ETV Bharat / state

ಮಂಗಳೂರು ಗೋಲಿಬಾರ್ ಪ್ರಕರಣವನ್ನು ವಿರೋಧಿಸಿ ಸಾಮೂಹಿಕ ಧರಣಿ

author img

By

Published : Jan 2, 2020, 3:13 PM IST

ಮಂಗಳೂರಿನಲ್ಲಿ ಡಿ.19ರಂದು ನಡೆದ ಗೋಲಿಬಾರ್ ಪ್ರಕರಣವನ್ನು ವಿರೋಧಿಸಿ, ಎನ್ಆರ್​ಸಿ - ಸಿಎಎಯನ್ನು ತಿರಸ್ಕರಿಸಿ ಮಂಗಳೂರಿನ ಪುರಭವನದ ಮುಂಭಾಗ ಇಂದು ಸಾಮೂಹಿಕ ಧರಣಿ ನಡೆಯಿತು.

manglore
ಸಾಮೂಹಿಕ ಧರಣಿ

ಮಂಗಳೂರು: ನಗರದಲ್ಲಿ ಡಿ.19ರಂದು ನಡೆದ ಗೋಲಿಬಾರ್ ಪ್ರಕರಣವನ್ನು ವಿರೋಧಿಸಿ, ಎನ್ಆರ್​ಸಿ - ಸಿಎಎಯನ್ನು ತಿರಸ್ಕರಿಸಿ ಮಂಗಳೂರಿನ ಪುರಭವನದ ಮುಂಭಾಗ ಇಂದು ಸಾಮೂಹಿಕ ಧರಣಿ ನಡೆಯಿತು.

ಮಂಗಳೂರಿನಲ್ಲಿ ಗೋಲಿಬಾರ್ ಪ್ರಕರಣವನ್ನು ವಿರೋಧಿಸಿ ಸಾಮೂಹಿಕ ಧರಣಿ ನಡೆಯಿತು.

ಕಾಂಗ್ರೆಸ್, ಜೆಡಿಎಸ್, ಸಿಪಿಐ, ಸಿಪಿಐಎಂ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ದ.ಕ.ಜಿಲ್ಲಾ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ಸಾಮೂಹಿಕ ಧರಣಿ‌‌ ನಡೆಯಿತು. ರ್ಯಾಲಿಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಈ ಸಾಮೂಹಿಕ ಧರಣಿಯನ್ನು ನಡೆಸಲಾಯಿತು. ಈ ಧರಣಿಯು ಇಡೀ ದಿನ ನಡೆಯಲಿದ್ದು, ಮಂಗಳೂರಿನಲ್ಲಿ ಮತ್ತೆ ಎನ್ಆರ್​ಸಿ, ಸಿಎಎ ವಿರುದ್ಧ ಮತ್ತೆ ಧ್ವನಿ‌ ಮೊಳಗಿದೆ.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಎನ್ಆರ್‌ಸಿ, ಸಿಎಎಯನ್ನು ವಿರೋಧಿಸಿ ನಡೆಸುತ್ತಿರುವ ಜನರ ಮುಖವಾಣಿಯಾಗಿರುವ ಇಂದಿನ ಈ ಚಳುವಳಿ ದೇಶದ ಎರಡನೇ ಸ್ವಾತಂತ್ರ್ಯ ಚಳುವಳಿಯಾಗಿದೆ. ಮಂಗಳೂರಿನಲ್ಲಿ ನಡೆಸಿದ ಗೋಲಿಬಾರ್​​ನಿಂದ ಅಮಾಯಕರ ಬಲಿಗೆ ರಾಜ್ಯದ ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ. ಈ ಕೃತ್ಯದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಬೇಕಾಗಿದೆ. ಆದ್ದರಿಂದ ನಮಗೆ ಮ್ಯಾಜಿಸ್ಟ್ರೇಟ್ ತನಿಖೆ ಬೇಡ, ಸಿಐಡಿ ತನಿಖೆಯೂ ಬೇಡ, ನ್ಯಾಯಾಂಗ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ಧರಣಿಯಲ್ಲಿ ಮಾಜಿ ‌ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ, ಮಾಜಿ ಮುಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ರವಿಕಿರಣ್ ಪುಣಚ ಸೇರಿ ಇನ್ನೂರೈವತ್ತಕ್ಕೂ ಅಧಿಕ ಮಂದಿ ವಿವಿಧ ಪಕ್ಷದ, ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಮಂಗಳೂರು: ನಗರದಲ್ಲಿ ಡಿ.19ರಂದು ನಡೆದ ಗೋಲಿಬಾರ್ ಪ್ರಕರಣವನ್ನು ವಿರೋಧಿಸಿ, ಎನ್ಆರ್​ಸಿ - ಸಿಎಎಯನ್ನು ತಿರಸ್ಕರಿಸಿ ಮಂಗಳೂರಿನ ಪುರಭವನದ ಮುಂಭಾಗ ಇಂದು ಸಾಮೂಹಿಕ ಧರಣಿ ನಡೆಯಿತು.

