ETV Bharat / state

ಮಂಗಳೂರು: ಸಿಎಂ, ಡಿಸಿಎಂ ವಿರುದ್ಧ ಆಕ್ಷೇಪಾರ್ಹ ವಿಡಿಯೋ, ಆರೋಪಿ ಬಂಧನ

ಪಡಿತರ ಚೀಟಿಯಲ್ಲಿ ಹೆಸರು ನೋಂದಾಯಿಸಲು ಸಾಧ್ಯವಾಗದ ಕಾರಣ ಕೋಪಗೊಂಡು ಸಿಎಂ ಮತ್ತು ಡಿಸಿಎಂ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ವಿಡಿಯೋ ಮಾಡಿ ಪೋಸ್ಟ್‌ ಮಾಡಿರುವ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

author img

By ETV Bharat Karnataka Team

Published : Jan 17, 2024, 7:13 AM IST

anil kumar
ಬಂಧನ ವ್ಯಕ್ತಿ ಅನಿಲ್ ಕುಮಾರ್

ಮಂಗಳೂರು: ರೇಶನ್​​ ಕಾರ್ಡ್‌ನಲ್ಲಿ ಹೆಸರು ಸೇರಿಸಲು‌ ಸಾಧ್ಯವಾಗದೇ ಆಕ್ರೋಶಗೊಂಡು ವ್ಯಕ್ತಿಯೊಬ್ಬರು ಮುಖ್ಯಮಂತ್ರಿ‌ ಮತ್ತು ಉಪ ಮುಖ್ಯಮಂತ್ರಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ವಿಡಿಯೋ ಮಾಡಿ ಬಂಧನಕ್ಕೊಳಗಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಜ್ಜರಣಿ ಗ್ರಾಮದ ಅನಿಲ್ ಕುಮಾರ್​ (34) ಬಂಧಿತ ಆರೋಪಿ. ಇವರು ಕಳೆದ 12 ವರ್ಷಗಳಿಂದ ಸುರತ್ಕಲ್ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಕ್ಯಾಬ್​ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ.

ಆರೋಪಿ ತನ್ನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಲು ಮತ್ತು ಮಂಗಳೂರಿನಲ್ಲಿ ಸ್ಥಳೀಯವಾಗಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದರು. ಆದರೆ ಸರ್ವರ್ ಸಮಸ್ಯೆ ಮತ್ತು ಇತರ ಕಾರಣಗಳಿಂದ ಕಳೆದ 3 ತಿಂಗಳಿಂದ ಇದನ್ನು ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಹತಾಶೆಗೊಂಡು ವಿಡಿಯೋ ಮಾಡಿ ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್​ ಮಾಡಿದ್ದಾರೆ. ಈ ವಿಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಮೊದಲಿಗೆ ಕನ್ನಡದಲ್ಲಿ ನಿಂದಿಸಿ ಬಳಿಕ ತುಳುವಿನಲ್ಲಿಯೂ ಕೆಟ್ಟ ಪದಗಳಿಂದ ಬೈದಿರುವುದು ದೃಶ್ಯದಲ್ಲಿದೆ.

ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿ ಎನ್ಎಸ್‌ಯುಐ ದ.ಕ.ಜಿಲ್ಲಾಧ್ಯಕ್ಷ ಸುಹಾನ್​ ಆಳ್ವ ಹಾಗೂ ತಂಡ ಮಂಗಳೂರು ಪೊಲೀಸ್​ ಕಮಿಷನರ್​ಗೆ ದೂರು ನೀಡಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ನಿಮಗೆ ಗೊತ್ತಿಲ್ಲದೇ ನಿಮ್ಮ ಫಿಂಗರ್ ಪ್ರಿಂಟ್ 5 ಸಾವಿರಕ್ಕೆ ಮಾರಾಟ: ಬ್ಯಾಂಕ್​ ಖಾತೆಯಿಂದ ಹಣ ದೋಚುತ್ತಾರೆ ಎಚ್ಚರ!

