೇಯರ್​ ಮತ್ತು ಉಪಮೇಯರ್​ಗಳನ್ನು ಆಯ್ಕೆ ಮಾಡಲಾಯಿತು. ಒಟ್ಟು 60 ಸದಸ್ಯ ಬಲದ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 44 ಬಿಜೆಪಿ, 12 ಕಾಂಗ್ರೆಸ್ , 2 ಇತರ ಸದಸ್ಯರಿದ್ದಾರೆ. ಚುನಾವಣೆಯಲ್ಲಿ ಇಬ್ಬರು ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ಭಾಗವಹಿಸಿದ್ದು, ಒಟ್ಟು ‌62 ಮಂದಿ ಮತ ಚಲಾಯಿಸಿದರು.

ಮನಪಾ ನೂತನ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಆಯ್ಕೆ

ಓದಿ : ಕೇರಳದ ಹೈವೇಯಲ್ಲಿ ದರೋಡೆ: ಆರೋಪಿಯೊಂದಿಗೆ ಕಡಬ ತಾಲೂಕಿಗೆ ಬಂದ ಕೇರಳ ಪೊಲೀಸರು

ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರೇಮಾನಂದ ಶೆಟ್ಟಿ ಅವರಿಗೆ 46 ಮತಗಳು ಬಂದರೆ, ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಅನಿಲ್ ಕುಮಾರ್ ಅವರ ಪರ 14 ಮತಗಳು ಚಲಾವಣೆಯಾಗಿದ್ದವು, ಇಬ್ಬರು ಸದಸ್ಯರು ತಟಸ್ಥರಾಗಿದ್ದರು. ಚುನಾವಣೆಯಲ್ಲಿ ಅತ್ಯಧಿಕ ಮತ ಪಡೆದು ಪ್ರೇಮಾನಂದ ಶೆಟ್ಟಿ ನೂತನ ಮೇಯರ್ ಆಗಿ ಆಯ್ಕೆಯಾದರು.

ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುಮಂಗಳಾ ರಾವ್ ಅವರು ಕಾಂಗ್ರೆಸ್​ನಿಂದ ಜೆಸಿಂತಾ ವಿಜಯ್ ಆಲ್ಫ್ರೆಡ್ ಅವರ ವಿರುದ್ಧ ಅತ್ಯಧಿಕ ಮತ ಪಡೆದು ನೂತನ ಉಪಮೇಯರ್ ಆಗಿ ಆಯ್ಕೆಯಾದರು.‌ ಇದೇ ಸಂದರ್ಭ ನೂತನ ಸ್ಥಾಯಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ವೇಳೆ ಮಾತನಾಡಿದ ನೂತನ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಆದ್ಯತೆ ನೀಡಿ ಕಾರ್ಯನಿರ್ವಹಿಸುತ್ತೇನೆ ಭರವಸೆ ನೀಡಿದರು.

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 22 ನೇ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಮತ್ತು ಉಪಮೇಯರ್ ಆಗಿ ಸುಮಂಗಳಾ ಆಯ್ಕೆಯಾಗಿದ್ದಾರೆ.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಮೇಯರ್​ ಮತ್ತು ಉಪಮೇಯರ್​ಗಳನ್ನು ಆಯ್ಕೆ ಮಾಡಲಾಯಿತು. ಒಟ್ಟು 60 ಸದಸ್ಯ ಬಲದ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 44 ಬಿಜೆಪಿ, 12 ಕಾಂಗ್ರೆಸ್ , 2 ಇತರ ಸದಸ್ಯರಿದ್ದಾರೆ. ಚುನಾವಣೆಯಲ್ಲಿ ಇಬ್ಬರು ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ಭಾಗವಹಿಸಿದ್ದು, ಒಟ್ಟು ‌62 ಮಂದಿ ಮತ ಚಲಾಯಿಸಿದರು.

ಮನಪಾ ನೂತನ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ ಆಯ್ಕೆ

ಓದಿ : ಕೇರಳದ ಹೈವೇಯಲ್ಲಿ ದರೋಡೆ: ಆರೋಪಿಯೊಂದಿಗೆ ಕಡಬ ತಾಲೂಕಿಗೆ ಬಂದ ಕೇರಳ ಪೊಲೀಸರು

ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರೇಮಾನಂದ ಶೆಟ್ಟಿ ಅವರಿಗೆ 46 ಮತಗಳು ಬಂದರೆ, ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಅನಿಲ್ ಕುಮಾರ್ ಅವರ ಪರ 14 ಮತಗಳು ಚಲಾವಣೆಯಾಗಿದ್ದವು, ಇಬ್ಬರು ಸದಸ್ಯರು ತಟಸ್ಥರಾಗಿದ್ದರು. ಚುನಾವಣೆಯಲ್ಲಿ ಅತ್ಯಧಿಕ ಮತ ಪಡೆದು ಪ್ರೇಮಾನಂದ ಶೆಟ್ಟಿ ನೂತನ ಮೇಯರ್ ಆಗಿ ಆಯ್ಕೆಯಾದರು.

ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುಮಂಗಳಾ ರಾವ್ ಅವರು ಕಾಂಗ್ರೆಸ್​ನಿಂದ ಜೆಸಿಂತಾ ವಿಜಯ್ ಆಲ್ಫ್ರೆಡ್ ಅವರ ವಿರುದ್ಧ ಅತ್ಯಧಿಕ ಮತ ಪಡೆದು ನೂತನ ಉಪಮೇಯರ್ ಆಗಿ ಆಯ್ಕೆಯಾದರು.‌ ಇದೇ ಸಂದರ್ಭ ನೂತನ ಸ್ಥಾಯಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಈ ವೇಳೆ ಮಾತನಾಡಿದ ನೂತನ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಆದ್ಯತೆ ನೀಡಿ ಕಾರ್ಯನಿರ್ವಹಿಸುತ್ತೇನೆ ಭರವಸೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.