ಮಂಗಳೂರಿನಲ್ಲಿ ಗೋಲಿಬಾರ್ ಪ್ರಕರಣವನ್ನು ವಿರೋಧಿಸಿ ಸಾಮೂಹಿಕ ಧರಣಿ ನಡೆಯಿತು.

ಕಾಂಗ್ರೆಸ್, ಜೆಡಿಎಸ್, ಸಿಪಿಐ, ಸಿಪಿಐಎಂ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ದ.ಕ.ಜಿಲ್ಲಾ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ಸಾಮೂಹಿಕ ಧರಣಿ‌‌ ನಡೆಯಿತು. ರ್ಯಾಲಿಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಈ ಸಾಮೂಹಿಕ ಧರಣಿಯನ್ನು ನಡೆಸಲಾಯಿತು. ಈ ಧರಣಿಯು ಇಡೀ ದಿನ ನಡೆಯಲಿದ್ದು, ಮಂಗಳೂರಿನಲ್ಲಿ ಮತ್ತೆ ಎನ್ಆರ್​ಸಿ, ಸಿಎಎ ವಿರುದ್ಧ ಮತ್ತೆ ಧ್ವನಿ‌ ಮೊಳಗಿದೆ.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಎನ್ಆರ್‌ಸಿ, ಸಿಎಎಯನ್ನು ವಿರೋಧಿಸಿ ನಡೆಸುತ್ತಿರುವ ಜನರ ಮುಖವಾಣಿಯಾಗಿರುವ ಇಂದಿನ ಈ ಚಳುವಳಿ ದೇಶದ ಎರಡನೇ ಸ್ವಾತಂತ್ರ್ಯ ಚಳುವಳಿಯಾಗಿದೆ. ಮಂಗಳೂರಿನಲ್ಲಿ ನಡೆಸಿದ ಗೋಲಿಬಾರ್​​ನಿಂದ ಅಮಾಯಕರ ಬಲಿಗೆ ರಾಜ್ಯದ ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ. ಈ ಕೃತ್ಯದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಬೇಕಾಗಿದೆ. ಆದ್ದರಿಂದ ನಮಗೆ ಮ್ಯಾಜಿಸ್ಟ್ರೇಟ್ ತನಿಖೆ ಬೇಡ, ಸಿಐಡಿ ತನಿಖೆಯೂ ಬೇಡ, ನ್ಯಾಯಾಂಗ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ಧರಣಿಯಲ್ಲಿ ಮಾಜಿ ‌ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ, ಮಾಜಿ ಮುಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ರವಿಕಿರಣ್ ಪುಣಚ ಸೇರಿ ಇನ್ನೂರೈವತ್ತಕ್ಕೂ ಅಧಿಕ ಮಂದಿ ವಿವಿಧ ಪಕ್ಷದ, ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Intro:ಮಂಗಳೂರು: ನಗರದಲ್ಲಿ ಡಿ.19ರಂದು ನಡೆದ ಗೋಲಿಬಾರ್ ಪ್ರಕರಣವನ್ನು ವಿರೋಧಿಸಿ, ಎನ್ಆರ್ ಸಿ - ಸಿಎಎಯನ್ನು ತಿರಸ್ಕರಿಸಿ ಮಂಗಳೂರಿನ ಪುರಭವನದ ಮುಂಭಾಗ ಇಂದು ಸಾಮೂಹಿಕ ಧರಣಿ ನಡೆಯಿತು. ಕಾಂಗ್ರೆಸ್, ಜೆಡಿಎಸ್, ಸಿಪಿಐ, ಸಿಪಿಐಎಂ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ ದ.ಕ.ಜಿಲ್ಲಾ ಸಮಿತಿಗಳ ಜಂಟಿ ಆಶ್ರಯದಲ್ಲಿ ಈ ಸಾಮೂಹಿಕ ಧರಣಿ‌‌ ನಡೆಯಿತು.