ಇತ್ತೀಚಿನ ಪ್ರಕರಣಗಳು: ಕಳೆದ ನವೆಂಬರ್​ನಲ್ಲಿ ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರೊಬ್ಬರು ಸಿಎಂ ವಿರುದ್ಧ ಅವಹೇಳನಕಾರಿ ಆಡಿಯೋ ಹರಿಬಿಟ್ಟಿದ್ದರು. ಬಳಿಕ ಅವರ ಮೇಲೆ ಎಫ್​ಐಆರ್​ ದಾಖಲಾಗಿತ್ತು. ಇದಕ್ಕೂ ಹಿಂದೆ ಸಿಎಂ, ಡಿಸಿಎಂ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇವರ ವಿರುದ್ಧ ಬೆಂಗಳೂರಿನ ವೈಟ್‌ಫೀಲ್ಡ್ ಸೆನ್ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಮಂಗಳೂರು: ರೇಶನ್​​ ಕಾರ್ಡ್‌ನಲ್ಲಿ ಹೆಸರು ಸೇರಿಸಲು‌ ಸಾಧ್ಯವಾಗದೇ ಆಕ್ರೋಶಗೊಂಡು ವ್ಯಕ್ತಿಯೊಬ್ಬರು ಮುಖ್ಯಮಂತ್ರಿ‌ ಮತ್ತು ಉಪ ಮುಖ್ಯಮಂತ್ರಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ವಿಡಿಯೋ ಮಾಡಿ ಬಂಧನಕ್ಕೊಳಗಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಜ್ಜರಣಿ ಗ್ರಾಮದ ಅನಿಲ್ ಕುಮಾರ್​ (34) ಬಂಧಿತ ಆರೋಪಿ. ಇವರು ಕಳೆದ 12 ವರ್ಷಗಳಿಂದ ಸುರತ್ಕಲ್ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಕ್ಯಾಬ್​ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ.

ಆರೋಪಿ ತನ್ನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಲು ಮತ್ತು ಮಂಗಳೂರಿನಲ್ಲಿ ಸ್ಥಳೀಯವಾಗಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದರು. ಆದರೆ ಸರ್ವರ್ ಸಮಸ್ಯೆ ಮತ್ತು ಇತರ ಕಾರಣಗಳಿಂದ ಕಳೆದ 3 ತಿಂಗಳಿಂದ ಇದನ್ನು ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಹತಾಶೆಗೊಂಡು ವಿಡಿಯೋ ಮಾಡಿ ಮಂಗಳವಾರ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್​ ಮಾಡಿದ್ದಾರೆ. ಈ ವಿಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಮೊದಲಿಗೆ ಕನ್ನಡದಲ್ಲಿ ನಿಂದಿಸಿ ಬಳಿಕ ತುಳುವಿನಲ್ಲಿಯೂ ಕೆಟ್ಟ ಪದಗಳಿಂದ ಬೈದಿರುವುದು ದೃಶ್ಯದಲ್ಲಿದೆ.

ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿ ಎನ್ಎಸ್‌ಯುಐ ದ.ಕ.ಜಿಲ್ಲಾಧ್ಯಕ್ಷ ಸುಹಾನ್​ ಆಳ್ವ ಹಾಗೂ ತಂಡ ಮಂಗಳೂರು ಪೊಲೀಸ್​ ಕಮಿಷನರ್​ಗೆ ದೂರು ನೀಡಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ನಿಮಗೆ ಗೊತ್ತಿಲ್ಲದೇ ನಿಮ್ಮ ಫಿಂಗರ್ ಪ್ರಿಂಟ್ 5 ಸಾವಿರಕ್ಕೆ ಮಾರಾಟ: ಬ್ಯಾಂಕ್​ ಖಾತೆಯಿಂದ ಹಣ ದೋಚುತ್ತಾರೆ ಎಚ್ಚರ!

ಇತ್ತೀಚಿನ ಪ್ರಕರಣಗಳು: ಕಳೆದ ನವೆಂಬರ್​ನಲ್ಲಿ ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರೊಬ್ಬರು ಸಿಎಂ ವಿರುದ್ಧ ಅವಹೇಳನಕಾರಿ ಆಡಿಯೋ ಹರಿಬಿಟ್ಟಿದ್ದರು. ಬಳಿಕ ಅವರ ಮೇಲೆ ಎಫ್​ಐಆರ್​ ದಾಖಲಾಗಿತ್ತು. ಇದಕ್ಕೂ ಹಿಂದೆ ಸಿಎಂ, ಡಿಸಿಎಂ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇವರ ವಿರುದ್ಧ ಬೆಂಗಳೂರಿನ ವೈಟ್‌ಫೀಲ್ಡ್ ಸೆನ್ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.