ETV Bharat / state

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಆಟೋ ಚಾಲಕನ ಚಿಕಿತ್ಸಾ ವೆಚ್ಚ ಭರಿಸುವ ಆಶ್ವಾಸನೆ ನೀಡಿದ ಡಿಸಿ

author img

By

Published : Dec 22, 2022, 9:07 AM IST

ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬ್ಲಾಸ್ಟ್​ನಲ್ಲಿ ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕನ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತದಿಂದ ಭರಿಸಲಾಗುವುದು ಎಂದು ಡಿಸಿ ಭರವಸೆ ನೀಡಿದ್ದಾರೆ.

district administration to bear treatment expenses  treatment expenses of auto driver  Mangaluru Cooker blast case  ಆಟೋ ಚಾಲಕನ ಚಿಕಿತ್ಸಾ ವೆಚ್ಚ  ಚಾಲಕನ ಚಿಕಿತ್ಸಾ ವೆಚ್ಚ ಜಿಲ್ಲಾಡಳಿತದಿಂದ ಭರಿಸುವ ಭರವಸೆ  ಬ್ಲಾಸ್ಟ್​ನಲ್ಲಿ ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕ  ಗೃಹ ಸಚಿವರು ಸರಕಾರದಿಂದ ಪರಿಹಾರ ಒದಗಿಸುವ ಭರವಸೆ  ಖಾಸಗಿ ಕಂಪನಿಯ ಉದ್ಯೋಗದಲ್ಲಿರುವ ಪುತ್ರಿ
ಆಟೋ ಚಾಲಕನ ಚಿಕಿತ್ಸಾ ವೆಚ್ಚ

ಮಂಗಳೂರು: ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮರ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತದಿಂದ ಭರಿಸುವ ಭರವಸೆಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. ಆಟೋ ಚಾಲಕ ಪುರುಷೋತ್ತಮ ಅವರು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ, ಪುರುಷೋತ್ತಮ ಅವರ ಬಗ್ಗೆ ಜಿಲ್ಲಾಡಳಿತ, ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದ್ದು, ಪುತ್ರಿಯ ಇಎಸ್ಐ ಯೋಜನೆಯಡಿಯಲ್ಲಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೃಹ ಸಚಿವರು ಸರಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದ್ದರು. ಆದರೆ, ಅವರಿಗೆ ಈವರೆಗೆ ಯಾವುದೇ ಚಿಕಿತ್ಸಾ ವೆಚ್ಚವನ್ನು ಸರಕಾರದದ ನೀಡಲಾಗಿಲ್ಲ. ವೈಯಕ್ತಿಕ ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ 50 ಸಾವಿರ, ದ.ಕ ಜಿಲ್ಲಾ ಉಸ್ತವಾರಿ ಸಚಿವ ಸುನಿಲ್ ಕುಮಾರ್ 25 ಸಾವಿರ ರೂಪಾಯಿ ಪುರುಷೋತ್ತಮ ಅವರ ಕುಟುಂಬಕ್ಕೆ ನೀಡಿದ್ದಾರೆ. ಇದು ಬಿಟ್ಟರೆ ಪುರುಷೋತ್ತಮ ಅವರ ಕುಟುಂಬಕ್ಕೆ ಬೇರೆ ಯಾವ ಪರಿಹಾರ ಈವರೆಗೆ ಸರಕಾರದಿಂದ ಸಿಕ್ಕಿರಲಿಲ್ಲ.

ಖಾಸಗಿ ಕಂಪನಿಯ ಉದ್ಯೋಗದಲ್ಲಿರುವ ಪುತ್ರಿಯ ಇಎಸ್ಐಯಿಂದಲೇ ಪುರುಷೋತ್ತಮ್ ಚಿಕಿತ್ಸೆ ನಡೆಯುತ್ತಿದೆ ಎಂಬುದು ಬೆಳಕಿಗೆ ಬಂದಿದೆ. ಆದ್ದರಿಂದ ತಕ್ಷಣ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಅವರು ಪುರುಷೋತ್ತಮ್ ಅವರು ಚಿಕಿತ್ಸೆ ಪಡೆಯುತ್ತಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಪತ್ರ ಬರೆದು ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸುವುದಾಗಿ ಹೇಳಿದ್ದಾರೆ‌. ಮತ್ತು ಈವರೆಗೆ ಇಎಸ್ಐನಿಂದ ನೀಡಲಾದ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಾರೀಕ್​ಗೆ ನಾಳೆ ಶಸ್ತ್ರಚಿಕಿತ್ಸೆ

ಮಂಗಳೂರು: ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮರ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತದಿಂದ ಭರಿಸುವ ಭರವಸೆಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. ಆಟೋ ಚಾಲಕ ಪುರುಷೋತ್ತಮ ಅವರು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ, ಪುರುಷೋತ್ತಮ ಅವರ ಬಗ್ಗೆ ಜಿಲ್ಲಾಡಳಿತ, ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದ್ದು, ಪುತ್ರಿಯ ಇಎಸ್ಐ ಯೋಜನೆಯಡಿಯಲ್ಲಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೃಹ ಸಚಿವರು ಸರಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದ್ದರು. ಆದರೆ, ಅವರಿಗೆ ಈವರೆಗೆ ಯಾವುದೇ ಚಿಕಿತ್ಸಾ ವೆಚ್ಚವನ್ನು ಸರಕಾರದದ ನೀಡಲಾಗಿಲ್ಲ. ವೈಯಕ್ತಿಕ ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ 50 ಸಾವಿರ, ದ.ಕ ಜಿಲ್ಲಾ ಉಸ್ತವಾರಿ ಸಚಿವ ಸುನಿಲ್ ಕುಮಾರ್ 25 ಸಾವಿರ ರೂಪಾಯಿ ಪುರುಷೋತ್ತಮ ಅವರ ಕುಟುಂಬಕ್ಕೆ ನೀಡಿದ್ದಾರೆ. ಇದು ಬಿಟ್ಟರೆ ಪುರುಷೋತ್ತಮ ಅವರ ಕುಟುಂಬಕ್ಕೆ ಬೇರೆ ಯಾವ ಪರಿಹಾರ ಈವರೆಗೆ ಸರಕಾರದಿಂದ ಸಿಕ್ಕಿರಲಿಲ್ಲ.

ಖಾಸಗಿ ಕಂಪನಿಯ ಉದ್ಯೋಗದಲ್ಲಿರುವ ಪುತ್ರಿಯ ಇಎಸ್ಐಯಿಂದಲೇ ಪುರುಷೋತ್ತಮ್ ಚಿಕಿತ್ಸೆ ನಡೆಯುತ್ತಿದೆ ಎಂಬುದು ಬೆಳಕಿಗೆ ಬಂದಿದೆ. ಆದ್ದರಿಂದ ತಕ್ಷಣ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಅವರು ಪುರುಷೋತ್ತಮ್ ಅವರು ಚಿಕಿತ್ಸೆ ಪಡೆಯುತ್ತಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಪತ್ರ ಬರೆದು ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸುವುದಾಗಿ ಹೇಳಿದ್ದಾರೆ‌. ಮತ್ತು ಈವರೆಗೆ ಇಎಸ್ಐನಿಂದ ನೀಡಲಾದ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಶಾರೀಕ್​ಗೆ ನಾಳೆ ಶಸ್ತ್ರಚಿಕಿತ್ಸೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.