ETV Bharat / state

ಕೊರೊನಾದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಮಂದಿ ಸಾವು; 308 ಪಾಸಿಟಿವ್

author img

By

Published : Sep 18, 2020, 12:21 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 308 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 9 ಮಂದಿ ಸಾವನ್ನಪ್ಪಿರುವ ವರದಿಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 461ಕ್ಕೆ ಏರಿಕೆಯಾಗಿದೆ.

Mangaluru covid-19 report
ಕೊರೊನಾದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಮಂದಿ ಸಾವು; 308 ಪಾಸಿಟಿವ್

ಮಂಗಳೂರು : ಕೊರೊನಾ ಸೋಂಕಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 9 ಮಂದಿ ಸಾವನ್ನಪ್ಪಿದ್ದು, 308 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಸಾವನ್ನಪ್ಪಿದ 9 ಮಂದಿಯಲ್ಲಿ 5 ಮಂದಿ ಮಂಗಳೂರು ತಾಲೂಕು, ಇಬ್ಬರು ಬಂಟ್ವಾಳ ತಾಲೂಕು, ಒಬ್ಬರು ಪುತ್ತೂರು ತಾಲೂಕು, ಒಬ್ಬರು ಬೆಳ್ತಂಗಡಿ ತಾಲೂಕಿನವರಾಗಿದ್ದಾರೆ. ಜಿಲ್ಲೆಯಲ್ಲಿ ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 461ಕ್ಕೆ ಏರಿಕೆಯಾಗಿದೆ.

ಇಂದು 308 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಇದರಲ್ಲಿ 202 ಮಂದಿ ಮಂಗಳೂರು ತಾಲೂಕು, 37 ಮಂದಿ ಬಂಟ್ವಾಳ ತಾಲೂಕು, 30 ಮಂದಿ ಪುತ್ತೂರು ತಾಲೂಕು, 10 ಮಂದಿ ಸುಳ್ಯ ತಾಲೂಕು, 24 ಮಂದಿ ಬೆಳ್ತಂಗಡಿ ತಾಲೂಕು, 5 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 18,866 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು 398 ಮಂದಿ ಗುಣಮುಖರಾಗಿದ್ದು ಈವರೆಗೆ 14,004 ಮಂದಿ ಗುಣಮುಖರಾಗಿದ್ದಾರೆ. 4,401 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರು : ಕೊರೊನಾ ಸೋಂಕಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 9 ಮಂದಿ ಸಾವನ್ನಪ್ಪಿದ್ದು, 308 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಸಾವನ್ನಪ್ಪಿದ 9 ಮಂದಿಯಲ್ಲಿ 5 ಮಂದಿ ಮಂಗಳೂರು ತಾಲೂಕು, ಇಬ್ಬರು ಬಂಟ್ವಾಳ ತಾಲೂಕು, ಒಬ್ಬರು ಪುತ್ತೂರು ತಾಲೂಕು, ಒಬ್ಬರು ಬೆಳ್ತಂಗಡಿ ತಾಲೂಕಿನವರಾಗಿದ್ದಾರೆ. ಜಿಲ್ಲೆಯಲ್ಲಿ ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 461ಕ್ಕೆ ಏರಿಕೆಯಾಗಿದೆ.

ಇಂದು 308 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು ಇದರಲ್ಲಿ 202 ಮಂದಿ ಮಂಗಳೂರು ತಾಲೂಕು, 37 ಮಂದಿ ಬಂಟ್ವಾಳ ತಾಲೂಕು, 30 ಮಂದಿ ಪುತ್ತೂರು ತಾಲೂಕು, 10 ಮಂದಿ ಸುಳ್ಯ ತಾಲೂಕು, 24 ಮಂದಿ ಬೆಳ್ತಂಗಡಿ ತಾಲೂಕು, 5 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 18,866 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು 398 ಮಂದಿ ಗುಣಮುಖರಾಗಿದ್ದು ಈವರೆಗೆ 14,004 ಮಂದಿ ಗುಣಮುಖರಾಗಿದ್ದಾರೆ. 4,401 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.