ರ್ಯಾಲಿಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಈ ಸಾಮೂಹಿಕ ಧರಣಿಯನ್ನು ನಡೆಸಲಾಯಿತು. ಈ ಧರಣಿಯು ಇಡೀ ದಿನ ನಡೆಯಲಿದ್ದು, ಮಂಗಳೂರಿನಲ್ಲಿ ಮತ್ತೆ ಎನ್ ಆರ್ ಸಿ, ಸಿಎಎ ವಿರುದ್ಧ ಮತ್ತೆ ಧ್ವನಿ‌ಮೊಳಗಿದೆ.



Body:ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಎನ್ಆರ್ ಸಿ, ಸಿಎಎಯನ್ನು ವಿರೋಧಿಸಿ ನಡೆಸುತ್ತಿರುವ ಜನರ ಮುಖವಾಣಿಯಾಗಿರುವ ಇಂದಿನ ಈ ಚಳುವಳಿ ದೇಶದ ಎರಡನೇ ಸ್ವಾತಂತ್ರ್ಯ ಚಳುವಳಿಯಾಗಿದೆ. ಮೊನ್ನೆ 144 ಸೆಕ್ಷನ್ ಹಾಕುವ ಮೊದಲು ಮಂಗಳೂರಿನಲ್ಲಿ ಸಂಘಟನೆಯೊಂದಕ್ಕೆ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿತ್ತು. ಆದರೆ ಪ್ರತಿಭಟನೆ ರದ್ದಾಗಿರೋದು ತಿಳಿದಿರದ ಕೆಲವು ಮಂದಿ ಅಲ್ಲಿಗೆ ಬಂದಿದ್ದರು. ಅವರ ಮೇಲೆ ಏಕಾಏಕಿ ಲಾಠಿಚಾರ್ಜ್ ಮಾಡಿರೋದರಿಂದ ಪ್ರಚೋದನೆ ಗೊಂಡ ಜನರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆಯಿತು ಎಂದು ಹೇಳಿದರು.

ಈ ಘರ್ಷಣೆಯು ಕಾಂಗ್ರೆಸ್ ಪಕ್ಷದ ಪೂರ್ವನಿಯೋಜಿತ ಕೃತ್ಯ ಎಂಬ ಆರೋಪ ಕೇಳಿ ಬಂತು. ಆದರೆ ಇದು 144 ಸೆಕ್ಷನ್ ಜಾರಿ ಮಾಡಿರುವ, ಲಾಠಿಚಾರ್ಜ್ ಮಾಡಲು ಅನುಮತಿ ನೀಡಿರುವ ರಾಜ್ಯ ಸರಕಾರದ ಪೂರ್ವ ನಿಯೋಜಿತ ಕೃತ್ಯ. ಅಲ್ಲದೆ ಮಂಗಳೂರಿನಲ್ಲಿ ನಡೆಸಿದ ಗೋಲಿಬಾರ್ ನಿಂದ ಅಮಾಯಕರ ಬಲಿಗೆ ರಾಜ್ಯದ ಸಿಎಂ ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ. ಈ ಕೃತ್ಯದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಬೇಕಾಗಿದೆ. ಆದ್ದರಿಂದ ನಮಗೆ ಮ್ಯಾಜಿಸ್ಟ್ರೇಟ್ ತನಿಖೆ ಬೇಡ, ಸಿಐಡಿ ತನಿಖೆ ಬೇಡ ನ್ಯಾಯಾಂಗ ತನಿಖೆ ನಡೆಸಲಿ ಎಂದು ರಮಾನಾಥ ರೈ ಆಗ್ರಹಿಸಿದರು.

ಈ ಸಾಮೂಹಿಕ ಧರಣಿಯಲ್ಲಿ ಮಾಜಿ‌ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ, ಮಾಜಿ ಮುಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಸಿಪಿಎಂ ಜಿಲ್ಲಾಧ್ಯಕ್ಷ ವಿ.ಕುಕ್ಯಾನ್, ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ರವಿಕಿರಣ್ ಪುಣಚ ಸೇರಿ ಇನ್ನೂರೈವತ್ತಕ್ಕೂ ಅಧಿಕ ಮಂದಿ ವಿವಿಧ ಪಕ್ಷದ, ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Reporter_Vishwanath Panjimogaru


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.